Homeಕರ್ನಾಟಕಮಕ್ಕಳ ಮೇಲೆ ಮುರುಘಾ ಶರಣರಿಂದ ಅತ್ಯಾಚಾರ ಆರೋಪ: ಪ್ರಕರಣ ಬಯಲಿಗೆಳೆದ ಒಡನಾಡಿ ಸಂಸ್ಥೆ ಹೇಳಿದ್ದೇನು?

ಮಕ್ಕಳ ಮೇಲೆ ಮುರುಘಾ ಶರಣರಿಂದ ಅತ್ಯಾಚಾರ ಆರೋಪ: ಪ್ರಕರಣ ಬಯಲಿಗೆಳೆದ ಒಡನಾಡಿ ಸಂಸ್ಥೆ ಹೇಳಿದ್ದೇನು?

- Advertisement -
- Advertisement -

ಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠದ ಡಾ.ಶಿವರಾತ್ರಿ ಮುರುಘಾ ಶರಣರು ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಪ್ರಕರಣ ದಾಖಲಾಗಿದೆ. ಮಠದ ವಿದ್ಯಾರ್ಥಿನಿಯರು ನೀಡಿದ ದೂರಿನ ಆಧಾರದಲ್ಲಿ ‘ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ’ (ಪೋಕ್ಸೋ) ಅಡಿಯಲ್ಲಿ ಮೈಸೂರಿನಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣ ಬೆಳಕಿಗೆ ಬರುವಲ್ಲಿ ಮೈಸೂರಿನ ಒಡನಾಡಿ ಸಂಸ್ಥೆ ಪ್ರಮುಖ ಪಾತ್ರ ವಹಿಸಿದ್ದು, ಒಡನಾಡಿ ಸಂಸ್ಥೆಯ ಮುಖ್ಯಸ್ಥರಲ್ಲಿ ಒಬ್ಬರಾದ ಪರಶು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

“ಸ್ವಾಮೀಜಿಯವರು ವಿಚಾರವಂತರು, ಪ್ರಜ್ಞಾವಂತರು, ಪ್ರಗತಿಪರರು ಎಂಬ ಭಾವನೆ ಇತ್ತು. ಮಕ್ಕಳ ಹೇಳಿಕೆ ಬಳಿಕ‌ ಸ್ವಾಮೀಜಿಯವರ ಬಗ್ಗೆ ನಮಗೆ ಅಸಹ್ಯ ಹುಟ್ಟಿದೆ” ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಇಬ್ಬರು ಮಕ್ಕಳು ಚಿತ್ರದುರ್ಗದಲ್ಲಿ ಓದುತ್ತಿದ್ದರು. ಆ ಮಕ್ಕಳ ಮೇಲೆ ಸ್ವಾಮೀಜಿಯವರು ನಿರಂತರವಾಗಿ ದೌರ್ಜನ್ಯ ನಡೆಸಿದ್ದಾರೆ. ಅವರ ಕಿರುಕುಳದಿಂದ‌ ಬೇಸತ್ತ ಮಕ್ಕಳು ಬೆಂಗಳೂರಿಗೆ ಬಂದು ಅಲ್ಲಿ ದೂರು ದಾಖಲಿಸಲು ಪ್ರಯತ್ನ ಮಾಡಿದ್ದಾರೆ. ಅಲ್ಲಿ ಸಾಧ್ಯವಾಗದೇ ಇದ್ದಾಗ ಹತಾಶೆಯಿಂದ ಆತ್ಮಹತ್ಯೆ ಮಾಡಿಕೊಳ್ಳಲು‌ ಮುಂದಾಗಿದ್ದರು” ಎಂದು ತಿಳಿಸಿದ್ದಾರೆ.

