Homeಕರ್ನಾಟಕ‘ಕರ್ನಾಟಕ ಬಿಲ್ಕಿಸ್ ಜೊತೆಗಿದೆ’: ಬಿಜೆಪಿ ಸರ್ಕಾರದ ನಡೆ ವಿರೋಧಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

‘ಕರ್ನಾಟಕ ಬಿಲ್ಕಿಸ್ ಜೊತೆಗಿದೆ’: ಬಿಜೆಪಿ ಸರ್ಕಾರದ ನಡೆ ವಿರೋಧಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

- Advertisement -
- Advertisement -

ಗುಜರಾತಿನ ಬಿಜೆಪಿ ಸರ್ಕಾರ ಬಿಲ್ಕಿಸ್ ಬಾನೋ ಸಾಮೂಹಿಕ ಅತ್ಯಾಚಾರಿಗಳಿಗೆ ಕ್ಷಮಾದಾನ ನೀಡಿರುವುದನ್ನು ವಿರೋಧಿಸಿ ‘ಬಿಲ್ಕಿಸ್‌ಗೆ ನ್ಯಾಯ ದೊರಕಿಸಿಕೊಡುವಂತೆ ಕರ್ನಾಟಕ ಆಗ್ರಹಿಸುತ್ತದೆ’ ಎಂಬ ಘೋಷವಾಕ್ಯದೊಂದಿಗೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯದ ಪ್ರಮುಖ ಮಹಿಳಾ ಸಂಘಟನೆಗಳು, ಲೈಂಗಿಕ ಸಂಖ್ಯಾತರ ಸಂಘಟನೆ, ಜಾತ್ಯಾತೀತ ಪಕ್ಷಗಳು ಸೇರಿದಂತೆ ಹಲವಾರು ಜನಪರ ಸಂಘಟನೆಗಳು ಬೃಹತ್‌ ಪ್ರತಿಭಟನಾ ಸಮಾವೇಶವನ್ನು ಶನಿವಾರ ನಡೆಸಿದೆ.

ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ನಾಯಕಿ ಕೆ.ಎಸ್‌. ವಿಮಲಾ, “ಬಿಲ್ಕೀಸ್ ಪರವಾಗಿರು ಧ್ವನಿ ಇಡೀ ದೇಶದಾದ್ಯಂತ ಮೊಳಗುತ್ತಿದೆ. ದೇಶದ ಸ್ವಾತಂತ್ಯ್ರದ 75 ನೇ ವರ್ಷದ ಧ್ವಜಾರೋಹಣ ಮಾಡಿ ಪ್ರಧಾನಿ ನರೇಂದ್ರ ಮೋದಿ ಅವರು ‘ಮಹಿಳೆಯ ಘನತೆಯನ್ನು ಕಾಪಾಡುವುದು, ಅದನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯವಾಗಿದ್ದು. ಅದಕ್ಕಾಗಿ ನಾವೆಲ್ಲರೂ ಪ್ರತಿಜ್ಞೆ ಮಾಡೋಣ’ ಎಂದು ಹೇಳಿದ್ದರು” ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಆದರೆ ಪ್ರಧಾನಿ ಮೋದಿ ನಾಚಿಕೆ ಆಗಬೇಕಾಗಿದೆ. ಈ ಮಾತನ್ನು ಅವರು ಕೆಂಪು ಕೋಟೆಯಲ್ಲಿ ನಿಂತು ಹೇಳಬೇಕಾದ ಸಂದರ್ಭ ಅವರದ್ದೇ ಸರ್ಕಾರ ಗುಜರಾತಿನಲ್ಲಿ ನನ್ನ ಸಹೋದರಿಯನ್ನು ಅತ್ಯಾಚಾರ ಮಾಡಿದ್ದ ದುಷ್ಕರ್ಮಿಗಳನ್ನು ಕ್ಷಮಾದಾನ ಮಾಡಿ ಬಿಡುಗಡೆ ಮಾಡುತ್ತಿದೆ. ಪ್ರಧಾನಿ ಮೋದಿಗೆ ಮಹಿಳೆಯ ಘಟನೆಯ ಬಗ್ಗೆ ಮಾತನಾಡಲು ಕನಿಷ್ಠ ನೈತಿಕತೆ ಇದೆಯೆ?” ಎಂದು ವಿಮಲಾ ಅವರು ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ಜನಶಕ್ತಿ ಕಾರ್ಯದರ್ಶಿ ಕುಮಾರ್‌‌ ಸಮತಳ ಮಾತನಾಡಿ, “ಬಿಲ್ಕೀಸ್ ಬಾನೊ ಅತ್ಯಾಚಾರ ಆರೋಪಿಗಳನ್ನು ಬಿಡುಗಡೆ ಮಾಡಿರುವುದು ಅತ್ಯಂತ ಖಂಡನೀಯ. ನಮ್ಮ ದೇಶದ ಸ್ವಾತಂತ್ಯ್ರಕ್ಕೆ ಮಾಡಿದ ಅವಮಾನವಿದು. ಸರ್ಕಾರವು ಒಂದು ಕಡೆ ದೇಶದಾದ್ಯಂತ ಸ್ವಾತಂತ್ಯ್ರದ ಅಮೃತ ಮಹೋತ್ಸವವನ್ನು ಆಚರಿಸುತ್ತಿದೆ, ಇನ್ನೊಂದು ಕಡೆ ಅತ್ಯಾಚಾರಿಗಳನ್ನು ಬಿಡುಗಡೆ ಮಾಡುತ್ತಿದೆ. ಅತ್ಯಾಚಾರಿಗಳನ್ನು ಗೌರವದಿಂದ ಸ್ವಾಗತಿಸಿದ್ದು ಸಮಾಜವೇ ತಲೆ ತಗ್ಗಿಸುವಂತಹ ಘಟನೆ” ಎಂದು ಹೇಳಿದರು.

