Homeಕರ್ನಾಟಕಅಂಬೇಡ್ಕರ್‌ವಾದಿ ದೃಷ್ಟಿಯಲ್ಲಿ ಸಾವರ್ಕರ್‌ ನೋಡುತ್ತಿದ್ದೇನೆ: ಎನ್‌.ಮಹೇಶ್‌

ಅಂಬೇಡ್ಕರ್‌ವಾದಿ ದೃಷ್ಟಿಯಲ್ಲಿ ಸಾವರ್ಕರ್‌ ನೋಡುತ್ತಿದ್ದೇನೆ: ಎನ್‌.ಮಹೇಶ್‌

- Advertisement -
- Advertisement -

ಅಂಬೇಡ್ಕರ್ ವಾದಿ ದೃಷ್ಟಿಕೋನದಲ್ಲಿ ವಿ.ಡಿ.ಸಾವರ್ಕರ್ ಅವರನ್ನು ನೋಡಲು ಶುರುಮಾಡಿದ್ದೇನೆ ಎಂದು ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಹೇಳಿರುವುದಾಗಿ ‘ಆಂದೋಲನ’ ವರದಿ ಮಾಡಿದೆ.

ಬಹುಜನ ಚಳವಳಿಯಿಂದ ಬಂದು, ನಂತರದಲ್ಲಿ ಬಿಜೆಪಿ ಸೇರಿದ ಎನ್‌.ಮಹೇಶ್ ಅವರ ನಿಲುವುಗಳಿಗೆ ದಲಿತ ಸಮುದಾಯದಿಂದ ತೀವ್ರ ಆಕ್ಷೇಪಗಳು ವ್ಯಕ್ತವಾಗುತ್ತಿವೆ. ಇತ್ತೀಚೆಗೆ ಅವರು ‘ವಿಜಯ ಕರ್ನಾಟಕ’ ಪತ್ರಿಕೆಯಲ್ಲಿ ಸಾವರ್ಕರ್‌ ಕುರಿತು ಬರೆದ ಲೇಖನಕ್ಕೂ ತೀವ್ರ ವಿರೋಧ ವ್ಯಕ್ತವಾಗಿದ್ದವು.

ಚಾಮರಾಜನಗರದ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಸಾವರ್ಕರ್ ಪ್ರತಿಷ್ಠಾನದ ವತಿಯಿಂದ ನಡೆದ ಸಾವರ್ಕರ್ ರಥಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, “ಸಾವರ್ಕರ್ ರಥಯಾತ್ರೆಯ ಮೂಲ ಉದ್ದೇಶವೆಂದರೆ ಅವರ ಜೀವನ, ಸಾಧನೆ ಮತ್ತು ಹೋರಾಟವನ್ನು ಜನಮಾನಸಕ್ಕೆ ತಿಳಿಸುವುದೇ ಆಗಿದೆ” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮುಂದುವರಿದು, “ಈ ದೇಶದಲ್ಲಿ ಸಮಾನತೆಗಾಗಿ ಸಾಕಷ್ಟು ಜನ ಹೋರಾಟ ಮಾಡಿದ್ದಾರೆ. ಆ ನಿಟ್ಟಿನಲ್ಲಿ ಸಾಗಿದ ಸಾವರ್ಕರ್ ಅವರ ನೈಜ ಜೀವನವನ್ನು ಪರಿಚಯಿಸುವ ಕೆಲಸವನ್ನು ಮಾಡುತ್ತಿದ್ದೇವೆ. ನನ್ನ ನಿಲುವನ್ನು ಸ್ಪಷ್ಟಪಡಿಸುತ್ತೇನೆ. ನಾನು ಅಂಬೇಡ್ಕರ್ ವಾದಿಯಾಗಿದ್ದು ಆ ದೃಷ್ಟಿಕೋನದಲ್ಲಿ ಸಾವರ್ಕರ್ ನೋಡಲು ಶುರುಮಾಡಿದ್ದೇನೆ” ಎಂದು ಹೇಳಿಕೆ ನೀಡಿದ್ದಾರೆ.

