Homeಕರ್ನಾಟಕಮುರುಘಾ ಶರಣರ ಮೇಲಿನ ಪೋಕ್ಸೋ ಪ್ರಕರಣ ಚಿತ್ರದುರ್ಗಕ್ಕೆ ವರ್ಗಾವಣೆ

ಮುರುಘಾ ಶರಣರ ಮೇಲಿನ ಪೋಕ್ಸೋ ಪ್ರಕರಣ ಚಿತ್ರದುರ್ಗಕ್ಕೆ ವರ್ಗಾವಣೆ

- Advertisement -
- Advertisement -

ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಗಂಭೀರ ಆರೋಪದಡಿಯಲ್ಲಿ ಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠದ ಡಾ. ಶಿವರಾತ್ರಿ ಮುರುಘಾ ಶರಣರ ವಿರುದ್ಧ ಮೈಸೂರಿನಲ್ಲಿ ದಾಖಲಾಗಿರುವ ಪ್ರಕರಣವನ್ನು ಚಿತ್ರದುರ್ಗಕ್ಕೆ ವರ್ಗಾವಣೆ ಮಾಡಲಾಗಿದೆ.

ಮಠದ ವಿದ್ಯಾರ್ಥಿನಿಯರು ನೀಡಿದ ದೂರಿನ ಆಧಾರದಲ್ಲಿ ‘ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ’ (ಪೋಕ್ಸೋ) ಅಡಿಯಲ್ಲಿ ಮೈಸೂರಿನ ನಜರಬಾದ್‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಡಾ.ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ, ವಾರ್ಡನ್ ರಶ್ಮಿ ವಿರುದ್ಧ ಅಪ್ರಾಪ್ತೆಯರನ್ನು ಸ್ವಾಮೀಜಿ ಬಳಿ ಕಳುಹಿಸುತ್ತಿದ್ದ ಆರೋಪ ಹಾಗೂ ಬಸವಾದಿತ್ಯ, ಪರಮಶಿವಯ್ಯ, ಗಂಗಾಧರಯ್ಯ ವಿರುದ್ಧ ಲೈಂಗಿಕ ದೌರ್ಜನ್ಯಕ್ಕೆ ಸಹಾಯ ಮಾಡಿದ ಆರೋಪ ಬಂದಿದೆ. ಈ ಐವರ ವಿರುದ್ಧ  ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪ್ರಕರಣವನ್ನು ಚಿತ್ರದುರ್ಗದ ಕೋಟೆ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಚಿತ್ರದುರ್ಗ ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ ಎಂದು ‘ಆಂದೋಲನ’ ವರದಿ ಮಾಡಿದೆ.

ಚಿತ್ರದುರ್ಗದ ಬೃಹನ್ಮಠದ ಆಡಳಿತದಲ್ಲಿರುವ ವಿದ್ಯಾರ್ಥಿನಿಲಯದ ಹಲವು ವಿದ್ಯಾರ್ಥಿನಿಯರಿಗೆ ಸ್ವಾಮೀಜಿ ಅವರು ಹಲವು ದಿನಗಳಿಂದಲೂ ಲೈಂಗಿಕವಾಗಿ ಕಿರುಕುಳ ನೀಡುತ್ತಿದ್ದಾರೆ. ಅಲ್ಲಿ ನ್ಯಾಯ ದೊರಕುವುದಿಲ್ಲ ಎಂಬ ಆತಂಕದಲ್ಲಿ ತೊಂದರೆಗೊಳಗಾದ ವಿದ್ಯಾರ್ಥಿನಿಯರು ಮೈಸೂರಿನಲ್ಲಿರುವ ಒಡನಾಡಿ ಸಂಸ್ಥೆಯನ್ನು ಸಂಪರ್ಕಿಸಿದ್ದರು.

ದೌರ್ಜನ್ಯಕ್ಕೊಳಗಾದ ಹೆಣ್ಣುಮಕ್ಕಳ ಪೋಷಣೆಯಲ್ಲಿ ಪ್ರಮುಖಪಾತ್ರ ವಹಿಸುತ್ತಿರುವ ಒಡನಾಡಿ ಸಂಸ್ಥೆಯು ನೀಡಿದ ದೂರು ಆಧರಿಸಿ ಮೈಸೂರು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಶುಕ್ರವಾರ ವಿಚಾರಣೆ ನಡೆಸಿತ್ತು.

