Homeಮುಖಪುಟಸಾವರ್ಕರ್ ಕುರಿತ ಉತ್ಪ್ರೇಕ್ಷಿತ ಕನ್ನಡ ಪಠ್ಯಕ್ಕೆ ತೀವ್ರ ವಿರೋಧ: ಸಾಮಾಜಿಕ ಜಾಲತಾಣದಲ್ಲಿ ವ್ಯಂಗ್ಯ

ಸಾವರ್ಕರ್ ಕುರಿತ ಉತ್ಪ್ರೇಕ್ಷಿತ ಕನ್ನಡ ಪಠ್ಯಕ್ಕೆ ತೀವ್ರ ವಿರೋಧ: ಸಾಮಾಜಿಕ ಜಾಲತಾಣದಲ್ಲಿ ವ್ಯಂಗ್ಯ

- Advertisement -
- Advertisement -

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಿಂದೂ ಮಹಾಸಭಾ ನಾಯಕ ಸಾವರ್ಕರ್ ಕುರಿತು ತೀವ್ರ ರೀತಿಯ ಪ್ರಚಾರಕ್ಕೆ ಮುಂದಾಗಿದ್ದು ಅದಕ್ಕೆ ಸಾಕಷ್ಟು ವಿರೋಧ ಸಹ ದಾಖಲಾಗಿದೆ. ಇದೇ ಸಂದರ್ಭದಲ್ಲಿ ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯ ಸಮಿತಿ ಪರಿಷ್ಕರಿಸಿದ್ದ 8ನೇ ತರಗತಿ ಕನ್ನಡ ದ್ವಿತೀಯ ಭಾಷ ಪಠ್ಯದಲ್ಲಿ ಸಾವರ್ಕರ್ ಕುರಿತು ಉತ್ಪ್ರೇಕ್ಷಿತ ಪಠ್ಯ ಸೇರಿಸಿರುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ. ಅಲ್ಲದೆ ಬುಲ್‌ಬುಲ್ ಹಕ್ಕಿಯ ಮೇಲೆ ಕುಳಿತು ಭಾರತಕ್ಕೆ ಬಂದಿದ್ದರು ಎಂಬುದರ ಕುರಿತು ಸಾಮಾಜಿಕ ಜಾಲತಾಣಗಳು ಮೀಮ್‌ಗಳು ಹರಿದಾಡುತ್ತಿವೆ.

8ನೇ ತರಗತಿಯ ‘ತಿಳಿ ಕನ್ನಡ’ ಪಠ್ಯಪುಸ್ತಕದಲ್ಲಿ ಲೇಖಕ ಕೆ ಟಿ ಗಟ್ಟಿಯವರು ಬರೆದಿರುವ ವಿ ಡಿ ಸಾವರ್ಕರ್ ಕುರಿತ ‘ಕಾಲವನ್ನು ಗೆದ್ದವರು’ ಎನ್ನುವ ಪ್ರವಾಸ ಕಥನವು ಇದೀಗ ವಿವಾದದ ವಸ್ತುವಾಗಿದೆ. ಅದರಲ್ಲಿ ಲೇಖಕರು ಸಾವರ್ಕರ್‌ರನ್ನು ಇರಿಸಲಾಗಿದ್ದ ಅಂಡಮಾನ್ ಜೈಲಿಗೆ ಭೇಟಿ ನೀಡಿದ ಬಗ್ಗೆ ಬರೆದಿರುವುದು ಹೀಗೆ.. “ಕೋಣೆಯೊಳಗಿನ ಹಿಂಬದಿ ಗೋಡೆಯ ಎತ್ತರದಲ್ಲಿ ಆಕಾಶ ಕೂಡ ಕಾಣಿಸದ ಕಿಂಡಿ. ಸಾವರ್ಕರ್ ಕೋಣೆಯಲ್ಲಿ ಆ ಕಿಂಡಿ ಕೂಡ ಇಲ್ಲ. ಆದರೂ ಎಲ್ಲಿಂದಲೋ ಬುಲ್‌ಬುಲ್ ಹಕ್ಕಿಗಳು ಹಾರಿ ಸೆಲ್‌ನೊಳಗೆ ಬರುತ್ತಿದ್ದವು. ಅವುಗಳ ರೆಕ್ಕೆಯ ಮೇಲೆ ಕುಳಿತು ಸಾವರ್ಕರ್ ಪ್ರತಿದಿನ ತಾಯ್ನಾಡಿನ ನೆಲವನ್ನು ಸಂದರ್ಶಿಸಿ ಬರುತ್ತಿದ್ದರು”. ಇಷ್ಟೊಂದು ಉತ್ಪ್ರೇಕ್ಷಿತ ಪಠ್ಯವನ್ನು ಮಕ್ಕಳು ಕಲಿಯಬೇಕೆ ಎಂದು ಹಲವರು ಪ್ರಶ್ನಿಸಿದ್ದಾರೆ.

