Homeಮುಖಪುಟದಲಿತರ ಕಥೆಯುಳ್ಳ ‘ಪಾಲಾರ್‌‌’ ಸಿನಿಮಾದ ಟ್ರೇಲರ್‌ ಬಿಡುಗಡೆಗೆ ಒಪ್ಪದ ಆಡಿಯೊ ಕಂಪನಿಗಳು; ನಿರ್ದೇಶಕರ ಆರೋಪ

ದಲಿತರ ಕಥೆಯುಳ್ಳ ‘ಪಾಲಾರ್‌‌’ ಸಿನಿಮಾದ ಟ್ರೇಲರ್‌ ಬಿಡುಗಡೆಗೆ ಒಪ್ಪದ ಆಡಿಯೊ ಕಂಪನಿಗಳು; ನಿರ್ದೇಶಕರ ಆರೋಪ

- Advertisement -
- Advertisement -

ದಲಿತರ ನೋವಿನ ಕಥೆಯನ್ನು ಒಳಗೊಂಡ ‘ಪಾಲಾರ್‌’ ಸಿನಿಮಾದ ಟ್ರೇಲರ್‌ ಬಿಡುಗಡೆಗೆ ಆಡಿಯೊ ಕಂಪನಿಗಳು ಒಪ್ಪುತ್ತಿಲ್ಲ ಎಂದು ‘ಪಾಲಾರ್‌’ ಸಿನಿಮಾದ ನಿರ್ದೇಶಕ ಜೀವ ನವೀನ್‌ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಫೇಸ್‌ಬುಕ್‌ ಖಾತೆಯಲ್ಲಿ ಪೋಸ್ಟ್‌ ಹಾಕಿರುವ ಅವರು, ಪಾಲಾರ್‌ ಟ್ರೇಲರ್‌ಗೆ ಸಂಬಂಧಿಸಿದಂತೆ ಆಡಿಯೊ ಕಂಪನಿಗಳು ನೀಡಿರುವ ಪ್ರತಿಕ್ರಿಯೆಗಳನ್ನು (ಹೆಸರು ಬ್ಲರ್‌ ಮಾಡಿ) ಲಗತ್ತಿಸಿದ್ದಾರೆ.

“ಟ್ರೇಲರ್‌ ಚೆನ್ನಾಗಿದೆ. ಆದರೆ ಇದನ್ನು ಪ್ರಕಟಿಸಲು ಆಗುವುದಿಲ್ಲ. ಕ್ಷಮಿಸಿ ನಮ್ಮ ಸಂಸ್ಥೆಯಲ್ಲಿ ನಿಮ್ಮ ಟ್ರೇಲರ್‌ ಬಿಡುಗಡೆ ಮಾಡಲು ಆಗಲ್ಲ. ಹಾಡುಗಳು ಚೆನ್ನಾಗಿವೆ. ಅವುಗಳನ್ನು ಬೇಕಿದ್ದರೆ ಹಾಕ್ತೀವಿ. ಇಲ್ಲವಾದರೆ ಟ್ರೇಲರ್‌‌ನಲ್ಲಿ ಸ್ವಲ್ಪ ಸೀನ್ಸ್ ಚೇಂಜ್ ಮಾಡಿಕೊಂಡು ಬನ್ನಿ” ಎಂದು ಕಂಪನಿಗಳು ಹೇಳುತ್ತಿರುವುದಾಗಿ ನವೀನ್‌ ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಮ್ಮ ಕಂಪನಿ ಪಾಲಿಸಿ ಪ್ರಕಾರ ‘ಸೆನ್ಸಿಟಿವ್ ಕಂಟೆಂಟ್’ ಸಿನೆಮಾ ತೆಗೆದುಕೊಳ್ಳುವುದಿಲ್ಲ ಎಂದು ಬೆಂಗಳೂರು ಮೂಲದ ಕಂಪೆನಿಯೊಂದು ತಿಳಿಸಿತು. ಇದೇ ರೀತಿಯ ಅಭಿಪ್ರಾಯವನ್ನು ಚೆನ್ನೈ ಮೂಲದ ಕನ್ನಡ ಹಾಡುಗಳ ಕಂಪನಿ ಹೇಳಿತು” ಎಂದಿದ್ದಾರೆ ನಿರ್ದೇಶಕರು. ಒಟ್ಟು ಆರು ಕಂಪನಿಗಳು ಟ್ರೈಲರ್‌ ರಿಜೆಕ್ಟ್‌ ಮಾಡಿದೆ ಎಂದು ದೂರಿದ್ದಾರೆ.

