Homeಮುಖಪುಟಇಂದು ನೋಯ್ಡಾದಲ್ಲಿ ನೆಲಕ್ಕುರುಳಲಿವೆ 103 ಮೀ. ಎತ್ತರದ ಕಟ್ಟಡಗಳು: ಏನೆಲ್ಲ ಸಿದ್ಧತೆ ನಡೆದಿದೆ?

ಇಂದು ನೋಯ್ಡಾದಲ್ಲಿ ನೆಲಕ್ಕುರುಳಲಿವೆ 103 ಮೀ. ಎತ್ತರದ ಕಟ್ಟಡಗಳು: ಏನೆಲ್ಲ ಸಿದ್ಧತೆ ನಡೆದಿದೆ?

- Advertisement -
- Advertisement -

ಇಂದು ಮಧ್ಯಾಹ್ನ 2.30ಕ್ಕೆ ನೋಯ್ಡಾದಲ್ಲಿ ಬೃಹತ್‌ ಕಟ್ಟಡಗಳನ್ನು ನೆಲಸಮ ಮಾಡಲಾಗುತ್ತಿದೆ. ಸೆಕ್ಟರ್ 93Aನಲ್ಲಿರುವ ಎರಡು ಬೃಹತ್ ಕಟ್ಟಡಗಳು ನಿಯಮಗಳಿಗೆ ವಿರುದ್ಧವಾಗಿ ನಿರ್ಮಿಸಲಾಗಿದೆ ಎಂಬ ಕಾರಣಕ್ಕೆ ನೆಲಸಮ ಮಾಡಲಾಗುತ್ತಿದೆ.

ಈ ಕಟ್ಟಡದ ವಿಶೇಷವೇನು? ನೆಲಸಮಕ್ಕೆ ಏನೆಲ್ಲ ಸಿದ್ಧತೆ ನಡೆದಿದೆ

40 ಮಹಡಿ: ಪ್ರತಿ ಕಟ್ಟಡದಲ್ಲಿ ನಲವತ್ತು ಮಹಡಿಗಳನ್ನು ನಿರ್ಮಿಸಲು ಯೋಜಿಸಲಾಗಿತ್ತು. ನ್ಯಾಯಾಲಯವು ಕಟ್ಟಡ ನಿರ್ಮಾಣವನ್ನು ಸ್ಥಗಿತಗೊಳಿಸಿದ್ದರಿಂದ ಕೆಲವು ಮಹಡಿ ನಿರ್ಮಿಸಲು ಸಾಧ್ಯವಾಗಿಲ್ಲ. ಈ ಟವರ್‌ಗಳಲ್ಲಿ ಈಗ 32 ಮಹಡಿಗಳಿವೆ. 900+ ಫ್ಲಾಟ್‌ಗಳನ್ನು ನಿರ್ಮಿಸಲು ಯೋಜಿಸಲಾಗಿತ್ತು. ಅದರಲ್ಲಿ ಮೂರನೇ ಎರಡರಷ್ಟು ಬುಕ್ ಆಗಿವೆ ಅಥವಾ ಮಾರಾಟ ಮಾಡಲಾಗಿದೆ. ಬಡ್ಡಿ ಸಮೇತ ಮರುಪಾವತಿ ಮಾಡುವಂತೆ ಸುಪ್ರೀಂಕೋರ್ಟ್ ಆದೇಶಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

103 ಮೀಟರ್‌ಗಳು: ಈ ಕಟ್ಟಡಗಳು 103 ಮೀಟರ್‌ ಎತ್ತರವಿವೆ. ಮೂರು ವರ್ಷಗಳ ಹಿಂದೆ ಜೋಹಾನ್ಸ್‌ಬರ್ಗ್‌ನಲ್ಲಿ ಬ್ಯಾಂಕ್ ಕಟ್ಟಡವನ್ನು ಕೆಡವಲಾಗಿತ್ತು. ಅದು 108 ಮೀಟರ್ ಇತ್ತು. ಕೇರಳದಲ್ಲಿ ಕೆಳಗುರುಳಿಸಲಾದ 68 ಮೀಟರ್‌ ಎತ್ತರದ ಕಟ್ಟಡವು ಭಾರತದ ಮಟ್ಟಿಗೆ ನೆಲಸಮವಾದ ಎತ್ತರದ ಕಟ್ಟಡವಾಗಿತ್ತು. 2020ರಲ್ಲಿ ಕೇರಳದಲ್ಲಿ ಕೆಡವಲಾಗಿತ್ತು. ಅದೇ ವರ್ಷ ಅಬುಧಾಬಿಯಲ್ಲಿ 168 ಮೀಟರ್ ಎತ್ತರದ ಕಟ್ಟಡವನ್ನು ನೆಲಸಮಗೊಳಿಸಿದ್ದು ವಿಶ್ವದಾಖಲೆಗೆ ಸೇರಿತ್ತು.

