Homeಕರ್ನಾಟಕ‘ಕರ್ನಾಟಕ ಬಿಲ್ಕಿಸ್ ಜೊತೆಗಿದೆ’: ಬಿಜೆಪಿ ಸರ್ಕಾರದ ನಡೆ ವಿರೋಧಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

‘ಕರ್ನಾಟಕ ಬಿಲ್ಕಿಸ್ ಜೊತೆಗಿದೆ’: ಬಿಜೆಪಿ ಸರ್ಕಾರದ ನಡೆ ವಿರೋಧಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

- Advertisement -
- Advertisement -

ಗುಜರಾತಿನ ಬಿಜೆಪಿ ಸರ್ಕಾರ ಬಿಲ್ಕಿಸ್ ಬಾನೋ ಸಾಮೂಹಿಕ ಅತ್ಯಾಚಾರಿಗಳಿಗೆ ಕ್ಷಮಾದಾನ ನೀಡಿರುವುದನ್ನು ವಿರೋಧಿಸಿ ‘ಬಿಲ್ಕಿಸ್‌ಗೆ ನ್ಯಾಯ ದೊರಕಿಸಿಕೊಡುವಂತೆ ಕರ್ನಾಟಕ ಆಗ್ರಹಿಸುತ್ತದೆ’ ಎಂಬ ಘೋಷವಾಕ್ಯದೊಂದಿಗೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯದ ಪ್ರಮುಖ ಮಹಿಳಾ ಸಂಘಟನೆಗಳು, ಲೈಂಗಿಕ ಸಂಖ್ಯಾತರ ಸಂಘಟನೆ, ಜಾತ್ಯಾತೀತ ಪಕ್ಷಗಳು ಸೇರಿದಂತೆ ಹಲವಾರು ಜನಪರ ಸಂಘಟನೆಗಳು ಬೃಹತ್‌ ಪ್ರತಿಭಟನಾ ಸಮಾವೇಶವನ್ನು ಶನಿವಾರ ನಡೆಸಿದೆ.

ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ನಾಯಕಿ ಕೆ.ಎಸ್‌. ವಿಮಲಾ, “ಬಿಲ್ಕೀಸ್ ಪರವಾಗಿರು ಧ್ವನಿ ಇಡೀ ದೇಶದಾದ್ಯಂತ ಮೊಳಗುತ್ತಿದೆ. ದೇಶದ ಸ್ವಾತಂತ್ಯ್ರದ 75 ನೇ ವರ್ಷದ ಧ್ವಜಾರೋಹಣ ಮಾಡಿ ಪ್ರಧಾನಿ ನರೇಂದ್ರ ಮೋದಿ ಅವರು ‘ಮಹಿಳೆಯ ಘನತೆಯನ್ನು ಕಾಪಾಡುವುದು, ಅದನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯವಾಗಿದ್ದು. ಅದಕ್ಕಾಗಿ ನಾವೆಲ್ಲರೂ ಪ್ರತಿಜ್ಞೆ ಮಾಡೋಣ’ ಎಂದು ಹೇಳಿದ್ದರು” ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಆದರೆ ಪ್ರಧಾನಿ ಮೋದಿ ನಾಚಿಕೆ ಆಗಬೇಕಾಗಿದೆ. ಈ ಮಾತನ್ನು ಅವರು ಕೆಂಪು ಕೋಟೆಯಲ್ಲಿ ನಿಂತು ಹೇಳಬೇಕಾದ ಸಂದರ್ಭ ಅವರದ್ದೇ ಸರ್ಕಾರ ಗುಜರಾತಿನಲ್ಲಿ ನನ್ನ ಸಹೋದರಿಯನ್ನು ಅತ್ಯಾಚಾರ ಮಾಡಿದ್ದ ದುಷ್ಕರ್ಮಿಗಳನ್ನು ಕ್ಷಮಾದಾನ ಮಾಡಿ ಬಿಡುಗಡೆ ಮಾಡುತ್ತಿದೆ. ಪ್ರಧಾನಿ ಮೋದಿಗೆ ಮಹಿಳೆಯ ಘಟನೆಯ ಬಗ್ಗೆ ಮಾತನಾಡಲು ಕನಿಷ್ಠ ನೈತಿಕತೆ ಇದೆಯೆ?” ಎಂದು ವಿಮಲಾ ಅವರು ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ಜನಶಕ್ತಿ ಕಾರ್ಯದರ್ಶಿ ಕುಮಾರ್‌‌ ಸಮತಳ ಮಾತನಾಡಿ, “ಬಿಲ್ಕೀಸ್ ಬಾನೊ ಅತ್ಯಾಚಾರ ಆರೋಪಿಗಳನ್ನು ಬಿಡುಗಡೆ ಮಾಡಿರುವುದು ಅತ್ಯಂತ ಖಂಡನೀಯ. ನಮ್ಮ ದೇಶದ ಸ್ವಾತಂತ್ಯ್ರಕ್ಕೆ ಮಾಡಿದ ಅವಮಾನವಿದು. ಸರ್ಕಾರವು ಒಂದು ಕಡೆ ದೇಶದಾದ್ಯಂತ ಸ್ವಾತಂತ್ಯ್ರದ ಅಮೃತ ಮಹೋತ್ಸವವನ್ನು ಆಚರಿಸುತ್ತಿದೆ, ಇನ್ನೊಂದು ಕಡೆ ಅತ್ಯಾಚಾರಿಗಳನ್ನು ಬಿಡುಗಡೆ ಮಾಡುತ್ತಿದೆ. ಅತ್ಯಾಚಾರಿಗಳನ್ನು ಗೌರವದಿಂದ ಸ್ವಾಗತಿಸಿದ್ದು ಸಮಾಜವೇ ತಲೆ ತಗ್ಗಿಸುವಂತಹ ಘಟನೆ” ಎಂದು ಹೇಳಿದರು.

