Homeಮುಖಪುಟಬಿಲ್ಕಿಸ್‌ ಬಾನೋ ಅತ್ಯಾಚಾರಿಗಳ ಸಂಭ್ರಮಾಚರಣೆ: ಆತಂಕಗೊಂಡು ಊರು ತೊರೆದ ಮುಸ್ಲಿಮರು

ಬಿಲ್ಕಿಸ್‌ ಬಾನೋ ಅತ್ಯಾಚಾರಿಗಳ ಸಂಭ್ರಮಾಚರಣೆ: ಆತಂಕಗೊಂಡು ಊರು ತೊರೆದ ಮುಸ್ಲಿಮರು

- Advertisement -
- Advertisement -

ಬಿಲ್ಕಿಸ್ ಬಾನೋ ಅತ್ಯಾಚಾರ ಪ್ರಕರಣದ 11 ಅಪರಾಧಿಗಳಿಗೆ ಗುಜರಾತ್ ಸರ್ಕಾರವು ಕ್ಷಮದಾನ ನೀಡಿ ಬಿಡುಗಡೆ ಮಾಡಿದ ನಂತರ ರಂಧಿಕ್‌ಪುರ ಗ್ರಾಮದ ಮುಸ್ಲಿಮರು ಊರು ತೊರೆದಿದ್ದಾರೆ.

ಅತ್ಯಾಚಾರಿಗಳ ಸಂಭ್ರಮಾಚರಣೆಯನ್ನು ನೋಡಿ, ಹೆದರಿ ತಮ್ಮ ಮನೆಗಳನ್ನು ತೊರೆದು ವಲಸೆ ಹೋಗಿದ್ದು ಅತ್ಯಾಚಾರಿಗಳು ಮತ್ತೆ ಜೈಲಿಗೆ ಸೇರಿದಾಗ ಮಾತ್ರ ತಾವು ಹಿಂತಿರುಗುವುದಾಗಿ ಹೇಳಿದ್ದಾರೆ. ಸದ್ಯಕ್ಕೆ ದೇವಗಢ್ ಬರಿಯಾಗೆ ತೆರಳಿದ್ದಾರೆ.

ವಲಸೆ ಬಂದಿರುವ ಗ್ರಾಮಸ್ಥರು, “ಅಪರಾಧಿಗಳನ್ನು ಮತ್ತೆ ಜೈಲಿಗೆ ಕಳುಹಿಸಬೇಕು” ಎಂದು ಗುಜರಾತ್ ಸರ್ಕಾರವನ್ನು ಒತ್ತಾಯಿಸಿದ್ದಾರೆ. ತಮ್ಮ ಗ್ರಾಮಕ್ಕೆ ಮತ್ತೆ ಮರಳಬೇಕೆಂದರೆ ಪೊಲೀಸ್ ರಕ್ಷಣೆಯನ್ನು ನೀಡಬೇಕೆಂದು ಕೋರಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದೇವಗಢ್ ಬರಿಯಾಯ ಕಪ್ಡಿಯಲ್ಲಿರುವ ರಹೀಮಾಬಾದ್ ಕಾಲೋನಿಗೆ ತೆರೆಳಿದ ‘ಇಂಡಿಯಾ ಟುಡೇ’ ಮಾಧ್ಯಮ ವಾಸ್ತವ ಸ್ಥಿತಿಯನ್ನು ವರದಿ ಮಾಡಿದೆ. “ರಂಧಿಕ್‌ಪುರ ಗ್ರಾಮದ ಹಲವು ಕುಟುಂಬಗಳು ತಮ್ಮ ಮನೆಗಳನ್ನು ತೊರೆದು ಈಗ ದೇವಗಡ ಬರಿಯಾದಲ್ಲಿ ವಾಸಿಸುತ್ತಿದ್ದಾರೆ. ಬಿಲ್ಕಿಸ್ ಬಾನೋ ಮತ್ತು ಅವರ ಕುಟುಂಬ ಕೂಡ ದೇವಗಢ್ ಬರಿಯಾದಲ್ಲಿ ವಾಸಿಸುತ್ತಿದೆ” ಎಂದು ವರದಿ ತಿಳಿಸಿದೆ.

