Homeಕರ್ನಾಟಕಮಕ್ಕಳ ಮೇಲೆ ಮುರುಘಾ ಶರಣರಿಂದ ಅತ್ಯಾಚಾರ ಆರೋಪ: ಪ್ರಕರಣ ಬಯಲಿಗೆಳೆದ ಒಡನಾಡಿ ಸಂಸ್ಥೆ ಹೇಳಿದ್ದೇನು?

ಮಕ್ಕಳ ಮೇಲೆ ಮುರುಘಾ ಶರಣರಿಂದ ಅತ್ಯಾಚಾರ ಆರೋಪ: ಪ್ರಕರಣ ಬಯಲಿಗೆಳೆದ ಒಡನಾಡಿ ಸಂಸ್ಥೆ ಹೇಳಿದ್ದೇನು?

- Advertisement -
- Advertisement -

ಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠದ ಡಾ.ಶಿವರಾತ್ರಿ ಮುರುಘಾ ಶರಣರು ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಪ್ರಕರಣ ದಾಖಲಾಗಿದೆ. ಮಠದ ವಿದ್ಯಾರ್ಥಿನಿಯರು ನೀಡಿದ ದೂರಿನ ಆಧಾರದಲ್ಲಿ ‘ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ’ (ಪೋಕ್ಸೋ) ಅಡಿಯಲ್ಲಿ ಮೈಸೂರಿನಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣ ಬೆಳಕಿಗೆ ಬರುವಲ್ಲಿ ಮೈಸೂರಿನ ಒಡನಾಡಿ ಸಂಸ್ಥೆ ಪ್ರಮುಖ ಪಾತ್ರ ವಹಿಸಿದ್ದು, ಒಡನಾಡಿ ಸಂಸ್ಥೆಯ ಮುಖ್ಯಸ್ಥರಲ್ಲಿ ಒಬ್ಬರಾದ ಪರಶು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

“ಸ್ವಾಮೀಜಿಯವರು ವಿಚಾರವಂತರು, ಪ್ರಜ್ಞಾವಂತರು, ಪ್ರಗತಿಪರರು ಎಂಬ ಭಾವನೆ ಇತ್ತು. ಮಕ್ಕಳ ಹೇಳಿಕೆ ಬಳಿಕ‌ ಸ್ವಾಮೀಜಿಯವರ ಬಗ್ಗೆ ನಮಗೆ ಅಸಹ್ಯ ಹುಟ್ಟಿದೆ” ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಇಬ್ಬರು ಮಕ್ಕಳು ಚಿತ್ರದುರ್ಗದಲ್ಲಿ ಓದುತ್ತಿದ್ದರು. ಆ ಮಕ್ಕಳ ಮೇಲೆ ಸ್ವಾಮೀಜಿಯವರು ನಿರಂತರವಾಗಿ ದೌರ್ಜನ್ಯ ನಡೆಸಿದ್ದಾರೆ. ಅವರ ಕಿರುಕುಳದಿಂದ‌ ಬೇಸತ್ತ ಮಕ್ಕಳು ಬೆಂಗಳೂರಿಗೆ ಬಂದು ಅಲ್ಲಿ ದೂರು ದಾಖಲಿಸಲು ಪ್ರಯತ್ನ ಮಾಡಿದ್ದಾರೆ. ಅಲ್ಲಿ ಸಾಧ್ಯವಾಗದೇ ಇದ್ದಾಗ ಹತಾಶೆಯಿಂದ ಆತ್ಮಹತ್ಯೆ ಮಾಡಿಕೊಳ್ಳಲು‌ ಮುಂದಾಗಿದ್ದರು” ಎಂದು ತಿಳಿಸಿದ್ದಾರೆ.

