Homeಮುಖಪುಟಪ್ರಚೋದನಕಾರಿ ಉಡುಗೆ ಹಾಕಿದ್ದರೆ ಲೈಂಗಿಕ ಕಿರುಕುಳ ಪ್ರಕರಣ ಸಿಂಧುವಲ್ಲ ಎಂದಿದ್ದ ಕೇರಳದ ನ್ಯಾಯಾಧೀಶ ವರ್ಗಾವಣೆ

ಪ್ರಚೋದನಕಾರಿ ಉಡುಗೆ ಹಾಕಿದ್ದರೆ ಲೈಂಗಿಕ ಕಿರುಕುಳ ಪ್ರಕರಣ ಸಿಂಧುವಲ್ಲ ಎಂದಿದ್ದ ಕೇರಳದ ನ್ಯಾಯಾಧೀಶ ವರ್ಗಾವಣೆ

ಪರಿಶಿಷ್ಟ ಜಾತಿಗೆ ಸೇರಿದ ಮಹಿಳೆ ಎಂದು ತಿಳಿದೂ ಅವಳ ದೇಹವನ್ನು ಆರೋಪಿ ಸ್ಪರ್ಶಿಸುತ್ತಾನೆ ಎಂಬುದು ನಂಬಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದರು

- Advertisement -
- Advertisement -

ಮಹಿಳೆ ‘ಲೈಂಗಿಕ ಪ್ರಚೋದನಕಾರಿ’ ಉಡುಪುಗಳನ್ನು ಧರಿಸಿದಾಗ ಲೈಂಗಿಕ ಕಿರುಕುಳದ ಅಪರಾಧ ನಿಲ್ಲುವುದಿಲ್ಲ ಎಂದು ಇತ್ತೀಚೆಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಕೇರಳದ ಕೋಝಿಕ್ಕೋಡ್ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಎಸ್.ಕೃಷ್ಣ ಕುಮಾರ್ ಅವರನ್ನು ಕೊಲ್ಲಂ ಕಾರ್ಮಿಕ ನ್ಯಾಯಾಲಯದ ಅಧ್ಯಕ್ಷರಾಗಿ ವರ್ಗಾವಣೆ ಮಾಡಲಾಗಿದೆ. ಕೇರಳ ಹೈಕೋರ್ಟ್ ರಿಜಿಸ್ಟ್ರಾರ್‌ ಜನರಲ್ ಪಿ ಕೃಷ್ಣ ಕುಮಾರ್ ಅವರು ಮಂಗಳವಾರ ವರ್ಗಾವಣೆ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಎರಡು ಆಪಾದಿತ ಲೈಂಗಿಕ ಕಿರುಕುಳ ಪ್ರಕರಣಗಳಲ್ಲಿ ಬರಹಗಾರ ಮತ್ತು ಸಾಮಾಜಿಕ ಕಾರ್ಯಕರ್ತ ಸಿವಿಕ್ ಚಂದ್ರನ್‌ಗೆ ನಿರೀಕ್ಷಣಾ ಜಾಮೀನು ನೀಡುವಾಗ ನ್ಯಾಯಾಧೀಶರ ಅವಲೋಕನಗಳು ಕೇರಳದಲ್ಲಿ ಆಕ್ರೋಶಕ್ಕೆ ಕಾರಣವಾಗಿದ್ದು, ಜಿಲ್ಲಾ ನ್ಯಾಯಾಲಯದ ತೀರ್ಪಿನ ವಿರುದ್ಧ ರಾಜ್ಯ ಸರ್ಕಾರವು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಮಹಿಳೆ ಪರಿಶಿಷ್ಟ ಜಾತಿಗೆ ಸೇರಿದವಳು ಎಂದು ಸಂಪೂರ್ಣವಾಗಿ ತಿಳಿದಿರುವ ಆರೋಪಿ, ಅವಳ ದೇಹವನ್ನು ಸ್ಪರ್ಶಿಸುತ್ತಾನೆ ಎಂಬುದು ನಂಬಲು ಸಾಧ್ಯವಿಲ್ಲ” ಎಂದು ಮೊದಲ ಪ್ರಕರಣದಲ್ಲಿ ಸಿವಿಕ್ ಚಂದ್ರನ್‌ಗೆ ಜಾಮೀನು ನೀಡುವಾಗ ನ್ಯಾಯಾಧೀಶರು ಹೇಳಿದ್ದರು. ಈ ಹಿನ್ನಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿನ ಅಪರಾಧಗಳು ಆರೋಪಿಗಳ ವಿರುದ್ಧ ಪ್ರಾಥಮಿಕವಾಗಿ ನಿಲ್ಲುವುದಿಲ್ಲ ಎಂದು ಹೇಳಿದ್ದರು.

