Homeಮುಖಪುಟಬಿಲ್ಕಿಸ್‌ ಬಾನೋ ಅತ್ಯಾಚಾರಿಗಳ ಸಂಭ್ರಮಾಚರಣೆ: ಆತಂಕಗೊಂಡು ಊರು ತೊರೆದ ಮುಸ್ಲಿಮರು

ಬಿಲ್ಕಿಸ್‌ ಬಾನೋ ಅತ್ಯಾಚಾರಿಗಳ ಸಂಭ್ರಮಾಚರಣೆ: ಆತಂಕಗೊಂಡು ಊರು ತೊರೆದ ಮುಸ್ಲಿಮರು

- Advertisement -
- Advertisement -

ಬಿಲ್ಕಿಸ್ ಬಾನೋ ಅತ್ಯಾಚಾರ ಪ್ರಕರಣದ 11 ಅಪರಾಧಿಗಳಿಗೆ ಗುಜರಾತ್ ಸರ್ಕಾರವು ಕ್ಷಮದಾನ ನೀಡಿ ಬಿಡುಗಡೆ ಮಾಡಿದ ನಂತರ ರಂಧಿಕ್‌ಪುರ ಗ್ರಾಮದ ಮುಸ್ಲಿಮರು ಊರು ತೊರೆದಿದ್ದಾರೆ.

ಅತ್ಯಾಚಾರಿಗಳ ಸಂಭ್ರಮಾಚರಣೆಯನ್ನು ನೋಡಿ, ಹೆದರಿ ತಮ್ಮ ಮನೆಗಳನ್ನು ತೊರೆದು ವಲಸೆ ಹೋಗಿದ್ದು ಅತ್ಯಾಚಾರಿಗಳು ಮತ್ತೆ ಜೈಲಿಗೆ ಸೇರಿದಾಗ ಮಾತ್ರ ತಾವು ಹಿಂತಿರುಗುವುದಾಗಿ ಹೇಳಿದ್ದಾರೆ. ಸದ್ಯಕ್ಕೆ ದೇವಗಢ್ ಬರಿಯಾಗೆ ತೆರಳಿದ್ದಾರೆ.

ವಲಸೆ ಬಂದಿರುವ ಗ್ರಾಮಸ್ಥರು, “ಅಪರಾಧಿಗಳನ್ನು ಮತ್ತೆ ಜೈಲಿಗೆ ಕಳುಹಿಸಬೇಕು” ಎಂದು ಗುಜರಾತ್ ಸರ್ಕಾರವನ್ನು ಒತ್ತಾಯಿಸಿದ್ದಾರೆ. ತಮ್ಮ ಗ್ರಾಮಕ್ಕೆ ಮತ್ತೆ ಮರಳಬೇಕೆಂದರೆ ಪೊಲೀಸ್ ರಕ್ಷಣೆಯನ್ನು ನೀಡಬೇಕೆಂದು ಕೋರಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದೇವಗಢ್ ಬರಿಯಾಯ ಕಪ್ಡಿಯಲ್ಲಿರುವ ರಹೀಮಾಬಾದ್ ಕಾಲೋನಿಗೆ ತೆರೆಳಿದ ‘ಇಂಡಿಯಾ ಟುಡೇ’ ಮಾಧ್ಯಮ ವಾಸ್ತವ ಸ್ಥಿತಿಯನ್ನು ವರದಿ ಮಾಡಿದೆ. “ರಂಧಿಕ್‌ಪುರ ಗ್ರಾಮದ ಹಲವು ಕುಟುಂಬಗಳು ತಮ್ಮ ಮನೆಗಳನ್ನು ತೊರೆದು ಈಗ ದೇವಗಡ ಬರಿಯಾದಲ್ಲಿ ವಾಸಿಸುತ್ತಿದ್ದಾರೆ. ಬಿಲ್ಕಿಸ್ ಬಾನೋ ಮತ್ತು ಅವರ ಕುಟುಂಬ ಕೂಡ ದೇವಗಢ್ ಬರಿಯಾದಲ್ಲಿ ವಾಸಿಸುತ್ತಿದೆ” ಎಂದು ವರದಿ ತಿಳಿಸಿದೆ.

