Homeಮುಖಪುಟ‘40 ಶಾಸಕರ ಬೇಟೆಗೆ ಪ್ರಯತ್ನ’: ಆಪರೇಷನ್‌ ಕಮಲ ವಿಫಲ ಎಂದ ಎಎಪಿ

‘40 ಶಾಸಕರ ಬೇಟೆಗೆ ಪ್ರಯತ್ನ’: ಆಪರೇಷನ್‌ ಕಮಲ ವಿಫಲ ಎಂದ ಎಎಪಿ

- Advertisement -
- Advertisement -

ದೆಹಲಿಯ ಎಎಪಿ ಸರ್ಕಾರವನ್ನು ಉರುಳಿಸಲು ಬಿಜೆಪಿಯು ತಮ್ಮ ಶಾಸಕರಿಗೆ 20 ಕೋಟಿ ರೂ. ಆಫರ್‌ ನೀಡಿದೆ ಎಂದು ಪಕ್ಷವು ಆರೋಪಿಸಿದ್ದು, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಪಕ್ಷದ ಶಾಸಕರ ‘ತುರ್ತು’ ಸಭೆ ನಡೆಸಿದ್ದಾರೆ.

ದೆಹಲಿ ಎಎಪಿಯ 62 ಶಾಸಕರಲ್ಲಿ 53 ಮಂದಿ ಸದಸ್ಯರು ಮುಖ್ಯಮಂತ್ರಿ ಕೇಜ್ರಿವಾಲ್ ಮನೆಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ್ದಾರೆ. ಉಳಿದ ಶಾಸಕರು ಅರವಿಂದ್ ಕೇಜ್ರಿವಾಲ್ ಅವರೊಂದಿಗೆ ಸ್ಪೀಕರ್ ಮೂಲಕ ಫೋನ್‌ನಲ್ಲಿ ತಮ್ಮ ಬೆಂಬಲವನ್ನು ವಾಗ್ದಾನ ಮಾಡಿದ್ದಾರೆ ಎಂದು ಎಎಪಿ ನಾಯಕ ಸೌರಭ್ ಭಾರದ್ವಾಜ್ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಕ್ಷದ ಕನಿಷ್ಠ 12 ಶಾಸಕರು ತಮಗೆ ಬಿಜೆಪಿಯಿಂದ ಆಫರ್‌ ಬಂದಿದೆ ಎಂದು ಹೇಳಿದ್ದಾರೆ. ಆದರೆ ಅವರೆಲ್ಲರೂ ತಮ್ಮ ಕೊನೆಯ ಉಸಿರು ಇರುವವರೆಗೂ ಕೇಜ್ರಿವಾಲ್‌ಗೆ ಬೆಂಬಲ ನೀಡುವುದಾಗಿ ವಾಗ್ದಾನ ಮಾಡಿದ್ದಾರೆ ಎಂದು ಸೌರಭ್‌ ತಿಳಿಸಿದ್ದಾರೆ.

ಇದನ್ನೂ ಓದಿ: ದೆಹಲಿ ಸರ್ಕಾರ ಉರುಳಿಸಲು ಬಿಜೆಪಿ ಯತ್ನ: ಸಿಎಂ ಅರವಿಂದ್ ಕೇಜ್ರಿವಾಲ್ ನಿವಾಸದಲ್ಲಿ ಶಾಸಕರ ಸಭೆ

