Homeಕರ್ನಾಟಕಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಬಕ್ರೀದ್‌, ರಂಜಾನ್‌ ಪ್ರಾರ್ಥನೆಗೆ ಮಾತ್ರ ಅವಕಾಶ; ಹೈಕೋರ್ಟ್ ಮಧ್ಯಂತರ ಆದೇಶ

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಬಕ್ರೀದ್‌, ರಂಜಾನ್‌ ಪ್ರಾರ್ಥನೆಗೆ ಮಾತ್ರ ಅವಕಾಶ; ಹೈಕೋರ್ಟ್ ಮಧ್ಯಂತರ ಆದೇಶ

- Advertisement -
- Advertisement -

ಹಿಂದೂ- ಮುಸ್ಲಿಂ ಕೋಮು ದಳ್ಳುರಿ ಎಬ್ಬಿಸಲು ಕೆಲವು ಮತೀಯ ಸಂಘಟನೆಗಳು ಬಯಸುತ್ತಿರುವ ಚಾಮರಾಜಪೇಟೆ ಈದ್ಗಾ ಮೈದಾನ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ. ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಯಥಾಸ್ಥಿತಿ ಕಾಪಾಡಬೇಕು ಎಂದು ಆದೇಶ ಹೊರಡಿಸಿದೆ.

ಇಲ್ಲಿನ 2 ಎಕರೆಗೂ ಹೆಚ್ಚು ಜಾಗವನ್ನು ಆಟದ ಮೈದಾನವಾಗಿಯೂ ಹಾಗೂ ಮುಸ್ಲಿಂ ಸಮುದಾಯದವರು ಬಕ್ರೀದ್ ಮತ್ತು ರಂಜಾನ್ ಸಮಯದಲ್ಲಿ ಪ್ರಾರ್ಥನೆಗಾಗಿ ಮಾತ್ರವೇ ಬಳಸಬಹುದು ಎಂದು ಮಧ್ಯಂತರ ಆದೇಶದಲ್ಲಿ ಹೇಳಲಾಗಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಜಂಟಿ ಆಯುಕ್ತ (ಪಶ್ಚಿಮ) ಆಗಸ್ಟ್ 7ರಂದು ಹೊರಡಿಸಿದ್ದ ಆದೇಶವನ್ನು ಕರ್ನಾಟಕ ರಾಜ್ಯ ವಕ್ಫ್‌ ಮತ್ತು ಬೆಂಗಳೂರು ಜಿಲ್ಲಾ ವಕ್ಫ್ ಅಧಿಕಾರಿಗಳು ಪ್ರಶ್ನಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜಮೀನಿನ ಮಾಲೀಕತ್ವವನ್ನು ಪರಿಶೀಲಿಸುವಂತೆ ಜಂಟಿ ಆಯುಕ್ತರಿಗೆ (ಪಶ್ಚಿಮ) ಬಿಬಿಎಂಪಿ ಮುಖ್ಯ ಆಯುಕ್ತರು ಸೂಚಿಸಿದ್ದರು. ನಂತರ ಅಧಿಕಾರಿಯು ಆಗಸ್ಟ್ 7ರಂದು ಜಮೀನು ಕಂದಾಯ ಇಲಾಖೆಗೆ ಸೇರಿದ್ದು ಎಂದು ಪ್ರತಿಕ್ರಿಯೆ ನೀಡಿದ್ದರು.

ಈ ಆಸ್ತಿ ವಿವಾದವು 1955ರಷ್ಟು ಹಿಂದಿನದು. ಸುಪ್ರೀಂ ಕೋರ್ಟ್ 1965ರಲ್ಲಿ ವಕ್ಫ್ ಪರವಾಗಿ ತೀರ್ಪು ನೀಡಿತ್ತು.

ಈದ್ಗಾ ಮೈದಾನದಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲು ಅವಕಾಶ ನೀಡಬೇಕು ಎಂದು ಕೆಲವು ಹಿಂದುತ್ವ ಸಂಘಟನೆಗಳು ಬಿಬಿಎಂಪಿಯನ್ನು ಕೋರಿದ್ದವು.

