Homeಕರ್ನಾಟಕ‘ಶಿಕ್ಷಣ ಇಲಾಖೆ ಭಾರಿ ಭ್ರಷ್ಟಾಚಾರ ನಡೆಸುತ್ತಿದೆ’: ಪ್ರಧಾನಿಗೆ ಪತ್ರ ಬರೆದ ರಾಜ್ಯದ 13 ಸಾವಿರ ಶಾಲೆಗಳು

‘ಶಿಕ್ಷಣ ಇಲಾಖೆ ಭಾರಿ ಭ್ರಷ್ಟಾಚಾರ ನಡೆಸುತ್ತಿದೆ’: ಪ್ರಧಾನಿಗೆ ಪತ್ರ ಬರೆದ ರಾಜ್ಯದ 13 ಸಾವಿರ ಶಾಲೆಗಳು

ಇಬ್ಬರು ಬಿಜೆಪಿ ಸಚಿವರು ಶಾಲೆಗಳಿಗೆ ಅಕ್ಷರಶಃ ಹಾನಿಯನ್ನುಂಟುಮಾಡಿದ್ದಾರೆ ಎಂದು ಪತ್ರದಲ್ಲಿ ದೂರಲಾಗಿದೆ

- Advertisement -
- Advertisement -

ರಾಜ್ಯದ ಸುಮಾರು 13,000 ಶಾಲೆಗಳನ್ನು ಪ್ರತಿನಿಧಿಸುವ ಎರಡು ಸಂಘಗಳು ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರವು ಭ್ರಷ್ಟಾಚಾರ ನಡೆಸುತ್ತಿದೆ ಎಂದು ಆರೋಪಿಸಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಅಸೋಸಿಯೇಟೆಡ್ ಮ್ಯಾನೇಜ್‌ಮೆಂಟ್ಸ್‌‌ ಮತ್ತು ನೋಂದಾಯಿತ ಅನುದಾನ ರಹಿತ ಖಾಸಗಿ ಶಾಲೆಗಳ ನಿರ್ವಹಣಾ ಸಂಘವು, ಶಿಕ್ಷಣ ಸಂಸ್ಥೆಗಳಿಗೆ ಮಾನ್ಯತೆ ಪ್ರಮಾಣ ಪತ್ರ ನೀಡಲು ರಾಜ್ಯ ಶಿಕ್ಷಣ ಇಲಾಖೆಯು ಲಂಚಕ್ಕೆ ಬೇಡಿಕೆಯಿಡುತ್ತಿರುವ ಆರೋಪದ ಕುರಿತು ಪರಿಶೀಲಿಸುವಂತೆ ಪತ್ರ ಬರೆದು ಪ್ರಧಾನಿ ಮೋದಿಯನ್ನು ಒತ್ತಾಯಿಸಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅವೈಜ್ಞಾನಿಕ, ತರ್ಕರಹಿತ, ತಾರತಮ್ಯ ಮತ್ತು ಅನುಸರಣೆಯ ಮಾನದಂಡಗಳನ್ನು ಅನುದಾನ ರಹಿತ ಖಾಸಗಿ ಶಾಲೆಗಳಿಗೆ ಮಾತ್ರ ಅನ್ವಯಿಸಲಾಗುತ್ತಿದ್ದು, ದೊಡ್ಡ ಭ್ರಷ್ಟಾಚಾರ ನಡೆಯುತ್ತಿದೆ” ಎಂದು ಪತ್ರವು ಆರೋಪಿಸಿದೆ.

ಇದನ್ನೂ ಓದಿ: ಶಿಕ್ಷಣವನ್ನು ವೈದಿಕಗೊಳಿಸುವ ಜಾಗತಿಕ ಹುನ್ನಾರ

ರಾಜ್ಯ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಿಗೆ ಅನೇಕ ದೂರುಗಳು ಮತ್ತು ಮನವಿಗಳನ್ನು ನೀಡಿದರೂ ಅವರು ಅದನ್ನು ಗಮನಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂದು ಸಂಘಗಳು ಹೇಳಿಕೊಂಡಿದ್ದು, ಸಚಿವರ ರಾಜೀನಾಮೆಗೆ ಒತ್ತಾಯಿಸಿವೆ.