“ಆಟೋ ಚಾಲಕನೊಬ್ಬ ಸಹಾಯ ಮಾಡಿ ನಮ್ಮ ಬಳಿ ಹೋಗಿ ನ್ಯಾಯ ಸಿಗುತ್ತದೆ ಎಂದು ಕಳುಹಿಸಿಕೊಟ್ಟರು. ಆ ಇಬ್ಬರು ಮಕ್ಕಳನ್ನು ಆಪ್ತ ಸಮಾಲೋಚನೆ ಮಾಡಿದಾಗ ಸ್ವಾಮೀಜಿಯವರ ಕಿರುಕುಳವನ್ನು ಎಳೆಎಳೆಯಾಗಿ ಬಿಚ್ಚಿಟ್ಟರು. ತಕ್ಷಣ ನಾವು ಮಕ್ಕಳು ಹಕ್ಕುಗಳ ರಕ್ಷಣಾ ಕೇಂದ್ರದವರಿಗೆ ವಿಚಾರ ತಲುಪಿಸಿದೆವು. ಅವರೂ ಸಹ ಕೌನ್ಸಲಿಂಗ್‌ ಮಾಡಿ ಮಕ್ಕಳ ಹೇಳಿಕೆಯಲ್ಲಿ ಸತ್ಯಾಂಶವಿದೆ ಎಂದು ಖಚಿತವಾದ ನಂತರ‌ ನಜರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್. ದಾಖಲಾಗಿದೆ. ನಾವು ಅದಾವುದನ್ನು ಲೆಕ್ಕಿಸದೇ ಮಕ್ಕಳಿಗೆ ನ್ಯಾಯ ಒದಗಿಸಲಷ್ಟೇ ಹೆಜ್ಜೆ ಇಟ್ಟಿದ್ದೇವೆ” ಎಂದಿದ್ದಾರೆ.

ಇದನ್ನೂ ಓದಿರಿ: ಮುರುಘಾ ಮಠ: ಮಕ್ಕಳ ಪ್ರಕರಣದಲ್ಲಿ ಆರೋಪಿಯಾದ ಮಹಿಳಾ ವಾರ್ಡನ್‌ ದೂರು; ಮಠದ ಮಾಜಿ ಆಡಳಿತಾಧಿಕಾರಿ ವಿರುದ್ಧ ಅತ್ಯಾಚಾರ ಯತ್ನ ಪ್ರಕರಣ ದಾಖಲು

“ಇದು ಕೇವಲ ಇಬ್ಬರು ಮಕ್ಕಳಿಗೆ ದೌರ್ಜನ್ಯವಾಗಿದೆ ಎಂದು ಹೇಳಲು ಸಾಧ್ಯವಿಲ್ಲ. ಮಕ್ಕಳು ಹೇಳುವ ಪ್ರಕಾರ ಅಲ್ಲಿ 120 ವಿದ್ಯಾರ್ಥಿನಿಯರು ಇದ್ದಾರೆ. ಇನ್ನು ಅದೆಷ್ಟು ಮಕ್ಕಳಿಗೆ ಈ ರೀತಿಯ ದೌರ್ಜನ್ಯವಾಗಿದೆ ಎಂದು ನೋಡಬೇಕಿದೆ. ಸರಿಯಾದ ತನಿಖೆಯಾಗಬೇಕಿದೆ. ಇದಕ್ಕೆ ಸಹಕಾರ ಕೊಟ್ಟವರ ವಿರುದ್ದವು ಪ್ರಕರಣ ದಾಖಲು ಮಾಡಲಾಗಿದೆ” ಎಂದು ವಿವರಿಸಿದ್ದಾರೆ.

“ಸ್ವಾಮೀಜಿಯವರಿಗೆ ರಾಜ್ಯ, ರಾಷ್ಟ್ರಮಟ್ಟದಲ್ಲಿ ಅತ್ಯಂತ ಪ್ರಭಾವಿಗಳು ಪರಿಚಯವಿದ್ದಾರೆ. ಮಕ್ಕಳು ಅಷ್ಟು ದೂರದಿಂದ ಇಲ್ಲಿಗೆ ಬಂದಿರೋದೇ ನ್ಯಾಯ ಸಿಗುತ್ತೆ ಎಂಬ ಭರವಸೆಯಿಂದ. ಹಾಗಾಗಿ‌ ಮಕ್ಕಳಿಗೆ ನ್ಯಾಯ ಸಿಗಬೇಕಾದರೆ ನ್ಯಾಯಾಂಗ ತನಿಖೆಯೇ ಆಗಬೇಕು” ಎಂದು ಹೇಳಿದ್ದಾರೆ.

