Homeಮುಖಪುಟದಲಿತರ ಕಥೆಯುಳ್ಳ ‘ಪಾಲಾರ್‌‌’ ಸಿನಿಮಾದ ಟ್ರೇಲರ್‌ ಬಿಡುಗಡೆಗೆ ಒಪ್ಪದ ಆಡಿಯೊ ಕಂಪನಿಗಳು; ನಿರ್ದೇಶಕರ ಆರೋಪ

ದಲಿತರ ಕಥೆಯುಳ್ಳ ‘ಪಾಲಾರ್‌‌’ ಸಿನಿಮಾದ ಟ್ರೇಲರ್‌ ಬಿಡುಗಡೆಗೆ ಒಪ್ಪದ ಆಡಿಯೊ ಕಂಪನಿಗಳು; ನಿರ್ದೇಶಕರ ಆರೋಪ

- Advertisement -
- Advertisement -

ದಲಿತರ ನೋವಿನ ಕಥೆಯನ್ನು ಒಳಗೊಂಡ ‘ಪಾಲಾರ್‌’ ಸಿನಿಮಾದ ಟ್ರೇಲರ್‌ ಬಿಡುಗಡೆಗೆ ಆಡಿಯೊ ಕಂಪನಿಗಳು ಒಪ್ಪುತ್ತಿಲ್ಲ ಎಂದು ‘ಪಾಲಾರ್‌’ ಸಿನಿಮಾದ ನಿರ್ದೇಶಕ ಜೀವ ನವೀನ್‌ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಫೇಸ್‌ಬುಕ್‌ ಖಾತೆಯಲ್ಲಿ ಪೋಸ್ಟ್‌ ಹಾಕಿರುವ ಅವರು, ಪಾಲಾರ್‌ ಟ್ರೇಲರ್‌ಗೆ ಸಂಬಂಧಿಸಿದಂತೆ ಆಡಿಯೊ ಕಂಪನಿಗಳು ನೀಡಿರುವ ಪ್ರತಿಕ್ರಿಯೆಗಳನ್ನು (ಹೆಸರು ಬ್ಲರ್‌ ಮಾಡಿ) ಲಗತ್ತಿಸಿದ್ದಾರೆ.

“ಟ್ರೇಲರ್‌ ಚೆನ್ನಾಗಿದೆ. ಆದರೆ ಇದನ್ನು ಪ್ರಕಟಿಸಲು ಆಗುವುದಿಲ್ಲ. ಕ್ಷಮಿಸಿ ನಮ್ಮ ಸಂಸ್ಥೆಯಲ್ಲಿ ನಿಮ್ಮ ಟ್ರೇಲರ್‌ ಬಿಡುಗಡೆ ಮಾಡಲು ಆಗಲ್ಲ. ಹಾಡುಗಳು ಚೆನ್ನಾಗಿವೆ. ಅವುಗಳನ್ನು ಬೇಕಿದ್ದರೆ ಹಾಕ್ತೀವಿ. ಇಲ್ಲವಾದರೆ ಟ್ರೇಲರ್‌‌ನಲ್ಲಿ ಸ್ವಲ್ಪ ಸೀನ್ಸ್ ಚೇಂಜ್ ಮಾಡಿಕೊಂಡು ಬನ್ನಿ” ಎಂದು ಕಂಪನಿಗಳು ಹೇಳುತ್ತಿರುವುದಾಗಿ ನವೀನ್‌ ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಮ್ಮ ಕಂಪನಿ ಪಾಲಿಸಿ ಪ್ರಕಾರ ‘ಸೆನ್ಸಿಟಿವ್ ಕಂಟೆಂಟ್’ ಸಿನೆಮಾ ತೆಗೆದುಕೊಳ್ಳುವುದಿಲ್ಲ ಎಂದು ಬೆಂಗಳೂರು ಮೂಲದ ಕಂಪೆನಿಯೊಂದು ತಿಳಿಸಿತು. ಇದೇ ರೀತಿಯ ಅಭಿಪ್ರಾಯವನ್ನು ಚೆನ್ನೈ ಮೂಲದ ಕನ್ನಡ ಹಾಡುಗಳ ಕಂಪನಿ ಹೇಳಿತು” ಎಂದಿದ್ದಾರೆ ನಿರ್ದೇಶಕರು. ಒಟ್ಟು ಆರು ಕಂಪನಿಗಳು ಟ್ರೈಲರ್‌ ರಿಜೆಕ್ಟ್‌ ಮಾಡಿದೆ ಎಂದು ದೂರಿದ್ದಾರೆ.