8 ಮೀಟರ್: ಈಗ ನೆಲಸಮಗೊಳಿಸಲಾಗುವ ಎರಡು ಕಟ್ಟಡಗಳ ಪಕ್ಕದಲ್ಲಿ ಕೆಲವು ಅಪಾರ್ಟ್‌ಮೆಂಟ್‌ಗಳು ಸುಮಾರು ಎಂಟು ಮೀಟರ್‌ ಅಂತರದಲ್ಲಿವೆ. 9-12 ಮೀಟರ್‌ಗಳ ಒಳಗೆ ಹಲವಾರು ಅಪಾರ್ಟ್‌ಮೆಂಟ್‌ಗಳಿವೆ. ಧೂಳು ನುಗ್ಗುವುದನ್ನು ಕಡಿಮೆ ಮಾಡಲು ಅಕ್ಕಪಕ್ಕದ ಕಟ್ಟಡಗಳನ್ನು ವಿಶೇಷ ಬಟ್ಟೆಯಿಂದ ಮುಚ್ಚಲಾಗುತ್ತದೆ.

7,000 ಸ್ಟೋಟಕಗಳು: ಪಿಲ್ಲರ್‌ಗಳ ಸುಮಾರು 7,000 ರಂಧ್ರಗಳಲ್ಲಿ ಸ್ಫೋಟಕಗಳನ್ನು ಅಳವಡಿಸಲಾಗಿದೆ. ಈ ರಂಧ್ರಗಳು ತಲಾ ಎರಡು ಮೀಟರ್ ಅಂತರದಲ್ಲಿವೆ. ಸ್ಪೋಟಿಸಿದಾಗ ಗೋಪುರಗಳು ನೇರವಾಗಿ ಕೆಳಗೆ ಬೇಳುವಂತೆ ಯೋಜನೆ ರೂಪಿಸಲಾಗಿದೆ. ಇದನ್ನು ‘ಜಲಪಾತ ತಂತ್ರ’ ಎಂದು ಕರೆಯಲಾಗಿದೆ.

9 ಸೆಕೆಂಡುಗಳು: 9 ಸೆಕೆಂಡ್‌ಗಳಲ್ಲಿ ಕಟ್ಟಡ ನೆಲಕ್ಕುರಲಿದೆ ಎಂದು ಪ್ರಾಜೆಕ್ಟ್ ಎಂಜಿನಿಯರ್ ಹೇಳುತ್ತಾರೆ. ಎಂಜಿನಿಯರ್‌‌, ಬ್ಲಾಸ್ಟರ್‌ನ ಪಕ್ಕದಲ್ಲಿ ಇರುತ್ತಾರೆ. ನೋಯ್ಡಾ ಆಡಳಿತ ವರ್ಗ, ಜೊತೆಗೆ ಆಫ್ರಿಕಾದ ಮೂವರು ತಜ್ಞರು ಮತ್ತು ಇತರ ಕೆಲವು ಸರ್ಕಾರಿ ಅಧಿಕಾರಿಗಳು (ಒಟ್ಟಾರೆಯಾಗಿ 10 ಜನರಿಗಿಂತ ಹೆಚ್ಚಿಲ್ಲ) ಕನಿಷ್ಠ 100 ಮೀಟರ್ ದೂರದಲ್ಲಿ ನಿಲ್ಲುತ್ತಾರೆ. ಅರ್ಧಗಂಟೆ ಕಾಲ ಗ್ರೇಟರ್ ನೋಯ್ಡಾ ಎಕ್ಸ್‌ಪ್ರೆಸ್‌ವೇ ಸಂಚಾರವನ್ನು ಈ ಭಾಗದಲ್ಲಿ ಸ್ಥಗಿತಗೊಳಿಸಲಾಗುತ್ತಿದೆ.

12 ನಿಮಿಷಗಳು:  ಕಟ್ಟಡ ಉರುಳಿಸಿದ ಬಳಿಕ ಧೂಳು ಕಡಿಮೆಯಾಗಲು ಸುಮಾರು 12 ನಿಮಿಷಗಳ ಕಾಲ ಬೇಕಾಗುತ್ತದೆ ಎಂದು ಅಂದಾಜಿಸಲಾಗಿದೆ. ಗಾಳಿಯ ಏರಿಳಿತದ ಮೇಲೆ ಧೂಳಿನ ಉದುಗುವಿಕೆ ನಿರ್ಧಾರವಾಗುವ ಸಾಧ್ಯತೆಯೂ ಇದೆ.