“ನವೀನ್, ಇಷ್ಟೊಂದು ನೇರ ನೇರಾ ಇದೆ ಸಬ್ಜೆಕ್ಟ್  ಇದೆ. ನಮ್ಮ ಟೀಂ ಇದು ಬೇಡ ಅಂತಿದ್ದಾರೆ. ಆದರೆ ಜನರಿಗೆ ಇಷ್ಟ ಆಗುತ್ತೆ. ಬಿಡಿ ಬೇರೆ ಕಡೆ ಹಾಕಿ. ನಮ್ಮ ಮ್ಯಾನೇಜ್‌ಮೆಂಟ್‌ ಯಾರು ಅಂತ ಗೊತ್ತಲ್ವಾ?” ಎಂದು ಬೆಂಗಳೂರು ಮೂಲದ ಕನ್ನಡ ಹಾಡುಗಳ ಕಂಪನಿಯ ಸಿಬ್ಬಂದಿ ತಿಳಿಸಿದರು ಎನ್ನುತ್ತಾರೆ ಅವರು.

“ಆಡಿಯೋ ಚಾನೆಲ್‌ನವರಿಗೆ ಏನು ಬೇಕು? ಮಸಾಲೆ ಬೇಕಾ? ಡಬಲ್ ಮೀನಿಂಗ್ ಡೈಲಾಗ್ ಬೇಕಾ? ಬೆತ್ತಲೆ ಸೀನ್ಸ್ ಬೇಕಾ? ಸಾಂಗ್ಸ್‌ನಲ್ಲಿ ಲಿಪ್ ಲಾಕ್ ಬೇಕಾ? ಒಂದೇಟು ಹೊಡೆದರೆ 1 ಕಿಲೋಮೀಟರ್ ದೂರದಲ್ಲಿ ಹೋಗಿ ಬೀಳೋ ಫೈಟ್ಸ್ ಬೇಕಾ? ಸ್ಟಾರ್ ಕ್ಯಾಸ್ಟ್ ಬೇಕಾ? ಅಥವಾ ನಮ್ಮ ಕ್ಯಾಸ್ಟ್ ಯಾವುದು ಅಂತ ತಿಳ್ಕೊಬೇಕಾ? ಸಂವಿಧಾನಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಫೋಟೋ ಇರೋದರಿಂದ ನಾವು ನಿಮಗೆ ಸಣ್ಣವರು ಅದ್ವೇ?” ಎಂದು ಅವರು ಪ್ರಶ್ನಿಸಿದ್ದಾರೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ನಿರ್ದೇಶಕ ಜೀವ ನವೀನ್‌, “ಸಿನಿಮಾಕ್ಕಾಗಿಯೇ ಇರುವ ಆಡಿಯೊ ಕಂಪನಿಗಳು ಸಹಾಯ ಮಾಡಿದರೆ ದಲಿತ ಹಿನ್ನೆಲೆಯ ನಿರ್ದೇಶಕರು ಮುಂದೆ ಬರುತ್ತಾರೆ. ಪಾಲಾರ್‌ ರೀತಿಯ ಕಥೆಗಳನ್ನು ತೆರೆಗೆ ತರಬಲ್ಲ ನಿರ್ದೇಶಕರು ಕನ್ನಡದಲ್ಲೇ ಇದ್ದಾರೆ. ಆದರೆ ಈ ರೀತಿಯ ಕಥೆಗಳಿಗೆ ನಿರ್ಮಾಪಕರು ಸಿಗುವುದಿಲ್ಲ. ದಲಿತರ ನೋವುಗಳು ತೆರೆಗೆ ತರಲೆಂದು ನಾವೇ ಬಂಡವಾಳ ಹೂಡಿ ಸಿನಿಮಾ ಮಾಡಿದ್ದೇವೆ. ನಮಗೆ ಅಗತ್ಯ ಪ್ರೋತ್ಸಾಹ ಬೇಕಿದೆ” ಎಂದರು.

“ಈ ಸಿನಿಮಾದಲ್ಲಿ ಜಾತಿ ವ್ಯವಸ್ಥೆಯ ಬಗ್ಗೆ ನೇರವಾಗಿ ಮಾತನಾಡಿದ್ದೇವೆ. ಆದರೆ ಯಾವುದೇ ಸಮುದಾಯಕ್ಕೆ ನೋವುಂಟು ಮಾಡಿಲ್ಲ. ಈ ರೀತಿಯ ಕಂಟೆಂಟ್ ಕನ್ನಡದಲ್ಲಿ ಹೊಸತೆಂದು ಭಯ ಬಿದ್ದಿದ್ದಾರೋ, ಸಂಸ್ಥೆಗೆ ತೊಂದರೆಯಾಗುತ್ತದೆ ಎಂದು ಭಾವಿಸಿದ್ದಾರೋ ಗೊತ್ತಿಲ್ಲ. ದಲಿತ ಕಥನಗಳಿಗೆ ತಮಿಳು, ತೆಲುಗು ಚಿತ್ರರಂಗದಲ್ಲಿ ಸಿಕ್ಕಿರುವ ಪ್ರೋತ್ಸಾಹ ನಮಗೂ ಬೇಕಿದೆ. ಆಗ ಮಾತ್ರವೇ ಅಸುರನ್‌, ಕರ್ಣನ್‌, ಪಲಾಸ ರೀತಿಯ ಸಿನಿಮಾಗಳು ಇಲ್ಲಿಯೂ ಬರಲಿವೆ” ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿರಿ: ವಿಕ್ರಾಂತ್‌ ರೋಣ ಸಿನಿಮಾ ದಲಿತರನ್ನು ಚಿತ್ರಿಸಿರುವ ರೀತಿ ಅಪಾಯಕಾರಿ ಏಕೆ?