ಇದನ್ನೂ ಓದಿ: ಬಿಲ್ಕಿಸ್ ಬಾನೋ ಪ್ರಕರಣ: ಕೊಲೆ, ಅತ್ಯಾಚಾರದಂತಹ ಹೀನಕೃತ್ಯ ಎಸಗಿದವರಿಗೆ ಕ್ಷಮಾದಾನ ಸರಿಯೇ?

ರಾಜ್ಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಕೈ ಪದ್ಮಶಾಲಿ ಮಾತನಾಡಿ,“ದೆಹಲಿಯ ಗ್ಯಾಂಗ್‌ ರೇಪ್‌ನಿಂದ ಹಿಡಿದು ಬಿಲ್ಕೀಸ್ ಬಾನೋ ತನಕ ಕೇಂದ್ರ ಹಾಗೂ ಗುಜರಾತ್ ಸರ್ಕಾರ ಹೇಗೆ ಮಹಿಳಾ ವಿರೋಧಿ ಎಂಬುದಜಕ್ಕೆ ಇದೊಂದು ನಿದರ್ಶನವಾಗಿದೆ. ದೇಶವೂ 75 ನೇ ಸ್ವಾತಂತ್ಯ್ರೋತ್ಸವ ಆಚರಿಸುತ್ತಿರಬೇಕಾದರೆ ಪ್ರಧಾನ ಮಂತ್ರಿ ಮಹಿಳಾ ಪರವಾದ ಭಾಷಣ ಮಾಡಿದ್ದಾರೆ. ಬೇಟಿ ಪಡಾವೊ-ಬೇಟಿ ಬಚಾವೊ ಎಂದು ಹೇಳುತ್ತಿದ್ದಾರೆ. ಆದರೆ ಇಲ್ಲಿ ಯಾವ ಬೇಟಿ, ಹೇಗೆ ಓದಬೇಕು ಎಂಬುವುದೇ ಯಕ್ಷ ಪ್ರಶ್ನೆಯಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮೈಸೂರಿನಲ್ಲೂ ಪ್ರತಿಭಟನೆ

ಬಿಲ್ಕಿಸ್ ಬಾನೊ ಅವರಿಗೆ ಬಿಜೆಪಿ ಸರ್ಕಾರ ಮಾಡಿರುವ ಅನ್ಯಾಯ ಖಂಡಿಸಿ ಶನಿವಾರ ಮೈಸೂರಿನ ಟೌನ್ ಹಾಲ್ ಎದುರು ಪ್ರತಿಭಟನೆಕ ಕೂಡಾ ಪ್ರತಿಭಟನೆ ನಡೆಸಲಾಗಿದೆ.

ರ್ನಾಟಕ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟದ ನೇತೃತ್ವದಲ್ಲಿ ಪ್ರಕಾಶ್ ರಾಜ್, ಪ.ಮಲ್ಲೇಶ್, ಸಿ.ಬಸವಲಿಂಗಯ್ಯ ಒಳಗೊಂಡಂತೆ ಹಲವಾರು ಹೋರಾಟಗಾರರು, ಚಿಂತಕರು, ಮಹಿಳಾ ಮತ್ತು ಜನಪರ ಸಂಘಟನೆಗಳು ಭಾಗವಹಿಸಿದ್ದವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬಿಲ್ಕಿಸ್ ಬಾನು ಅವರ ಜೊತೆಗೆ ನಿಲ್ಲುವುದರ ಜೊತೆಗೆ ನಾವಿಂದು, ಮುರುಗಾ ಶರಣರ ವಿರುದ್ಧ ದೂರು ನೀಡಿರುವ ಇಬ್ಬರು ಅಪ್ರಾಪ್ತ ಬಾಲಕಿಯರ ಪರವಾಗಿ ದನಿ ಎತ್ತಬೇಕು. ಏಕೆಂದರೆ ಕರ್ನಾಟಕ ಸರ್ಕಾರವು ಈಗಾಗಲೇ ಮುರುಗಾಶರಣರ ಪರವಾಗಿ ಕಾರ್ಯಾಚರಣೆಗೆ ಇಳಿದಿದೆ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...