ಮುರುಘ ಶರಣರ ವಿರುದ್ಧ ಮೈಸೂರಿನಲ್ಲಿ ದಾಖಲಾದ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯಾಗಿರುವ ಮಹಿಳಾ ವಾರ್ಡನ್ ನೀಡಿರುವ ದೂರಿನ ಅನ್ವಯ ಚಿತ್ರದುರ್ಗದ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಮಾಜಿ ಶಾಸಕ ಬಸವರಾಜನ್ ವಿರುದ್ಧ ಪ್ರಕರಣ ದಾಖಲಾಗಿದೆ. ತನ್ನನ್ನು ಅತ್ಯಾಚಾರ ಮಾಡಲು ಬಸವರಾಜನ್ ಯತ್ನಿಸಿದ್ದಾರೆಂದು ವಾರ್ಡನ್ ಆರೋಪಿಸಿದ್ದಾರೆ. ಮಠದ ಆಡಳಿತಾಧಿಕಾರಿ ಆಗಿದ್ದ ಅವರು ಮಕ್ಕಳನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದೂ ವಾರ್ಡನ್‌ ದೂರಿನಲ್ಲಿ ಆರೋಪಿಸಿದ್ದಾರೆ. ಈ ಕುರಿತು ಒಡನಾಡಿಯ ಪರಶು ಅವರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದರು.

“ಬಸವರಾಜನ್‌ ಮೇಲೆ ಪ್ರಕರಣ ದಾಖಲಿಸಿದ್ದರೆ, ಆ ವಿಚಾರವಾಗಿಯೂ ತನಿಖೆಯಾಗಲಿ. ಸತ್ಯ ಹೊರಬರಲಿ. ಮಕ್ಕಳನ್ನು ಮುಂದಿಟ್ಟುಕೊಂಡು ಯಾರೂ ಸುಖಾಸುಮ್ಮನೆ ಪ್ರಕರಣ ದಾಖಲಿಸಲು ಸಾಧ್ಯವಿಲ್ಲ. ಸ್ವಾಮೀಜಿಯವರ ಮಾನ ಹರಣ ಮಾಡಲೆಂದು ಇಲ್ಲಿ ಯಾರೂ ಮುಂದಾಗಿಲ್ಲ. ಇದು ಪೌರ ಪ್ರಜ್ಞೆಗೆ ಬಿಟ್ಟ ವಿಚಾರ” ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿರಿ: ಅತ್ಯಾಚಾರ ಪ್ರಕರಣದಲ್ಲಿ ಸಿಲುಕಿದ ಧರ್ಮಗುರುಗಳು: ಇಲ್ಲಿದೆ ಪ್ರಮುಖರ ಪಟ್ಟಿ

“ಸರ್ವರ ಏಳ್ಗೆಯಾಗಬೇಕು ಎಂಬುದು ಸಂವಿಧಾನದ ಆಶಯ. ಅದಕ್ಕೆ ವಿರುದ್ಧವಾಗಿ ನಡೆಯುತ್ತಿದ್ದರೆ ನಾವೇನೂ ಮಾಡಲು ಆಗಲ್ಲ. ಮಕ್ಕಳು ನಮ್ಮ ಸಂಸ್ಥೆಯ ಮುಂದೆ ಬಂದರು. ಕಾನೂನು ಸುಪರ್ದಿಗೆ ನೀಡುವುದು ನಮ್ಮ ಜವಾಬ್ದಾರಿಯಾಗಿತ್ತು. ನಾವು ಕಾನೂನು ಸುಪರ್ದಿಗೆ ನೀಡಿದ್ದೇವೆ. ಮಕ್ಕಳ ಕಲ್ಯಾಣ ನ್ಯಾಯಾಧೀಶರ ಗಮನಕ್ಕೆ ತಂದಿದ್ದೇವೆ. ನ್ಯಾಯಾಧೀಶರ ಮೂಲಕ ಅದು ಪೊಲೀಸ್ ಠಾಣೆಯ ಮೆಟ್ಟಿಲೇರಿದೆ” ಎಂದರು.

