Homeಮುಖಪುಟಬಿಜೆಪಿ ‘ಸರಕಾರಗಳ ಸರಣಿ ಕೊಲೆಗಾರ’: ಕೇಜ್ರಿವಾಲ್

ಬಿಜೆಪಿ ‘ಸರಕಾರಗಳ ಸರಣಿ ಕೊಲೆಗಾರ’: ಕೇಜ್ರಿವಾಲ್

- Advertisement -
- Advertisement -

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಬಿಜೆಪಿಯನ್ನು “ಸರಕಾರಗಳ ಸರಣಿ ಕೊಲೆಗಾರ” ಎಂದು ಶುಕ್ರವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಮ್ ಆದ್ಮಿ ಪಕ್ಷದ (ಎಎಪಿ) ಒಬ್ಬನೇ ಒಬ್ಬ ಶಾಸಕರನ್ನು ಸೆಳೆಯಲು ಬಿಜೆಪಿ ವಿಫಲವಾಗಿದೆ ಎಂಬುದನ್ನು ಸಾಬೀತುಪಡಿಸಲು ವಿಶ್ವಾಸ ಮತ ಯಾಚನೆ ಮಾಡಲು ನಾನು ಬಯಸುತ್ತೇನೆ ಎಂದು ಅವರು ಹೇಳಿದ್ದಾರೆ. ದೆಹಲಿಯ ಎಎಪಿ ಸರ್ಕಾರ ಸೋಮವಾರ ದೆಹಲಿ ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚನೆ ನಡೆಸಲಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

ದೆಹಲಿ ವಿಧಾನಸಭೆಯ ವಿಶೇಷ ಅಧಿವೇಶನವನ್ನುದ್ದೇಶಿಸಿ ಮಾತನಾಡಿದ ಅರವಿಂದ್ ಕೇಜ್ರಿವಾಲ್, “ಬಿಜೆಪಿಗೆ ಒಬ್ಬೇ ಒಬ್ಬ ಶಾಸಕನನ್ನು ಸೆಳೆಯಲು ಸಾಧ್ಯವಾಗಿಲ್ಲ ಎಂಬುವುದನ್ನು ನಿರೂಪಿಸಲು ನಾನು ವಿಶ್ವಾಸ ಮತಯಾಚನೆ ಮಾಡಲು ಬಯಸುತ್ತೇನೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದೆಹಲಿಯ ಅರವಿಂದ್ ಕೇಜ್ರಿವಾಲ್ ಸರ್ಕಾರವನ್ನು ಉರುಳಿಸಲು “ಆಪರೇಷನ್ ಕಮಲ” ಮತ್ತು ದೆಹಲಿ ಮದ್ಯದ ನೀತಿಯಲ್ಲಿನ ಭ್ರಷ್ಟಾಚಾರದ ಆರೋಪದಲ್ಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಂತಹ ಪಕ್ಷದ ನಾಯಕರನ್ನು ಗುರಿಯಾಗಿಸಿಕೊಂಡು ತನಿಖೆ ನಡೆಸುತ್ತಿರುವ ಬಗ್ಗೆ ಚರ್ಚಿಸಲು ಎಎಪಿ ಅಧಿವೇಶನವನ್ನು ಕರೆದಿದೆ.

ಸಿಸೋಡಿಯಾ ಅವರು ಬಿಜೆಪಿ ಸೇರಿದರೆ ಅವರ ವಿರುದ್ಧದ ಪ್ರಕರಣಗಳನ್ನು ಕೈಬಿಡುವುದಾಗಿ ಬಿಜೆಪಿ ಪ್ರಸ್ತಾಪಿಸಿದೆ ಎಂದು ಸಿಸೋಡಿಯಾ ಆರೋಪಿಸಿದ್ದಾರೆ.

ಇದನ್ನೂ ಓದಿ: ದೆಹಲಿ ಸರ್ಕಾರ ಉರುಳಿಸಲು ಬಿಜೆಪಿ ಯತ್ನ: ಸಿಎಂ ಅರವಿಂದ್ ಕೇಜ್ರಿವಾಲ್ ನಿವಾಸದಲ್ಲಿ ಶಾಸಕರ ಸಭೆ

ಗುರುವಾರದಂದು ಕೇಜ್ರಿವಾಲ್ ಅವರು ತಮ್ಮ ನಿವಾಸದಲ್ಲಿ ಶಕ್ತಿ ಪ್ರದರ್ಶನ ನಡೆಸಲು ಶಾಸಕರ ಸಭೆಯನ್ನು ಕರೆದಿದ್ದರು. ದೆಹಲಿ ಎಎಪಿಯ 62 ಶಾಸಕರಲ್ಲಿ 53 ಮಂದಿ ಸದಸ್ಯರು ಇದರಲ್ಲಿ ಹಾಜರಾಗಿದ್ದರು ಮತ್ತು ಉಳಿದವವರು ಕೂಡಾ ಕೇಜ್ರಿವಾಲ್ ಅವರಿಗೆ ಬೆಂಬಲ ನೀಡುವುದಾಗಿ ಹೇಳಿದ್ದಾರೆ ಎಂದು ಎಎಪಿ ತಿಳಿಸಿದೆ.

