Homeಅಂಕಣಗಳುನಮ್ಮ ಮನೋ ಬಯಕೆಗಳೇ ವರದಿಗಳಾದಾಗ....

ನಮ್ಮ ಮನೋ ಬಯಕೆಗಳೇ ವರದಿಗಳಾದಾಗ….

- Advertisement -
- Advertisement -

| ಡಾ. ವಾಸು ಎಚ್.ವಿ |

ಯಾವುದೇ ಪತ್ರಕರ್ತರಿಗೆ ಸುದ್ದಿ ಮಾಡುವಾಗ ಒಂದು ಪ್ರಮುಖ ಸವಾಲು ಇರುತ್ತದೆ. ಅದು ತನ್ನ ಮನಸ್ಸಿನ ಅಪೇಕ್ಷೆಗಿಂತ ಭಿನ್ನವಾಗಿ ಇರುವ ವಸ್ತುಸ್ಥಿತಿಯನ್ನು ವಸ್ತುನಿಷ್ಠವಾಗಿ ವರದಿ ಮಾಡುವುದು. ತನ್ನೊಳಗೆ ನಿರ್ದಿಷ್ಟ ಒಲವು ನಿಲುವುಗಳಿಲ್ಲದ ಪತ್ರಕರ್ತರು ಯಾರೂ ಇರುವುದಿಲ್ಲ. ಅದರಲ್ಲೂ ಸದ್ಯ ದೇಶವನ್ನಾಳುತ್ತಿರುವವರು ಪ್ರಜಾಪ್ರಭುತ್ವದ ಮೂಲ ಆಶಯಗಳಿಗೆ ಧಕ್ಕೆ ತರುತ್ತಿದ್ದಾರೆ ಎಂಬುದು ಸ್ಪಷ್ಟವಿದ್ದರೆ, ಪತ್ರಕರ್ತರಾದವರು ಮಾಮೂಲಿಗಿಂತ ಹೆಚ್ಚೇ ವಿರೋಧ ಪಕ್ಷದ ಪಾತ್ರ ವಹಿಸಬೇಕಾಗುತ್ತದೆ. ಆದರೆ, ಹಾಗಾದಾಗ ಕಣ್ಣೆದುರಿಗಿನ ವಾಸ್ತವ ಗ್ರಹಿಸದೇ ಅಥವಾ ಗ್ರಹಿಸಿದರೂ ಅದನ್ನು ಬರಹಕ್ಕಿಳಿಸುವಾಗ ತನ್ನ ಮನೋಬಯಕೆಯನ್ನು ವಿಶ್ಲೇಷಣೆಯನ್ನಾಗಿಸುವ ಕೆಲಸ ನಡೆದುಬಿಡುತ್ತದೆ.

ಇದನ್ನು ಈ ನಿಮ್ಮ ಪತ್ರಿಕೆಯೂ ಎದುರಿಸುತ್ತಿರುವ ಸವಾಲು. ಕಾಂಗ್ರೆಸ್ ಅಥವಾ ಜೆಡಿಎಸ್ ಕುರಿತ ಯಾವ ಒಲವೂ ನಮಗಿಲ್ಲ. ಆದರೆ, ನಿಸ್ಸಂದೇಹವಾಗಿ ಬಿಜೆಪಿಯು ಭಾರತ ದೇಶದ ಮೂಲ ಅಡಿಪಾಯಕ್ಕೇ ಧಕ್ಕೆ ತರುತ್ತಿದೆ ಎಂಬ ಅಪಾಯದ ಅರಿವಿದೆ. ಹೀಗಿರುವಾಗ ಕೆಲವು ಎಡವಟ್ಟುಗಳನ್ನು ನಾವೂ ಮಾಡಿದ್ದೇವೆ. 2019ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಇದ್ದ ಅಲೆಯ ಸಂಪೂರ್ಣ ಗ್ರಹಿಕೆ ಇತ್ತೆಂದು ಹೇಳಲಾಗದಿದ್ದರೂ, ಎನ್‍ಡಿಎ ಸರ್ಕಾರ ರಚನೆ ಮಾಡುವ ಸಾಧ್ಯತೆಯೇ ಹೆಚ್ಚು ಎಂಬುದು ಸ್ಪಷ್ಟವಿತ್ತು. ಇಡೀ ದೇಶದಲ್ಲಿ ಮೋದಿ ಅಲೆ ಅತ್ಯಂತ ಹೆಚ್ಚಿರುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದು ಎಂಬುದು ಸ್ಪಷ್ಟವಾಗಿ ಗೋಚರವಾಗುತ್ತಿತ್ತು. ಅದರಲ್ಲೂ ರಾಜ್ಯದ ಮೈತ್ರಿ ಸರ್ಕಾರವು ಜನರಿಗೆ ನಿರಾಶೆ ಮೂಡಿಸಿರುವುದು ಖಚಿತವಿತ್ತು. ಹೀಗಿದ್ದೂ, ನಮ್ಮ ವಿಶ್ಲೇಷಣೆಗಳಲ್ಲಿ ಬಿಜೆಪಿ ಸೋಲಬೇಕೆಂಬ ಬಯಕೆಯು ಎದ್ದು ಕಾಣುತ್ತಿತ್ತು.

