Homeಮುಖಪುಟಬಿಜೆಪಿ ‘ಸರಕಾರಗಳ ಸರಣಿ ಕೊಲೆಗಾರ’: ಕೇಜ್ರಿವಾಲ್

ಬಿಜೆಪಿ ‘ಸರಕಾರಗಳ ಸರಣಿ ಕೊಲೆಗಾರ’: ಕೇಜ್ರಿವಾಲ್

- Advertisement -
- Advertisement -

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಬಿಜೆಪಿಯನ್ನು “ಸರಕಾರಗಳ ಸರಣಿ ಕೊಲೆಗಾರ” ಎಂದು ಶುಕ್ರವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಮ್ ಆದ್ಮಿ ಪಕ್ಷದ (ಎಎಪಿ) ಒಬ್ಬನೇ ಒಬ್ಬ ಶಾಸಕರನ್ನು ಸೆಳೆಯಲು ಬಿಜೆಪಿ ವಿಫಲವಾಗಿದೆ ಎಂಬುದನ್ನು ಸಾಬೀತುಪಡಿಸಲು ವಿಶ್ವಾಸ ಮತ ಯಾಚನೆ ಮಾಡಲು ನಾನು ಬಯಸುತ್ತೇನೆ ಎಂದು ಅವರು ಹೇಳಿದ್ದಾರೆ. ದೆಹಲಿಯ ಎಎಪಿ ಸರ್ಕಾರ ಸೋಮವಾರ ದೆಹಲಿ ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚನೆ ನಡೆಸಲಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

ದೆಹಲಿ ವಿಧಾನಸಭೆಯ ವಿಶೇಷ ಅಧಿವೇಶನವನ್ನುದ್ದೇಶಿಸಿ ಮಾತನಾಡಿದ ಅರವಿಂದ್ ಕೇಜ್ರಿವಾಲ್, “ಬಿಜೆಪಿಗೆ ಒಬ್ಬೇ ಒಬ್ಬ ಶಾಸಕನನ್ನು ಸೆಳೆಯಲು ಸಾಧ್ಯವಾಗಿಲ್ಲ ಎಂಬುವುದನ್ನು ನಿರೂಪಿಸಲು ನಾನು ವಿಶ್ವಾಸ ಮತಯಾಚನೆ ಮಾಡಲು ಬಯಸುತ್ತೇನೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದೆಹಲಿಯ ಅರವಿಂದ್ ಕೇಜ್ರಿವಾಲ್ ಸರ್ಕಾರವನ್ನು ಉರುಳಿಸಲು “ಆಪರೇಷನ್ ಕಮಲ” ಮತ್ತು ದೆಹಲಿ ಮದ್ಯದ ನೀತಿಯಲ್ಲಿನ ಭ್ರಷ್ಟಾಚಾರದ ಆರೋಪದಲ್ಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಂತಹ ಪಕ್ಷದ ನಾಯಕರನ್ನು ಗುರಿಯಾಗಿಸಿಕೊಂಡು ತನಿಖೆ ನಡೆಸುತ್ತಿರುವ ಬಗ್ಗೆ ಚರ್ಚಿಸಲು ಎಎಪಿ ಅಧಿವೇಶನವನ್ನು ಕರೆದಿದೆ.

ಸಿಸೋಡಿಯಾ ಅವರು ಬಿಜೆಪಿ ಸೇರಿದರೆ ಅವರ ವಿರುದ್ಧದ ಪ್ರಕರಣಗಳನ್ನು ಕೈಬಿಡುವುದಾಗಿ ಬಿಜೆಪಿ ಪ್ರಸ್ತಾಪಿಸಿದೆ ಎಂದು ಸಿಸೋಡಿಯಾ ಆರೋಪಿಸಿದ್ದಾರೆ.

ಇದನ್ನೂ ಓದಿ: ದೆಹಲಿ ಸರ್ಕಾರ ಉರುಳಿಸಲು ಬಿಜೆಪಿ ಯತ್ನ: ಸಿಎಂ ಅರವಿಂದ್ ಕೇಜ್ರಿವಾಲ್ ನಿವಾಸದಲ್ಲಿ ಶಾಸಕರ ಸಭೆ

ಗುರುವಾರದಂದು ಕೇಜ್ರಿವಾಲ್ ಅವರು ತಮ್ಮ ನಿವಾಸದಲ್ಲಿ ಶಕ್ತಿ ಪ್ರದರ್ಶನ ನಡೆಸಲು ಶಾಸಕರ ಸಭೆಯನ್ನು ಕರೆದಿದ್ದರು. ದೆಹಲಿ ಎಎಪಿಯ 62 ಶಾಸಕರಲ್ಲಿ 53 ಮಂದಿ ಸದಸ್ಯರು ಇದರಲ್ಲಿ ಹಾಜರಾಗಿದ್ದರು ಮತ್ತು ಉಳಿದವವರು ಕೂಡಾ ಕೇಜ್ರಿವಾಲ್ ಅವರಿಗೆ ಬೆಂಬಲ ನೀಡುವುದಾಗಿ ಹೇಳಿದ್ದಾರೆ ಎಂದು ಎಎಪಿ ತಿಳಿಸಿದೆ.