“82 ವರ್ಷ ಬದುಕಿದ್ದ ಸಾವರ್ಕರ್ ಅವರು 50 ವರ್ಷಗಳ ಶಿಕ್ಷೆ ಅನುಭವಿಸುತ್ತಿದ್ದರು. ಬ್ರಿಟೀಷರಿಗೆ ಅತ್ಯಂತ ಅಪಾಯಕಾರಿ ವ್ಯಕ್ತಿಯಾಗಿದ್ದ ಕಾರಣಕ್ಕೆ ಅವರಿಗೆ ಅಷ್ಟೊಂದು ಶಿಕ್ಷೆ ವಿಧಿಸಲಾಯಿತು” ಎಂದು ಹೇಳಿಕೆ ನೀಡಿದ್ದಾರೆ.

ಅಂಬೇಡ್ಕರ್ ಅವರ ಹೋರಾಟದ ಘಟನೆಗಳು ಸಾವರ್ಕರ್ ಅವರಲ್ಲಿ ದೊಡ್ಡ ಪರಿವರ್ತನೆ ತಂದಿತು ಎಂಬುದು ನನ್ನ ಗ್ರಹಿಕೆಯಾಗಿದೆ. ವೇದೋಕ್ತ ನಿಷೇಧ, ಉದ್ಯೋಗ ನಿಷೇಧ, ಅಸ್ಪೃಶ್ಯತೆ, ಸಮುದ್ರ ಪರ್ಯಟನೆ ನಿಷೇಧ, ಶುದ್ಧಿ ನಿಷೇಧ, ಸಹಭೋಜನ ನಿಷೇಧ, ಅಂತರ್ಜಾತಿ ಮದುವೆ ನಿಷೇಧ ಎಂಬ 7 ಸಂಕೋಲೆಗಳ ವಿರುದ್ಧ ಸಾವರ್ಕರ್ ಹೋರಾಟ ನಡೆಸಿದರು ಎಂದು ಅವರು ತಿಳಿಸಿದ್ದಾರೆ.

ಈ ಏಳು ಸಂಕೋಲೆಗಳಿಂದ ಮುಕ್ತಿ ಹೊಂದದ ಹೊರತು ನಮಗೆ ಸ್ವಾತಂತ್ರ್ಯ ದಕ್ಕಿದರೂ ಪ್ರಯೋಜನವಿಲ್ಲ ಎಂದಿದ್ದರು. ಇದೇ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹೋರಾಟದ ನಿಲುವು ಕೂಡ ಆಗಿತ್ತು. ಈ 7 ಸಂಕೋಲೆಗಳಿಂದ ನಾವು ಬಿಡುಗಡೆಯಾಗಬೇಕಿದೆ. ಹಿಂದೂ ಸಮಾಜವನ್ನು ಮತ್ತಷ್ಟು ಗಟ್ಟಿಗೊಳಿಸಬೇಕಿದೆ ಎಂದು ಹೇಳಿದ್ದಾರೆ.

ಇದೆಲ್ಲವನ್ನೂ ಓರ್ವ ಅಂಬೇಡ್ಕರ್ ವಾದಿಯಾಗಿಯೇ ಹೇಳುತ್ತಿದ್ದೇನೆ, ಪ್ರತಿಯೊಂದು ಹೋರಾಟದ ಮಾರ್ಗದಲ್ಲೂ ಧನಾತ್ಮಕ ಹಾಗೂ ಋಣಾತ್ಮಕ ಚಿಂತನೆಗಳು ಇದೆ. ನಾನು ಧನಾತ್ಮಕ ಚಿಂತನೆಗಳನ್ನೇ ಮಾತನಾಡಲು ಶುರು ಮಾಡಿದ್ದೇನೆ. ಈ ನಿಟ್ಟಿನಲ್ಲಿ ನೋಡಿದ್ದೆ ಆದರೆ ಮೊದ ಮೊದಲು ಕ್ರಾಂತಿಕಾರಿಯಾಗಿದ್ದ ಸಾವರ್ಕರ್ ಬರಬರುತ್ತಾ ಸಮಾಜ ಸುಧಾರಕರಾದರು ಎಂದು ಹೇಳಿದ್ದಾರೆ.

ಆಧಾರವಿಲ್ಲದೆ ಬರೆದರೆ ಎನ್‌.ಮಹೇಶ್‌?

