Homeದಲಿತ್ ಫೈಲ್ಸ್ರಾಜಸ್ಥಾನ: ದಲಿತ ವಿದ್ಯಾರ್ಥಿಯ ಮೇಲೆ ಶಿಕ್ಷಕನ ಹಲ್ಲೆ; ಮತ್ತೊಂದು ಪ್ರಕರಣ ಬಯಲು

ರಾಜಸ್ಥಾನ: ದಲಿತ ವಿದ್ಯಾರ್ಥಿಯ ಮೇಲೆ ಶಿಕ್ಷಕನ ಹಲ್ಲೆ; ಮತ್ತೊಂದು ಪ್ರಕರಣ ಬಯಲು

- Advertisement -
- Advertisement -

ರಾಜಸ್ಥಾನದಲ್ಲಿ ದಲಿತರ ಮೇಲೆ ಹಲ್ಲೆಗಳು ಹೆಚ್ಚಾಗುತ್ತಿದ್ದು, ಇಲ್ಲಿನ ದೌಸಾದಲ್ಲಿ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು 5ನೇ ತರಗತಿಯ ದಲಿತ ವಿದ್ಯಾರ್ಥಿಯ ತೋಳುಗಳನ್ನು ತಿರುಚಿ, ಝಾಡಿಸಿ ಒದೆಯುವ ಮೂಲಕ ಹಿಂಸೆ ನೀಡಿದ್ದಾನೆ.

ಆಗಸ್ಟ್ 6ರಂದು ಈ ಘಟನೆ ನಡೆದಿದ್ದು, ರಾಮೇಶ್ವರ್ ಗುರ್ಜರ್ ಎಂಬ ಇಂಗ್ಲಿಷ್ ಶಿಕ್ಷಕ, ರೋಹಿತ್ ಎಂಬ ವಿದ್ಯಾರ್ಥಿಯನ್ನು ಹಿಡಿದು ಥಳಿಸಿದ್ದಾನೆ.

ರೋಹಿತ್ ಕೈ ಮುರಿದುಕೊಂಡು ಮನೆಗೆ ಬಂದಿದ್ದನು. ವಿಚಾರಿಸಿದಾಗ ಘಟನೆಯ ಕುರಿತು ತಿಳಿಸಿದ್ದಾನೆ. ಕುಟುಂಬ ಸದಸ್ಯರು ಶಾಲೆಗೆ ಧಾವಿಸಿದರು. ಈ ಕುರಿತು ಕ್ರಮ ಕೈಗೊಳ್ಳುವಂತೆ ಪ್ರಾಂಶುಪಾಲರಿಗೆ ಮನವಿ ಮಾಡಿದರೂ ಅವರು ಗಮನಹರಿಸಲಿಲ್ಲ. ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸುವುದಾಗಿ ಪ್ರತಿಕ್ರಿಯೆ ನೀಡಿ ಸುಮ್ಮನಾಗಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಾಲಕನ ಮೇಲೆ ಹಲ್ಲೆ ನಡೆಸಿದ ಶಿಕ್ಷಕ ಆರೋಪವನ್ನು ನಿರಾಕರಿಸಿದ್ದನು. ಜೊತೆಗೆ ದಲಿತ ಕುಟುಂಬದ ಮೇಲೆ ಒತ್ತಡ ತರಲು ಯತ್ನಿಸಿದ್ದನು ಎನ್ನಲಾಗಿದೆ.

ಬಾಯಿ ಮುಚ್ಚಿಕೊಂಡಿರಲು ಬೆದರಿಕೆ: ಬಾಲಕನ ಕುಟುಂಬ ಆರೋಪ

ಸಹಾಯ ಕೋರಿ ಸಂತ್ರಸ್ತ ಕುಟುಂಬ ಸದಸ್ಯರು ಡಿಇಒ ಘನಶ್ಯಾಮ್ ಮೀನಾ ಅವರ ಬಳಿಗೆ ಹೋದರು. ಸಂತ್ರಸ್ತ ಬಾಲಕನು ಡಿಇಒಗೆ ಇಡೀ ಘಟನೆಯನ್ನು ವಿವರಿಸಿದನು. ಆದರೆ ಯಾವುದೇ ಪ್ರಯೋಜನವಾಗಲಿಲ್ಲ.

