Homeಮುಖಪುಟ‘ಹರಿಯಾಣ ಬಿಜೆಪಿ ನಾಯಕಿ ಸೋನಾಲಿ ಫೋಗಟ್‌‌ರನ್ನು ಗೋವಾದಲ್ಲಿ ಹತ್ಯೆ ಮಾಡಲಾಗಿದೆ’: ದೂರು ದಾಖಲಿಸಿದ ಸಹೋದರ

‘ಹರಿಯಾಣ ಬಿಜೆಪಿ ನಾಯಕಿ ಸೋನಾಲಿ ಫೋಗಟ್‌‌ರನ್ನು ಗೋವಾದಲ್ಲಿ ಹತ್ಯೆ ಮಾಡಲಾಗಿದೆ’: ದೂರು ದಾಖಲಿಸಿದ ಸಹೋದರ

- Advertisement -
- Advertisement -

ಹರಿಯಾಣದ ಬಿಜೆಪಿ ನಾಯಕಿ ಸೋನಾಲಿ ಫೋಗಟ್ ಅವರನ್ನು ಗೋವಾದಲ್ಲಿ ಅವರ ಇಬ್ಬರು ಸಹಚರರು ಕೊಲೆ ಮಾಡಿದ್ದಾರೆ ಎಂದು ಅವರ ಸಹೋದರ ಪೊಲೀಸರಿಗೆ ಔಪಚಾರಿಕವಾಗಿ ದೂರು ಸಲ್ಲಿಸಿದ್ದಾರೆ. ಅವರ ಸಾವಿನ ನಂತರ ಹರಿಯಾಣದಲ್ಲಿರುವ ಅವರ ಫಾರ್ಮ್‌ಹೌಸ್‌ನಿಂದ ಸಿಸಿಟಿವಿ ಕ್ಯಾಮೆರಾಗಳು, ಲ್ಯಾಪ್‌ಟಾಪ್ ಮತ್ತು ಇತರ ಪ್ರಮುಖ ವಸ್ತುಗಳು ನಾಪತ್ತೆಯಾಗಿವೆ ಎಂದು ಅವರು ಆರೋಪಿಸಿದ್ದಾರೆ.

“ಫೋಗಟ್ ಅವರು ತಮ್ಮ ಸಾವಿಗೂ ಮೊದಲು ತನ್ನ ತಾಯಿ, ಸಹೋದರಿ ಮತ್ತು ಸೋದರ ಮಾವನ ಜೊತೆ ಮಾತನಾಡಿದ್ದರು. ಈ ಸಮಯದಲ್ಲಿ ಅವರು ಗೊಂದಲದಲ್ಲಿದ್ದು, ತನ್ನ ಇಬ್ಬರು ಸಹೋದ್ಯೋಗಿಗಳ ಬಗ್ಗೆ ದೂರಿಕೊಂಡಿದ್ದರು” ಎಂದು ಅವರ ಸಹೋದರ ರಿಂಕು ಧಾಕಾ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಟಿಕ್‌ಟಾಕ್‌ನಲ್ಲಿ ಖ್ಯಾತಿ ಪಡೆದ ಹರಿಯಾಣದ ಹಿಸಾರ್‌ನ ಬಿಜೆಪಿ ನಾಯಕಿ ಸೋನಾಲಿ ಫೋಗಟ್ (42) ಅವರು ಮಂಗಳವಾರ ಬೆಳಿಗ್ಗೆ ಉತ್ತರ ಗೋವಾದ ಅಂಜುನಾದಲ್ಲಿರುವ ಸೇಂಟ್ ಆಂಥೋನಿ ಆಸ್ಪತ್ರೆಯಲ್ಲಿ “ಮೃತಪಟ್ಟಿದ್ದಾರೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಗೋವಾ: ನಿಧನ ಹೊಂದಿರುವ ವ್ಯಕ್ತಿಯ ಹೆಸರಿನಲ್ಲಿ ಲೈಸನ್ಸ್‌ ಪಡೆದು ಅಕ್ರಮ ಬಾರ್‌ ನಡೆಸುತ್ತಿರುವ ಸಚಿವೆ ಸ್ಮೃತಿ ಇರಾನಿ ಪುತ್ರಿ