ಶಾಸಕ ಎನ್‌. ಮಹೇಶ್‌ ಅವರು ವಿಜಯ ಕರ್ನಾಟಕ ಪತ್ರಿಕೆಗೆ ಬರೆದ ಅಂಕಣ ಬರಹದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್‌‌.ಅಂಬೇಡ್ಕರ್‌ ಅವರ ಹೇಳಿಕೆಯನ್ನು ತಿರುಚಿ ಬರೆದಿದ್ದಾರೆ ಎಂಬ ಆರೋಪಗಳು ಬಂದಿವೆ. ಈ ಆರೋಪಕ್ಕೆ ಉತ್ತರಿಸಿರುವ ಅವರು, “ಈ ಬಗ್ಗೆ ಬೇರೆ ಯಾರೊ ಬರೆದಿದ್ದನ್ನು ತೆಗೆದುಕೊಂಡಿದ್ದೇನೆ. ಅವರಲ್ಲಿ ಉಲ್ಲೇಖ ಕೇಳುತ್ತಿದ್ದೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿರಿ: ಶಾಸಕ ಎನ್‌.ಮಹೇಶ್‌ ಸೂಚನೆ ಮೇರೆಗೆ ದಲಿತ ವ್ಯಕ್ತಿಯ ಮೇಲೆ ಪೊಲೀಸರಿಂದ ಮಾರಣಾಂತಿಕ ಹಲ್ಲೆ; ಆರೋಪ

ಈ ಬರಹದ ಮೊದಲ ಪ್ಯಾರಾದಲ್ಲಿ, “ಸಮಾಜ ಸುಧಾರಣೆಯ ದಿವ್ಯಚೈತನ್ಯದ ಸೊಡರು ಸ್ವಾತಂತ್ಯ್ರವೀರ ಸಾವರ್ಕರ್‌. ಹಿಂದೂ ಧರ್ಮದಲ್ಲಿರುವ ಅಸ್ಪೃಶ್ಯತೆಯ ಆಚರಣೆಯು ಒಂದು ಕಳಂಕವಾಗಿದ್ದ, ಇಂಥ ಅಮಾನವೀಯ ಆಚರಣೆಯಿಂದ ನನ್ನಂಥವರಿಗೆ ಆಗುವ ಅವಮಾನ ಅಷ್ಟಿಷ್ಟಲ್ಲ. ಆದರೆ, ಸಾವರ್ಕರ್‌ ಅವರು ಇದರ ನಿವಾರಣೆಗೆ ಕೈಗೊಂಡಿರುವ ಕ್ರಮಗಳು ಕ್ರಾಂತಿಕಾರಿಯಾಗಿವೆ. ಇಂಥ ಐದೋ ಹತ್ತೋ ಮಂದಿ ಇದ್ದರೆ ಅಸ್ಪೃಶ್ಯತೆಯು ಮುಂದಿನ ಕೆಲವೇ ವರ್ಷಗಳಲ್ಲಿ ಇತಿಹಾಸದ ಸಂಗತಿಯಾಗುತ್ತದೆ ಎನ್ನುವ ವಿಶ್ವಾಸ ನನಗಿದೆ” ಎಂದು ಅಂಬೇಡ್ಕರ್‌ ಅವರ ಹೇಳಿದ್ದಾರೆ ಎಂದು ಎನ್. ಮಹೇಶ್ ಅವರು ಬರೆದಿದ್ದಾರೆ.

ಆದರೆ ಈ ಬಗ್ಗೆ ಅನೇಕ ಅಂಬೇಡ್ಕರ್‌‌ವಾದಿಗಳು ಆಕ್ಷೇಪವೆತ್ತಿದ್ದು, ಅಂಬೇಡ್ಕರ್‌ ಅವರು ಈ ರೀತಿ ಅಥವಾ ಇದೇ ರೀತಿ ಅರ್ಥ ಬರುವ ಮಾತು ಹಾಗೂ ಬರಹವನ್ನಾಗಲಿ ಹೇಳಿಯೆ ಇಲ್ಲ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಎನ್ ಮಹೇಶ ಅವರು ಅವಕಾಶ ವಾದಿ ರಾಜಕೀಯ ಮಾಡುತ್ತಿದ್ದಾರೆ ಅವರು ಸಿದ್ಧಾಂತಗಳು ಮರೆತಿರುವರು ಅವರಿಗೆ ಬೇಕು ರಾಜಕೀಯ ಮುಂದೆ ಅವರಿಗೆ ರಾಜಕೀಯ ಭವಿಷ್ಯ ಇಲ್ಲ

LEAVE A REPLY

Please enter your comment!
Please enter your name here

- Advertisment -

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....