ಇಂದು ಈ ಅಪೇಕ್ಷೆಯೇ ತಪ್ಪೆಂದು ಅನಿಸುವುದಿಲ್ಲ. ಅದು ದೇಶದ ನಾಗರಿಕರಾಗಿ ನಮ್ಮ ಕರ್ತವ್ಯವೂ ಆಗಿರಬಹುದು. ಆದರೆ, ಅದು ವಸ್ತುನಿಷ್ಠ ವಿಶ್ಲೇಷಣೆ ಆಗುವುದಿಲ್ಲ. ಹೀಗೆಂದ ಮೇಲೆ ಇನ್ನೊಂದು ಪ್ರಶ್ನೆ ಏಳುತ್ತದೆ. ಹಾಗಾದರೆ, ಪತ್ರಕರ್ತರು ಪ್ರಜಾಪ್ರಭುತ್ವದ ಪರ ನಿಲ್ಲುವ ಮತ್ತು ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕೇ ಬೇಡವೇ? ಖಂಡಿತವಾಗಿ ಅಂತಹ ಕೆಲಸವನ್ನು ಪತ್ರಕರ್ತರು ಮಾಡಲೇಬೇಕು. ಆದರೆ ಎಂದಿಗೂ ತಮ್ಮ ವರದಿಗಳಲ್ಲಿ ಸುಳ್ಳಿನ ವಾಸನೆ ಇರದಂತೆ ನೋಡಿಕೊಳ್ಳಬೇಕು. ಬಹುಶಃ ಉದ್ದೇಶಪೂರ್ವಕ ಸುಳ್ಳನ್ನು ಈ ಪತ್ರಿಕೆಯಲ್ಲಿ ಬರೆಯುವುದಿಲ್ಲ. ಆದರೆ, ವಿಶ್ಲೇಷಣೆಯಲ್ಲಿ ಮನೋಬಯಕೆಗಳು ತೂರಿಕೊಂಡಿರುವುದು ವಾಸ್ತವ.

ಕಳೆದ ವಾರದ ಸಂಚಿಕೆ ಮುದ್ರಣಕ್ಕೆ ಹೋಗುವ ಮುನ್ನ ಮೂರು ಮೂಲಗಳಿಂದ ನಮಗೆ ಮಾಹಿತಿ ದೊರಕಿತು. ಅದರ ಪ್ರಕಾರ ಖಚಿತವಾಗಿ ಮೂರು ಗುಂಪುಗಳಲ್ಲಿ ಶಾಸಕರು ರಾಜೀನಾಮೆ ಕೊಡುತ್ತಾರೆ. ಎಚ್.ವಿಶ್ವನಾಥ್, ರಮೇಶ್ ಜಾರಕಿಹೊಳಿ ಮತ್ತು ಬೆಂಗಳೂರಿನ ಶಾಸಕರೊಬ್ಬರ ನೇತೃತ್ವ ಇರುತ್ತದೆ ಎಂಬುದು ಗೊತ್ತಾಗಿತ್ತು. 25 ಶಾಸಕರ ಜೊತೆ ಬಿಜೆಪಿಯು ಸಂಪರ್ಕದಲ್ಲಿದ್ದು, ಮೊದಲ 10 ಜನಕ್ಕೆ ವಿಶೇಷ ಆಫರ್ ಕೊಟ್ಟಿದ್ದಾರೆಂಬ ಸುಳಿವು ಸಿಕ್ಕಿತ್ತು. ಆನಂದ್‍ಸಿಂಗ್ ಮತ್ತು ರಮೇಶ್ ಜಾರಕಿಹೊಳಿಯವರ ರಾಜೀನಾಮೆ ಟ್ರೈಲರ್ ಮಾತ್ರ. ಗುಂಪು ಗುಂಪಾಗಿಯೇ ರಾಜೀನಾಮೆ ನೀಡಲಿದ್ದಾರೆ. ಅದು ಇನ್ನಷ್ಟು ಜನರನ್ನು ಹುರಿದುಂಬಿಸಲಿದೆ ಎಂಬುದು ಒಂದು ಮೂಲವಾದರೆ, ಆಶ್ಚರ್ಯಕರ ಮುಖಗಳು ರಾಜೀನಾಮೆ ನೀಡುವ ಗುಂಪಿನಲ್ಲಿರುತ್ತವೆ ಎಂಬುದು ಇನ್ನೊಂದು ಮೂಲವಾಗಿತ್ತು. ಈ ಸಾರಿಯ ಆಪರೇಷನ್ ಕಮಲದಿಂದ ಸಿದ್ದರಾಮಯ್ಯನವರ ಮೇಲೆ ಸಂಶಯಗಳು ದಟ್ಟವಾಗುತ್ತವೆ ಎಂಬುದು ಸಚಿವರೊಬ್ಬರು ನೀಡಿದ ಸುಳಿವಾಗಿತ್ತು.

