Homeಮುಖಪುಟಬಿಲ್ಕಿಸ್ ಬಾನೋ ಒಂದು ವೇಳೆ ವಿಮಲಾ ದೇವಿ ಆಗಿದ್ದರೆ?

ಬಿಲ್ಕಿಸ್ ಬಾನೋ ಒಂದು ವೇಳೆ ವಿಮಲಾ ದೇವಿ ಆಗಿದ್ದರೆ?

- Advertisement -
- Advertisement -

15ನೆಯ ಆಗಸ್ಟ್‌ರಿಂದ ನನ್ನ ತಲೆಯಲ್ಲಿ ಪದೇಪದೇ ಹಿಂದಿಯ ಮಹಾನ್ ಕವಿ ಸರ್ವೇಶ್ವರ್ ದಯಾಲ್ ಸಕ್ಸೇನ ಅವರ ಪ್ರಸಿದ್ಧ ಕವಿತೆ ’ದೇಶ ಹಾಳೆಯ ಮೇಲೆ ಬರೆದಿರುವ ನಕ್ಷೆಯಂತೂ ಅಲ್ಲವಲ್ಲ’ ಗುಂಯ್ಗುಟ್ಟುತ್ತಿದೆ. ಇತ್ತ ದೇಶ ಸ್ವಾತಂತ್ರದ 75ನೆಯ ವರ್ಷದ ಸಂಭ್ರಮಾಚರಣೆ ಮಾಡುತ್ತಿತ್ತು, ಅತ್ತ ಗೋಧ್ರಾ ಜೈಲಿನಿಂದ 11 ಜನ ಬಲಾತ್ಕಾರಿ ಮತ್ತು ಕೊಲೆಗಾರರಿಗೆ ಸ್ವಾತಂತ್ರ್ಯ ನೀಡಲಾಗುತ್ತಿತ್ತು. ದೇಶದಲ್ಲಿ ತಿರಂಗಾ ಯಾತ್ರೆ ನಡೆಯುತ್ತಿತ್ತು ಹಾಗೂ ಅತ್ತ ಅಪರಾಧಿಗಳಿಗೆ ಹೂವಿನ ಮಾಲೆ ಹಾಕಲಾಗುತ್ತಿತ್ತು. ಕವಿ ನನಗೆ ಪ್ರಶ್ನೆ ಕೇಳುತ್ತಿದ್ದ, ಈ ಕವಿತೆಯನ್ನು 50 ವರ್ಷ ಹಿಂದೆಯಲ್ಲ, 2022ರ ಸಲುವಾಗಿ ಬರೆದಂತಿತ್ತು:

“ಒಂದು ವೇಳೆ ನಿಮ್ಮ ಮನೆಯ
ಒಂದು ಕೋಣೆಯಲ್ಲಿ ಬೆಂಕಿ ಬಿದ್ದಿದ್ದರೆ
ನೀವು, ಇನ್ನೊಂದು ಕೋಣೆಯಲ್ಲಿ ನಿದ್ರಿಸಬಹುದೇ?
ಒಂದು ವೇಳೆ ನಿಮ್ಮ ಮನೆಯ ಒಂದು ಕೋಣೆಯಲ್ಲಿ
ಹೆಣಗಳು ಕೊಳೆತು ನಾರುತ್ತಿದ್ದರೆ
ನೀವು ಇನ್ನೊಂದು ಕೋಣೆಯಲ್ಲಿ ಪ್ರಾರ್ಥನೆ ಸಲ್ಲಿಸಬಲ್ಲಿರಾ?
ಹೌದು ಎಂತಾದಲ್ಲಿ,
ನಿಮಗೆ ಹೇಳಲು ನನ್ನ ಬಳಿ ಏನೂ ಇಲ್ಲ”