ವಲಸೆ ಬಂದವರಲ್ಲಿ ವಾಹನ ಮಾರಾಟ ಮಾಡುವ ಸಮೀರ್ ಘಾಚಿ ಕುಟುಂಬವೂ ಒಂದು. ತಮ್ಮ ಕುಟುಂಬದ 12 ಸದಸ್ಯರೊಂದಿಗೆ ರಂಧಿಕ್‌ಪುರ ಗ್ರಾಮವನ್ನು ತೊರೆದು ದೇವಗಢ್ ಬರಿಯಾದಲ್ಲಿರುವ ಘಾಚಿ ‘ಇಂಡಿಯಾ ಟುಡೇ’ಗೆ ಪ್ರತಿಕ್ರಿಯೆ ನೀಡಿದ್ದಾರೆ.

“ಆ 11 ಮಂದಿ ಅತ್ಯಾಚಾರಿಗಳು ಮತ್ತು ಕೊಲೆಗಡುಕರು ಜೈಲಿನಿಂದ ಬಿಡುಗಡೆಯಾದ ಬಗ್ಗೆ ನಮಗೆ ಮೊದಲು ತಿಳಿದಿರಲಿಲ್ಲ. ಗ್ರಾಮಕ್ಕೆ ಮರಳಿದ ನಂತರ ಅವರು ಪಟಾಕಿ ಸಿಡಿಸಿದರು. ಡಿಜೆ ಹಾಕಿಕೊಂಡು ಸಂಭ್ರಮಿಸಿದರು. ನಾವು ನಮ್ಮ ಗ್ರಾಮವನ್ನು ತೊರೆದು ದೇವಗಢ್ ಬರಿಯಾಕ್ಕೆ ವಲಸೆ ಹೋಗಲು ನಿರ್ಧರಿಸಿದವು. ಕೊಲೆಗಡುಕರಿಗಾಗಿ ಮತ್ತು ರೇಪಿಸ್ಟ್‌ಗಾಗಿ ಅವರು ಹೇಗೆ ತಾನೇ ಪಟಾಕಿ ಸಿಡಿಸುತ್ತಾರೆ? ಡಿಜೆ ಹಾಕಿಕೊಂಡು ಸಂಭ್ರಮಿಸುತ್ತಾರೆ?” ಎಂದು ಪ್ರಶ್ನಿಸಿದ್ದಾರೆ ಘಾಚಿ.

11 ಮಂದಿ ಅತ್ಯಾಚಾರಿ ಅಪರಾಧಿಗಳನ್ನು ಮತ್ತೆ ಜೈಲಿನಲ್ಲಿಡಬೇಕು. ಬಿಲ್ಕಿಸ್ ಬಾನೊಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿ 55 ಜನರು ಪತ್ರಕ್ಕೆ ಸಹಿ ಹಾಕಿ ದಾಹೋದ್ ಕಲೆಕ್ಟರ್‌ಗೆ ಸಲ್ಲಿಸಿದ್ದಾರೆ.

ವಲಸೆ ಬಂದಿರುವ ಮತ್ತೋರ್ವ ಗ್ರಾಮಸ್ಥ ಇಕ್ಬಾಲ್ ಅಬ್ದುಲ್ ಪ್ರತಿಕ್ರಿಯಿಸಿ, “11 ಅತ್ಯಾಚಾರಿಗಳು ಮತ್ತು ಹಂತಕರನ್ನು ಮತ್ತೆ ಜೈಲಿಗೆ ಹಾಕುವವರೆಗೆ ಮತ್ತು ನಮಗೆ ಸೂಕ್ತ ಪೊಲೀಸ್ ರಕ್ಷಣೆ ನೀಡುವವರೆಗೆ ನಾವು ರಂಧಿಕ್‌ಪುರಕ್ಕೆ ಹಿಂತಿರುಗುವುದಿಲ್ಲ. ನಮ್ಮ ಜೀವನ ಮತ್ತು ವ್ಯಾಪಾರಕ್ಕೆ ತೊಂದರೆಯಾಗುತ್ತಿದೆ. ನಾವು ಅಸಹಾಯಕರಾಗಿದ್ದೇವೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಬಿಡುಗಡೆಗೆ ಸುಪ್ರೀಂಕೋರ್ಟ್ ಆಕ್ಷೇಪ

