Homeಮುಖಪುಟಎಲ್ಲಾ ರೀತಿ ವಿಫಲವಾಗಿರುವ ಬಿಜೆಪಿ ಅಧಿಕಾರಕ್ಕಾಗಿ ಮಾತ್ರ ಸಾವರ್ಕರ್ ಹೆಸರು ಬಳಸುತ್ತಿದೆ: ಹಿಂದೂ ಮಹಾಸಭಾ ಆರೋಪ

ಎಲ್ಲಾ ರೀತಿ ವಿಫಲವಾಗಿರುವ ಬಿಜೆಪಿ ಅಧಿಕಾರಕ್ಕಾಗಿ ಮಾತ್ರ ಸಾವರ್ಕರ್ ಹೆಸರು ಬಳಸುತ್ತಿದೆ: ಹಿಂದೂ ಮಹಾಸಭಾ ಆರೋಪ

ರಾಜ್ಯ ಬಿಜೆಪಿಗೆ ಸಾವರ್ಕರ್ ಹೆಸರು ಬಳಸುವ ಯಾವುದೇ ನೈತಿಕತೆಯಿಲ್ಲ.ಬಿಜೆಪಿ ಕಾಂಗ್ರೆಸ್‌ಗಿಂತಲೂ ಹೀನಾಯವಾಗಿ ಧರ್ಮ ಒಡೆಯಲು ಮುಂದಾಗಿದೆ.

- Advertisement -
- Advertisement -

ರಾಜ್ಯವನ್ನು ಅಭಿವೃದ್ದಿ ಮಾಡಲು ಎಲ್ಲಾ ಹಂತಗಳಲ್ಲಿ ವಿಫಲವಾಗಿರುವ ಬಿಜೆಪಿ ಪಕ್ಷವು ಚುನಾವಣೆ ಹತ್ತಿರ ಬಂದಿರುವುದರಿಂದ ಅಧಿಕಾರ ಉಳಿಸಿಕೊಳ್ಳುವುದಕ್ಕಾಗಿ ಮಾತ್ರ ಸಾವರ್ಕರ್ ಹೆಸರು ಬಳಸುತ್ತಿದೆ ಎಂದು ಅಖಿಲ ಭಾರತ ಹಿಂದೂ ಮಹಾಸಭಾದ ರಾಜ್ಯ ಕಾರ್ಯದರ್ಶಿ ಧರ್ಮೇಂದ್ರ ಆರೋಪಿಸಿದ್ದಾರೆ.

ರಾಜ್ಯ ಬಿಜೆಪಿಗೆ ಸಾವರ್ಕರ್ ಹೆಸರು ಬಳಸುವ ಯಾವುದೇ ನೈತಿಕತೆಯಿಲ್ಲ. ಏಕೆಂದರೆ ಬಿಜೆಪಿ ರೀತಿ ಸಾವರ್ಕರ್ ಜಾತಿಗಳನ್ನು ಸಂಘಟಿಸಲಿಲ್ಲ. ಬದಲಿಗೆ ಕೇವಲ ಧರ್ಮ ಪ್ರಚಾರ ಮಾಡಿದರು. ಆದರೆ ಬಿಜೆಪಿ ಕಾಂಗ್ರೆಸ್‌ಗಿಂತಲೂ ಹೀನಾಯವಾಗಿ ಧರ್ಮ ಒಡೆಯಲು ಮುಂದಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿದ ಅವರು, “ಬಿಜೆಪಿಗೆ ಅಖಂಡ ಭಾರತದ ಕಲ್ಪನೆಯೊಂದಿಗೆ ಸಾವರ್ಕರ್ ಸ್ಥಾಪಿಸಿದ ಅಖಿಲ ಭಾರತ ಹಿಂದೂ ಮಹಾಸಭಾ ಬೇಕಿಲ್ಲ. ಬದಲಿಗೆ ಮುಂದಿನ ಚುನಾವಣೆಗಾಗಿ ಅವರ ಹೆಸರು ಮತ್ತು ಫೋಟೊ ಮಾತ್ರ ಬೇಕಿದೆ” ಎಂದು ಟೀಕಿಸಿದರು ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಬಿಜೆಪಿಗೆ ನಿಜವಾಗಿಯೂ ಸಾವರ್ಕರ್ ಬಗ್ಗೆ ಪ್ರೀತಿಯಿದ್ದರೆ ಅವರ ಜನ್ಮದಿನವನ್ನು ರಾಷ್ಟ್ರೀಯ ಹಬ್ಬ ಎಂದು ಘೋಷಿಸಲಿ. ಆದರೆ ಟಿಪ್ಪು ಜಯಂತಿ ಆಚರಿಸುವಾಗ ಬಿಜೆಪಿ ಸಾವರ್ಕರ್‌ರನ್ನು ಮರೆತಿತ್ತು ಎಂದಿದ್ದಾರೆ.

