Homeಕರ್ನಾಟಕ‘ಕರ್ನಾಟಕ ಬಿಲ್ಕಿಸ್ ಜೊತೆಗಿದೆ’: ಬಿಜೆಪಿ ಸರ್ಕಾರದ ನಡೆ ವಿರೋಧಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

‘ಕರ್ನಾಟಕ ಬಿಲ್ಕಿಸ್ ಜೊತೆಗಿದೆ’: ಬಿಜೆಪಿ ಸರ್ಕಾರದ ನಡೆ ವಿರೋಧಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

- Advertisement -
- Advertisement -

ಗುಜರಾತಿನ ಬಿಜೆಪಿ ಸರ್ಕಾರ ಬಿಲ್ಕಿಸ್ ಬಾನೋ ಸಾಮೂಹಿಕ ಅತ್ಯಾಚಾರಿಗಳಿಗೆ ಕ್ಷಮಾದಾನ ನೀಡಿರುವುದನ್ನು ವಿರೋಧಿಸಿ ‘ಬಿಲ್ಕಿಸ್‌ಗೆ ನ್ಯಾಯ ದೊರಕಿಸಿಕೊಡುವಂತೆ ಕರ್ನಾಟಕ ಆಗ್ರಹಿಸುತ್ತದೆ’ ಎಂಬ ಘೋಷವಾಕ್ಯದೊಂದಿಗೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯದ ಪ್ರಮುಖ ಮಹಿಳಾ ಸಂಘಟನೆಗಳು, ಲೈಂಗಿಕ ಸಂಖ್ಯಾತರ ಸಂಘಟನೆ, ಜಾತ್ಯಾತೀತ ಪಕ್ಷಗಳು ಸೇರಿದಂತೆ ಹಲವಾರು ಜನಪರ ಸಂಘಟನೆಗಳು ಬೃಹತ್‌ ಪ್ರತಿಭಟನಾ ಸಮಾವೇಶವನ್ನು ಶನಿವಾರ ನಡೆಸಿದೆ.

ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ನಾಯಕಿ ಕೆ.ಎಸ್‌. ವಿಮಲಾ, “ಬಿಲ್ಕೀಸ್ ಪರವಾಗಿರು ಧ್ವನಿ ಇಡೀ ದೇಶದಾದ್ಯಂತ ಮೊಳಗುತ್ತಿದೆ. ದೇಶದ ಸ್ವಾತಂತ್ಯ್ರದ 75 ನೇ ವರ್ಷದ ಧ್ವಜಾರೋಹಣ ಮಾಡಿ ಪ್ರಧಾನಿ ನರೇಂದ್ರ ಮೋದಿ ಅವರು ‘ಮಹಿಳೆಯ ಘನತೆಯನ್ನು ಕಾಪಾಡುವುದು, ಅದನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯವಾಗಿದ್ದು. ಅದಕ್ಕಾಗಿ ನಾವೆಲ್ಲರೂ ಪ್ರತಿಜ್ಞೆ ಮಾಡೋಣ’ ಎಂದು ಹೇಳಿದ್ದರು” ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಆದರೆ ಪ್ರಧಾನಿ ಮೋದಿ ನಾಚಿಕೆ ಆಗಬೇಕಾಗಿದೆ. ಈ ಮಾತನ್ನು ಅವರು ಕೆಂಪು ಕೋಟೆಯಲ್ಲಿ ನಿಂತು ಹೇಳಬೇಕಾದ ಸಂದರ್ಭ ಅವರದ್ದೇ ಸರ್ಕಾರ ಗುಜರಾತಿನಲ್ಲಿ ನನ್ನ ಸಹೋದರಿಯನ್ನು ಅತ್ಯಾಚಾರ ಮಾಡಿದ್ದ ದುಷ್ಕರ್ಮಿಗಳನ್ನು ಕ್ಷಮಾದಾನ ಮಾಡಿ ಬಿಡುಗಡೆ ಮಾಡುತ್ತಿದೆ. ಪ್ರಧಾನಿ ಮೋದಿಗೆ ಮಹಿಳೆಯ ಘಟನೆಯ ಬಗ್ಗೆ ಮಾತನಾಡಲು ಕನಿಷ್ಠ ನೈತಿಕತೆ ಇದೆಯೆ?” ಎಂದು ವಿಮಲಾ ಅವರು ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ಜನಶಕ್ತಿ ಕಾರ್ಯದರ್ಶಿ ಕುಮಾರ್‌‌ ಸಮತಳ ಮಾತನಾಡಿ, “ಬಿಲ್ಕೀಸ್ ಬಾನೊ ಅತ್ಯಾಚಾರ ಆರೋಪಿಗಳನ್ನು ಬಿಡುಗಡೆ ಮಾಡಿರುವುದು ಅತ್ಯಂತ ಖಂಡನೀಯ. ನಮ್ಮ ದೇಶದ ಸ್ವಾತಂತ್ಯ್ರಕ್ಕೆ ಮಾಡಿದ ಅವಮಾನವಿದು. ಸರ್ಕಾರವು ಒಂದು ಕಡೆ ದೇಶದಾದ್ಯಂತ ಸ್ವಾತಂತ್ಯ್ರದ ಅಮೃತ ಮಹೋತ್ಸವವನ್ನು ಆಚರಿಸುತ್ತಿದೆ, ಇನ್ನೊಂದು ಕಡೆ ಅತ್ಯಾಚಾರಿಗಳನ್ನು ಬಿಡುಗಡೆ ಮಾಡುತ್ತಿದೆ. ಅತ್ಯಾಚಾರಿಗಳನ್ನು ಗೌರವದಿಂದ ಸ್ವಾಗತಿಸಿದ್ದು ಸಮಾಜವೇ ತಲೆ ತಗ್ಗಿಸುವಂತಹ ಘಟನೆ” ಎಂದು ಹೇಳಿದರು.