“ಶಿಕ್ಷಣ ಸಚಿವಾಲಯವು ಇಡೀ ವ್ಯವಸ್ಥೆಯ ದಯನೀಯ ಪರಿಸ್ಥಿತಿಯನ್ನು ಆಲಿಸಲು ಮತ್ತು ಅರ್ಥಮಾಡಿಕೊಳ್ಳಲು ಹಾಗೂ ಸಮಸ್ಯೆಗಳನ್ನು ಪರಿಹರಿಸುವ ಬಗ್ಗೆ ಯಾವುದೆ ಕ್ರಮಕೈಗೊಳ್ಳುತ್ತಿಲ್ಲ. ಹೆಚ್ಚು ಹೆಚ್ಚು ಹೂಡಿಕೆದಾರರಿಗೆ ಅವಕಾಶ ನೀಡುವ ಮೂಲಕ ಇಬ್ಬರು ಬಿಜೆಪಿ ಸಚಿವರು ಅಕ್ಷರಶಃ ಶಿಕ್ಷಣವನ್ನು ವ್ಯಾಪಾರೀಕರಿಸುವ ಶಾಲೆಗಳಿಗಿಂತ ಬಜೆಟ್ ಶಾಲೆಗಳಿಗೆ ಹೆಚ್ಚಿನ ಹಾನಿಯನ್ನುಂಟುಮಾಡಿದ್ದಾರೆ” ಎಂದು ಪತ್ರದಲ್ಲಿ ಹೇಳಲಾಗಿದೆ.

ಹೊಸ ಶೈಕ್ಷಣಿಕ ವರ್ಷ ಆರಂಭಗೊಂಡರೂ ಸರಕಾರ ನಿಗದಿಪಡಿಸಿದ ಪಠ್ಯಪುಸ್ತಕಗಳು ಇನ್ನೂ ಶಾಲೆಗಳಿಗೆ ತಲುಪಿಲ್ಲ ಎಂದು ಸಂಘಗಳು ಆರೋಪಿಸಿವೆ.

ಇದನ್ನೂ ಓದಿ: ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು ರಚನೆ ಪ್ರಕ್ರಿಯೆ; ಶಿಕ್ಷಣದ ಮೇಲಿನ ರಾಜ್ಯಗಳ ಅಧಿಕಾರವನ್ನು ಕಸಿಯುವ ಪ್ರಹಸನ

“ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ಹೊರೆಯಾಗದಂತೆ ಸಾರ್ವಜನಿಕ ಮತ್ತು ಖಾಸಗಿ ಶಾಲೆಗಳು ಪ್ರಾಯೋಗಿಕವಾಗಿ ಮತ್ತು ಭೌತಿಕವಾಗಿ ಜಾರಿಗೊಳಿಸಬಹುದಾದ ಕಠಿಣ ನಿಯಮಗಳನ್ನು ಉದಾರೀಕರಣಗೊಳಿಸಲು ಶಿಕ್ಷಣ ಸಚಿವರು ಯಾವುದೇ ಕಾಳಜಿ ವಹಿಸುತ್ತಿಲ್ಲ” ಎಂದು ಸಂಘಗಳು ಪ್ರಧಾನಿಗೆ ಬರೆದ ದೂರಿನಲ್ಲಿ ಹೇಳಿದ್ದಾರೆ.

ಈ ಎಲ್ಲಾ ಆರೋಪಗಳನ್ನು ಪರಿಶೀಲಿಸಬೇಕು ಮತ್ತು ಕರ್ನಾಟಕ ಶಿಕ್ಷಣ ಸಚಿವಾಲಯದ ವ್ಯವಹಾರಗಳ ಬಗ್ಗೆ ತನಿಖೆ ನಡೆಸಬೇಕು ಎಂದು ಶಾಲಾ ಸಂಘಗಳು ಪ್ರಧಾನಿ ಮೋದಿಯವರನ್ನು ಒತ್ತಾಯಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕುರುಬನ ವಿರುದ್ಧ ಕುರಿಗಳು ತೋಳಕ್ಕೆ ಮನವಿ ಸಲ್ಲಿಸಿವೆ. 2023ರ ರಾಜ್ಯ ವಿಧಾನಸಭಾ ಚುನಾವಣೆ ಮತ್ತು 2024ರ ಲೋಕಸಭಾ ಚುನಾವಣೆಗಳಿಗಾಗಿ fund raising ಚಟುವಟಿಕೆಗಳು ರಭಸದಿಂದ ಸಾಗುತ್ತಿರುವಂತಿವೆ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...