“ಇಂತಹ ಘಟನೆಗಳು ನಡೆದಾಗ ಜೆವಿನಿಲ್ಲೆ ಜಸ್ಟೀಸ್ ಆಕ್ಟ್ ಹಾಗೂ ಪೋಸ್ಕೊ ಕಾಯ್ದೆ ಪ್ರಕಾರ ಸಿಡಬ್ಲ್ಯೂಸಿ ಗಮನಕ್ಕೆ ತರಬೇಕು. ಮೇಲ್ಮೋಟಕ್ಕೆ ಪ್ರಕರಣ ನಡೆದಿರುವುದು ಕಂಡು ಬಂದಿದೆ. ನಮ್ಮ ಆತ್ಮಸಮಾಲೋಚನಾ ವರದಿ ಹಾಗೂ ಸಿಡಬ್ಲ್ಯೂಸಿ ಆತ್ಮಸಮಾಲೋಚನೆಯ ವರದಿ ಹೊಂದಾಣಿಕೆಯಾಗಿದೆ. ಅದರ ಆಧಾರದಲ್ಲಿ ಪ್ರಕರಣ ದಾಖಲಾಗಿದೆ” ಎಂದು ಮಾಹಿತಿ ನೀಡಿದರು.

ಒಡನಾಡಿ ಸಂಸ್ಥೆಯ ಮೇಲೆ ಒತ್ತಡ ಹಾಗೂ ಬೆದರಿಕೆ ಬರುತ್ತಿವೆ ಎಂಬ ವರದಿಯ ಕುರಿತು ಪ್ರತಿಕ್ರಿಯೆ ನೀಡಿದ ಅವರು, “ಯಾವ ಪ್ರಕರಣದಲ್ಲಿ ನಮಗೆ ಬೆದರಿಕೆ ಬಂದಿಲ್ಲ ಹೇಳಿ?” ಎಂದು ಪ್ರಶ್ನಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಮುರುಗಾ ಶರಣರ ವಿರುದ್ಧ ಎಫ್.ಐ.ಆರ್. ದಾಕಲಾಗುತ್ತಿದ್ದಂತೆಯೇ, ಈ ಪ್ರಕರಣದ ಮತ್ತೊಬ್ಬ ಆರೋಪಿ ವಾರ್ಡನ್, ಬಸವರಾಜನ್ ವಿರುದ್ಧ ಅತ್ಯಾಚಾರದ ದೂರು ದಾಕಲಿಸಿರುವುದು, ಕರ್ನಾಟಕ ಸರ್ಕಾರ ಮುರುಗಾ ಶರಣರ ಪರವಾಗಿ ಕಾರ್ಯಾಚರಣೆಗೆ ಇಳಿದಿರುವುದರ ಸ್ಪಷ್ಟ ಸೂಚನೆ. ಹಾಗಾಗಿ ಈ “ಒಡನಾಡಿ” ಹೇಳಿದಂತೆ ನ್ಯಾಯಾಂಗ ತನಿಕೆಯೇ ಸೂಕ್ತ.

  2. ಈ ದೇಶದ ಕಾನೂನು ಹಣವಂತರು ಮತ್ತು ಅಧಿಕಾರ ಹೊಂದಿದವರ ಕೈಗೊಂಬೆ, ಈ ಖಾವಿ ಬಳಿ ಯರಡು ಇದೆ ಮುಂದೇನಾಗುತ್ತದೆ ಊಹಿಸಲಾರದಷ್ಟು ದಡ್ಡರೇ ನಾವು

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...