Homeಮುಖಪುಟಸಾವರ್ಕರ್ ಕುರಿತ ಉತ್ಪ್ರೇಕ್ಷಿತ ಕನ್ನಡ ಪಠ್ಯಕ್ಕೆ ತೀವ್ರ ವಿರೋಧ: ಸಾಮಾಜಿಕ ಜಾಲತಾಣದಲ್ಲಿ ವ್ಯಂಗ್ಯ

ಸಾವರ್ಕರ್ ಕುರಿತ ಉತ್ಪ್ರೇಕ್ಷಿತ ಕನ್ನಡ ಪಠ್ಯಕ್ಕೆ ತೀವ್ರ ವಿರೋಧ: ಸಾಮಾಜಿಕ ಜಾಲತಾಣದಲ್ಲಿ ವ್ಯಂಗ್ಯ

- Advertisement -
- Advertisement -

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಿಂದೂ ಮಹಾಸಭಾ ನಾಯಕ ಸಾವರ್ಕರ್ ಕುರಿತು ತೀವ್ರ ರೀತಿಯ ಪ್ರಚಾರಕ್ಕೆ ಮುಂದಾಗಿದ್ದು ಅದಕ್ಕೆ ಸಾಕಷ್ಟು ವಿರೋಧ ಸಹ ದಾಖಲಾಗಿದೆ. ಇದೇ ಸಂದರ್ಭದಲ್ಲಿ ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯ ಸಮಿತಿ ಪರಿಷ್ಕರಿಸಿದ್ದ 8ನೇ ತರಗತಿ ಕನ್ನಡ ದ್ವಿತೀಯ ಭಾಷ ಪಠ್ಯದಲ್ಲಿ ಸಾವರ್ಕರ್ ಕುರಿತು ಉತ್ಪ್ರೇಕ್ಷಿತ ಪಠ್ಯ ಸೇರಿಸಿರುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ. ಅಲ್ಲದೆ ಬುಲ್‌ಬುಲ್ ಹಕ್ಕಿಯ ಮೇಲೆ ಕುಳಿತು ಭಾರತಕ್ಕೆ ಬಂದಿದ್ದರು ಎಂಬುದರ ಕುರಿತು ಸಾಮಾಜಿಕ ಜಾಲತಾಣಗಳು ಮೀಮ್‌ಗಳು ಹರಿದಾಡುತ್ತಿವೆ.

8ನೇ ತರಗತಿಯ ‘ತಿಳಿ ಕನ್ನಡ’ ಪಠ್ಯಪುಸ್ತಕದಲ್ಲಿ ಲೇಖಕ ಕೆ ಟಿ ಗಟ್ಟಿಯವರು ಬರೆದಿರುವ ವಿ ಡಿ ಸಾವರ್ಕರ್ ಕುರಿತ ‘ಕಾಲವನ್ನು ಗೆದ್ದವರು’ ಎನ್ನುವ ಪ್ರವಾಸ ಕಥನವು ಇದೀಗ ವಿವಾದದ ವಸ್ತುವಾಗಿದೆ. ಅದರಲ್ಲಿ ಲೇಖಕರು ಸಾವರ್ಕರ್‌ರನ್ನು ಇರಿಸಲಾಗಿದ್ದ ಅಂಡಮಾನ್ ಜೈಲಿಗೆ ಭೇಟಿ ನೀಡಿದ ಬಗ್ಗೆ ಬರೆದಿರುವುದು ಹೀಗೆ.. “ಕೋಣೆಯೊಳಗಿನ ಹಿಂಬದಿ ಗೋಡೆಯ ಎತ್ತರದಲ್ಲಿ ಆಕಾಶ ಕೂಡ ಕಾಣಿಸದ ಕಿಂಡಿ. ಸಾವರ್ಕರ್ ಕೋಣೆಯಲ್ಲಿ ಆ ಕಿಂಡಿ ಕೂಡ ಇಲ್ಲ. ಆದರೂ ಎಲ್ಲಿಂದಲೋ ಬುಲ್‌ಬುಲ್ ಹಕ್ಕಿಗಳು ಹಾರಿ ಸೆಲ್‌ನೊಳಗೆ ಬರುತ್ತಿದ್ದವು. ಅವುಗಳ ರೆಕ್ಕೆಯ ಮೇಲೆ ಕುಳಿತು ಸಾವರ್ಕರ್ ಪ್ರತಿದಿನ ತಾಯ್ನಾಡಿನ ನೆಲವನ್ನು ಸಂದರ್ಶಿಸಿ ಬರುತ್ತಿದ್ದರು”. ಇಷ್ಟೊಂದು ಉತ್ಪ್ರೇಕ್ಷಿತ ಪಠ್ಯವನ್ನು ಮಕ್ಕಳು ಕಲಿಯಬೇಕೆ ಎಂದು ಹಲವರು ಪ್ರಶ್ನಿಸಿದ್ದಾರೆ.