ಸಾವರ್ಕರ್ ವಿರುದ್ಧ ಹೇಳಿಕೆ ನೀಡುತ್ತಿರುವ ಸಿದ್ದರಾಮಯ್ಯ ಹೇಡಿ ಸ್ವಭಾವದವರು ಎಂದು ಟೀಕಿಸಿದ ಧರ್ಮೇಂದ್ರ ಅವರು ವಿರುದ್ಧ ದೂರು ದಾಖಲಿಸಿ ಕಾಂಗ್ರೆಸ್ ವಿರುದ್ಧ ಹೋರಾಡುವುದಾಗಿ ಹೇಳಿದರು. ಅದೇ ಸಂದರ್ಭದಲ್ಲಿ ಸಿದ್ದರಾಮಯ್ಯ ಮಾಂಸ ತಿಂದು ದೇವಸ್ಥಾನಕ್ಕೆ ಹೋದರು ಎಂದು ಬಿಜೆಪಿ ಅನಗತ್ಯವಾಗಿ ವಿವಾದವೆಬ್ಬಿಸುತ್ತಿದೆ. ಏಕೆಂದರೆ ಬಿಜೆಪಿಗೆ ಬೇರೆ ವಿಷಯಗಳೇ ಇಲ್ಲ. ಬಿಜೆಪಿಯವರು ಎಂದೂ ಮಾಂಸ ತಿಂದು ದೇವಾಲಯಕ್ಕೆ ಹೋಗಿಲ್ಲವೇ ಎಂದರು. ಜೊತೆಗೆ ನಾನು ವಿಷಯದಲ್ಲಿ ಸಿದ್ದರಾಮಯ್ಯನವರನ್ನು ಬೆಂಬಲಿಸುವುದಿಲ್ಲ ಎಂದು ಸ್ಪಷ್ಟೀಕರಣ ನೀಡಿದರು.

ಇದೇ ಧರ್ಮೇಂದ್ರರವರು ಈ ಹಿಂದೆ ಗಾಂಧಿಯನ್ನು ಕೊಂದವರು ನಾವು ಎಂಬ ಹೇಳಿಕೆ ನೀಡಿ ಬಂಧನಕ್ಕೆ ಒಳಗಾಗಿದ್ದರು. ಪತ್ರಿಕಾಗೋಷ್ಟಿಯಲ್ಲಿ “ನಾವು ಗಾಂಧೀಜಿಯನ್ನೆ ಬಿಟ್ಟಿಲ್ಲ ಸ್ವಾಮಿ, ಇನ್ನು ನೀವು ಯಾವ ಲೆಕ್ಕ ನಮಗೆ? ಹಿಂದೂಗಳ ಮೇಲೆ ನಡೆದಿರುವ ದಾಳಿಯನ್ನು ಖಂಡಿಸಿ ಗಾಂಧೀಜಿಯನ್ನೇ ಹತ್ಯೆ ಮಾಡಿದವರಿಗೆ ನಿಮ್ಮ ವಿಚಾರದಲ್ಲಿ ಆಲೋಚನೆ ಮಾಡಲ್ಲಿಕ್ಕೆ ಸಾಧ್ಯವಿಲ್ಲ ಎನ್ನುತ್ತೀರಾ?” ಎಂಬ ಹೇಳಿಕೆ ನೀಡಿದ್ದರು.

ದೇಗುಲ ಧ್ವಂಸ ವಿರೋಧಿಸಿ ಹೇಳಿಕೆ ನೀಡಿದ್ದ ಅವರು, ಬಿಜೆಪಿ, ಸಂಘಪರಿವಾರ ಮತ್ತು ಸಹಪರಿವಾರಗಳಾದ ಹಿಂದೂ ಜಾಗರಣ ವೇದಿಕೆ, ಭಜರಂಗದಳ, ವಿಹಿಂಪ ರಾಜ್ಯದ ವಿವಿಧೆಡೆ ಪ್ರತಿಭಟನೆ ನಡೆಸಿವೆ. ಸ್ವಾಮಿ ನಾನು ಕೇಳುತ್ತೇನೆ ರಾಜ್ಯದಲ್ಲಿ ಯಾರ ಸರ್ಕಾರ ಇದೆ? ಒಂದು ವೇಳೆ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಆಡಳಿತದಲ್ಲಿ ಇದ್ದಿದ್ರೆ ಪರಿಸ್ಥಿತಿ ಏನಾಗ್ತಿತ್ತು..? ಕರ್ನಾಟಕ ಹೀಗೆ ಇರುತ್ತಿತ್ತೆ? ಎಂದು ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದರು.

ಇದನ್ನೂ ಓದಿ; ಗಾಂಧೀಜಿಯನ್ನೆ ಹತ್ಯೆ ಮಾಡಿದವರು ನಾವು, ಇನ್ನು ನೀವು ಯಾವ ಲೆಕ್ಕ?: ಹಿಂದೂ ಮಹಾಸಭಾ ಮುಖಂಡನ ಪ್ರಚೋದನಾಕಾರಿ ಹೇಳಿಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...