ವಲಸೆ ಬಂದವರಲ್ಲಿ ವಾಹನ ಮಾರಾಟ ಮಾಡುವ ಸಮೀರ್ ಘಾಚಿ ಕುಟುಂಬವೂ ಒಂದು. ತಮ್ಮ ಕುಟುಂಬದ 12 ಸದಸ್ಯರೊಂದಿಗೆ ರಂಧಿಕ್‌ಪುರ ಗ್ರಾಮವನ್ನು ತೊರೆದು ದೇವಗಢ್ ಬರಿಯಾದಲ್ಲಿರುವ ಘಾಚಿ ‘ಇಂಡಿಯಾ ಟುಡೇ’ಗೆ ಪ್ರತಿಕ್ರಿಯೆ ನೀಡಿದ್ದಾರೆ.

“ಆ 11 ಮಂದಿ ಅತ್ಯಾಚಾರಿಗಳು ಮತ್ತು ಕೊಲೆಗಡುಕರು ಜೈಲಿನಿಂದ ಬಿಡುಗಡೆಯಾದ ಬಗ್ಗೆ ನಮಗೆ ಮೊದಲು ತಿಳಿದಿರಲಿಲ್ಲ. ಗ್ರಾಮಕ್ಕೆ ಮರಳಿದ ನಂತರ ಅವರು ಪಟಾಕಿ ಸಿಡಿಸಿದರು. ಡಿಜೆ ಹಾಕಿಕೊಂಡು ಸಂಭ್ರಮಿಸಿದರು. ನಾವು ನಮ್ಮ ಗ್ರಾಮವನ್ನು ತೊರೆದು ದೇವಗಢ್ ಬರಿಯಾಕ್ಕೆ ವಲಸೆ ಹೋಗಲು ನಿರ್ಧರಿಸಿದವು. ಕೊಲೆಗಡುಕರಿಗಾಗಿ ಮತ್ತು ರೇಪಿಸ್ಟ್‌ಗಾಗಿ ಅವರು ಹೇಗೆ ತಾನೇ ಪಟಾಕಿ ಸಿಡಿಸುತ್ತಾರೆ? ಡಿಜೆ ಹಾಕಿಕೊಂಡು ಸಂಭ್ರಮಿಸುತ್ತಾರೆ?” ಎಂದು ಪ್ರಶ್ನಿಸಿದ್ದಾರೆ ಘಾಚಿ.

11 ಮಂದಿ ಅತ್ಯಾಚಾರಿ ಅಪರಾಧಿಗಳನ್ನು ಮತ್ತೆ ಜೈಲಿನಲ್ಲಿಡಬೇಕು. ಬಿಲ್ಕಿಸ್ ಬಾನೊಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿ 55 ಜನರು ಪತ್ರಕ್ಕೆ ಸಹಿ ಹಾಕಿ ದಾಹೋದ್ ಕಲೆಕ್ಟರ್‌ಗೆ ಸಲ್ಲಿಸಿದ್ದಾರೆ.

ವಲಸೆ ಬಂದಿರುವ ಮತ್ತೋರ್ವ ಗ್ರಾಮಸ್ಥ ಇಕ್ಬಾಲ್ ಅಬ್ದುಲ್ ಪ್ರತಿಕ್ರಿಯಿಸಿ, “11 ಅತ್ಯಾಚಾರಿಗಳು ಮತ್ತು ಹಂತಕರನ್ನು ಮತ್ತೆ ಜೈಲಿಗೆ ಹಾಕುವವರೆಗೆ ಮತ್ತು ನಮಗೆ ಸೂಕ್ತ ಪೊಲೀಸ್ ರಕ್ಷಣೆ ನೀಡುವವರೆಗೆ ನಾವು ರಂಧಿಕ್‌ಪುರಕ್ಕೆ ಹಿಂತಿರುಗುವುದಿಲ್ಲ. ನಮ್ಮ ಜೀವನ ಮತ್ತು ವ್ಯಾಪಾರಕ್ಕೆ ತೊಂದರೆಯಾಗುತ್ತಿದೆ. ನಾವು ಅಸಹಾಯಕರಾಗಿದ್ದೇವೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಬಿಡುಗಡೆಗೆ ಸುಪ್ರೀಂಕೋರ್ಟ್ ಆಕ್ಷೇಪ