ಇದನ್ನೂ ಓದಿ: ಬಿಲ್ಕಿಸ್ ಬಾನೋ ಪ್ರಕರಣ: ಕೊಲೆ, ಅತ್ಯಾಚಾರದಂತಹ ಹೀನಕೃತ್ಯ ಎಸಗಿದವರಿಗೆ ಕ್ಷಮಾದಾನ ಸರಿಯೇ?

ರಾಜ್ಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಕೈ ಪದ್ಮಶಾಲಿ ಮಾತನಾಡಿ,“ದೆಹಲಿಯ ಗ್ಯಾಂಗ್‌ ರೇಪ್‌ನಿಂದ ಹಿಡಿದು ಬಿಲ್ಕೀಸ್ ಬಾನೋ ತನಕ ಕೇಂದ್ರ ಹಾಗೂ ಗುಜರಾತ್ ಸರ್ಕಾರ ಹೇಗೆ ಮಹಿಳಾ ವಿರೋಧಿ ಎಂಬುದಜಕ್ಕೆ ಇದೊಂದು ನಿದರ್ಶನವಾಗಿದೆ. ದೇಶವೂ 75 ನೇ ಸ್ವಾತಂತ್ಯ್ರೋತ್ಸವ ಆಚರಿಸುತ್ತಿರಬೇಕಾದರೆ ಪ್ರಧಾನ ಮಂತ್ರಿ ಮಹಿಳಾ ಪರವಾದ ಭಾಷಣ ಮಾಡಿದ್ದಾರೆ. ಬೇಟಿ ಪಡಾವೊ-ಬೇಟಿ ಬಚಾವೊ ಎಂದು ಹೇಳುತ್ತಿದ್ದಾರೆ. ಆದರೆ ಇಲ್ಲಿ ಯಾವ ಬೇಟಿ, ಹೇಗೆ ಓದಬೇಕು ಎಂಬುವುದೇ ಯಕ್ಷ ಪ್ರಶ್ನೆಯಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮೈಸೂರಿನಲ್ಲೂ ಪ್ರತಿಭಟನೆ

ಬಿಲ್ಕಿಸ್ ಬಾನೊ ಅವರಿಗೆ ಬಿಜೆಪಿ ಸರ್ಕಾರ ಮಾಡಿರುವ ಅನ್ಯಾಯ ಖಂಡಿಸಿ ಶನಿವಾರ ಮೈಸೂರಿನ ಟೌನ್ ಹಾಲ್ ಎದುರು ಪ್ರತಿಭಟನೆಕ ಕೂಡಾ ಪ್ರತಿಭಟನೆ ನಡೆಸಲಾಗಿದೆ.

ರ್ನಾಟಕ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟದ ನೇತೃತ್ವದಲ್ಲಿ ಪ್ರಕಾಶ್ ರಾಜ್, ಪ.ಮಲ್ಲೇಶ್, ಸಿ.ಬಸವಲಿಂಗಯ್ಯ ಒಳಗೊಂಡಂತೆ ಹಲವಾರು ಹೋರಾಟಗಾರರು, ಚಿಂತಕರು, ಮಹಿಳಾ ಮತ್ತು ಜನಪರ ಸಂಘಟನೆಗಳು ಭಾಗವಹಿಸಿದ್ದವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬಿಲ್ಕಿಸ್ ಬಾನು ಅವರ ಜೊತೆಗೆ ನಿಲ್ಲುವುದರ ಜೊತೆಗೆ ನಾವಿಂದು, ಮುರುಗಾ ಶರಣರ ವಿರುದ್ಧ ದೂರು ನೀಡಿರುವ ಇಬ್ಬರು ಅಪ್ರಾಪ್ತ ಬಾಲಕಿಯರ ಪರವಾಗಿ ದನಿ ಎತ್ತಬೇಕು. ಏಕೆಂದರೆ ಕರ್ನಾಟಕ ಸರ್ಕಾರವು ಈಗಾಗಲೇ ಮುರುಗಾಶರಣರ ಪರವಾಗಿ ಕಾರ್ಯಾಚರಣೆಗೆ ಇಳಿದಿದೆ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...