Homeಮುಖಪುಟದೆಹಲಿ: ಹಾಸ್ಯನಟ ಮುನಾವರ್ ಫಾರೂಕಿ ಕಾರ್ಯಕ್ರಮ ರದ್ದುಗೊಳಿಸಲು ಪೊಲೀಸರಿಗೆ ಪತ್ರ ಬರೆದ BJP ಬೆಂಬಲಿತ ಸಂಘಟನೆ

ದೆಹಲಿ: ಹಾಸ್ಯನಟ ಮುನಾವರ್ ಫಾರೂಕಿ ಕಾರ್ಯಕ್ರಮ ರದ್ದುಗೊಳಿಸಲು ಪೊಲೀಸರಿಗೆ ಪತ್ರ ಬರೆದ BJP ಬೆಂಬಲಿತ ಸಂಘಟನೆ

- Advertisement -
- Advertisement -

ಆಗಸ್ಟ್ 28 ರಂದು ದೆಹಲಿಯಲ್ಲಿ ನಡೆಯಲಿದ್ದ ಹಾಸ್ಯನಟ ಮುನಾವರ್ ಫಾರೂಕಿ ಅವರ ಕಾರ್ಯಕ್ರಮವನ್ನು ರದ್ದುಗೊಳಿಸುವಂತೆ ಬಿಜೆಪಿ ಬೆಂಬಲಿತ ಸಂಘಟನೆ ವಿಹೆಚ್‌ಪಿ ಗುರುವಾರ ದೆಹಲಿ ಪೊಲೀಸರಿಗೆ ಪತ್ರ ಬರೆದಿದೆ ಎಂದು ಎಎನ್‌ಐ ವರದಿ ಮಾಡಿದೆ. ಪೊಲೀಸರು ಕಾರ್ಯಕ್ರಮವನ್ನು ರದ್ದುಪಡಿಸಲು ವಿಫಲವಾದರೆ ಬಿಜೆಪಿ ಬೆಂಬಲಿತ ಮತ್ತೊಂದು ಸಂಘಟನೆಯಾದ ಬಜರಂಗದಳದೊಂದಿಗೆ ಪ್ರತಿಭಟನೆ ನಡೆಸುವುದಾಗಿ ಸಂಘಟನೆಯು ಎಚ್ಚರಿಕೆ ನೀಡಿದೆ.

ವಿಹೆಚ್‌ಪಿ ದೆಹಲಿ ಅಧ್ಯಕ್ಷ ಸುರೇಂದ್ರ ಕುಮಾರ್ ಗುಪ್ತಾ ಅವರ ಸಹಿ ಇರುವ ಪತ್ರದಲ್ಲಿ “ಈ ವ್ಯಕ್ತಿಯು ತನ್ನ ಪ್ರದರ್ಶನದಲ್ಲಿ ಹಿಂದೂ ದೇವರು ಮತ್ತು ದೇವತೆಗಳನ್ನು ಅಪಹಾಸ್ಯ ಮಾಡುತ್ತಾನೆ. ಇದರ ಪರಿಣಾಮವಾಗಿ ಹೈದರಾಬಾದ್‌ ಕೋಮು ಉದ್ವಿಗ್ನತೆಗೊಂಡಿತ್ತು” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದೀಗ ಅಮಾನತುಗೊಂಡಿರುವ ಬಿಜೆಪಿ ನಾಯಕ ಟಿ.ರಾಜಾ ಸಿಂಗ್ ಪ್ರವಾದಿ ಮುಹಮ್ಮದ್ ಅವರ ಬಗ್ಗೆ ಪಕ್ಷದ ಮಾಜಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ಅವರು ನೀಡಿದ್ದ ಅವಹೇಳನಕಾರಿ ಹೇಳಿಕೆಗಳನ್ನೆ ಪುನರಾವರ್ತಿಸಿ ಆ ವೀಡಿಯೊವನ್ನು ಯೂಟ್ಯೂಬ್‌ನಲ್ಲಿ ಅಪ್‌ಲೋಡ್ ಮಾಡಿದ ನಂತರ ಹೈದರಾಬಾದ್‌ನಲ್ಲಿ ಸೋಮವಾರದಂದು ದೊಡ್ಡ ಪ್ರಮಾಣದ ಪ್ರತಿಭಟನೆಗಳು ಭುಗಿಲೆದ್ದವು.

ಇದನ್ನೂ ಓದಿ: ಹೈದರಾಬಾದ್‌: ಮುನಾವರ್‌ ಫಾರೂಖಿ ಕಾರ್ಯಕ್ರಮ ನಡೆಯದಂತೆ ನೋಡಿಕೊಳ್ಳಲು ಕಾರ್ಯಕರ್ತರಿಗೆ ಬಿಜೆಪಿ ಕರೆ

ಗುರುವಾರ ಬಂಧನಕ್ಕೊಳಗಾದ ರಾಜಾ ಸಿಂಗ್, ಆಗಸ್ಟ್ 20 ರಂದು ಹೈದರಾಬಾದ್‌ನಲ್ಲಿ ನಡೆದ ಮುನಾವರ್ ಫಾರೂಕಿ ಅವರ ಕಾರ್ಯಕ್ರಮಕ್ಕೆ ಪ್ರತಿಕ್ರಿಯೆಯಾಗಿ ಹಾಸ್ಯ ವೀಡಿಯೊವನ್ನು ಪೋಸ್ಟ್ ಮಾಡಿದ್ದೇನೆ ಎಂದು ಹೇಳಿದ್ದಾರೆ.

