Homeಮುಖಪುಟಪ್ಲೇಸ್ಟೋರ್‌ನಿಂದ 2 ಸಾವಿರ ಸಾಲ ನೀಡುವ ಅಪ್ಲಿಕೇಶನ್‌ಗಳನ್ನು ತೆಗೆದುಹಾಕಿದ ಗೂಗಲ್‌!

ಪ್ಲೇಸ್ಟೋರ್‌ನಿಂದ 2 ಸಾವಿರ ಸಾಲ ನೀಡುವ ಅಪ್ಲಿಕೇಶನ್‌ಗಳನ್ನು ತೆಗೆದುಹಾಕಿದ ಗೂಗಲ್‌!

ಮೊಬೈಲ್‌‌ ಆಪ್‌ ಸ್ಟೋರ್‌ಗಳಲ್ಲಿ ತ್ವರಿತ ಸಾಲದ ಅಪ್ಲಿಕೇಶನ್‌ಗಳ ಕಿರುಕುಳದ ವರದಿಗಳು ಹೊರ ಬರುತ್ತಿದ್ದಂತೆ ಗೂಗಲ್‌‌ ಮಧ್ಯಪ್ರವೇಶಿಸಿ ಕ್ರಮ ಕೈಗೊಂಡಿದೆ

- Advertisement -
- Advertisement -

2022 ರ ಜನವರಿ ತಿಂಗಳಿನಿಂದ ಕಂಪನಿಯ ನೀತಿಗಳಿಗೆ ಬದ್ಧವಾಗಿಲ್ಲದ ಕಾರಣ ‘ಗೂಗಲ್‌ ಅಂಡ್ರಾಯಿಡ್‌ ಪ್ಲೇ ಸ್ಟೋರ್‌‌’ನಲ್ಲಿದ್ದ 2 ಸಾವಿರಕ್ಕೂ ಹೆಚ್ಚು ಸಾಲ-ಸಂಬಂಧಿತ ಅಪ್ಲಿಕೇಶನ್‌ಗಳನ್ನು ನಿಷೇಧಿಸಲಾಗಿದೆ ಎಂದು ವರದಿಯಾಗಿದೆ.

“ನಿಷೇಧಿಸಲಾಗಿರುವ 2 ಸಾವಿರ ಅಪ್ಲಿಕೇಶನ್‌ಗಳು ಭಾರತದ ಪ್ಲೇ ಸ್ಟೋರ್‌‌ನಲ್ಲಿ ಇದ್ದವುಗಳಾಗಿವೆ. ಅಪ್ಲಿಕೇಶನ್ ನಮ್ಮ ಗುರಿ ಅಥವಾ ನಮ್ಮ ನೀತಿಯನ್ನು ಪೂರೈಸದಿದ್ದರೆ ಅದರ ಮೇಲೆ ಕಾರ್ಯನಿರ್ವಹಿಸಲಿದ್ದೇವೆ” ಎಂದು ಗೂಗಲ್ ಏಷ್ಯಾ-ಪೆಸಿಫಿಕ್‌ನ ಹಿರಿಯ ನಿರ್ದೇಶಕ ಹಾಗೂ ಟ್ರಸ್ಟ್ ಮತ್ತು ಸುರಕ್ಷತೆಯ ಮುಖ್ಯಸ್ಥ ಸೈಕತ್ ಮಿತ್ರಾ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಮ್ಮ ವ್ಯವಹಾರವೂ ಸ್ವತಂತ್ರವಾಗಿ ಮಾಹಿತಿಯನ್ನು ಸಂಗ್ರಹಿಸಿ ಅದನ್ನು ಮೌಲ್ಯಮಾಪನ ಮಾಡುತ್ತವೆ. ನಂತರ ಆಫ್‌ಲೈನ್, ಹೊರಗಿನ ಮೂಲಗಳಿಂದ ಕೂಡಾ ಸಂಗ್ರಹಿಸಲಾಗುತ್ತದೆ” ಎಂದು ಮಿತ್ರ ಹೇಳಿದ್ದಾರೆ.