ಪ್ರತಿ ಸೆಕೆಂಡಿಗೆ 30 ಮಿಮೀ: ಸ್ಫೋಟದ ನಂತರ ಕಂಪನಗಳು 30 ಮೀಟರ್‌ಗಳವರೆಗೆ ಸಂಭವಿಸಬಹುದು. ಆದರೆ ಕೆಲವೇ ಸೆಕೆಂಡ್‌ ಇರಬಹುದು. ಸರಳವಾಗಿ ಹೇಳುವುದಾದರೆ, ಇದು ರಿಕ್ಟರ್ ಮಾಪಕದಲ್ಲಿ 0.4ರ ಭೂಕಂಪಕ್ಕೆ ಸಮಾನವಾಗಿದೆ.

7,000: ಸುಮಾರು 150 ಸಾಕುಪ್ರಾಣಿಗಳು ಮತ್ತು 2,500 ವಾಹನಗಳೊಂದಿಗೆ ಪಕ್ಕದ ಪ್ರದೇಶಗಳ 7000 ನಿವಾಸಿಗಳು ಡೆಮಾಲಿಷನ್ ದಿನದಂದು ಬೆಳಿಗ್ಗೆ 7 ಗಂಟೆಗೆ ಹೊರಹೋಗಬೇಕು ಎಂದು ಸೂಚನೆ ನೀಡಲಾಗಿದೆ. ಗ್ಯಾಸ್‌ ಮತ್ತು ವಿದ್ಯುತ್ ಪೂರೈಕೆಯನ್ನು ಸಂಜೆ 4 ಗಂಟೆಯವರೆಗೆ ಸ್ಥಗಿತಗೊಳಿಸಲಾಗಿದೆ. ಇಲ್ಲಿನ ನಿವಾಸಿಗಳಿಗೆ 5.30ರ ಬಳಿಕ ಹಿಂತಿರುಗಲು ಅನುಮತಿ ನೀಡಲಾಗಿದೆ.

ಇದನ್ನೂ ಓದಿರಿ: ಪ್ಲೇಸ್ಟೋರ್‌ನಿಂದ 2 ಸಾವಿರ ಸಾಲ ನೀಡುವ ಅಪ್ಲಿಕೇಶನ್‌ಗಳನ್ನು ತೆಗೆದುಹಾಕಿದ ಗೂಗಲ್‌!

9 ವರ್ಷಗಳು: ಸೂಪರ್‌ಟೆಕ್ ಎಮರಾಲ್ಡ್ ಕೋರ್ಟ್ ಸೊಸೈಟಿಯ ನಿವಾಸಿಗಳು, ಈ ಕಟ್ಟಡಗಳ ನಿರ್ಮಾಣದ ವಿರುದ್ಧ 2012ರಲ್ಲಿ ನ್ಯಾಯಾಲಯಕ್ಕೆ ಮೊರೆಹೋದರು. ಆಗಸ್ಟ್ 2021ರಲ್ಲಿ ಅಂತಿಮ ತೀರ್ಪು ಬಂದಿತು. ಅಲಹಾಬಾದ್ ಹೈಕೋರ್ಟ್ 2014ರಲ್ಲಿ ಕಟ್ಟಡ ಕೆಡವಲು ಆದೇಶ ನೀಡಿತ್ತು. ಪ್ರಕರಣವು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು. ಕಳೆದ ಆಗಸ್ಟ್‌ನಲ್ಲಿ ಕಟ್ಟಡಗಳನ್ನು ಕೆಡವಲು ನ್ಯಾಯಾಲಯ ಮೂರು ತಿಂಗಳ ಕಾಲಾವಕಾಶ ನೀಡಿತ್ತು. ಆದರೆ ತಾಂತ್ರಿಕ ತೊಂದರೆಗಳಿಂದಾಗಿ ಒಂದು ವರ್ಷ ತೆಗೆದುಕೊಂಡಿತು.

100 ಕೋಟಿ ರೂ.: ಇಡೀ ನೆಲಸಮಕ್ಕೆ ನೂರು ಕೋಟಿ ರೂ. ವಿಮೆ ಮಾಡಲಾಗಿದೆ. ಪಕ್ಕದ ಕಟ್ಟಡಗಳಿಗೆ ಹಾನಿಯಾದರೆ ವೆಚ್ಚವನ್ನು ಭರಿಸಬೇಕು, ಒಂದು ವೇಳೆ ವಸ್ತುಗಳು ಪಕ್ಕಕ್ಕೆ ಸಿಡಿದರೆ ನಷ್ಟವನ್ನು ತುಂಬಿಕೊಡಬೇಕು. ನೆಲಸಮ ಯೋಜನೆಗೆ ₹ 20 ಕೋಟಿಗಿಂತ ಹೆಚ್ಚು ವೆಚ್ಚವಾಗಬಹುದು. ಆದರೆ ಕಟ್ಟಡವನ್ನು ಕೆಡವುತ್ತಿರುವುದರಿಂದ ಸುಮಾರು 50 ರೂ. ನಷ್ಟವಾಗಬಹುದು ಎಂದು ಅಂದಾಜಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...