‘ಬಿಜೆಪಿಯ ಆಪರೇಷನ್ ಕಮಲದ ವೈಫಲ್ಯಕ್ಕಾಗಿ ಪ್ರಾರ್ಥಿಸಲು’ ಸಭೆಯ ನಂತರ ಕೇಜ್ರಿವಾಲ್ ಮತ್ತು ಅವರ ಶಾಸಕರು ಮಹಾತ್ಮಾ ಗಾಂಧಿಯವರ ಸ್ಮಾರಕ ರಾಜ್‌ಘಾಟ್‌ಗೆ ದೊಡ್ಡ ಗುಂಪಿನೊಂದಿಗೆ ತೆರಳಿದ್ದಾರೆ. “ಅವರು 40 ಶಾಸಕರಿಗೆ ಲಂಚ ಕೊಡಲು ಪ್ರಯತ್ನಿಸುತ್ತಿದ್ದಾರೆ ಎಂದು ನನಗೆ ತಿಳಿಯಿತು. ಆದರೆ ಒಬ್ಬ ಶಾಸಕ ಕೂಡಾ ಅವರಿಗೆ ಮಣಿಯದಿರುವುದು ನನಗೆ ಸಂತೋಷವಾಗಿದೆ” ಎಂದು ಕೇಜ್ರಿವಾಲ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಬೆಳಿಗ್ಗೆ ಎಎಪಿ ಸಭೆಗೆ ಆಗಮಿಸಿದವರನ್ನು ಟ್ರ್ಯಾಕ್ ಮಾಡುವಾಗ ಮತ್ತು ಸಂಪರ್ಕಕ್ಕೆ ಸಿಗದ ಶಾಸಕರನ್ನು ಸಂಪರ್ಕಿಸಲು ಪ್ರಯತ್ನಿಸಿದಾಗ ಗೊಂದಲ ಉಂಟಾಗಿದ್ದವು. “ಎಲ್ಲಾ ಶಾಸಕರನ್ನು ಸಂಪರ್ಕಿಸಲಾಗುತ್ತಿದೆ. ಸಭೆಯ ಬಗ್ಗೆ ನಿನ್ನೆಯೆ ಸಂದೇಶ ನೀಡಲಾಗಿದೆ. ಸಂಪರ್ಕಕ್ಕೆ ಸಿಗದ ಶಾಸಕರನ್ನು ಸಂಪರ್ಕಕ್ಕೆ ಪ್ರಯತ್ನಿಸಲಾಗುತ್ತಿದೆ. ಬಿಜೆಪಿ 40 ಶಾಸಕರನ್ನು ಒಡೆಯಲು ತಯಾರಿ ನಡೆಸುತ್ತಿದೆ” ಎಂದು ಶಾಸಕ ಪಾಂಡೆ ಸುದ್ದಿಗಾರರಿಗೆ ತಿಳಿಸಿದ್ದಾರೆ.

70 ಸದಸ್ಯ ಬಲದ ದೆಹಲಿ ವಿಧಾನಸಭೆಯಲ್ಲಿ ಎಎಪಿ 62 ಶಾಸಕರನ್ನು ಹೊಂದಿದೆ. ಬಿಜೆಪಿಗೆ ಎಂಟು ಸ್ಥಾನಗಳಿದ್ದು ಬಹುಮತಕ್ಕೆ ಇನ್ನೂ 28ರ ಅಗತ್ಯವಿದೆ. ಪಕ್ಷಾಂತರ ವಿರೋಧಿ ಕಾನೂನಿನ ಅಡಿಯಲ್ಲಿ ಕ್ರಮ ಎದುರಿಸದೆ ಇರಲು ಎಎಪಿಯಿಂದ ಸುಮಾರು 40 ಶಾಸಕರು ಪಕ್ಷಾಂತರವಾಗಬೇಕಾಗಿದೆ.

ಇದನ್ನೂ ಓದಿ: `ಬಿಜೆಪಿ ಸೇರುವುದಾದರೆ CBI & ED ಪ್ರಕರಣ ಮುಕ್ತಾಯ’: ಬಿಜೆಪಿಯಿಂದ ಆಫರ್‌ ಬಂದಿದೆ ಎಂದ ದೆಹಲಿ ಉಪಮುಖ್ಯಮಂತ್ರಿ

ಮಧ್ಯಪ್ರದೇಶ, ಮಹಾರಾಷ್ಟ್ರ ಮತ್ತು ಕರ್ನಾಟಕದ ಮಾದರಿಯಲ್ಲಿ ಬಿಜೆಪಿ ತನ್ನ ಸರ್ಕಾರವನ್ನು ಉರುಳಿಸಲು ಆಪರೇಷನ್ ಕಮಲದ ಸಂಚು ರೂಪಿಸುತ್ತಿದೆ ಎಂದು ಎಎಪಿ ಆರೋಪಿಸಿದೆ. ಬಿಜೆಪಿಯು ತಮ್ಮ ಶಾಸಕರಿಗೆ 20 ಕೋಟಿ ರೂ. ಆಫರ್‌ ನೀಡಿದ್ದು, ಅವರ ಜೊತೆಗೆ ಇನ್ನೂ ಹೆಚ್ಚಿನ ಜನರನ್ನು ತಂದರೆ 25 ಕೋಟಿ ರೂ. ನೀಡುತ್ತೇವೆ ಎಂದು ಹೇಳಿದೆ ಎಂದು ಎಎಪಿ ನಾಯಕರು ಆರೋಪಿಸಿದ್ದಾರೆ.

ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ದೆಹಲಿ ಮದ್ಯ ನೀತಿಯಲ್ಲಿನ ಭ್ರಷ್ಟಾಚಾರದ ಆರೋಪದ ಮೇಲೆ ಸಿಬಿಐ ದಾಳಿ ನಡೆಸಿದ ಎರಡು ದಿನಗಳ ನಂತರ ಈ ಆರೋಪಗಳನ್ನು ಮಾಡಲಾಗಿದೆ.