“ಆಟೋ ಚಾಲಕನೊಬ್ಬ ಸಹಾಯ ಮಾಡಿ ನಮ್ಮ ಬಳಿ ಹೋಗಿ ನ್ಯಾಯ ಸಿಗುತ್ತದೆ ಎಂದು ಕಳುಹಿಸಿಕೊಟ್ಟರು. ಆ ಇಬ್ಬರು ಮಕ್ಕಳನ್ನು ಆಪ್ತ ಸಮಾಲೋಚನೆ ಮಾಡಿದಾಗ ಸ್ವಾಮೀಜಿಯವರ ಕಿರುಕುಳವನ್ನು ಎಳೆಎಳೆಯಾಗಿ ಬಿಚ್ಚಿಟ್ಟರು. ತಕ್ಷಣ ನಾವು ಮಕ್ಕಳು ಹಕ್ಕುಗಳ ರಕ್ಷಣಾ ಕೇಂದ್ರದವರಿಗೆ ವಿಚಾರ ತಲುಪಿಸಿದೆವು. ಅವರೂ ಸಹ ಕೌನ್ಸಲಿಂಗ್‌ ಮಾಡಿ ಮಕ್ಕಳ ಹೇಳಿಕೆಯಲ್ಲಿ ಸತ್ಯಾಂಶವಿದೆ ಎಂದು ಖಚಿತವಾದ ನಂತರ‌ ನಜರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್. ದಾಖಲಾಗಿದೆ. ನಾವು ಅದಾವುದನ್ನು ಲೆಕ್ಕಿಸದೇ ಮಕ್ಕಳಿಗೆ ನ್ಯಾಯ ಒದಗಿಸಲಷ್ಟೇ ಹೆಜ್ಜೆ ಇಟ್ಟಿದ್ದೇವೆ” ಎಂದಿದ್ದಾರೆ.

ಇದನ್ನೂ ಓದಿರಿ: ಮುರುಘಾ ಮಠ: ಮಕ್ಕಳ ಪ್ರಕರಣದಲ್ಲಿ ಆರೋಪಿಯಾದ ಮಹಿಳಾ ವಾರ್ಡನ್‌ ದೂರು; ಮಠದ ಮಾಜಿ ಆಡಳಿತಾಧಿಕಾರಿ ವಿರುದ್ಧ ಅತ್ಯಾಚಾರ ಯತ್ನ ಪ್ರಕರಣ ದಾಖಲು

“ಇದು ಕೇವಲ ಇಬ್ಬರು ಮಕ್ಕಳಿಗೆ ದೌರ್ಜನ್ಯವಾಗಿದೆ ಎಂದು ಹೇಳಲು ಸಾಧ್ಯವಿಲ್ಲ. ಮಕ್ಕಳು ಹೇಳುವ ಪ್ರಕಾರ ಅಲ್ಲಿ 120 ವಿದ್ಯಾರ್ಥಿನಿಯರು ಇದ್ದಾರೆ. ಇನ್ನು ಅದೆಷ್ಟು ಮಕ್ಕಳಿಗೆ ಈ ರೀತಿಯ ದೌರ್ಜನ್ಯವಾಗಿದೆ ಎಂದು ನೋಡಬೇಕಿದೆ. ಸರಿಯಾದ ತನಿಖೆಯಾಗಬೇಕಿದೆ. ಇದಕ್ಕೆ ಸಹಕಾರ ಕೊಟ್ಟವರ ವಿರುದ್ದವು ಪ್ರಕರಣ ದಾಖಲು ಮಾಡಲಾಗಿದೆ” ಎಂದು ವಿವರಿಸಿದ್ದಾರೆ.

“ಸ್ವಾಮೀಜಿಯವರಿಗೆ ರಾಜ್ಯ, ರಾಷ್ಟ್ರಮಟ್ಟದಲ್ಲಿ ಅತ್ಯಂತ ಪ್ರಭಾವಿಗಳು ಪರಿಚಯವಿದ್ದಾರೆ. ಮಕ್ಕಳು ಅಷ್ಟು ದೂರದಿಂದ ಇಲ್ಲಿಗೆ ಬಂದಿರೋದೇ ನ್ಯಾಯ ಸಿಗುತ್ತೆ ಎಂಬ ಭರವಸೆಯಿಂದ. ಹಾಗಾಗಿ‌ ಮಕ್ಕಳಿಗೆ ನ್ಯಾಯ ಸಿಗಬೇಕಾದರೆ ನ್ಯಾಯಾಂಗ ತನಿಖೆಯೇ ಆಗಬೇಕು” ಎಂದು ಹೇಳಿದ್ದಾರೆ.

