Homeಕರ್ನಾಟಕಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಬಕ್ರೀದ್‌, ರಂಜಾನ್‌ ಪ್ರಾರ್ಥನೆಗೆ ಮಾತ್ರ ಅವಕಾಶ; ಹೈಕೋರ್ಟ್ ಮಧ್ಯಂತರ ಆದೇಶ

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಬಕ್ರೀದ್‌, ರಂಜಾನ್‌ ಪ್ರಾರ್ಥನೆಗೆ ಮಾತ್ರ ಅವಕಾಶ; ಹೈಕೋರ್ಟ್ ಮಧ್ಯಂತರ ಆದೇಶ

- Advertisement -
- Advertisement -

ಹಿಂದೂ- ಮುಸ್ಲಿಂ ಕೋಮು ದಳ್ಳುರಿ ಎಬ್ಬಿಸಲು ಕೆಲವು ಮತೀಯ ಸಂಘಟನೆಗಳು ಬಯಸುತ್ತಿರುವ ಚಾಮರಾಜಪೇಟೆ ಈದ್ಗಾ ಮೈದಾನ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ. ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಯಥಾಸ್ಥಿತಿ ಕಾಪಾಡಬೇಕು ಎಂದು ಆದೇಶ ಹೊರಡಿಸಿದೆ.

ಇಲ್ಲಿನ 2 ಎಕರೆಗೂ ಹೆಚ್ಚು ಜಾಗವನ್ನು ಆಟದ ಮೈದಾನವಾಗಿಯೂ ಹಾಗೂ ಮುಸ್ಲಿಂ ಸಮುದಾಯದವರು ಬಕ್ರೀದ್ ಮತ್ತು ರಂಜಾನ್ ಸಮಯದಲ್ಲಿ ಪ್ರಾರ್ಥನೆಗಾಗಿ ಮಾತ್ರವೇ ಬಳಸಬಹುದು ಎಂದು ಮಧ್ಯಂತರ ಆದೇಶದಲ್ಲಿ ಹೇಳಲಾಗಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಜಂಟಿ ಆಯುಕ್ತ (ಪಶ್ಚಿಮ) ಆಗಸ್ಟ್ 7ರಂದು ಹೊರಡಿಸಿದ್ದ ಆದೇಶವನ್ನು ಕರ್ನಾಟಕ ರಾಜ್ಯ ವಕ್ಫ್‌ ಮತ್ತು ಬೆಂಗಳೂರು ಜಿಲ್ಲಾ ವಕ್ಫ್ ಅಧಿಕಾರಿಗಳು ಪ್ರಶ್ನಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜಮೀನಿನ ಮಾಲೀಕತ್ವವನ್ನು ಪರಿಶೀಲಿಸುವಂತೆ ಜಂಟಿ ಆಯುಕ್ತರಿಗೆ (ಪಶ್ಚಿಮ) ಬಿಬಿಎಂಪಿ ಮುಖ್ಯ ಆಯುಕ್ತರು ಸೂಚಿಸಿದ್ದರು. ನಂತರ ಅಧಿಕಾರಿಯು ಆಗಸ್ಟ್ 7ರಂದು ಜಮೀನು ಕಂದಾಯ ಇಲಾಖೆಗೆ ಸೇರಿದ್ದು ಎಂದು ಪ್ರತಿಕ್ರಿಯೆ ನೀಡಿದ್ದರು.

ಈ ಆಸ್ತಿ ವಿವಾದವು 1955ರಷ್ಟು ಹಿಂದಿನದು. ಸುಪ್ರೀಂ ಕೋರ್ಟ್ 1965ರಲ್ಲಿ ವಕ್ಫ್ ಪರವಾಗಿ ತೀರ್ಪು ನೀಡಿತ್ತು.

ಈದ್ಗಾ ಮೈದಾನದಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲು ಅವಕಾಶ ನೀಡಬೇಕು ಎಂದು ಕೆಲವು ಹಿಂದುತ್ವ ಸಂಘಟನೆಗಳು ಬಿಬಿಎಂಪಿಯನ್ನು ಕೋರಿದ್ದವು.