ಸ್ವಾಭಾವಿಕವಾಗಿಯೇ, ನನಗೆ ’ಹೌದು’ ಎಂದು ಹೇಳಲು ಆಗುವುದಿಲ್ಲ. ಮನೆಯಲ್ಲಿ ಬೆಂಕಿ ಹತ್ತಿದ್ದರೆ ಎಚ್ಚರವಿದ್ದ ಯಾವ ವ್ಯಕ್ತಿಯೂ ನಿದ್ರೆ ಮಾಡಲಾರ. ಪಕ್ಕದ ಕೋಣೆಯಲ್ಲಿ ಹೆಣ ಬಿದ್ದಿದ್ದರೆ, ಒಬ್ಬ ನಿಜವಾದ ಉಪಾಸಕನಿಗೆ ಪ್ರಾರ್ಥನೆ ಸಲ್ಲಿಸಲು ಆಗುವುದಿಲ್ಲ. ಅದೇ ರೀತಿಯಲ್ಲಿ ಯಾವ ದೇಶದಲ್ಲಿ ಬಲಾತ್ಕಾರಿಗಳ ಮತ್ತು ಅಪರಾಧಿಗಳ ಗುಣಗಾನ ನಡೆಯುತ್ತಿದೆಯೋ, ಅಲ್ಲಿ ಒಬ್ಬ ನಿಜವಾದ ದೇಶಭಕ್ತನಿಗೆ ತಲೆಯೆತ್ತಿ ನಡೆಯಲಾಗುವುದಿಲ್ಲ. ಕವಿತೆಯ ಎರಡನೆಯ ಪಂಕ್ತಿಯು ಅದಕ್ಕೆ ಕಾರಣ ನೀಡುತ್ತದೆ:

“ದೇಶ ಹಾಳೆಯ ಮೇಲೆ ಬರೆದಿರುವ ನಕ್ಷೆಯಂತೂ ಅಲ್ಲ
ಒಂದು ಭಾಗ ಹರಿದುಹೋದಲ್ಲಿ
ಇನ್ನೊಂದು ಭಾಗ ಹಾಗೇ ತುಂಡಾಗದೇ ಅದೇ ರೀತಿಯಲ್ಲಿ ನಿಲ್ಲಲು
ಹಾಗೂ ನದಿಗಳು, ಪರ್ವತ, ನಗರ, ಹಳ್ಳಿ
ಹಾಗೇ ತಮ್ಮ ತಮ್ಮ ಜಾಗದಲ್ಲಿ
ಕದಲದೇ ನಿಲ್ಲಲು”

ಈಗ ಯೋಚಿಸಿ, ವಿಮಲಾದೇವಿ ಎಂಬ ಹೆಸರಿನ 21 ವರ್ಷದ ಒಬ್ಬ ಮಹಿಳೆ ಇದ್ದಾಳೆ, ಅವಳು ಐದು ತಿಂಗಳ ಗರ್ಭಿಣಿ. ಇದ್ದಕ್ಕಿದ್ದಂತೆ ಗಲಭೆಗಳಾಗುತ್ತವೆ. ಕುಟುಂಬದ ಜನರು ಮನೆ ತೊರೆದು, ತಮ್ಮ ನೆಂಟರಿಸ್ಟರ ಮನೆ ಕಡೆ ಓಡುತ್ತಾರೆ. ಹೇಗೋ ಒಂದು ಟ್ರಕ್ ವ್ಯವಸ್ಥೆ ಮಾಡಿ, ಅದರಲ್ಲಿ ತುರುಕಿಕೊಳ್ಳುತ್ತಾರೆ. ಇದ್ದಕ್ಕಿಂದ್ದಂತೆ ರಸ್ತೆಯಲ್ಲಿ ಒಂದು ಗುಂಪು ಎದರಾಗುತ್ತದೆ. ಟ್ರಕ್ ನಿಲ್ಲಿಸುತ್ತಾರೆ. ಗಂಡಸರನ್ನು ಕೊಲ್ಲುತ್ತಾರೆ. ವಿಮಲಾದೇವಿಯ ಕಣ್ಣುಗಳೆದುರಿಗೇ, ಅವಳ 3 ವರ್ಷದ ಮಗಳನ್ನು ರಸ್ತೆಯ ಮೇಲೆ ಪದೇಪದೇ ಅಪ್ಪಳಿಸಿ ಕೊಲ್ಲುತ್ತಾರೆ. ನಂತರ ಈ ಗರ್ಭವತಿ ಮಹಿಳೆಯ ಮೇಲೆ ಒಬ್ಬೊಬ್ಬರಾಗಿ ಅತ್ಯಾಚಾರ ಎಸಗುತ್ತಾರೆ. ನಂತರ ಅವಳು ಸತ್ತಿದ್ದಾಳೆ ಎಂದುಕೊಂಡು ಅವಳ ಬೆತ್ತಲೆ ಶರೀರವನ್ನು ರಸ್ತೆಯ ಮೇಲೆ ಬಿಟ್ಟುಹೋಗುತ್ತಾರೆ.