ಅತ್ಯಾಚಾರಿ ಅಪರಾಧಿಗಳನ್ನು ಬಿಡುಗಡೆ ಮಾಡಿದ್ದನ್ನು ಸುಪ್ರೀಂ ಕೋರ್ಟ್ ಆಕ್ಷೇಪಿಸಿದೆ. “ಬಿಲ್ಕಿಸ್ ಬಾನೋ ಅತ್ಯಾಚಾರ ಪ್ರಕರಣದ ಅಪರಾಧಿಗಳನ್ನು ಬಿಡುಗಡೆ ಮಾಡಿ ಎಂದು ಸುಪ್ರೀಂ ಕೋರ್ಟ್ ಆದೇಶಿಸಿಲ್ಲ, ಆದರೆ ಕ್ಷಮಾದಾನ ನೀಡಬಹುದೇ ಎಂದು ಪರಿಶೀಲಿಸಿ ಎಂದಷ್ಟೆ ಹೇಳಿತ್ತು” ಎಂದು ಸಿಜೆಐ ಎನ್‌.ವಿ ರಮಣ ಹೇಳಿದ್ದಾರೆ.

11 ಅಪರಾಧಿಗಳು ಕ್ಷಮಾದಾನ ಪಡೆದು ಬಿಡುಗಡೆಯಾಗಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಆಲಿಸಿದ ಸುಪ್ರೀಂ, ಕ್ಷಮಾದಾನವನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯ ಮೇಲೆ ಕೇಂದ್ರ ಸರ್ಕಾರ ಮತ್ತು ಗುಜರಾತ್ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದ್ದು, ಗುಜರಾತ್ ಸರ್ಕಾರ ಉತ್ತರಿಸುವಂತೆ ಸೂಚಿಸಿದೆ. 11 ಅಪರಾಧಿಗಳನ್ನು ಅರ್ಜಿಯಲ್ಲಿ ಕಕ್ಷಿದಾರರನ್ನಾಗಿ ಮಾಡುವಂತೆಯೂ ನ್ಯಾಯಾಲಯ ಸೂಚಿಸಿದೆ. ಎರಡು ವಾರದ ನಂತರ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ಪೀಠ ಹೇಳಿದೆ.

ಸಿಪಿಎಂ(ಎಂ) ನಾಯಕಿ ಸುಭಾಷಿಣಿ ಅಲಿ ಮತ್ತು ಸ್ವತಂತ್ರ ಪತ್ರಕರ್ತೆ ರೇವತಿ ಲಾಲ್ ಸೇರಿದಂತೆ ಮೂವರು ಅರ್ಜಿದಾರರು ಮೇಲ್ಮನವಿ ಸಲ್ಲಿಸಿದ್ದರು. ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಮೊಯಿತ್ರಾ ಕೂಡ ಎರಡನೇ ಅರ್ಜಿ ಸಲ್ಲಿಸಿದ್ದರು.