ಇದನ್ನೂ ಓದಿ: ಬಿಲ್ಕಿಸ್ ಬಾನೋ ಪ್ರಕರಣ: ಕೊಲೆ, ಅತ್ಯಾಚಾರದಂತಹ ಹೀನಕೃತ್ಯ ಎಸಗಿದವರಿಗೆ ಕ್ಷಮಾದಾನ ಸರಿಯೇ?

ರಾಜ್ಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಕೈ ಪದ್ಮಶಾಲಿ ಮಾತನಾಡಿ,“ದೆಹಲಿಯ ಗ್ಯಾಂಗ್‌ ರೇಪ್‌ನಿಂದ ಹಿಡಿದು ಬಿಲ್ಕೀಸ್ ಬಾನೋ ತನಕ ಕೇಂದ್ರ ಹಾಗೂ ಗುಜರಾತ್ ಸರ್ಕಾರ ಹೇಗೆ ಮಹಿಳಾ ವಿರೋಧಿ ಎಂಬುದಜಕ್ಕೆ ಇದೊಂದು ನಿದರ್ಶನವಾಗಿದೆ. ದೇಶವೂ 75 ನೇ ಸ್ವಾತಂತ್ಯ್ರೋತ್ಸವ ಆಚರಿಸುತ್ತಿರಬೇಕಾದರೆ ಪ್ರಧಾನ ಮಂತ್ರಿ ಮಹಿಳಾ ಪರವಾದ ಭಾಷಣ ಮಾಡಿದ್ದಾರೆ. ಬೇಟಿ ಪಡಾವೊ-ಬೇಟಿ ಬಚಾವೊ ಎಂದು ಹೇಳುತ್ತಿದ್ದಾರೆ. ಆದರೆ ಇಲ್ಲಿ ಯಾವ ಬೇಟಿ, ಹೇಗೆ ಓದಬೇಕು ಎಂಬುವುದೇ ಯಕ್ಷ ಪ್ರಶ್ನೆಯಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮೈಸೂರಿನಲ್ಲೂ ಪ್ರತಿಭಟನೆ

ಬಿಲ್ಕಿಸ್ ಬಾನೊ ಅವರಿಗೆ ಬಿಜೆಪಿ ಸರ್ಕಾರ ಮಾಡಿರುವ ಅನ್ಯಾಯ ಖಂಡಿಸಿ ಶನಿವಾರ ಮೈಸೂರಿನ ಟೌನ್ ಹಾಲ್ ಎದುರು ಪ್ರತಿಭಟನೆಕ ಕೂಡಾ ಪ್ರತಿಭಟನೆ ನಡೆಸಲಾಗಿದೆ.

ರ್ನಾಟಕ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟದ ನೇತೃತ್ವದಲ್ಲಿ ಪ್ರಕಾಶ್ ರಾಜ್, ಪ.ಮಲ್ಲೇಶ್, ಸಿ.ಬಸವಲಿಂಗಯ್ಯ ಒಳಗೊಂಡಂತೆ ಹಲವಾರು ಹೋರಾಟಗಾರರು, ಚಿಂತಕರು, ಮಹಿಳಾ ಮತ್ತು ಜನಪರ ಸಂಘಟನೆಗಳು ಭಾಗವಹಿಸಿದ್ದವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬಿಲ್ಕಿಸ್ ಬಾನು ಅವರ ಜೊತೆಗೆ ನಿಲ್ಲುವುದರ ಜೊತೆಗೆ ನಾವಿಂದು, ಮುರುಗಾ ಶರಣರ ವಿರುದ್ಧ ದೂರು ನೀಡಿರುವ ಇಬ್ಬರು ಅಪ್ರಾಪ್ತ ಬಾಲಕಿಯರ ಪರವಾಗಿ ದನಿ ಎತ್ತಬೇಕು. ಏಕೆಂದರೆ ಕರ್ನಾಟಕ ಸರ್ಕಾರವು ಈಗಾಗಲೇ ಮುರುಗಾಶರಣರ ಪರವಾಗಿ ಕಾರ್ಯಾಚರಣೆಗೆ ಇಳಿದಿದೆ.

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...