ಇದನ್ನೂ ಓದಿ: ಮಹಿಳೆ ಪ್ರಚೋದನಕಾರಿ ಉಡುಗೆ ತೊಟ್ಟರೆ ಪುರುಷರ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣ ನಿಲ್ಲುವುದಿಲ್ಲ: ಕೇರಳ ಕೋರ್ಟ್

ಎರಡನೇ ಪ್ರಕರಣದಲ್ಲಿ ನ್ಯಾಯಾಧೀಶರು, ಮಹಿಳೆ “ಲೈಂಗಿಕ ಪ್ರಚೋದನಕಾರಿ” ಉಡುಪುಗಳನ್ನು ಧರಿಸಿದಾಗ ಲೈಂಗಿಕ ಕಿರುಕುಳದ ಅಪರಾಧ ನಿಲ್ಲುವುದಿಲ್ಲ ಎಂದು ಹೇಳಿದ್ದರು.

IPC ಯ ಸೆಕ್ಷನ್ 354A ಅನ್ನು ಓದುತ್ತಾ ತನ್ನ ಮೌಖಿಕ ಅವಲೋಕನ ಮಾಡಿರುವ ನ್ಯಾಯಾಧೀಶರು, “ಈ ಸೆಕ್ಷಣ್ ಅಡಿಯಲ್ಲಿ ಪ್ರಕರಣ ದಾಖಲಾಗಲು, ದೈಹಿಕ ಸಂಪರ್ಕ ಮತ್ತು ಇಷ್ಟವಿಲ್ಲದ ಮತ್ತು ಸ್ಪಷ್ಟವಾದ ಲೈಂಗಿಕ ಪ್ರಚೋದನೆಗಳಳು ಇರಬೇಕು. ಲೈಂಗಿಕ ಬೇಡಿಕೆ ಅಥವಾ ವಿನಂತಿಯನ್ನು ಹೊಂದಿರಬೇಕು. ಅಲ್ಲಿ ಲೈಂಗಿಕ ಹಿನ್ನಲೆಯ ಟೀಕೆಗಳಿರಬೇಕು” ಎಂದು ಹೇಳಿದ್ದರು.

ಈ ನಡುವೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬರಹಗಾರ ಸಿವಿಕ್ ಚಂದ್ರನ್ (74) ಅವರಿಗೆ ನೀಡಲಾಗಿದ್ದ ನಿರೀಕ್ಷಣಾ ಜಾಮೀನನ್ನು ಕೇರಳ ಹೈಕೋರ್ಟ್ ಬುಧವಾರ ರದ್ದುಗೊಳಿಸಿದೆ. “ಲೈಂಗಿಕ-ಪ್ರಚೋದನಕಾರಿ ಉಡುಗೆ” ಕುರಿತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರ ಅವಲೋಕನಗಳನ್ನು ಸಮರ್ಥಿಸಲು ಸಾಧ್ಯವಿಲ್ಲ ಎಂದು ಅದು ಹೇಳಿದೆ.

ಇದನ್ನೂ ಓದಿ: ಕೇರಳದ IAS ಅಧಿಕಾರಿ ಶ್ರೀರಾಮ್ ವಿರುದ್ಧದ ಶಾಂತಿಯುತ ಪ್ರತಿಭಟನೆಗಳಿಗೆ ಕೋಮು ಬಣ್ಣ ಹಚ್ಚಿದ ಬಲಪಂಥೀಯರು

ನ್ಯಾಯಾಮೂರ್ತಿ ಕೌಸರ್ ಎಡಪ್ಪಗತ್ ಅವರಿದ್ದ ಹೈಕೋರ್ಟ್‌ನ ಏಕಸದಸ್ಯ ಪೀಠವು ಆರೋಪಿಯ ವಯಸ್ಸನ್ನು ಪರಿಗಣಿಸಿ ತಕ್ಷಣ ಬಂಧಿಸದಂತೆ ಪೊಲೀಸರಿಗೆ ಸೂಚಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ನ್ಯಾಯಾಲಯ ಪರಿಶೀಲಿಸಲಿದೆ.

ಎರಡು ಪ್ರಕರಣಗಳಲ್ಲಿ ಚಂದ್ರನ್‌ಗೆ ಜಾಮೀನು ನೀಡುವ ಸಂದರ್ಭದಲ್ಲಿ ಕೋಝಿಕ್ಕೋಡ್ ಸೆಷನ್ಸ್ ನ್ಯಾಯಾಧೀಶ ಎಸ್ ಕೃಷ್ಣಕುಮಾರ್ ಅವರ ಅವಲೋಕನಗಳು ವ್ಯಾಪಕ ಆಕ್ರೋಶಕ್ಕೆ ಕಾರಣವಾದ ನಂತರ ಕೇರಳ ಸರ್ಕಾರವು ಕಳೆದ ವಾರ ನ್ಯಾಯಾಲಯದ ಮೆಟ್ಟಿಲೇರಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...