ಕವಿ ಕಿರುಚುತ್ತಾನೆ:
“ಈ ಜಗತ್ತಿನಲ್ಲಿ ಮನುಷ್ಯನ ಪ್ರಾಣಕ್ಕಿಂತ
ದೊಡ್ಡದು ಏನೂ ಇಲ್ಲ
ದೇವರೂ ಇಲ್ಲ
ಜ್ಞಾನವೂ ಇಲ್ಲ
ಚುನಾವಣೆಯೂ ಇಲ್ಲ
ಕಾಗದದ ಮೇಲೆ ಬರೆಯಲಾದ ಯಾವುದೇ ಬರಹವನ್ನೂ
ಹರಿದುಹಾಕಬಹುದು
ಹಾಗೂ ನೆಲದ ಏಳು ಪದರುಗಳ ಒಳಗೆ
ಹೂತು ಹಾಕಬಹುದು”

ಆದರೆ ಯಾವುದೇ ಸಿನೆಮಾದ ಕಥೆಯಂತೆ ವಿಮಲಾದೇವಿ ಸಾಯಲಿಲ್ಲ. ಅವಳು ಪ್ರಜ್ಞೆ ಮರಳಿ ಪಡೆದು, ಹೇಗೋ ತನ್ನ ದೇಹ ಮುಚ್ಚಿಕೊಂಡು ಸುರಕ್ಷಿತ ಸ್ಥಳ ತಲುಪುತ್ತಾಳೆ. ಪೊಲೀಸರು ಅವಳ ದೂರನ್ನು ದಾಖಲಿಸಲೂ ನಿರಾಕರಿಸುತ್ತಾರೆ. ದಾಖಲಿಸಿದ ನಂತರ ಸರಿಯಾಗಿ ತನಿಖೆ ಆಗುವುದಿಲ್ಲ. ಹೇಗೋ ವಿಷಯ ಸರ್ವೋಚ್ಚ ನ್ಯಾಯಾಲಯಕ್ಕೆ ತಲುಪುತ್ತದೆ. ನ್ಯಾಯ ಆಗಲಿ ಎಂದು ಪ್ರಕರಣವನ್ನು ಬೇರೊಂದು ರಾಜ್ಯದಲ್ಲಿ ನಡೆಸಲಾಗುತ್ತದೆ. ಆಗ ಅಪರಾಧಿಗಳಿಗೆ ಶಿಕ್ಷೆಯಾಗುತ್ತದೆ. ಕೊನೆಗೆ, 11 ಅಪರಾಧಿಗಳಿಗೆ ಬಲಾತ್ಕಾರ ಮತ್ತು ಕೊಲೆಯ ಆರೋಪದ ಮೇಲೆ ಜೀವಾವಧಿ ಶಿಕ್ಷೆ ವಿಧಿಸಲಾಗುತ್ತದೆ.

ಸರ್ವೇಶ್ವರ್ ದಯಾಲ್ ಸಕ್ಸೇನ

ಕಥೆ ಇಲ್ಲಿಯೇ ಮುಗಿಯುವುದಿಲ್ಲ. ಜೈಲಿನಲ್ಲಿದ್ದರೂ, ಈ ಎಲ್ಲ ಅಪರಾಧಿಗಳು ಪದೇಪದೇ ಪೆರೋಲ್ ಮೇಲೆ ಹೊರಬರುತ್ತಾರೆ, ಸಂಭ್ರಮಿಸುತ್ತಾರೆ, ಪಕ್ಷದ ರ್‍ಯಾಲಿಗಳಲ್ಲಿ ಶಾಮೀಲಾಗುತ್ತಾರೆ ಹಾಗೂ ವಿಮಲಾದೇವಿಯ ಪರಿವಾರಕ್ಕೆ ಬೆದರಿಕೆ ಹಾಕುತ್ತಾರೆ. ಪೊಲೀಸರು, ಆಡಳಿತ ಮತ್ತು ಸರಕಾರ ಮಂದಹಾಸ ಬೀರುತ್ತವೆ. ಹಾಗೂ ಶಿಕ್ಷೆ ಪೂರ್ಣವಾಗುವ ಮುನ್ನ ಸರಕಾರ ಒಂದು ಸಮಿತಿಯನ್ನು ರಚಿಸುತ್ತದೆ, ಅದು ಈ ಅತ್ಯಂತ ಕ್ರೂರ ಅಪರಾಧಿಗಳನ್ನು ಅವರ ಒಳ್ಳೆಯ ನಡೆತೆ ಮತ್ತು ಮಾನವೀಯತೆಯ ಆಧಾರದ ಮೇಲೆ ಬಿಡುಗಡೆ ಮಾಡುತ್ತದೆ. ಹೀಗೆ 15ನೆಯ ಆಗಸ್ಟ್‌ರಂದು ಸ್ವಾತಂತ್ರ್ಯದ ದಿನವನ್ನು ಆಚರಿಸಲಾಗುತ್ತದೆ. ಈಗ ಕವಿತೆ ತನ್ನ ಉತ್ತುಂಗವನ್ನು ತಲುಪುತ್ತದೆ:

“ನೆನಪಿಡಿ
ಒಂದು ಮಗುವಿನ ಕೊಲೆ
ಒಬ್ಬ ಮಹಿಳೆಯ ಸಾವು
ಒಬ್ಬ ವ್ಯಕ್ತಿಯ ಗುಂಡುಗಳಿಂದ
ಛಿದ್ರಗೊಂಡ ದೇಹ
ಯಾವುದೇ ಶಾಸನದ್ದಷ್ಟೇ ಅಲ್ಲ
ಇಡೀ ರಾಷ್ಟ್ರದ ಪತನವಾಗಿದೆ”
ಹೀಗೆ ರಕ್ತ ಸುರಿದು
ಭೂಮಿಯಲ್ಲಿ ಚೈತನ್ಯವಿರುವುದಿಲ್ಲ
ಆಕಾಶದಲ್ಲಿ ಹಾರುವ ಬಾವುಟಗಳನ್ನು
ಕಪ್ಪಾಗಿಸುತ್ತದೆ”

ನಾನು ಆಗಸದಲ್ಲಿ ಹಾರುತ್ತಿರುವ ತ್ರಿವರ್ಣ ಧ್ವಜವನ್ನು ನೋಡುತ್ತೇನೆ. ಅವುಗಳ ಸಂಖ್ಯೆ ಹೆಚ್ಚಿದೆ, ಅವುಗಳ ಆಕಾರ ಮತ್ತು ಎತ್ತರವೂ ಹೆಚ್ಚಿದೆ. ಆದರೆ ಕವಿತೆಯ ಸಾಲುಗಳು ನನ್ನ ಬೆನ್ನು ಬಿಡುತ್ತಿಲ್ಲ. ವಿಮಲಾ ದೇವಿಯ ಬಲಾತ್ಕಾರಿಗಳನ್ನು ಬಿಡುಗಡೆ ಮಾಡಲು ಕಾನೂನಾತ್ಮಕ ದಾಳಗಳ ಆಸರೆ ಪಡೆಯಲಾಗುತ್ತದೆ. ಆದರೆ ಕವಿ ಮತ್ತೆ ನಮ್ಮನ್ನು ಎಚ್ಚರಿಸುತ್ತಾನೆ:

“ಹೆಣಗಳ ಆಸರೆ ಪಡೆದು
ನಿಂತಿರುವ ವಿವೇಕ
ಅದು ಕುರುಡು ವಿವೇಕ”
ವಿಮಲಾ ದೇವಿ ಹೇಳುತ್ತಾಳೆ:

“ನಾನು ಮೌನವಾಗಿದ್ದೇನೆ, ಪ್ರಜ್ಞಾಹೀನಳಾಗಿದ್ದೇನೆ. ಇಷ್ಟು ಮಾತ್ರ ಹೇಳಬಲ್ಲೆ, ಒಬ್ಬ ಮಹಿಳೆಯೊಂದಿಗೆ ನ್ಯಾಯವು ಈ ರೀತಿಯಲ್ಲಿ ಬದಲಾಗಲು ಹೇಗೆ ಸಾಧ್ಯ? ನಾನು ಎಲ್ಲಕ್ಕಿಂತ ದೊಡ್ಡ ನ್ಯಾಯಾಲಯದಲ್ಲಿ ನಂಬಿಕೆ ಇಟ್ಟಿದ್ದೆ. ನಾನು ಈ ವ್ಯವಸ್ಥೆಯ ಮೇಲೆ ವಿಶ್ವಾಸವಿಟ್ಟಿದ್ದೆ. ನಾನು ನನ್ನ ದುರಂತದೊಂದಿಗೆ ಬದುಕಲು ಕಲಿಯುತ್ತಿದ್ದೆ. ಆದರೆ ಈಗ ಶಾಂತಿ ಕದಡಿದೆ. ನ್ಯಾಯದಲ್ಲಿಯ ನನ್ನ ನಂಬಿಕೆ ಕದಡಿದೆ.” ವಿಮಲಾಳ ಧ್ವನಿಯನ್ನು ಕೇಳುವವರು ಯಾರೂ ಇಲ್ಲವಾಗಿದ್ದಾರೆ. ದೇಶ ಮೌನವಾಗಿದೆ. ಯಾವುದೇ ಕುರ್ಚಿ ಅಲುಗಾಡಿಲ್ಲ. ನಿರ್ಭಯಾಳ ಬಲಾತ್ಕಾರಿಗಳಿಗೆ ಗಲ್ಲು ಶಿಕ್ಷೆ ನೀಡಬೇಕು ಎಂದು ಬೇಡಿಕೆ ಇಡುವವರು ಹಾಗೂ ಆರುಶಿ ಹತ್ಯೆಯ ಮೇಲೆ ಹಗಲೂರಾತ್ರಿ ಕಿರುಚಾಡಿದ ಟವಿ ಚಾನೆಲ್‌ಗಳು ಮೂಕರಾಗುತ್ತಾರೆ.