“ನಾವೇ ನೇರವಾಗಿ ಆಡಿಯೊವನ್ನು ಯೂಟ್ಯೂಬ್‌ನಲ್ಲಿ ಬಿಡುಗಡೆ ಮಾಡಬಹುದು. ಆದರೆ ನಮ್ಮ ಯೂಟ್ಯೂಬ್ ಚಾನೆಲ್‌ಗಳಿಗೆ ವೀಕ್ಷಕರು ಕಡಿಮೆ ಇರುತ್ತಾರೆ. ಸಿನಿಮಾಕ್ಕಾಗಿಯೇ ಮೀಸಲಾದ ಕಂಪನಿಗಳ ಚಾನೆಲ್‌ಗಳಲ್ಲಿ ಟ್ರೇಲರ್‌ ಬಿಡುಗಡೆಯಾದ್ದಲ್ಲಿ ಹೆಚ್ಚು ಜನರನ್ನು ನಮ್ಮ ಸಿನಿಮಾ ತಲುಪುತ್ತದೆ” ಎಂದು ತಿಳಿಸಿದರು.

ಪಾಲಾರ್‌ ಸಿನಿಮಾ ನಿರ್ದೇಶಕ ಜೀವ ನವೀನ್‌

‘ಸಿನಿಮಾ ಬಂಡಿ’ ಖ್ಯಾತಿಯ ನಟಿ, ಗಾಯಕಿ ವೈ.ಜಿ.ಉಮಾ ಅವರು ಮುಖ್ಯಪಾತ್ರದಲ್ಲಿ ನಟಿಸಿರುವ ‘ಪಾಲಾರ್‌’ ತನ್ನ ವಿಶಿಷ್ಟ ಹೆಸರಿನ ಮೂಲಕ ಗಮನ ಸೆಳೆದಿದೆ. ಈ ಟೈಟಲ್‌ನ ವಿಶೇಷತೆಯನ್ನು ವಿವರಿಸಿದ ನಿರ್ದೇಶಕ ನವೀನ್‌, “ನಂದಿ ಬೆಟ್ಟದಲ್ಲಿ ಹುಟ್ಟಿದ ಪಾಲಾರ್‌ ನದಿ ಕೋಲಾರದ ಬೇತಮಂಗಲವರೆಗೂ ಭೂಮಿಯ ಒಳಗಡೆಯೇ ಹರಿದು ಹೋಗುತ್ತದೆ. ಆ ನಂತರ ತಮಿಳುನಾಡು ನಾಡಿನಾದ್ಯಂತ ಹರಿದು ಸಮುದ್ರ ಸೇರುತ್ತದೆ. ನದಿ ಒಳಗಡೆಯೇ ಇದ್ದಾಗ ಬಿಸಿಯಾಗಿರುತ್ತದೆ. ಆ ಬಿಸಿ ಒಂದು ರೀತಿಯಲ್ಲಿ ರಕ್ತಕ್ಕೆ ಸಮಾನ. ದಲಿತರಲ್ಲೂ ಇದೇ ರೀತಿಯ ಕುದಿತ ಆಂತರ್ಯದಲ್ಲಿ ಅಡಗಿದೆ. ಸಂದರ್ಭ ಸಿಕ್ಕಾಗ ಅದು ಹೊರಬರುತ್ತದೆ. ಒಮ್ಮೆ ಆ ಆಕ್ರೋಶ ಸ್ಫೋಟಿಸಿದಾಗ ಏನಾಗುತ್ತದೆ ಎಂಬುದೇ ಈ ಪಾಲಾರ್‌ ಕಥೆ. ನದಿಗೂ ಮತ್ತು ನಮ್ಮ ಕಥೆಗೂ ಸಂಬಂಧವಿಲ್ಲ. ಒಂದು ರೂಪಕವಾಗಿ ಈ ಹೆಸರನ್ನು ಬಳಸಿದ್ದೇವೆ. ಪಾಲಾರ್‌ ಎಂಬ ಕಾಲ್ಪನಿಕ ಹಳ್ಳಿಯಲ್ಲಿ ನಮ್ಮ ಕಥೆ ನಡೆಯುತ್ತದೆ” ಎಂದು ವಿವರಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...