Homeಕರ್ನಾಟಕಭರವಸೆಯಲ್ಲೇ ಉಳಿದ ‘ರೈತಮಿತ್ರ’ ನೇಮಕಾತಿ; ಕೃಷಿ ವಿದ್ಯಾರ್ಥಿಗಳ ಪ್ರತಿಭಟನೆ

ಭರವಸೆಯಲ್ಲೇ ಉಳಿದ ‘ರೈತಮಿತ್ರ’ ನೇಮಕಾತಿ; ಕೃಷಿ ವಿದ್ಯಾರ್ಥಿಗಳ ಪ್ರತಿಭಟನೆ

- Advertisement -
- Advertisement -

ಡಿಪ್ಲೊಮಾ ಕೃಷಿ ಮುಗಿಸಿದ ವಿದ್ಯಾರ್ಥಿಗಳನ್ನು ಕೃಷಿ ಇಲಾಖೆಯ ರೈತಮಿತ್ರ (ಕೃಷಿ ಸಹಾಯಕ) ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಡಿಪ್ಲೊಮಾ ಕೃಷಿ ಪದವೀಧರರ ಸಂಘದ ವತಿಯಿಂದ ಪ್ರತಿಭಟನೆ ನಡೆಯಿತು.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದ ಡಿಪ್ಲೊಮಾ ಕೃಷಿ ಪದವೀಧರರು, ಸರ್ಕಾರದ ವಿಳಂಬ ನೀತಿಯನ್ನು ಖಂಡಿಸಿದರು.

ರಾಜ್ಯದ ಕೃಷಿ ಮತ್ತು ತೋಟಗಾರಿಕೆ ವಿವಿಗಳಲ್ಲಿ 2011ರಿಂದ ಡಿಪ್ಲೊಮಾ ಕೃಷಿ ಪ್ರಾರಂಭವಾಗಿ ಇಲ್ಲಿಯವರೆಗೆ ಸರಿಸುಮಾರು 5,000 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮುಗಿಸಿ ನಿರುದ್ಯೋಗಿಳಾಗಿರುತ್ತಾರೆ. ಕೃಷಿಗೆ ಸಂಬಂಧಿಸಿದಂತೆ 35ಕ್ಕಿಂತ ಹೆಚ್ಚು ವಿಷಯಗಳಲ್ಲಿ ಪ್ರಾಯೋಗಿಕವಾಗಿ ವಿಶೇಷ ಜ್ಞಾನ ಪಡೆದಿದ್ದರೂ ಯಾವುದೇ ಉದ್ಯೋಗ ಇಲ್ಲವಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಕೃಷಿ ಸಚಿವರಿಗೆ ಅನೇಕ ಸಲ ಮನವಿ ಮಾಡಿದಾಗ ನಿಮ್ಮ ಬೇಡಿಕೆ ನ್ಯಾಯೋಚಿತವಾಗಿದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಆದರೆ ಕೋವಿಡ್ ಬಿಕ್ಕಟ್ಟಿನ ಕಾರಣ ನೀಡಿ ಇದುವರೆಗೂ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಿರುವುದಿಲ್ಲ ಎಂದು ತಿಳಿಸಿದ್ದಾರೆ.

“ಆದಷ್ಟು ಬೇಗ ನೇಮಕಾತಿ ಮಾಡುವ ಭರವಸೆಯನ್ನು ಕೃಷಿ ಸಚಿವರು ನೀಡಿದ್ದಾರೆ. ಕಳೆದ 2 ವರ್ಷಗಳಿಂದ ಮಾಧ್ಯಮಗಳ ಮುಂದೆ ಹೇಳಿಕೆ ನೀಡುತ್ತಾ ಬರುತ್ತಿದ್ದಾರೆ. ಆದರೆ ಇಲ್ಲಿಯವರೆಗೂ ನೇಮಕಾತಿಗೆ ಚಾಲನೆ ದೊರೆತಿಲ್ಲ. ಆದ ಕಾರಣ ಕೃಷಿ ಸಚಿವರು ನಮ್ಮ ಮನವಿಯನ್ನು ಪರಿಗಣಿಸಿ ಕೃಷಿ ಇಲಾಖೆಯಲ್ಲಿ ರೈತಮಿತ್ರ (ಕೃಷಿ ಸಹಾಯಕ) ಹುದ್ದೆಗಳಿಗೆ ಡಿಪ್ಲೊಮಾ ಕೃಷಿ ವಿದ್ಯಾರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಕೃಷಿ ಡಿಪ್ಲೊಮಾ ಪದವೀಧರ ಮಂಜುನಾಥ್‌ ಮುದ್ದೆ, “ನೇಮಕಾತಿ ಮಾಡುತ್ತೇನೆ, ಪದವೀಧರರ ಸೇವೆಯನ್ನು ರೈತರಿಗೆ ಕೊಡಿಸುತ್ತೇನೆ, ಇಲಾಖೆಯನ್ನು ಬಲಪಡಿಸುತ್ತೇನೆ ಎಂದು ಮಾಧ್ಯಮಗಳ ಮುಖಾಂತರ ಸಚಿವರು ಹೇಳಿಕೆಗಳನ್ನು ನೀಡುತ್ತಾ ಬಂದಿದ್ದಾರೆ. ಆದರೆ ನೇಮಕಾತಿ ಮಾತ್ರ ನಡೆದಿಲ್ಲ. ನಮ್ಮ ವಯೋಮಿತಿ ಮೀರುತ್ತಿದೆ. ರೈತರಿಗೆ ಸಮರ್ಪಕವಾಗಿ ಕೃಷಿ ಮಾಹಿತಿಗಳನ್ನು ದೊರೆಕಿಸಲು, ಇಲಾಖೆಯನ್ನು ಬಲಪಡಿಸಲು ಹಾಗೂ ಕೃಷಿ ವಿದ್ಯಾರ್ಥಿಗಳ ಭವಿಷ್ಯವನ್ನು ಭದ್ರಪಡಿಸಲು ತಕ್ಷಣವೇ ನೇಮಕಾತಿಗೆ ಆದೇಶ ಹೊರಡಿಸಬೇಕು” ಎಂದು ಒತ್ತಾಯಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....