ತೊಂದರೆಗೊಳಗಾದ ವಿದ್ಯಾರ್ಥಿನಿಯರ ಹೇಳಿಕೆಯಲ್ಲಿ ಸತ್ಯಾಂಶವಿದೆ ಎಂಬುದನ್ನು ಖಚಿತಪಡಿಸಿಕೊಂಡ ನಂತರ ಮುರುಘಾ ಶರಣರ ವಿರುದ್ಧ ಪೋಕ್ಸೋ ಕಾಯಿದೆ ಅಡಿ ಮೊಕದ್ದಮೆ ದಾಖಲಿಸಬೇಕು ಎಂದು ಸಮಿತಿಯು ಆದೇಶ ಹೊರಡಿಸಿತ್ತು.

ಆರಂಭದಲ್ಲಿ ಪ್ರಕಣವನ್ನು ದಾಖಲಿಸಲು ನಜರಾಬಾದ್ ಠಾಣೆ ಪೊಲೀಸರು ಹಿಂದೇಟು ಹಾಕಿದ್ದರು. ಆನಂತರ ಜಿಲ್ಲಾಧಿಕಾರಿಯವರ ಗಮನಕ್ಕೆ ತಂದ ಬಳಿಕ ಪ್ರಕರಣ ದಾಖಲಿಸಲಾಗಿತ್ತು. ಸಮಿತಿ ಆದೇಶದ ಅನ್ವಯ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅರುಂಧತಿ ಅವರು ನೀಡಿದ ದೂರು ಆಧರಿಸಿ ನಜರ್‌ಬಾದ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು.

ಇದನ್ನೂ ಓದಿರಿ: ಮಕ್ಕಳ ಮೇಲೆ ಮುರುಘಾ ಶರಣರಿಂದ ಅತ್ಯಾಚಾರ ಆರೋಪ: ಪ್ರಕರಣ ಬಯಲಿಗೆಳೆದ ಒಡನಾಡಿ ಸಂಸ್ಥೆ ಹೇಳಿದ್ದೇನು?

“ಚಿತ್ರದುರ್ಗದ ಮುರುಘಾಮಠದ ವಿದ್ಯಾರ್ಥಿನಿಲಯದಲ್ಲಿರುವ ನಮ್ಮನ್ನು ಸ್ವಾಮೀಜಿ ಲೈಂಗಿಕವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಸ್ವಾಮೀಜಿ ಅವರಿಗೆ ಹಣ್ಣು ತೆಗೆದುಕೊಂಡು ಹೋಗಿ ಎಂದು ಮಹಿಳಾ ವಾರ್ಡನ್ ಅವರೇ ನಮ್ಮನ್ನು ಕಳುಹಿಸುತ್ತಿದ್ದರು. ಸ್ವಾಮೀಜಿ ಇದ್ದ ಸ್ಥಳಕ್ಕೆ ತೆರಳಿದರೆ ಅಲ್ಲಿ ನಮಗೆ ಮತ್ತು ಬರುವಂತೆ ಮಾಡಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದರು” ಎಂದು ಎಸ್‌ಎಸ್‌ಎಲ್‌ಸಿ ಓದುತ್ತಿರುವ ವಿದ್ಯಾರ್ಥಿನಿಯರು ದೂರು ನೀಡಿದ್ದರು.

“ಇದೇ ರೀತಿಯ ಅನುಭವ ಹಲವು ವಿದ್ಯಾರ್ಥಿನಿಯರಿಗೆ ಆಗಿದ್ದರೂ ದೂರು ನೀಡಲು ಹೆದರುತ್ತಿದ್ದರು. ನಮಗೆ ಚಿತ್ರದುರ್ಗದಲ್ಲಿ ನ್ಯಾಯ ಸಿಗಲಿಲ್ಲ ಎನ್ನುವ ಕಾರಣಕ್ಕೆ ಮೈಸೂರಿನ ಒಡನಾಡಿ ಸಂಸ್ಥೆಯನ್ನು ಸಂಪರ್ಕಿಸಿದೆವು” ಎಂದು ವಿದ್ಯಾರ್ಥಿನಿಯರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ದೂರು ದಾಕಲಾಗಿ ಒಂದು ದಿನ ಕಳೆದಿದ್ದರೂ ಯಾರನ್ನೂ ಬಂದಿಸಿಲ್ಲ. ಇದು ತನಿಖೆಯ ದಿಕ್ಕನ್ನು ಸೂಚಿಸುತ್ತದೆ. ನ್ಯಾಯಾಂಗ ತನಿಕೆ ನಡೆದರೆ ಮಾತ್ರ ನ್ಯಾಯ ದೊರಕಬಹುದು.

  2. ಪೋಕ್ಸೋ ಕಾಯ್ದೆಯಡಿ ಶಿಕ್ಷೆ ಆಯಿತ್ತೆ
    ಇಲ್ಲಾ
    ಎಮ್ಮೆ ಮೇಲೆ ಮಳೆ ಬಿದ್ದಾಂಗೆ ಹೋಗುತ್ತಾ ಇದ್ದೆ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...