“ಸಿಬಿಐ ತನ್ನ ಎಲ್ಲಾ ಪ್ರಯತ್ನಗಳನ್ನು ಮಾಡಿದೆಯಾದರೂ ಸಿಸೋಡಿಯಾ ಅವರ ಮನೆಯಲ್ಲಿ 25 ಪೈಸೆಯೂ ಸಿಗಲಿಲ್ಲ. ಮರುದಿನ ಬಿಜೆಪಿ ನಾಯಕರೊಬ್ಬರು ಮನೀಶ್ ಅವರನ್ನು ಸಂಪರ್ಕಿಸಿ, ನಾವು ನಿಮ್ಮನ್ನು ಮುಖ್ಯಮಂತ್ರಿ ಮಾಡುತ್ತೇವೆ ಮತ್ತು ಎಎಪಿಯಿಂದ ಹೊರಬರಲು ತಲಾ 20 ಕೋಟಿ ನೀಡುತ್ತೇವೆ ಎಂದು ಹೇಳಿದ್ದಾರೆ. ಆದರೆ ಮನೀಶ್ ಅದನ್ನು ತಿರಸ್ಕರಿಸಿದ್ದಾರೆ. ಇದರ ನಂತರ ಬಿಜೆಪಿ ಇತರ ಶಾಸಕರನ್ನು ಸಂಪರ್ಕಿಸಲು ಪ್ರಯತ್ನಿಸಿದೆ. ನನ್ನ ಪ್ರತಿಯೊಬ್ಬ ಶಾಸಕರೂ ವಜ್ರವಾಗಿದ್ದು, ಅವರನ್ನು ಖರೀದಿಸಲು ಸಾಧ್ಯವಿಲ್ಲ” ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಬಿಜೆಪಿ ತನ್ನ 40 ಶಾಸಕರನ್ನು ಒಡೆಯಲು ಪ್ರಯತ್ನಿಸುತ್ತಿದ್ದು, ಪ್ರತಿಯೊಬ್ಬರಿಗೂ 20 ಕೋಟಿ ನೀಡಲು ಮುಂದಾಗಿದೆ ಎಂದು ಎಎಪಿ ಆರೋಪಿಸಿದೆ. ‘‘ಬಿಜೆಪಿ ಹಲವಾರು ಸರ್ಕಾರಗಳನ್ನು ಕೆಡವಿದೆ ಮತ್ತು ಈಗ ಅವರು ದೆಹಲಿಯತ್ತ ಮುಖ ಮಾಡಿದ್ದಾರೆ. ನಮ್ಮ ದೇಶದಲ್ಲಿ ಸರ್ಕಾರಗಳ ಸರಣಿ ಕೊಲೆಗಾರ ಇದ್ದಾರೆ. ಅದೇ ಮಾದರಿಯಲ್ಲಿ ಇದು ನಡೆದಿದೆ” ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಇದನ್ನೂ ಓದಿ: ‘40 ಶಾಸಕರ ಬೇಟೆಗೆ ಪ್ರಯತ್ನ’: ಆಪರೇಷನ್‌ ಕಮಲ ವಿಫಲ ಎಂದ ಎಎಪಿ

ಇತ್ತೀಚಿನ ವರ್ಷಗಳಲ್ಲಿ ಪ್ರತಿಪಕ್ಷದ ಸರ್ಕಾರಗಳನ್ನು ಉರುಳಿಸಲು ಬಿಜೆಪಿ 277 ಶಾಸಕರನ್ನು ಖರೀದಿಸಿದೆ ಎಂದು ದೆಹಲಿ ಮುಖ್ಯಮಂತ್ರಿ ಆರೋಪಿಸಿದ್ದಾರೆ. “ಇತ್ತೀಚಿನ ವರ್ಷಗಳಲ್ಲಿ ಬಿಜೆಪಿ 277 ಶಾಸಕರನ್ನು ಖರೀದಿಸಿದೆ. ಆಪರೇಷನ್ ಕಮಲಕ್ಕೆ ಬಿಜೆಪಿ 5,500 ಕೋಟಿ ರೂ. ಖರ್ಚು ಮಾಡಿದೆ. ದೆಹಲಿಗೆ 800 ಕೋಟಿ ರೂ. ಇಟ್ಟುಕೊಂಡಿದೆ’’ ಎಂದು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....