“ಪದೇ ಪದೇ ಗಮನಕ್ಕೆ ತಂದರೂ ಯಾರೂ ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಬಾಯಿ ಮುಚ್ಚಿಕೊಂಡಲು ಕೆಲವರು ಒತ್ತಡ ಹೇರಿದರು” ಎಂದು ಕುಟುಂಬ ಆರೋಪಿಸಿದೆ.

ಘಟನೆಯ ಬಗ್ಗೆ ಶಾಲೆಯು ಸುಳ್ಳುಗಳನ್ನು ಹೇಳುತ್ತಿದೆ ಎಂದು ಬಾಲಕನ ಸಹೋದರ ಹರಿ ಮೋಹನ್ ಬಹಿರಂಗಪಡಿಸಿದ್ದಾರೆ. ರೋಹಿತ್ ಮತ್ತು ಆತನ ಸಹೋದರಿಯ ಟಿಸಿಗಳನ್ನು ವಾಪಸ್ ಪಡೆದು ಬೇರೆ ಶಾಲೆಗೆ ಸೇರುವಂತೆ ಕುಟುಂಬದ ಮೇಲೆ ಶಾಲೆಯೇ ಒತ್ತಡ ಹೇರುತ್ತಿದೆ ಎಂದು ಅವರು ದೂರಿದ್ದಾರೆ.

ಈ ವಿಚಾರವನ್ನು ಮಾಧ್ಯಮಗಳು ತರಾಟೆಗೆ ತೆಗೆದುಕೊಂಡ ನಂತರವೇ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಎಸ್‌ಟಿ ಎಸ್‌ಸಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ತನಿಖೆ ಮುಂದುವರಿದಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

ರಾಜಸ್ಥಾನದಲ್ಲಿ ಹೆಚ್ಚಾದ ದಲಿತರ ಮೇಲಿನ ದೌರ್ಜನ್ಯ

ಇತ್ತೀಚಿನ ದಿನಗಳಲ್ಲಿ ರಾಜಸ್ಥಾನದಲ್ಲಿ ದಲಿತರ ಮೇಲಿನ ದೌರ್ಜನ್ಯಗಳು ಹೆಚ್ಚಾಗುತ್ತಿವೆ. ಉತ್ತರ ಪ್ರದೇಶ, ಮಧ್ಯಪ್ರದೇಶವಷ್ಟೇ ಅಲ್ಲ, ರಾಜಸ್ಥಾನವು ಈಗ ಅಟ್ರಾಸಿಟಿ ವಿಚಾರದಲ್ಲಿ ಕುಖ್ಯಾತಿ ಪಡೆಯುತ್ತಿದೆ.

ಪಾತ್ರೆ ಮುಟ್ಟಿದ್ದಕ್ಕೆ ಬಾಲಕನನ್ನು ಕೊಂದ ಶಿಕ್ಷಕ: 9 ವರ್ಷದ ದಲಿತ ಬಾಲಕನನ್ನು ಶಿಕ್ಷಕನೊಬ್ಬ ಥಳಿಸಿ ಕೊಂದಿರುವ ಘಟನೆ ರಾಜಸ್ಥಾನದ ಜಲೋರ್ ಜಿಲ್ಲೆಯಲ್ಲಿ ನಡೆದಿತ್ತು. ತೀವ್ರವಾಗಿ ಗಾಯಗೊಂಡಿದ್ದ ಮಗುವನ್ನು ಅಹಮದಾಬಾದ್ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನನ್ನಪ್ಪಿತ್ತು.

ಜುಲೈ 20 ರಂದು ಶಿಕ್ಷಕ ಹಲ್ಲೆ ನಡೆಸಿದ್ದನು ಎಂದು ಕುಟುಂಬ ಸದಸ್ಯರು ಆರೋಪಿಸಿತ್ತು. ಸವರ್ಣಿಯರಿಗೆ ಮೀಸಲಿರಿಸಿದ್ದ ಪಾತ್ರೆಯಲ್ಲಿದ್ದ ನೀರನ್ನು ಕುಡಿದ ಕಾರಣ ದಲಿತ ಮಗುವಿಗೆ ಭೀಕರವಾಗಿ ಶಿಕ್ಷಕ ಥಳಿಸಿದ್ದನು. ಆರೋಪಿ ಶಿಕ್ಷಕನನ್ನು ಬಂಧಿಸಿ ಕೊಲೆ ಪ್ರಕರಣ ಮತ್ತು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