ಇದು ಸುಳ್ಳಲ್ಲವೆ? ನಿಜವೇ ಆದ್ರೆ ಹೇಗೆ ತಿಳಿಸಿ. ನಿಮ್ಮ ಪ್ರಕಾರ ಸಾವರ್ಕರ್ ಅಂಡಮಾನ್ ಜೈಲಿನಲ್ಲಿ ಗಾಳಿ ಬೆಳಕು ಎಲ್ಲಾ ಚೆನ್ನಾಗಿ ಬರುತ್ತಿದ್ದ ಕೋಣೆ ಇದು, ಆದರೆ ಗಾಳಿ ಬೆಳಕು ಬರಲು ಒಂದೂ ಕಿಂಡಿ ಕೂಡ ಇರದ ಕೋಣೆಲಿ ಸಾವರ್ಕರ್ ಇದ್ರು ಅಂತ ಸುಳ್ಳು ಬರೆದು 8ನೇ ತರಗತಿ ಪುಸ್ತಕದಲ್ಲಿ ಹಾಕಿರೋದ್ಯಾಕೆ? ಬುಲ್ ಬುಲ್ ಪಕ್ಷಿ ಮೇಲೆ ಕೂತು ಹಾರಲು ಸಾಧ್ಯವೇ? ಎಂದು ಕನ್ನಡ ಹೋರಾಟಗಾರು ರೂಪೇಶ್ ರಾಜಣ್ಣ ಪ್ರಶ್ನಿಸಿದ್ದಾರೆ.

25 ಗ್ರಾಂ ತೂಕದ ಬುಲ್ ಬುಲ್ ಹಕ್ಕಿ 50 ರಿಂದ 60 ಕೆಜಿ ತೂಕದ ಮನುಷ್ಯನ್ನ ರೆಕ್ಕೆ ಮೇಲೆ ಕೂರಿಸಿಕೊಂಡು ಹೊತ್ಕೊಂಡು ಹೋಗುತ್ತೆ ಅಂದ್ರೆ ಅದರ ಶಕ್ತಿ ಬಗ್ಗೆ ಅಧ್ಯಯನ ಆಗಲೇ ಬೇಕು.

ಸಾವರ್ಕರ್ ಬುಲ್ ಬುಲ್ ಹಕ್ಕಿ ಮೇಲೆ ಕೂರು ಕ್ಷಮಾಪಣಾ ಪತ್ರ ಬರೆಯುತ್ತಿದ್ದರೆ ಎಂದು ಹಲವರು ಟ್ವಿಟರ್‌ನಲ್ಲಿ ಟ್ರೋಲ್ ಮಾಡಿದ್ದಾರೆ.

“ಹೇಡಿ ಸಾವರ್ಕರ್ ಕುರಿತು 8ನೇ ತರಗತಿಯ ಪಠ್ಯಪುಸ್ತಕದಲ್ಲಿ ಬರೆದ ಸುಳ್ಳಿನ ಕಥೆಗಳಲ್ಲಿ ಮಹಾನ್ ಸುಳ್ಳೆಂದು ಪತ್ತೆಯಾಗಿದೆ. ಅಂಡಮಾನ್ ಜೈಲಿನಿಂದ ಸಾವರ್ಕರ್ ಪ್ರತೀ ದಿನ ಬುಲ್ ಬುಲ್ ಹಕ್ಕಿಗಳ ಮೂಲಕ ಸೆಲ್‌ನಿಂದ ತಾಯ್ಕಾಡಿಗೆ ಹೋಗಿ ತಾಯ್ಕಾಡಿನ ನೆಲವನ್ನು ಸಂದರ್ಶಿಸಿ ಬರುತ್ತಿದ್ದನಂತೆ. ಒಂದು ವೇಳೆ ಸಾವರ್ಕರ್ ಇಂದು ಬದುಕಿರುತ್ತಿದ್ದರೆ ಇದನ್ನು ಓದಿ ಎದ್ದು ಬಿದ್ದು ನಕ್ಕು ಸಾಯುತ್ತಿದ್ದ ಎಳೆಯ ಮನಸ್ಸುಗಳಲ್ಲಿ ಸುಳ್ಳನ್ನು ಬಿತ್ತುತ್ತಿರುವ ಸರ್ಕಾರದ ನಡೆಯನ್ನು ವಿರೋಧಿಸುವವರಾರು?’ ಎಂದು ರವಿ ಆನಂದ್ ಎಂಬುವವರು ಫೇಸ್ಟುಕ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ಎಲ್ಲಾ ರೀತಿ ವಿಫಲವಾಗಿರುವ ಬಿಜೆಪಿ ಅಧಿಕಾರಕ್ಕಾಗಿ ಮಾತ್ರ ಸಾವರ್ಕರ್ ಹೆಸರು ಬಳಸುತ್ತಿದೆ: ಹಿಂದೂ ಮಹಾಸಭಾ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಇಂತಹ ಪಠ್ಯವನ್ನು ಓದಿದ ಮಕ್ಕಳು ಉದ್ದಾರ ಆಗುವುದಿಲ್ಲ ಮತ್ತು ಮನುವಾದಿಗಳಿಗೆ ಬೇಕಾಗಿರುವುದು ಸಹ ಇದೆ.

  2. ಒಬ್ಬ ವ್ಯಕ್ತಿಯನ್ನು ತಮಗೆ ಬೇಕಾದ ರೀತಿಯಲ್ಲಿ ವೈಭವಿಕರಿಸುವುದು ಅದರಿಂದ ತಮಗೆ ಉಪಯೋಗವಾಗುವುದಿದ್ದಲ್ಲಿ ಯಾವ ಮಟ್ಟಕ್ಕೆ ಬೇಕಾದರೂ ಇಳಿಯುತ್ತಾರೆ ಇವರು. ತಮ್ಮ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಈ ಮಟ್ಟಕ್ಕೆ ಇಳಿದಿರುವುದು ಹೇಸಿಗೆಯ ವಿಚಾರ. ಹಿಜಾಬ್ ಆಯ್ತು, ಹಿಲಾಲ್ ಆಯ್ತು, ಮಸೀದಿ ಆಯ್ತು, ಈಗ ಇದು.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...