ಇದನ್ನೂ ಓದಿ: 100ಕ್ಕೂ ಹೆಚ್ಚು ಅಪ್ಲಿಕೇಷನ್‌ ಬಳಸಿ ಸುಲಿಗೆ; ₹ 500 ಕೋಟಿ ಚೀನಾಕ್ಕೆ ಕಳುಹಿಸಿದ ಯುಪಿ ಗ್ಯಾಂಗ್‌ ಅರೆಸ್ಟ್‌‌!

ತ್ವರಿತ ಸಾಲ ಸೇವೆಗಳಿಂದ ಮಾಡಿದ ಫೋನ್ ಕರೆಗಳಿಂದ ಗ್ರಾಹಕರಿಗೆ ಕಿರುಕುಳ ನೀಡುವ ಘಟನೆಗಳ ಬಗ್ಗೆ ದೇಶದಾದ್ಯಂತ ಹಲವು ಪ್ರಕರಣಗಳು ಬೆಳಕಿಗೆ ಬಂದ ನಂತರ ಗೂಗಲ್ ಪ್ಲೇ ಸ್ಟೋರ್‌‌ ಕ್ರಮವನ್ನು ಕೈಗೊಂಡಿರಬಹುದು ಎಂದು ವರದಿಯಾಗಿದೆ.

ಮೊಬೈಲ್ ಆಪ್ ಸ್ಟೋರ್‌ಗಳಲ್ಲಿ ತ್ವರಿತ ಸಾಲದ ಅಪ್ಲಿಕೇಶನ್‌ಗಳ ಕಿರುಕುಳದ ವರದಿಗಳು ಪ್ರಸಾರವಾಗಲು ಪ್ರಾರಂಭವಾದ ನಂತರ ಗೂಗಲ್‌‌ ಮಧ್ಯಪ್ರವೇಶಿಸಿದೆ. ಈ ಅಪ್ಲಿಕೇಶನ್‌ಗಳು ಸಾಮಾನ್ಯವಾಗಿ 2,000 ರೂ.ನಿಂದ ಪ್ರಾರಂಭವಾಗಿ 10 ಸಾವಿರ ರೂ.ಗಳ ನಡುವೆ ಸಾಲವನ್ನು ಒದಗಿಸುವ ಮೂಲಕ ಕಡಿಮೆ ಆದಾಯದ ಜನರನ್ನ ಗುರಿಯಾಗಿಸುತ್ತದೆ.

ಇದನ್ನೂ ಓದಿ: ಟಿಕ್‌ಟಾಕ್‌ ಅಪ್ಲಿಕೇಷನ್‌ ಮೇಲಿನ ನಿಷೇಧ ಮುಂದುವರಿಕೆ; ಶಾಶ್ವತ ನಿಷೇಧಕ್ಕೆ ಚಿಂತನೆ?

ಈ ಅಪ್ಲಿಕೇಶನ್‌ಗಳು ವಾರ್ಷಿಕವಾಗಿ 50% ವರೆಗೆ ಬಡ್ಡಿದರವನ್ನು ವಿಧಿಸುತ್ತಾರೆ. “ಭಾರತದ 80 ಆಪ್ ಸ್ಟೋರ್‌ಗಳಲ್ಲಿ (ಕಳೆದ ವರ್ಷದವರೆಗೆ) ಈ ರೀತಿಯ 1,100 ಕ್ಕೂ ಹೆಚ್ಚು ಅಪ್ಲಿಕೇಶನ್‌ಗಳು ಆಂಡ್ರಾಯ್ಡ್ ಬಳಕೆದಾರರಿಗೆ ಲಭ್ಯವಿದ್ದು, ಈ 600 ಆ್ಯಪ್‌ಗಳು ಕಾನೂನುಬಾಹಿರವಾಗಿದೆ” ಎಂದು ಭಾರತೀಯ ರಿಸರ್ವ್ ಬ್ಯಾಂಕ್ (RBI) ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...