ಸಾವಿನ ಕುರಿತು ಗೋವಾದ ಅಂಜುನ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದರು. ಫೋಗಟ್ ಅವರ ಕುಟುಂಬ ಸದಸ್ಯರು ಮಂಗಳವಾರ ರಾತ್ರಿ ಗೋವಾಕ್ಕೆ ಆಗಮಿಸಿದ್ದಾರೆ. ಮೃತ ನಾಯಕಿಯ ಸಹೋದರ ರಿಂಕು ಧಾಕಾ ಅವರು ಗೋವಾದಲ್ಲಿ ಅಂಜುನಾ ಪೊಲೀಸರಿಗೆ ಸಲ್ಲಿಸಿದ ದೂರಿನಲ್ಲಿ ಫೋಗಟ್‌ನ ಇಬ್ಬರು ಸಹಚರರು ಗೋವಾದಲ್ಲಿ ಅವರನ್ನು ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

“ಫೋಗಟ್ ತಮ್ಮ ತಾಯಿಯೊಂದಿಗೆ ಮಾತನಾಡಿದ ನಂತರ ಆರೋಪಿಗಳಿಂದ ದೂರ ಉಳಿಯಲು ಮತ್ತು ಮರುದಿನವೆ ಹಿಸಾರ್‌ಗೆ ಹಿಂತಿರುಗಿ ಬರಲು ನಾವು ಅವಳನ್ನು ಕೇಳಿದ್ದೆವು” ಎಂದು ರಿಂಕು ಧಾಕಾ ಅಂಜುನಾ ಪೊಲೀಸ್ ಠಾಣೆಯ ಹೊರಗೆ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇಬ್ಬರು ವ್ಯಕ್ತಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲು ಪೊಲೀಸರು ನಿರಾಕರಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಅವರ ವಿರುದ್ಧ ಎಫ್‌ಐಆರ್ ದಾಖಲಿಸದಿದ್ದರೆ, ಗೋವಾದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲು ನಾವು ಬಿಡುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ನಾನು ಗಾಂಧಿ ಕುಟುಂಬದ ವಿರುದ್ಧ ಮಾತನಾಡಿದ್ದಕ್ಕೆ ನನ್ನ ಮಗಳು ಟಾರ್ಗೆಟ್: ಗೋವಾ ಬಾರ್ ವಿವಾದದ ಬಗ್ಗೆ ಸ್ಮೃತಿ ಇರಾನಿ

ಮರಣೋತ್ತರ ಪರೀಕ್ಷೆಯನ್ನು ದೆಹಲಿಯ ಆಲ್ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‌ನಲ್ಲಿ ಅಥವಾ ಜೈಪುರದ ಏಮ್ಸ್‌ನಲ್ಲಿ ನಡೆಸಲು ಕುಟುಂಬ ಸದಸ್ಯರು ಆದ್ಯತೆ ನೀಡುತ್ತಾರೆ ಎಂದು ರಿಂಕು ಧಾಕಾ ಹೇಳಿದ್ದಾರೆ. “ಅವರು ಕಳೆದ 15 ವರ್ಷಗಳಿಂದ ಬಿಜೆಪಿ ನಾಯಕಿಯಾಗಿದ್ದು, ಅವರಿಗೆ ನ್ಯಾಯ ದೊರಕಿಸಲು ಸಹಾಯ ಮಾಡುವಂತೆ ನಾವು ಪ್ರಧಾನಿಯವರಲ್ಲಿ ಮನವಿ ಮಾಡುತ್ತೇವೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...