ಪಕ್ಷ ಬದಲಾಯಿಸಿದರೆ ತನ್ನ ವಿರುದ್ಧದ ಪ್ರಕರಣಗಳನ್ನು ಕೈಬಿಡುವ ಮತ್ತು ಅವರನ್ನು ಮುಖ್ಯಮಂತ್ರಿ ಮಾಡುವ ಪ್ರಸ್ತಾಪದೊಂದಿಗೆ ಬಿಜೆಪಿ ತಮ್ಮನ್ನು ಸಂಪರ್ಕಿಸಿದೆ ಎಂದು ಸಿಸೋಡಿಯಾ ಆರೋಪಿಸಿದ್ದಾರೆ. ‘‘ಮನೀಷ್ ಸಿಸೋಡಿಯಾ ಅವರಂತಹ ಸಹವರ್ತಿಯನ್ನು ಪಡೆಯಲು ಅದೃಷ್ಟ ಮಾಡಿದ್ದೇನೆ. ಅವರು ಮುಖ್ಯಮಂತ್ರಿಯಾಗುವ ಪ್ರಸ್ತಾಪವನ್ನು ತಿರಸ್ಕರಿಸಿದರು” ಕೇಜ್ರಿವಾಲ್ ಹೇಳಿದ್ದಾರೆ.

ಇದನ್ನೂ ಓದಿ: ಬಿಹಾರ ರಾಜಕೀಯ: ನಿತೀಶ್ ಹೊಸ ಪಟ್ಟು; ದೆಹಲಿ ರಾಜಕೀಯದಲ್ಲಿ ಬೀಸುವುದೇ ಹೊಸ ಗಾಳಿ?

ಸಿಸೋಡಿಯಾ ಅವರ ವಿರುದ್ಧ 14 ಗಂಟೆಗಳ ದಾಳಿ ನಡದರೂ ಸಿಬಿಐಗೆ ಏನೂ ಸಿಕ್ಕಿಲ್ಲ ಎಂದು ಮುಖ್ಯಮಂತ್ರಿ ಪ್ರತಿಪಾದಿಸಿದ್ದಾರೆ. 40 ಶಾಸಕರನ್ನು ಖರೀದಿಸಲು ಬಿಜೆಪಿಗೆ 800 ಕೋಟಿ ಎಲ್ಲಿಂದ ಬಂತು ಎಂದು ಎಎಪಿ ಕೇಜ್ರಿವಾಲ್ ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ಕಳಂಕಿತ CBI,ED ಮತ್ತು ಇತರೆ ಬಿಜೆಪಿ ಕೃಪಾಪೋಷಿತ ಗುಲಾಮ ಸರ್ಕಾರಿ ಸಂಸ್ಥೆಗಳಿಗೆ ಇಲ್ಲಿ ಕರ್ನಾಟಕದಲ್ಲಿ 2019ರಲ್ಲಿ ಕಾಂಗ್ರೆಸ್ ಮತ್ತು ಇತರೆ ಪಕ್ಷಗಳ ಗುಲಾಮ ಪ್ರತಿನಿಧಿಗಳನ್ನ ಜಾನುವಾರುಗಳಿಗಿಂತ ಕೀಳಾಗಿ ಖರೀದಿ ಮಾಡಿತಲ್ಲಾ ಅದರ ತನಿಖಾ ವ್ಯಾಪ್ತಿಯು ಈ ಗುಲಾಮ CBI ಮತ್ತು ED ಸಂಸ್ಥೆಗಳಿಗೆ ಬರೋದಿಲ್ವಾ? ಈ ಸಂಸ್ಥೆಗಳಲ್ಲಿ ಕೆಲಸ ಮಾಡೋ ಗುಲಾಮರೇ ಒಂದು ವಿಷಯ ಮನದಟ್ಟಾಗಿರಲಿ ನೀವು ತಿನ್ನುತ್ತಿರೋ ಅನ್ನ ಪ್ರಜೆಗಳ ತೆರಿಗೆ ಹಣದಿಂದ ಅ ಕಾರಣಕ್ಕಾಗಿಯಾದರು ಪ್ರಜೆಗಳಿಗೆ ಮತ್ತು ಸಂವಿಧಾನಕ್ಕೆ ಬದ್ದರಾಗಿರಿ,ಯಾವುದೋ ರಾಜಕೀಯ ಪಕ್ಷಕ್ಕಲ್ಲ.

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...