ಇಷ್ಟು ಖಚಿತ ಸುಳಿವಿದ್ದಾಗಲೂ ನಮ್ಮ ವರದಿಗಳಲ್ಲಿ ಈ ಸಾರಿಯದ್ದೂ ಇನ್ನೊಂದು ಠುಸ್ ಆಪರೇಷನ್ ಎಂದೇ ಬಂದಿತು. ಹಾಗೆಯೇ ಎಚ್.ವಿಶ್ವನಾಥ್‍ರ ಸಂದರ್ಶನ ಮಾಡಲು ಹೋಗುವ ಹೊತ್ತಿಗಾಗಲೇ ಅವರ ಧೋರಣೆಯ ಕುರಿತು ಸಂಶಯವಿತ್ತಾದರೂ, ವರದಿ ಬರೆದಾಗ ರಾಜ್ಯದ ಚಿಂತನಶೀಲ ರಾಜಕಾರಣಿಯ ಕುರಿತ ಭ್ರಮೆಯು ಅದರಲ್ಲಿತ್ತು. ವಿಶ್ವನಾಥ್‍ರಂಥವರು ಹಾಗೆ ಮಾಡಲಾರರು ಎಂಬ ಮನೋಬಯಕೆಯಲ್ಲಿ ಎರಡು ಆಯಾಮಗಳಿದ್ದವು. ಒಂದು, ಅವರ ಕುರಿತ ಸರಿಯಾದ ಅಸೆಸ್‍ಮೆಂಟ್‍ನ ಕೊರತೆ. ಮತ್ತೊಂದು, ಹಾಗೆ ಮಾಡಬಾರದೆಂಬ ನಿರೀಕ್ಷೆ.

ಜೈಲು ಅಥವಾ ದೈಹಿಕ ದಾಳಿಗಳನ್ನೂ ಎದುರಿಸಿಯಾದರೂ ಸತ್ಯವನ್ನು ಹೇಳಬೇಕೆನ್ನುವ ತುಡಿತ ಮತ್ತು ಧೈರ್ಯವಿರುವ ಪತ್ರಕರ್ತರು ಈ ದೇಶದಲ್ಲಿ ಇನ್ನೂ ಸಾಕಷ್ಟು ಉಳಿದುಕೊಂಡಿದ್ದಾರೆ. ಆದರೆ, ಭ್ರಮೆಗಳನ್ನು ಮೀರುವುದು ಸುಲಭದ ಮಾತಲ್ಲ. ಈ ಭ್ರಮೆಗಳೂ ಅವರ ಸದ್ಭಾವನೆಗಳಿಂದಲೇ ಹುಟ್ಟಿರುವಂಥವು. ಓದು ಬಲ್ಲ ವರ್ಗವು ಇಂದು ಸರ್ವರ ಒಳಿತಿನ ದೃಷ್ಟಿಯಿಂದ ಸೂಕ್ತವಾದ ಓರಿಯೆಂಟೇಷನ್ ಬಯಸುತ್ತಿಲ್ಲ; ಬದಲಿಗೆ ತಾನೇ ಓರಿಯೆಂಟ್ ಮಾಡಬಲ್ಲಷ್ಟು ಪ್ರಬಲವಾಗಿದೆ. ಹೀಗಾಗಿ ಪ್ರಜಾಪ್ರಭುತ್ವದ ಸ್ಥಾಪಿತ ಮೌಲ್ಯಗಳ ಆಧಾರದ ಮೇಲಷ್ಟೇ ವಿಶ್ಲೇಷಣೆಯನ್ನು ಮಾಡುತ್ತಾ ಪಕ್ಷಗಳ ಕುರಿತ ಒಲವು-ನಿಲುವುಗಳನ್ನು ಪಕ್ಕಕ್ಕೆ ಸರಿಸುವುದು ಇಂದಿನ ಅಗತ್ಯವಾಗಿದೆ.

ಆ ನಿಟ್ಟಿನಲ್ಲಿ ಈ ಪತ್ರಿಕೆ ತನ್ನ ಭಾಷೆ, ಕಥನ ಮತ್ತು ವಿಶ್ಲೇಷಣಾ ವಿಧಾನವನ್ನು ರೂಪಿಸಿಕೊಳ್ಳಲಿದೆ. ಪತ್ರಿಕೆಯ ಓದುಗರೂ ಇದರ ಕುರಿತು ಚಿಂತಿಸಿ ತಮ್ಮ ಅನಿಸಿಕೆಗಳನ್ನು ಮುಂದಿಡಬೇಕೆಂದು ಕೋರುತ್ತೇನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...