ಆಗಸ್ಟ್ 19 ರಂದು, ಶ್ರೀ ರಾಮಸೇನೆ ಎಂಬ ಬಲಪಂಥೀಯ ಸಂಘಟನೆಯು ಹಾಸ್ಯನಟ ಮತ್ತು ಕಾರ್ಯಕ್ರಮದ ಆಯೋಜಕರ ವಿರುದ್ಧ ದೂರು ದಾಖಲಿಸಿದ ನಂತರ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಮುನಾವರ್ ಫಾರೂಕಿ ಅವರ ಪ್ರದರ್ಶನವನ್ನು ಕೊನೆಯ ಕ್ಷಣದಲ್ಲಿ ರದ್ದುಗೊಳಿಸಲಾಯಿತು.

ಇದನ್ನೂ ಓದಿ: ವೈಯಕ್ತಿಕ ದ್ವೇಷದ ಪ್ರಕರಣಕ್ಕೆ ಕೋಮು ಆಯಾಮ ನೀಡಿ ‘ಮುಸ್ಲಿಂ ದ್ವೇಷ’ ಹರಡಿದ ದಿಗ್ವಿಜಯ & ಪಬ್ಲಿಕ್ ಟಿವಿ

ಆಯೋಜಕರು ಅನುಮತಿ ಕೇಳದ ಕಾರಣ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ ಎಂದು ಬೆಂಗಳೂರು ಪೊಲೀಸರು ಹೇಳಿದ್ದಾರೆ.

ಗುರುವಾರದಂದು ವಿಹೆಚ್‌ಪಿ ವಕ್ತಾರ ವಿನೋದ್ ಬನ್ಸಾಲ್ ಅವರು ದೆಹಲಿಯಲ್ಲಿ ಮುನಾವರ್ ಫಾರೂಕಿ ಅವರ ‘ಹಿಂದೂ ವಿರೋಧಿ’ ಪ್ರದರ್ಶನವು ಕೋಮು ಉದ್ವಿಗ್ನತೆಯನ್ನು ಉಂಟುಮಾಡುತ್ತದೆ ಎಂದು ಆರೋಪಿಸಿದ್ದಾರೆ. “ನಾವು ನಗರದಲ್ಲಿ ಶಾಂತಿಯನ್ನು ಬಯಸುತ್ತೇವೆ. ಅವರು ನಮ್ಮ ಹಿಂದೂ ದೇವತೆಗಳನ್ನು ಅಪಹಾಸ್ಯ ಮಾಡುವುದು ನಮಗೆ ಇಷ್ಟವಿಲ್ಲ” ಎಂದು ತಿಳಿಸಿದ್ದಾರೆ.

ಈ ಮಧ್ಯೆ ಕಾರ್ಯಕ್ರಮದ ಬಗ್ಗೆ ಯಾವುದೇ ದೂರುಗಳು ಬಂದಿಲ್ಲ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಪ್ರದರ್ಶನವನ್ನು ರದ್ದುಪಡಿಸುವ ಬಗ್ಗೆಗಿನ ಯಾವುದೆ ಸೂಚನೆ ನಮಗೆ ತಿಳಿದಿಲ್ಲ ಎಂದು ಮುನಾವರ್ ಫಾರೂಕಿ ಅವರ ತಂಡವು ಹೇಳಿದೆ.

ಕಳೆದ ವರ್ಷದಲ್ಲಿ, ಬೆಂಗಳೂರು, ಗುರುಗ್ರಾಮ್, ರಾಯ್‌ಪುರ, ಸೂರತ್, ಅಹಮದಾಬಾದ್, ವಡೋದರಾ, ಗೋವಾ ಮತ್ತು ಮುಂಬೈನಲ್ಲಿ ಫಾರುಕಿ ಅವರ ಪ್ರದರ್ಶನಗಳನ್ನು ರದ್ದುಗೊಳಿಸಲಾಗಿತ್ತು.

ಇದನ್ನೂ ಓದಿ: ಬಿಜೆಪಿ ಆಗ್ರಹದ ಬಳಿಕ ಮುನಾವರ್‌ ಫಾರೂಖಿಯ ಮತ್ತೊಂದು ಕಾರ್ಯಕ್ರಮ ರದ್ದು

ಕಳೆದ ವರ್ಷ ಜನವರಿಯಲ್ಲಿ, ಬಿಜೆಪಿ ನಾಯಕರೊಬ್ಬರ ಮಗ ಮುನಾವರ್ ಫಾರೂಕಿ ಅವರು ಕಾರ್ಯಕ್ರಮದಲ್ಲಿ ಹಿಂದೂ ದೇವರನ್ನು ಅವಹೇಳನ ‘ಮಾಡಲಿದ್ದಾರೆ’ ಎಂದು ದೂರು ನೀಡಿದ್ದರಿಂದ ಇಂದೋರ್‌ನ‌ಲ್ಲಿ ಅವರನ್ನು ಬಂಧಿಸಲಾಗಿತ್ತು. ದೂರಿನಲ್ಲಿ, ಮುನಾವರ್ ಫಾರೂಕಿ ತನ್ನ ಕಾರ್ಯಕ್ರಮದಲ್ಲಿ ಹಿಂದೂ ದೇವತೆಗಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ‘ನೀಡಲಿದ್ದಾರೆ’ ಎಂದು ಆರೋಪಿಸಿದ್ದರು. ಅವರ ಬಂಧನವಾಗಿ 37 ದಿನಗಳ ನಂತರ ಸುಪ್ರೀಂ ಕೋರ್ಟ್ ಅವರಿಗೆ ಜಾಮೀನು ನೀಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....