ಅತ್ಯಾಚಾರಿ ಅಪರಾಧಿಗಳನ್ನು ಬಿಡುಗಡೆ ಮಾಡಿದ್ದನ್ನು ಸುಪ್ರೀಂ ಕೋರ್ಟ್ ಆಕ್ಷೇಪಿಸಿದೆ. “ಬಿಲ್ಕಿಸ್ ಬಾನೋ ಅತ್ಯಾಚಾರ ಪ್ರಕರಣದ ಅಪರಾಧಿಗಳನ್ನು ಬಿಡುಗಡೆ ಮಾಡಿ ಎಂದು ಸುಪ್ರೀಂ ಕೋರ್ಟ್ ಆದೇಶಿಸಿಲ್ಲ, ಆದರೆ ಕ್ಷಮಾದಾನ ನೀಡಬಹುದೇ ಎಂದು ಪರಿಶೀಲಿಸಿ ಎಂದಷ್ಟೆ ಹೇಳಿತ್ತು” ಎಂದು ಸಿಜೆಐ ಎನ್‌.ವಿ ರಮಣ ಹೇಳಿದ್ದಾರೆ.

11 ಅಪರಾಧಿಗಳು ಕ್ಷಮಾದಾನ ಪಡೆದು ಬಿಡುಗಡೆಯಾಗಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಆಲಿಸಿದ ಸುಪ್ರೀಂ, ಕ್ಷಮಾದಾನವನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯ ಮೇಲೆ ಕೇಂದ್ರ ಸರ್ಕಾರ ಮತ್ತು ಗುಜರಾತ್ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದ್ದು, ಗುಜರಾತ್ ಸರ್ಕಾರ ಉತ್ತರಿಸುವಂತೆ ಸೂಚಿಸಿದೆ. 11 ಅಪರಾಧಿಗಳನ್ನು ಅರ್ಜಿಯಲ್ಲಿ ಕಕ್ಷಿದಾರರನ್ನಾಗಿ ಮಾಡುವಂತೆಯೂ ನ್ಯಾಯಾಲಯ ಸೂಚಿಸಿದೆ. ಎರಡು ವಾರದ ನಂತರ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ಪೀಠ ಹೇಳಿದೆ.

ಸಿಪಿಎಂ(ಎಂ) ನಾಯಕಿ ಸುಭಾಷಿಣಿ ಅಲಿ ಮತ್ತು ಸ್ವತಂತ್ರ ಪತ್ರಕರ್ತೆ ರೇವತಿ ಲಾಲ್ ಸೇರಿದಂತೆ ಮೂವರು ಅರ್ಜಿದಾರರು ಮೇಲ್ಮನವಿ ಸಲ್ಲಿಸಿದ್ದರು. ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಮೊಯಿತ್ರಾ ಕೂಡ ಎರಡನೇ ಅರ್ಜಿ ಸಲ್ಲಿಸಿದ್ದರು.