“ಸಿಬಿಐ ತನ್ನ ಎಲ್ಲಾ ಪ್ರಯತ್ನಗಳನ್ನು ಮಾಡಿದೆಯಾದರೂ ಸಿಸೋಡಿಯಾ ಅವರ ಮನೆಯಲ್ಲಿ 25 ಪೈಸೆಯೂ ಸಿಗಲಿಲ್ಲ. ಮರುದಿನ ಬಿಜೆಪಿ ನಾಯಕರೊಬ್ಬರು ಮನೀಶ್ ಅವರನ್ನು ಸಂಪರ್ಕಿಸಿ, ನಾವು ನಿಮ್ಮನ್ನು ಮುಖ್ಯಮಂತ್ರಿ ಮಾಡುತ್ತೇವೆ ಮತ್ತು ಎಎಪಿಯಿಂದ ಹೊರಬರಲು ತಲಾ 20 ಕೋಟಿ ನೀಡುತ್ತೇವೆ ಎಂದು ಹೇಳಿದ್ದಾರೆ. ಆದರೆ ಮನೀಶ್ ಅದನ್ನು ತಿರಸ್ಕರಿಸಿದ್ದಾರೆ. ಇದರ ನಂತರ ಬಿಜೆಪಿ ಇತರ ಶಾಸಕರನ್ನು ಸಂಪರ್ಕಿಸಲು ಪ್ರಯತ್ನಿಸಿದೆ. ನನ್ನ ಪ್ರತಿಯೊಬ್ಬ ಶಾಸಕರೂ ವಜ್ರವಾಗಿದ್ದು, ಅವರನ್ನು ಖರೀದಿಸಲು ಸಾಧ್ಯವಿಲ್ಲ” ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಬಿಜೆಪಿ ತನ್ನ 40 ಶಾಸಕರನ್ನು ಒಡೆಯಲು ಪ್ರಯತ್ನಿಸುತ್ತಿದ್ದು, ಪ್ರತಿಯೊಬ್ಬರಿಗೂ 20 ಕೋಟಿ ನೀಡಲು ಮುಂದಾಗಿದೆ ಎಂದು ಎಎಪಿ ಆರೋಪಿಸಿದೆ. ‘‘ಬಿಜೆಪಿ ಹಲವಾರು ಸರ್ಕಾರಗಳನ್ನು ಕೆಡವಿದೆ ಮತ್ತು ಈಗ ಅವರು ದೆಹಲಿಯತ್ತ ಮುಖ ಮಾಡಿದ್ದಾರೆ. ನಮ್ಮ ದೇಶದಲ್ಲಿ ಸರ್ಕಾರಗಳ ಸರಣಿ ಕೊಲೆಗಾರ ಇದ್ದಾರೆ. ಅದೇ ಮಾದರಿಯಲ್ಲಿ ಇದು ನಡೆದಿದೆ” ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಇದನ್ನೂ ಓದಿ: ‘40 ಶಾಸಕರ ಬೇಟೆಗೆ ಪ್ರಯತ್ನ’: ಆಪರೇಷನ್‌ ಕಮಲ ವಿಫಲ ಎಂದ ಎಎಪಿ

ಇತ್ತೀಚಿನ ವರ್ಷಗಳಲ್ಲಿ ಪ್ರತಿಪಕ್ಷದ ಸರ್ಕಾರಗಳನ್ನು ಉರುಳಿಸಲು ಬಿಜೆಪಿ 277 ಶಾಸಕರನ್ನು ಖರೀದಿಸಿದೆ ಎಂದು ದೆಹಲಿ ಮುಖ್ಯಮಂತ್ರಿ ಆರೋಪಿಸಿದ್ದಾರೆ. “ಇತ್ತೀಚಿನ ವರ್ಷಗಳಲ್ಲಿ ಬಿಜೆಪಿ 277 ಶಾಸಕರನ್ನು ಖರೀದಿಸಿದೆ. ಆಪರೇಷನ್ ಕಮಲಕ್ಕೆ ಬಿಜೆಪಿ 5,500 ಕೋಟಿ ರೂ. ಖರ್ಚು ಮಾಡಿದೆ. ದೆಹಲಿಗೆ 800 ಕೋಟಿ ರೂ. ಇಟ್ಟುಕೊಂಡಿದೆ’’ ಎಂದು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...