“ನವೀನ್, ಇಷ್ಟೊಂದು ನೇರ ನೇರಾ ಇದೆ ಸಬ್ಜೆಕ್ಟ್  ಇದೆ. ನಮ್ಮ ಟೀಂ ಇದು ಬೇಡ ಅಂತಿದ್ದಾರೆ. ಆದರೆ ಜನರಿಗೆ ಇಷ್ಟ ಆಗುತ್ತೆ. ಬಿಡಿ ಬೇರೆ ಕಡೆ ಹಾಕಿ. ನಮ್ಮ ಮ್ಯಾನೇಜ್‌ಮೆಂಟ್‌ ಯಾರು ಅಂತ ಗೊತ್ತಲ್ವಾ?” ಎಂದು ಬೆಂಗಳೂರು ಮೂಲದ ಕನ್ನಡ ಹಾಡುಗಳ ಕಂಪನಿಯ ಸಿಬ್ಬಂದಿ ತಿಳಿಸಿದರು ಎನ್ನುತ್ತಾರೆ ಅವರು.

“ಆಡಿಯೋ ಚಾನೆಲ್‌ನವರಿಗೆ ಏನು ಬೇಕು? ಮಸಾಲೆ ಬೇಕಾ? ಡಬಲ್ ಮೀನಿಂಗ್ ಡೈಲಾಗ್ ಬೇಕಾ? ಬೆತ್ತಲೆ ಸೀನ್ಸ್ ಬೇಕಾ? ಸಾಂಗ್ಸ್‌ನಲ್ಲಿ ಲಿಪ್ ಲಾಕ್ ಬೇಕಾ? ಒಂದೇಟು ಹೊಡೆದರೆ 1 ಕಿಲೋಮೀಟರ್ ದೂರದಲ್ಲಿ ಹೋಗಿ ಬೀಳೋ ಫೈಟ್ಸ್ ಬೇಕಾ? ಸ್ಟಾರ್ ಕ್ಯಾಸ್ಟ್ ಬೇಕಾ? ಅಥವಾ ನಮ್ಮ ಕ್ಯಾಸ್ಟ್ ಯಾವುದು ಅಂತ ತಿಳ್ಕೊಬೇಕಾ? ಸಂವಿಧಾನಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಫೋಟೋ ಇರೋದರಿಂದ ನಾವು ನಿಮಗೆ ಸಣ್ಣವರು ಅದ್ವೇ?” ಎಂದು ಅವರು ಪ್ರಶ್ನಿಸಿದ್ದಾರೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ನಿರ್ದೇಶಕ ಜೀವ ನವೀನ್‌, “ಸಿನಿಮಾಕ್ಕಾಗಿಯೇ ಇರುವ ಆಡಿಯೊ ಕಂಪನಿಗಳು ಸಹಾಯ ಮಾಡಿದರೆ ದಲಿತ ಹಿನ್ನೆಲೆಯ ನಿರ್ದೇಶಕರು ಮುಂದೆ ಬರುತ್ತಾರೆ. ಪಾಲಾರ್‌ ರೀತಿಯ ಕಥೆಗಳನ್ನು ತೆರೆಗೆ ತರಬಲ್ಲ ನಿರ್ದೇಶಕರು ಕನ್ನಡದಲ್ಲೇ ಇದ್ದಾರೆ. ಆದರೆ ಈ ರೀತಿಯ ಕಥೆಗಳಿಗೆ ನಿರ್ಮಾಪಕರು ಸಿಗುವುದಿಲ್ಲ. ದಲಿತರ ನೋವುಗಳು ತೆರೆಗೆ ತರಲೆಂದು ನಾವೇ ಬಂಡವಾಳ ಹೂಡಿ ಸಿನಿಮಾ ಮಾಡಿದ್ದೇವೆ. ನಮಗೆ ಅಗತ್ಯ ಪ್ರೋತ್ಸಾಹ ಬೇಕಿದೆ” ಎಂದರು.

“ಈ ಸಿನಿಮಾದಲ್ಲಿ ಜಾತಿ ವ್ಯವಸ್ಥೆಯ ಬಗ್ಗೆ ನೇರವಾಗಿ ಮಾತನಾಡಿದ್ದೇವೆ. ಆದರೆ ಯಾವುದೇ ಸಮುದಾಯಕ್ಕೆ ನೋವುಂಟು ಮಾಡಿಲ್ಲ. ಈ ರೀತಿಯ ಕಂಟೆಂಟ್ ಕನ್ನಡದಲ್ಲಿ ಹೊಸತೆಂದು ಭಯ ಬಿದ್ದಿದ್ದಾರೋ, ಸಂಸ್ಥೆಗೆ ತೊಂದರೆಯಾಗುತ್ತದೆ ಎಂದು ಭಾವಿಸಿದ್ದಾರೋ ಗೊತ್ತಿಲ್ಲ. ದಲಿತ ಕಥನಗಳಿಗೆ ತಮಿಳು, ತೆಲುಗು ಚಿತ್ರರಂಗದಲ್ಲಿ ಸಿಕ್ಕಿರುವ ಪ್ರೋತ್ಸಾಹ ನಮಗೂ ಬೇಕಿದೆ. ಆಗ ಮಾತ್ರವೇ ಅಸುರನ್‌, ಕರ್ಣನ್‌, ಪಲಾಸ ರೀತಿಯ ಸಿನಿಮಾಗಳು ಇಲ್ಲಿಯೂ ಬರಲಿವೆ” ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿರಿ: ವಿಕ್ರಾಂತ್‌ ರೋಣ ಸಿನಿಮಾ ದಲಿತರನ್ನು ಚಿತ್ರಿಸಿರುವ ರೀತಿ ಅಪಾಯಕಾರಿ ಏಕೆ?