ಪ್ರಕರಣದ ಹಿನ್ನೆಲೆ

ಗುಜರಾತ್ ಗಲಭೆಯ ಸಮಯದಲ್ಲಿ ಬಿಲ್ಕಿಸ್‌ರನ್ನು ಸಾಮೂಹಿಕ ಅತ್ಯಾಚಾರಕ್ಕೆ ಒಳಪಡಿಸಲಾಯಿತು ಮತ್ತು ಅವರ ಮೂರು ವರ್ಷದ ಮಗಳು ಸಲೇಹಾ ಸೇರಿದಂತೆ 14 ಜನರನ್ನು ಮಾರ್ಚ್ 3, 2002 ರಂದು ದಾಹೋದ್ ಜಿಲ್ಲೆಯ ಲಿಮ್ಖೇಡಾ ತಾಲೂಕಿನಲ್ಲಿ ಜನಸಮೂಹವೊಂದು ಕೊಂದು ಹಾಕಿತ್ತು. ಆ ಸಮಯದಲ್ಲಿ ಬಿಲ್ಕಿಸ್ ಅವರು ಐದು ತಿಂಗಳ ಗರ್ಭಿಣಿಯಾಗಿದ್ದರು.

ಜನವರಿ 21, 2008ರಂದು ಮುಂಬೈನ ವಿಶೇಷ ಕೇಂದ್ರೀಯ ತನಿಖಾ ದಳ (ಸಿಬಿಐ) ನ್ಯಾಯಾಲಯವು ಬಿಲ್ಕಿಸ್ ಬಾನೋ ಸಾಮೂಹಿಕ ಅತ್ಯಾಚಾರ ಹಾಗೂ ಅವರ ಕುಟುಂಬದ ಏಳು ಸದಸ್ಯರ ಹತ್ಯೆಯ ಆರೋಪದ ಮೇಲೆ ಹನ್ನೊಂದು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ನಂತರ ಈ ಶಿಕ್ಷೆಯನ್ನು ಬಾಂಬೆ ಹೈಕೋರ್ಟ್ ಎತ್ತಿ ಹಿಡಿದಿತ್ತು.

ಇದನ್ನೂ ಓದಿರಿ: ಬಿಲ್ಕಿಸ್ ಬಾನೋ ಒಂದು ವೇಳೆ ವಿಮಲಾ ದೇವಿ ಆಗಿದ್ದರೆ?

ಈ ಅಪರಾಧಿಗಳು 15 ವರ್ಷಗಳಿಗಿಂತ ಹೆಚ್ಚು ಕಾಲ ಜೈಲಿನಲ್ಲಿದ್ದರು. ನಂತರ ಅವರಲ್ಲಿ ಒಬ್ಬಾತ ತನ್ನ ಅವಧಿಪೂರ್ವ ಬಿಡುಗಡೆಗಾಗಿ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದ್ದನು. ಶಿಕ್ಷೆಯನ್ನು ಹಿಂತೆಗೆದುಕೊಳ್ಳುವ ವಿಷಯವನ್ನು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್, ಗುಜರಾತ್ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಪಂಚಮಹಲ್ ಜಿಲ್ಲಾಧಿಕಾರಿ ಸುಜಲ್ ಮಾಯಾತ್ರಾ ಅವರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು.

“ಕೆಲವು ತಿಂಗಳ ಹಿಂದೆ ರಚಿಸಲಾದ ಸಮಿತಿಯು ಪ್ರಕರಣದಲ್ಲಿ ಎಲ್ಲಾ 11 ಅಪರಾಧಿಗಳಿಗೆ ಕ್ಷಮಾದಾನ ನೀಡುವ ಸರ್ವಾನುಮತದ ನಿರ್ಧಾರ ತೆಗೆದುಕೊಂಡಿದೆ. ಶಿಫಾರಸನ್ನು ರಾಜ್ಯ ಸರ್ಕಾರಕ್ಕೆ ಕಳುಹಿಸಲಾಗಿದೆ. ನಾವು ಅವರ ಬಿಡುಗಡೆಯ ಆದೇಶವನ್ನು ಸ್ವೀಕರಿಸಿದ್ದೇವೆ” ಎಂದು ಮಾಯಾತ್ರಾ ಹೇಳಿದ್ದರು ಮತ್ತು ಅವರನ್ನು ಬಿಡುಗಡೆ ಮಾಡಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...