ಮುರುಘ ಶರಣರ ವಿರುದ್ಧ ಮೈಸೂರಿನಲ್ಲಿ ದಾಖಲಾದ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯಾಗಿರುವ ಮಹಿಳಾ ವಾರ್ಡನ್ ನೀಡಿರುವ ದೂರಿನ ಅನ್ವಯ ಚಿತ್ರದುರ್ಗದ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಮಾಜಿ ಶಾಸಕ ಬಸವರಾಜನ್ ವಿರುದ್ಧ ಪ್ರಕರಣ ದಾಖಲಾಗಿದೆ. ತನ್ನನ್ನು ಅತ್ಯಾಚಾರ ಮಾಡಲು ಬಸವರಾಜನ್ ಯತ್ನಿಸಿದ್ದಾರೆಂದು ವಾರ್ಡನ್ ಆರೋಪಿಸಿದ್ದಾರೆ. ಮಠದ ಆಡಳಿತಾಧಿಕಾರಿ ಆಗಿದ್ದ ಅವರು ಮಕ್ಕಳನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದೂ ವಾರ್ಡನ್‌ ದೂರಿನಲ್ಲಿ ಆರೋಪಿಸಿದ್ದಾರೆ. ಈ ಕುರಿತು ಒಡನಾಡಿಯ ಪರಶು ಅವರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದರು.

“ಬಸವರಾಜನ್‌ ಮೇಲೆ ಪ್ರಕರಣ ದಾಖಲಿಸಿದ್ದರೆ, ಆ ವಿಚಾರವಾಗಿಯೂ ತನಿಖೆಯಾಗಲಿ. ಸತ್ಯ ಹೊರಬರಲಿ. ಮಕ್ಕಳನ್ನು ಮುಂದಿಟ್ಟುಕೊಂಡು ಯಾರೂ ಸುಖಾಸುಮ್ಮನೆ ಪ್ರಕರಣ ದಾಖಲಿಸಲು ಸಾಧ್ಯವಿಲ್ಲ. ಸ್ವಾಮೀಜಿಯವರ ಮಾನ ಹರಣ ಮಾಡಲೆಂದು ಇಲ್ಲಿ ಯಾರೂ ಮುಂದಾಗಿಲ್ಲ. ಇದು ಪೌರ ಪ್ರಜ್ಞೆಗೆ ಬಿಟ್ಟ ವಿಚಾರ” ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿರಿ: ಅತ್ಯಾಚಾರ ಪ್ರಕರಣದಲ್ಲಿ ಸಿಲುಕಿದ ಧರ್ಮಗುರುಗಳು: ಇಲ್ಲಿದೆ ಪ್ರಮುಖರ ಪಟ್ಟಿ

“ಸರ್ವರ ಏಳ್ಗೆಯಾಗಬೇಕು ಎಂಬುದು ಸಂವಿಧಾನದ ಆಶಯ. ಅದಕ್ಕೆ ವಿರುದ್ಧವಾಗಿ ನಡೆಯುತ್ತಿದ್ದರೆ ನಾವೇನೂ ಮಾಡಲು ಆಗಲ್ಲ. ಮಕ್ಕಳು ನಮ್ಮ ಸಂಸ್ಥೆಯ ಮುಂದೆ ಬಂದರು. ಕಾನೂನು ಸುಪರ್ದಿಗೆ ನೀಡುವುದು ನಮ್ಮ ಜವಾಬ್ದಾರಿಯಾಗಿತ್ತು. ನಾವು ಕಾನೂನು ಸುಪರ್ದಿಗೆ ನೀಡಿದ್ದೇವೆ. ಮಕ್ಕಳ ಕಲ್ಯಾಣ ನ್ಯಾಯಾಧೀಶರ ಗಮನಕ್ಕೆ ತಂದಿದ್ದೇವೆ. ನ್ಯಾಯಾಧೀಶರ ಮೂಲಕ ಅದು ಪೊಲೀಸ್ ಠಾಣೆಯ ಮೆಟ್ಟಿಲೇರಿದೆ” ಎಂದರು.