ಕರ್ನಾಟಕ ರಾಜ್ಯ ವಕ್ಫ್‌ ಬೋರ್ಡ್ 1965ರ ಗೆಜೆಟ್ ಅನ್ನು ಪ್ರಸ್ತುತಪಡಿಸಿ ಈ ಮೈದಾನವು ವಕ್ಫ್ ಆಸ್ತಿ ಎಂದು ತಿಳಿಸಿತು. 1974ರ ಸಿಟಿ ಸರ್ವೆ ದಾಖಲೆಗಳು ಈ ಜಾಗವನ್ನು ಆಟದ ಮೈದಾನವೆಂದು ಸೂಚಿಸಿರುವುದಾಗಿ ಹೇಳಲಾಗುತ್ತಿದೆ.

ಬಿಬಿಎಂಪಿ ಆದೇಶದ ನಂತರ ಹಿಂದುತ್ವ ಸಂಘಟನೆಗಳು ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುವುದಾಗಿ ಘೋಷಿಸಿದವು. ಅಲ್ಲದೆ ಸ್ಥಳೀಯ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಅವರೂ ಇಲ್ಲಿ ರಾಷ್ಟ್ರಧ್ವಜ ಹಾರಿಸುವುದಾಗಿ ತಿಳಿಸಿದರು.

ಇದನ್ನೂ ಓದಿರಿ: ಕೋಮುವಾದಿಗಳು ಎಬ್ಬಿಸಿದ ವಿವಾದದ ಸುಳಿಯಲ್ಲಿ ಈದ್ಗಾ ಮೈದಾನದ ಬಯಲು

ರಾಜ್ಯ ಕಂದಾಯ ಇಲಾಖೆಯು ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಿದ್ದು, ಆಗಸ್ಟ್ 15ರಂದು ಈದ್ಗಾ ಮೈದಾನದಲ್ಲಿ ಸಹಾಯಕ ಆಯುಕ್ತ ಶ್ರೇಣಿಯ ಅಧಿಕಾರಿಯೊಬ್ಬರು ಧ್ವಜಾರೋಹಣ ಮಾಡಿದ್ದರು.

ಇದೇ ವೇಳೆ ಕೆಲವು ಹಿಂದುತ್ವ ಸಂಘಟನೆಗಳು ಆಟದ ಮೈದಾನದಲ್ಲಿ ಗಣೇಶ ಚತುರ್ಥಿ ಆಚರಿಸುವಂತೆ ಒತ್ತಾಯಿಸಿದ್ದವು. ಈ ಮೂಲಕ ಈದ್ಗಾ ಮೈದಾನವನ್ನು ವಿವಾದದ ಕೇಂದ್ರ ಬಿಂದು ಮಾಡುವ ಪ್ರಯತ್ನಗಳು ನಡೆಯುತ್ತಿವೆ. ಹೈಕೋರ್ಟ್ ಮಧ್ಯಂತರ ಆದೇಶ ನೀಡಿದ್ದು, ಯಥಾಸ್ಥಿತಿ ಮುಂದುವರಿಸಲು ಸೂಚಿಸಿದೆ.

ವಿವಾದಿತ ಈದ್ಗಾ ಮೈದಾನವನ್ನು ಆಟದ ಮೈದಾನವಾಗಿ ಮತ್ತು ಮುಸ್ಲಿಮರು ಹಬ್ಬದ ಸಂದರ್ಭದಲ್ಲಿ ಪ್ರಾರ್ಥನೆ ಸಲ್ಲಿಸಲು ಮಾತ್ರ ಬಳಸಬೇಕೆಂದು ನ್ಯಾಯಮೂರ್ತಿ ಹೇಮಂತ್‌ ಚಂದನ್ ಗೌಡರ್ ತೀರ್ಪು ನೀಡಿದ್ದು, ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 23ಕ್ಕೆ ಮುಂದೂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...