ಒಬ್ಬ ಕವಿ ಮಾತ್ರ ಗಂಟಲು ಹರಿದುಕೊಂಡು ವಿಮಲಾಳ ಪರವಾಗಿ ಮಾತನಾಡುತ್ತಿದ್ದಾನೆ:

“ಕೊನೆಯ ಮಾತು
ಅತ್ಯಂತ ಸ್ಪಷ್ಟ
ಯಾವುದೇ ಕೊಲೆಗಾರನಿಗೆ
ಎಂದಿಗೂ ಕ್ಷಮಿಸಬೇಡ
ಅವನು ನಿನ್ನ ಗೆಳೆಯನೇ ಆಗಿರಲಿ
ಧರ್ಮದ ಗುತ್ತಿಗೆದಾರನೇ ಆಗಿರಲಿ
ಪ್ರಜಾಪ್ರಭುತ್ವದ ಪ್ರಸಿದ್ಧ ಕಾವಲುಗಾರನೇ ಆಗಿರಲಿ”

ಆದರೆ, ಆ ಮಹಿಳೆಯ ಹೆಸರು ವಿಮಲಾ ದೇವಿ ಅಲ್ಲ, ಬಿಲ್ಕಿಸ್ ಬಾನೋ ಎಂದು ನೀವು ಹೇಳುವಿರಿ. ಹಾಗಿದ್ದರೆ? ಹಾಗಿದ್ದರೆ ಅದರಿಂದ ನ್ಯಾಯದ ತಕ್ಕಡಿ ಪಲ್ಟಿ ಹೊಡೆಯುತ್ತದೆಯೇ? ಬಲಾತ್ಕಾರದ ಚೀತ್ಕಾರಗಳು ಮಧುರವಾಗುತ್ತವೆಯೇ? ಕೊಲೆಯ ಭೀಭತ್ಸತೆ ಮುಗ್ಧವಾಗುತ್ತದೆಯೇ? ಒಂದು ವೇಳೆ ಸರ್ವೇಶ್ವರ್ ದಯಾಲ್ ಸಕ್ಸೇನಾ 2022ರಲ್ಲಿ ಜೀವಿತವಿದ್ದಲ್ಲಿ, ಕವಿತೆಯಲ್ಲಿ ಎರಡು ಸಾಲು ಸೇರಿಸುತ್ತಿದ್ದರು:

“ಒಂದು ವೇಳೆ ನೀವು ವಿಮಲಾ ದೇವಿಯ ಬಲಾತ್ಕಾರದ ಬಗ್ಗೆ ಗಟ್ಟಿಯಾಗಿ ಕಿರುಚುತ್ತೀರಾ ಎಂದಾದಲ್ಲಿ
ಬಿಲ್ಕಿಸ್ ಬಾನೋನ ಹೆಸರು ಕೇಳಿ ಸುಮ್ಮನಿರಬಹುದೇ?
ಹೌದು ಎಂತಾದಲ್ಲಿ
ನಿಮಗೆ ಹೇಳಲು ನನ್ನ ಬಳಿ ಏನೂ ಇಲ್ಲ”

ಕನ್ನಡಕ್ಕೆ: ರಾಜಶೇಖರ ಅಕ್ಕಿ


ಇದನ್ನೂ ಓದಿ: ಸ್ವಾತಂತ್ರ್ಯದ ಅಮೃತ ಮಹೋತ್ಸವದಲ್ಲಿ ಅತ್ಯಾಚಾರಿ-ಕೊಲೆಗಡುಕರನ್ನು ಗೌರವಿಸಿದ ಕರಾಳ ವಿದ್ಯಮಾನ

ಇದನ್ನೂ ಓದಿ: ಬಿಲ್ಕಿಸ್ ಬಾನೋ ಪ್ರಕರಣ: ಅಪರಾಧಿಗಳನ್ನು ಬಿಡುಗಡೆ ಮಾಡಿ ಎಂದು ಆದೇಶಿಸಿಲ್ಲ ಎಂದ ಸುಪ್ರೀಂ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...