“ಜಲೋರ್‌ನ ಸರಸ್ವತಿ ವಿದ್ಯಾಮಂದಿರದಲ್ಲಿ 3ನೇ ತರಗತಿಯ ವಿದ್ಯಾರ್ಥಿಯಾಗಿದ್ದ ನನ್ನ ಮಗ ಇಂದ್ರ ಕುಮಾರ್, ಸಿಂಗ್‌ಗಳಿಗೆ ಮೀಸಲಾಗಿದ್ದ ಮಣ್ಣಿನ ಪಾತ್ರೆಯಲ್ಲಿದ್ದ ನೀರು ಕುಡಿದ ಕಾರಣ ಶಿಕ್ಷಕ ಚೈಲ್ ಸಿಂಗ್ ಥಳಿಸಿದನು. ಈ ಮಡಕೆ ಮೇಲ್ಜಾತಿಗೆ ಸೇರಿದ ಸಿಂಗ್‌ಗಳಿಗೆ ಮೀಸಲಾಗಿದೆ ಎಂದು ನನ್ನ ಮಗನಿಗೆ ತಿಳಿದಿರಲಿಲ್ಲ” ಎಂದು ಮಗುವಿನ ತಂದೆ ಮತ್ತು ಜಲೋರ್ ಜಿಲ್ಲೆಯ ಸುರಾನಾ ಗ್ರಾಮದ ನಿವಾಸಿ ದೇವರಾಮ್ ಮೇಘವಾಲ್ ಸಂಕಟ ವ್ಯಕ್ತಪಡಿಸಿದ್ದರು.

ಮದ್ಯಪಾನ ಮಾಡಲು ನಿರಾಕರಿಸಿದ ಬುಡಕಟ್ಟು ಯುವಕನ ಮೇಲೆ ಅಮಾನುಷ ಹಲ್ಲೆ: ರಾಜಸ್ಥಾನದ ಉದಯಪುರದಲ್ಲಿ ಮದ್ಯಪಾನ ಮಾಡಲು ನಿರಾಕರಿಸಿದ ಬುಡಕಟ್ಟು ಸಮುದಾಯದ ಯುವಕನ ಮೇಲೆ ನಾಲ್ವರು ಸವರ್ಣಿಯ ಸಮುದಾಯದ ಯುವಕರು ಅಮಾನುಷವಾಗಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ನಡೆದಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿತ್ತು.

ನಾಲ್ವರು ಯುವಕರು ಸಂತ್ರಸ್ತ ಪ್ರಕಾಶ್ ಲೋಗಾರ್ (30) ಎಂಬರ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದು ವಿಡಿಯೊದಲ್ಲಿ ದಾಖಲಾಗಿತ್ತು.

ಸಾಮಾಜಿಕ ಮಾಧ್ಯಮಗಳಲ್ಲಿ ಹಲ್ಲೆಯ ವಿಡಿಯೋ ವೈರಲ್ ಆಗಿ ದಲಿತಪರ ಸಂಘಟನೆಗಲು, ನಾಯಕರು ಸೇರಿದಂತೆ ಹಲವು ಮಂದಿ ಆಕ್ರೋಶ ವ್ಯಕ್ತಪಡಿಸಿದ ನಂತರ ಹಲ್ಲೆ ನಡೆಸಿದ ಮೂವರು ಯುವಕರನ್ನು ಪೊಲೀಸರು ಬಂಧಿಸಿದ್ದರು. ಬಂಧಿತರನ್ನು ವಿಜಯ್ ಸಿಂಗ್, ರಘುನಾಥ್ ಸಿಂಗ್ ಮತ್ತು ಯಶಪಾಲ್ ಸಿಂಗ್ ಎಂದು ಗುರುತಿಸಲಾಗಿತ್ತು.