ಇದು ಸುಳ್ಳಲ್ಲವೆ? ನಿಜವೇ ಆದ್ರೆ ಹೇಗೆ ತಿಳಿಸಿ. ನಿಮ್ಮ ಪ್ರಕಾರ ಸಾವರ್ಕರ್ ಅಂಡಮಾನ್ ಜೈಲಿನಲ್ಲಿ ಗಾಳಿ ಬೆಳಕು ಎಲ್ಲಾ ಚೆನ್ನಾಗಿ ಬರುತ್ತಿದ್ದ ಕೋಣೆ ಇದು, ಆದರೆ ಗಾಳಿ ಬೆಳಕು ಬರಲು ಒಂದೂ ಕಿಂಡಿ ಕೂಡ ಇರದ ಕೋಣೆಲಿ ಸಾವರ್ಕರ್ ಇದ್ರು ಅಂತ ಸುಳ್ಳು ಬರೆದು 8ನೇ ತರಗತಿ ಪುಸ್ತಕದಲ್ಲಿ ಹಾಕಿರೋದ್ಯಾಕೆ? ಬುಲ್ ಬುಲ್ ಪಕ್ಷಿ ಮೇಲೆ ಕೂತು ಹಾರಲು ಸಾಧ್ಯವೇ? ಎಂದು ಕನ್ನಡ ಹೋರಾಟಗಾರು ರೂಪೇಶ್ ರಾಜಣ್ಣ ಪ್ರಶ್ನಿಸಿದ್ದಾರೆ.

25 ಗ್ರಾಂ ತೂಕದ ಬುಲ್ ಬುಲ್ ಹಕ್ಕಿ 50 ರಿಂದ 60 ಕೆಜಿ ತೂಕದ ಮನುಷ್ಯನ್ನ ರೆಕ್ಕೆ ಮೇಲೆ ಕೂರಿಸಿಕೊಂಡು ಹೊತ್ಕೊಂಡು ಹೋಗುತ್ತೆ ಅಂದ್ರೆ ಅದರ ಶಕ್ತಿ ಬಗ್ಗೆ ಅಧ್ಯಯನ ಆಗಲೇ ಬೇಕು.

ಸಾವರ್ಕರ್ ಬುಲ್ ಬುಲ್ ಹಕ್ಕಿ ಮೇಲೆ ಕೂರು ಕ್ಷಮಾಪಣಾ ಪತ್ರ ಬರೆಯುತ್ತಿದ್ದರೆ ಎಂದು ಹಲವರು ಟ್ವಿಟರ್‌ನಲ್ಲಿ ಟ್ರೋಲ್ ಮಾಡಿದ್ದಾರೆ.

“ಹೇಡಿ ಸಾವರ್ಕರ್ ಕುರಿತು 8ನೇ ತರಗತಿಯ ಪಠ್ಯಪುಸ್ತಕದಲ್ಲಿ ಬರೆದ ಸುಳ್ಳಿನ ಕಥೆಗಳಲ್ಲಿ ಮಹಾನ್ ಸುಳ್ಳೆಂದು ಪತ್ತೆಯಾಗಿದೆ. ಅಂಡಮಾನ್ ಜೈಲಿನಿಂದ ಸಾವರ್ಕರ್ ಪ್ರತೀ ದಿನ ಬುಲ್ ಬುಲ್ ಹಕ್ಕಿಗಳ ಮೂಲಕ ಸೆಲ್‌ನಿಂದ ತಾಯ್ಕಾಡಿಗೆ ಹೋಗಿ ತಾಯ್ಕಾಡಿನ ನೆಲವನ್ನು ಸಂದರ್ಶಿಸಿ ಬರುತ್ತಿದ್ದನಂತೆ. ಒಂದು ವೇಳೆ ಸಾವರ್ಕರ್ ಇಂದು ಬದುಕಿರುತ್ತಿದ್ದರೆ ಇದನ್ನು ಓದಿ ಎದ್ದು ಬಿದ್ದು ನಕ್ಕು ಸಾಯುತ್ತಿದ್ದ ಎಳೆಯ ಮನಸ್ಸುಗಳಲ್ಲಿ ಸುಳ್ಳನ್ನು ಬಿತ್ತುತ್ತಿರುವ ಸರ್ಕಾರದ ನಡೆಯನ್ನು ವಿರೋಧಿಸುವವರಾರು?’ ಎಂದು ರವಿ ಆನಂದ್ ಎಂಬುವವರು ಫೇಸ್ಟುಕ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ಎಲ್ಲಾ ರೀತಿ ವಿಫಲವಾಗಿರುವ ಬಿಜೆಪಿ ಅಧಿಕಾರಕ್ಕಾಗಿ ಮಾತ್ರ ಸಾವರ್ಕರ್ ಹೆಸರು ಬಳಸುತ್ತಿದೆ: ಹಿಂದೂ ಮಹಾಸಭಾ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಇಂತಹ ಪಠ್ಯವನ್ನು ಓದಿದ ಮಕ್ಕಳು ಉದ್ದಾರ ಆಗುವುದಿಲ್ಲ ಮತ್ತು ಮನುವಾದಿಗಳಿಗೆ ಬೇಕಾಗಿರುವುದು ಸಹ ಇದೆ.

  2. ಒಬ್ಬ ವ್ಯಕ್ತಿಯನ್ನು ತಮಗೆ ಬೇಕಾದ ರೀತಿಯಲ್ಲಿ ವೈಭವಿಕರಿಸುವುದು ಅದರಿಂದ ತಮಗೆ ಉಪಯೋಗವಾಗುವುದಿದ್ದಲ್ಲಿ ಯಾವ ಮಟ್ಟಕ್ಕೆ ಬೇಕಾದರೂ ಇಳಿಯುತ್ತಾರೆ ಇವರು. ತಮ್ಮ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಈ ಮಟ್ಟಕ್ಕೆ ಇಳಿದಿರುವುದು ಹೇಸಿಗೆಯ ವಿಚಾರ. ಹಿಜಾಬ್ ಆಯ್ತು, ಹಿಲಾಲ್ ಆಯ್ತು, ಮಸೀದಿ ಆಯ್ತು, ಈಗ ಇದು.

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...