“ನಾವೇ ನೇರವಾಗಿ ಆಡಿಯೊವನ್ನು ಯೂಟ್ಯೂಬ್‌ನಲ್ಲಿ ಬಿಡುಗಡೆ ಮಾಡಬಹುದು. ಆದರೆ ನಮ್ಮ ಯೂಟ್ಯೂಬ್ ಚಾನೆಲ್‌ಗಳಿಗೆ ವೀಕ್ಷಕರು ಕಡಿಮೆ ಇರುತ್ತಾರೆ. ಸಿನಿಮಾಕ್ಕಾಗಿಯೇ ಮೀಸಲಾದ ಕಂಪನಿಗಳ ಚಾನೆಲ್‌ಗಳಲ್ಲಿ ಟ್ರೇಲರ್‌ ಬಿಡುಗಡೆಯಾದ್ದಲ್ಲಿ ಹೆಚ್ಚು ಜನರನ್ನು ನಮ್ಮ ಸಿನಿಮಾ ತಲುಪುತ್ತದೆ” ಎಂದು ತಿಳಿಸಿದರು.

ಪಾಲಾರ್‌ ಸಿನಿಮಾ ನಿರ್ದೇಶಕ ಜೀವ ನವೀನ್‌

‘ಸಿನಿಮಾ ಬಂಡಿ’ ಖ್ಯಾತಿಯ ನಟಿ, ಗಾಯಕಿ ವೈ.ಜಿ.ಉಮಾ ಅವರು ಮುಖ್ಯಪಾತ್ರದಲ್ಲಿ ನಟಿಸಿರುವ ‘ಪಾಲಾರ್‌’ ತನ್ನ ವಿಶಿಷ್ಟ ಹೆಸರಿನ ಮೂಲಕ ಗಮನ ಸೆಳೆದಿದೆ. ಈ ಟೈಟಲ್‌ನ ವಿಶೇಷತೆಯನ್ನು ವಿವರಿಸಿದ ನಿರ್ದೇಶಕ ನವೀನ್‌, “ನಂದಿ ಬೆಟ್ಟದಲ್ಲಿ ಹುಟ್ಟಿದ ಪಾಲಾರ್‌ ನದಿ ಕೋಲಾರದ ಬೇತಮಂಗಲವರೆಗೂ ಭೂಮಿಯ ಒಳಗಡೆಯೇ ಹರಿದು ಹೋಗುತ್ತದೆ. ಆ ನಂತರ ತಮಿಳುನಾಡು ನಾಡಿನಾದ್ಯಂತ ಹರಿದು ಸಮುದ್ರ ಸೇರುತ್ತದೆ. ನದಿ ಒಳಗಡೆಯೇ ಇದ್ದಾಗ ಬಿಸಿಯಾಗಿರುತ್ತದೆ. ಆ ಬಿಸಿ ಒಂದು ರೀತಿಯಲ್ಲಿ ರಕ್ತಕ್ಕೆ ಸಮಾನ. ದಲಿತರಲ್ಲೂ ಇದೇ ರೀತಿಯ ಕುದಿತ ಆಂತರ್ಯದಲ್ಲಿ ಅಡಗಿದೆ. ಸಂದರ್ಭ ಸಿಕ್ಕಾಗ ಅದು ಹೊರಬರುತ್ತದೆ. ಒಮ್ಮೆ ಆ ಆಕ್ರೋಶ ಸ್ಫೋಟಿಸಿದಾಗ ಏನಾಗುತ್ತದೆ ಎಂಬುದೇ ಈ ಪಾಲಾರ್‌ ಕಥೆ. ನದಿಗೂ ಮತ್ತು ನಮ್ಮ ಕಥೆಗೂ ಸಂಬಂಧವಿಲ್ಲ. ಒಂದು ರೂಪಕವಾಗಿ ಈ ಹೆಸರನ್ನು ಬಳಸಿದ್ದೇವೆ. ಪಾಲಾರ್‌ ಎಂಬ ಕಾಲ್ಪನಿಕ ಹಳ್ಳಿಯಲ್ಲಿ ನಮ್ಮ ಕಥೆ ನಡೆಯುತ್ತದೆ” ಎಂದು ವಿವರಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...