ಮೀಸೆ ಬಿಟ್ಟಿದ್ದಕ್ಕೆ, ಚೆಂದವಾಗಿ ಕಾಣುತ್ತಿದ್ದಕ್ಕೆ ದಲಿತನ ಕೊಲೆ: ರಾಜಸ್ಥಾನದ ಪಾಲಿ ಜಿಲ್ಲೆಯ ಬರ್ವಾ ಗ್ರಾಮದಲ್ಲಿ ವಾಸಿಸುತ್ತಿದ್ದ ಕೋವಿಡ್‌‌ ಆರೋಗ್ಯ ಸಹಾಯಕ, ದಲಿತ ಸಮುದಾಯದ ಜಿತೇಂದ್ರಪಾಲ್ ಮೇಘವಾಲ್ ಅವರನ್ನು ಮಾರ್ಚ್ 15ರಂದು ಕೊಲ್ಲಲಾಗಿತ್ತು. “ಜಿತೇಂದ್ರಪಾಲ್‌ ನೋಡಲು ಚೆನ್ನಾಗಿದ್ದರು ಹಾಗೂ ಒಳ್ಳೆಯ ವ್ಯಕ್ತಿತ್ವವನ್ನು ಹೊಂದಿದ್ದರು. ಹೀಗಾಗಿ ಕೊಲೆಯಾಗಿದ್ದಾರೆ” ಎಂದು ಕುಟುಂಬ ಆರೋಪಿಸಿತ್ತು.

ಇದನ್ನೂ ಓದಿರಿ: ಅಂಬೇಡ್ಕರ್‌ವಾದಿ ದೃಷ್ಟಿಯಲ್ಲಿ ಸಾವರ್ಕರ್‌ ನೋಡುತ್ತಿದ್ದೇನೆ: ಎನ್‌.ಮಹೇಶ್‌

ಆರೋಪಿಗಳಾದ ಸೂರಜ್ ಸಿಂಗ್ ಮತ್ತು ರಮೇಶ್ ಸಿಂಗ್ ಅವರನ್ನು ಬಾರ್ಮರ್ ಜಿಲ್ಲೆಯ ದುಡ್ವಾ ಗ್ರಾಮದಲ್ಲಿ ಪೊಲೀಸರು ಬಂಧಿಸಿದ್ದರು.

ಜಿತೇಂದ್ರಪಾಲ್ ತಮ್ಮ ಹಲವಾರು ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ‘ಕುನ್ವರ್ ಸಾ ಜೀತ್’ ಎಂಬ ಹೆಸರಿರುವ ಖಾತೆಯಲ್ಲಿ ಅಪ್‌ಲೋಡ್ ಮಾಡಿದ್ದರು. ಅವರ ಪೋಸ್ಟ್‌ಗಳಲ್ಲಿ ಅವರ ಮೀಸೆ ಗಮನ ಸೆಳೆದಿದೆ. “ನಾನು ಶ್ರೀಮಂತನಲ್ಲ, ಆದರೆ ಹೃದಯದಲ್ಲಿ ರಾಜನಾಗಿದ್ದೇನೆ” ಎಂದು ಅವರು ಟ್ಯಾಗ್‌ಲೈನ್‌ನಲ್ಲಿ ಬರೆದಿದ್ದರು.

ಇನ್‌ಸ್ಟಾಗ್ರಾಮ್‌ನಲ್ಲಿ ತನ್ನನ್ನು ಗೋಡ್ವಾಡ್ ರಾಜ ಎಂದು ಕರೆದುಕೊಂಡಿದ್ದ ಆರೋಪಿ ಸೂರಜ್ ಸಿಂಗ್, 2020ರಲ್ಲಿ ಸಣ್ಣ ವಿಚಾರಕ್ಕೆ ಪಾಲ್ ಮೇಲೆ ಹಲ್ಲೆ ನಡೆಸಿದ್ದ ಎಂದು ಆತನ ಸಹೋದರ ಓಂಪ್ರಕಾಶ್ ಹೇಳಿದ್ದರು. “ನನ್ನ ಸಹೋದರ ನೋಡಲು ಚೆನ್ನಾಗಿ ಇದ್ದದ್ದರಿಂದ, ಒಳ್ಳೆಯ ವ್ಯಕ್ತಿತ್ವದವರಾಗಿದ್ದರಿಂದ ಸೂರಜ್‌ ಸಿಂಗ್ ಅಸೂಹೆ ಹೊಂದಿದ್ದ ಎಂಬುದು ಗ್ರಾಮಸ್ಥರಿಗೆ ತಿಳಿದಿತ್ತು” ಎಂದು ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...