ಪ್ರಕರಣದ ಹಿನ್ನೆಲೆ

ಗುಜರಾತ್ ಗಲಭೆಯ ಸಮಯದಲ್ಲಿ ಬಿಲ್ಕಿಸ್‌ರನ್ನು ಸಾಮೂಹಿಕ ಅತ್ಯಾಚಾರಕ್ಕೆ ಒಳಪಡಿಸಲಾಯಿತು ಮತ್ತು ಅವರ ಮೂರು ವರ್ಷದ ಮಗಳು ಸಲೇಹಾ ಸೇರಿದಂತೆ 14 ಜನರನ್ನು ಮಾರ್ಚ್ 3, 2002 ರಂದು ದಾಹೋದ್ ಜಿಲ್ಲೆಯ ಲಿಮ್ಖೇಡಾ ತಾಲೂಕಿನಲ್ಲಿ ಜನಸಮೂಹವೊಂದು ಕೊಂದು ಹಾಕಿತ್ತು. ಆ ಸಮಯದಲ್ಲಿ ಬಿಲ್ಕಿಸ್ ಅವರು ಐದು ತಿಂಗಳ ಗರ್ಭಿಣಿಯಾಗಿದ್ದರು.

ಜನವರಿ 21, 2008ರಂದು ಮುಂಬೈನ ವಿಶೇಷ ಕೇಂದ್ರೀಯ ತನಿಖಾ ದಳ (ಸಿಬಿಐ) ನ್ಯಾಯಾಲಯವು ಬಿಲ್ಕಿಸ್ ಬಾನೋ ಸಾಮೂಹಿಕ ಅತ್ಯಾಚಾರ ಹಾಗೂ ಅವರ ಕುಟುಂಬದ ಏಳು ಸದಸ್ಯರ ಹತ್ಯೆಯ ಆರೋಪದ ಮೇಲೆ ಹನ್ನೊಂದು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ನಂತರ ಈ ಶಿಕ್ಷೆಯನ್ನು ಬಾಂಬೆ ಹೈಕೋರ್ಟ್ ಎತ್ತಿ ಹಿಡಿದಿತ್ತು.

ಇದನ್ನೂ ಓದಿರಿ: ಬಿಲ್ಕಿಸ್ ಬಾನೋ ಒಂದು ವೇಳೆ ವಿಮಲಾ ದೇವಿ ಆಗಿದ್ದರೆ?

ಈ ಅಪರಾಧಿಗಳು 15 ವರ್ಷಗಳಿಗಿಂತ ಹೆಚ್ಚು ಕಾಲ ಜೈಲಿನಲ್ಲಿದ್ದರು. ನಂತರ ಅವರಲ್ಲಿ ಒಬ್ಬಾತ ತನ್ನ ಅವಧಿಪೂರ್ವ ಬಿಡುಗಡೆಗಾಗಿ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದ್ದನು. ಶಿಕ್ಷೆಯನ್ನು ಹಿಂತೆಗೆದುಕೊಳ್ಳುವ ವಿಷಯವನ್ನು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್, ಗುಜರಾತ್ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಪಂಚಮಹಲ್ ಜಿಲ್ಲಾಧಿಕಾರಿ ಸುಜಲ್ ಮಾಯಾತ್ರಾ ಅವರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು.

“ಕೆಲವು ತಿಂಗಳ ಹಿಂದೆ ರಚಿಸಲಾದ ಸಮಿತಿಯು ಪ್ರಕರಣದಲ್ಲಿ ಎಲ್ಲಾ 11 ಅಪರಾಧಿಗಳಿಗೆ ಕ್ಷಮಾದಾನ ನೀಡುವ ಸರ್ವಾನುಮತದ ನಿರ್ಧಾರ ತೆಗೆದುಕೊಂಡಿದೆ. ಶಿಫಾರಸನ್ನು ರಾಜ್ಯ ಸರ್ಕಾರಕ್ಕೆ ಕಳುಹಿಸಲಾಗಿದೆ. ನಾವು ಅವರ ಬಿಡುಗಡೆಯ ಆದೇಶವನ್ನು ಸ್ವೀಕರಿಸಿದ್ದೇವೆ” ಎಂದು ಮಾಯಾತ್ರಾ ಹೇಳಿದ್ದರು ಮತ್ತು ಅವರನ್ನು ಬಿಡುಗಡೆ ಮಾಡಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...