ಕರ್ನಾಟಕ ರಾಜ್ಯ ವಕ್ಫ್‌ ಬೋರ್ಡ್ 1965ರ ಗೆಜೆಟ್ ಅನ್ನು ಪ್ರಸ್ತುತಪಡಿಸಿ ಈ ಮೈದಾನವು ವಕ್ಫ್ ಆಸ್ತಿ ಎಂದು ತಿಳಿಸಿತು. 1974ರ ಸಿಟಿ ಸರ್ವೆ ದಾಖಲೆಗಳು ಈ ಜಾಗವನ್ನು ಆಟದ ಮೈದಾನವೆಂದು ಸೂಚಿಸಿರುವುದಾಗಿ ಹೇಳಲಾಗುತ್ತಿದೆ.

ಬಿಬಿಎಂಪಿ ಆದೇಶದ ನಂತರ ಹಿಂದುತ್ವ ಸಂಘಟನೆಗಳು ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುವುದಾಗಿ ಘೋಷಿಸಿದವು. ಅಲ್ಲದೆ ಸ್ಥಳೀಯ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಅವರೂ ಇಲ್ಲಿ ರಾಷ್ಟ್ರಧ್ವಜ ಹಾರಿಸುವುದಾಗಿ ತಿಳಿಸಿದರು.

ಇದನ್ನೂ ಓದಿರಿ: ಕೋಮುವಾದಿಗಳು ಎಬ್ಬಿಸಿದ ವಿವಾದದ ಸುಳಿಯಲ್ಲಿ ಈದ್ಗಾ ಮೈದಾನದ ಬಯಲು

ರಾಜ್ಯ ಕಂದಾಯ ಇಲಾಖೆಯು ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಿದ್ದು, ಆಗಸ್ಟ್ 15ರಂದು ಈದ್ಗಾ ಮೈದಾನದಲ್ಲಿ ಸಹಾಯಕ ಆಯುಕ್ತ ಶ್ರೇಣಿಯ ಅಧಿಕಾರಿಯೊಬ್ಬರು ಧ್ವಜಾರೋಹಣ ಮಾಡಿದ್ದರು.

ಇದೇ ವೇಳೆ ಕೆಲವು ಹಿಂದುತ್ವ ಸಂಘಟನೆಗಳು ಆಟದ ಮೈದಾನದಲ್ಲಿ ಗಣೇಶ ಚತುರ್ಥಿ ಆಚರಿಸುವಂತೆ ಒತ್ತಾಯಿಸಿದ್ದವು. ಈ ಮೂಲಕ ಈದ್ಗಾ ಮೈದಾನವನ್ನು ವಿವಾದದ ಕೇಂದ್ರ ಬಿಂದು ಮಾಡುವ ಪ್ರಯತ್ನಗಳು ನಡೆಯುತ್ತಿವೆ. ಹೈಕೋರ್ಟ್ ಮಧ್ಯಂತರ ಆದೇಶ ನೀಡಿದ್ದು, ಯಥಾಸ್ಥಿತಿ ಮುಂದುವರಿಸಲು ಸೂಚಿಸಿದೆ.

ವಿವಾದಿತ ಈದ್ಗಾ ಮೈದಾನವನ್ನು ಆಟದ ಮೈದಾನವಾಗಿ ಮತ್ತು ಮುಸ್ಲಿಮರು ಹಬ್ಬದ ಸಂದರ್ಭದಲ್ಲಿ ಪ್ರಾರ್ಥನೆ ಸಲ್ಲಿಸಲು ಮಾತ್ರ ಬಳಸಬೇಕೆಂದು ನ್ಯಾಯಮೂರ್ತಿ ಹೇಮಂತ್‌ ಚಂದನ್ ಗೌಡರ್ ತೀರ್ಪು ನೀಡಿದ್ದು, ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 23ಕ್ಕೆ ಮುಂದೂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...