“ಇಂತಹ ಘಟನೆಗಳು ನಡೆದಾಗ ಜೆವಿನಿಲ್ಲೆ ಜಸ್ಟೀಸ್ ಆಕ್ಟ್ ಹಾಗೂ ಪೋಸ್ಕೊ ಕಾಯ್ದೆ ಪ್ರಕಾರ ಸಿಡಬ್ಲ್ಯೂಸಿ ಗಮನಕ್ಕೆ ತರಬೇಕು. ಮೇಲ್ಮೋಟಕ್ಕೆ ಪ್ರಕರಣ ನಡೆದಿರುವುದು ಕಂಡು ಬಂದಿದೆ. ನಮ್ಮ ಆತ್ಮಸಮಾಲೋಚನಾ ವರದಿ ಹಾಗೂ ಸಿಡಬ್ಲ್ಯೂಸಿ ಆತ್ಮಸಮಾಲೋಚನೆಯ ವರದಿ ಹೊಂದಾಣಿಕೆಯಾಗಿದೆ. ಅದರ ಆಧಾರದಲ್ಲಿ ಪ್ರಕರಣ ದಾಖಲಾಗಿದೆ” ಎಂದು ಮಾಹಿತಿ ನೀಡಿದರು.

ಒಡನಾಡಿ ಸಂಸ್ಥೆಯ ಮೇಲೆ ಒತ್ತಡ ಹಾಗೂ ಬೆದರಿಕೆ ಬರುತ್ತಿವೆ ಎಂಬ ವರದಿಯ ಕುರಿತು ಪ್ರತಿಕ್ರಿಯೆ ನೀಡಿದ ಅವರು, “ಯಾವ ಪ್ರಕರಣದಲ್ಲಿ ನಮಗೆ ಬೆದರಿಕೆ ಬಂದಿಲ್ಲ ಹೇಳಿ?” ಎಂದು ಪ್ರಶ್ನಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಮುರುಗಾ ಶರಣರ ವಿರುದ್ಧ ಎಫ್.ಐ.ಆರ್. ದಾಕಲಾಗುತ್ತಿದ್ದಂತೆಯೇ, ಈ ಪ್ರಕರಣದ ಮತ್ತೊಬ್ಬ ಆರೋಪಿ ವಾರ್ಡನ್, ಬಸವರಾಜನ್ ವಿರುದ್ಧ ಅತ್ಯಾಚಾರದ ದೂರು ದಾಕಲಿಸಿರುವುದು, ಕರ್ನಾಟಕ ಸರ್ಕಾರ ಮುರುಗಾ ಶರಣರ ಪರವಾಗಿ ಕಾರ್ಯಾಚರಣೆಗೆ ಇಳಿದಿರುವುದರ ಸ್ಪಷ್ಟ ಸೂಚನೆ. ಹಾಗಾಗಿ ಈ “ಒಡನಾಡಿ” ಹೇಳಿದಂತೆ ನ್ಯಾಯಾಂಗ ತನಿಕೆಯೇ ಸೂಕ್ತ.

  2. ಈ ದೇಶದ ಕಾನೂನು ಹಣವಂತರು ಮತ್ತು ಅಧಿಕಾರ ಹೊಂದಿದವರ ಕೈಗೊಂಬೆ, ಈ ಖಾವಿ ಬಳಿ ಯರಡು ಇದೆ ಮುಂದೇನಾಗುತ್ತದೆ ಊಹಿಸಲಾರದಷ್ಟು ದಡ್ಡರೇ ನಾವು

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...