Homeಮುಖಪುಟಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತ್ ಜೋಡೋ ಯಾತ್ರೆ: ರಾಹುಲ್ ಗಾಂಧಿಗೆ ಹೋರಾಟಗಾರರ ಸಾಥ್!

ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತ್ ಜೋಡೋ ಯಾತ್ರೆ: ರಾಹುಲ್ ಗಾಂಧಿಗೆ ಹೋರಾಟಗಾರರ ಸಾಥ್!

ಹೆಜ್ಜೆಗಳು ಜೊತೆಗೂಡಲಿ, ದೇಶ ಒಂದಾಗಲಿ ಎಂಬ ಆಶಯದೊಂದಿಗೆ 4 ತಿಂಗಳುಗಳ ಕಾಲ ನಡೆಯುವ ಸುಧೀರ್ಘ ಪಾದಯಾತ್ರೆಯಲ್ಲಿ ಪ್ರತಿ ದಿನ 25 ಕಿ.ಮೀ ನಡೆಯುವ ಗುರಿ ಹೊಂದಲಾಗಿದೆ.

- Advertisement -
- Advertisement -

ಕಾಂಗ್ರೆಸ್ ಮುಖಂಡ, ಸಂಸದ ರಾಹುಲ್ ಗಾಂಧಿ ದೇಶದ ಬಹುದೊಡ್ಡ ಪಾದಾಯಾತ್ರೆಗೆ ಸಜ್ಜಾಗಿದ್ದಾರೆ. ಐಕ್ಯ ಭಾರತದ ಉದ್ದೇಶದೊಂದಿಗೆ ದಕ್ಷಿಣದ ಕನ್ಯಾಕುಮಾರಿಯಿಂದ ಉತ್ತರದ ಕಾಶ್ಮೀರದವರೆಗೆ ಬರೋಬ್ಬರಿ 3,500 ಕಿ.ಮೀ ಹೆಜ್ಜೆಹಾಕುವ ಭಾರತ್ ಜೋಡೋ ಯಾತ್ರೆಯನ್ನು (ಭಾರತ ಐಕ್ಯತಾ ಯಾತ್ರೆ) ಸೆಪ್ಟಂಬರ್ 07ರಿಂದ ಆರಂಭಿಸಲಿದ್ದಾರೆ. ಈ ಯಾತ್ರೆಗೆ ಉತ್ತಮ ಸ್ಪಂದನೆ ದೊರೆತಿದ್ದು ಕಾಂಗ್ರೆಸ್ ಮಾತ್ರವಲ್ಲದೆ ಇತರ ಪಕ್ಷಗಳ ಮತ್ತು ಪ್ರಗತಿಪರ ಸಂಘಟನೆಗಳ ಮುಖಂಡರ ಸಹ ಬೆಂಬಲ ಘೋಷಿಸಿದ್ದಾರೆ. ಅದರ ಸಂಪೂರ್ಣ ವಿವರ ಇಲ್ಲಿದೆ.

4 ತಿಂಗಳುಗಳ ಕಾಲ ನಡೆಯುವ ಸುಧೀರ್ಘ ಪಾದಯಾತ್ರೆಯಲ್ಲಿ ಪ್ರತಿ ದಿನ 25 ಕಿ.ಮೀ ನಡೆಯುವ ಗುರಿ ಹೊಂದಲಾಗಿದ್ದು, 12 ರಾಜ್ಯಗಳು ಮತ್ತು 02 ಕೇಂದ್ರಾಡಳಿತ ಪ್ರದೇಶಗಳನ್ನು ಯಾತ್ರೆ ತಲುಪಲಿದೆ. ಕರ್ನಾಟಕದಲ್ಲಿ 21 ದಿನಗಳ ಕಾಲ ಯಾತ್ರೆ ನಡೆಯಲಿದ್ದು, ಚಾಮರಾಜನಗರದ ಗುಂಡ್ಲುಪೇಟೆಯಲ್ಲಿ ಸ್ವಾಗತಿಸಿ ರಾಯಚೂರು ಜಿಲ್ಲೆ ನಂತರ ತೆಲಂಗಾಣಕ್ಕೆ ಕಳಿಸಿಕೊಡಲಾಗುತ್ತದೆ ಎನ್ನಲಾಗಿದೆ.

“ಈ ಯಾತ್ರೆ ನನಗೆ ತಪಸ್ಸು ಇದ್ದಂತೆ. ಭಾರತವನ್ನು ಒಟ್ಟುಗೂಡಿಸುವುದು ಧೀರ್ಘಾವಧಿ ಹೋರಾಟ ಎಂಬುದು ನನಗೆ ತಿಳಿದಿದೆ ಮತ್ತು ಅದಕ್ಕೆ ನಾನು ತಯಾರಾಗಿದ್ದೇನೆ” ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.

“ಹೆಜ್ಜೆಗಳು ಜೊತೆಗೂಡಲಿ, ದೇಶ ಒಂದಾಗಲಿ” ಎಂಬ ಟ್ಯಾಗ್‌ಲೈನ್‌ನೊಂದಿಗೆ ನಡೆಯುವ ಈ ಯಾತ್ರೆಯ ಹಲವು ಕಾರ್ಯಕ್ರಮಗಳಿಗೆ ಸೋನಿಯಾ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ವಾದ್ರ ಜೊತೆಗೂಡಲಿದ್ದಾರೆ ಎನ್ನಲಾಗಿದೆ.

1991ರಲ್ಲಿ ಹತ್ಯೆಯಾದ ರಾಜೀವ್ ಗಾಂಧಿಯವರ ಸ್ಮಾರಕವಿರುವ ಶ್ರೀಪೆರಂಬದೂರ್‌ನಲ್ಲಿ ನಮನ ಸಲ್ಲಿಸಿದ ನಂತರ ಸೆಪ್ಟಂಬರ್ 07ರಂದು ಕನ್ಯಾಕುಮಾರಿಯಲ್ಲಿ ಭಾರತ್ ಜೋಡೋ ಯಾತ್ರೆ ಉದ್ಘಾಟನೆಯಾಗಲಿದೆ. ಅಲ್ಲಿಂದು ತಿರುವಂತನಪುರಂ, ಕೊಚ್ಚಿ, ನಿಲಾಂಬುರ್, ಮೈಸೂರು, ಬಳ್ಳಾರಿ, ರಾಯಚೂರು, ವಿಕಾರಾಬಾದ್, ನಾಂದೇಡ್, ಜಾಲಗೂನ್, ಇಂದೋರ್, ಕೋಟಾ, ದುಸ್ಸಾ, ಅಲ್ವರ್, ಬುಲಂದಶಹರ್, ದೆಹಲಿ, ಅಂಬಾಲ, ಜಮ್ಮುಗಳಲ್ಲಿ ಬಹಿರಂಗ ಸಮಾವೇಶಗಳನ್ನು ನಡೆಸುವುದರ ಜೊತೆಗೆ ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿ ಯಾತ್ರೆಯ ಸಮಾರೋಪ ನಡೆಯಲಿದೆ.

ಪಾದಯಾತ್ರೆಗೆ ವಿವಿಧ ಪಕ್ಷದ ಮುಖಂಡರ ಬೆಂಬಲ

ಯೋಗೇಂದ್ರ ಯಾದವ್

ಹಿರಿಯ ಚಿಂತಕ, ರಾಜಕೀಯ ತಜ್ಞ, ಆಪ್ ತೊರೆದು ಸ್ವರಾಜ್ಯ ಇಂಡಿಯಾ ಪಕ್ಷ ಕಟ್ಟಿರುವ ಮತ್ತು ಸಂಯುಕ್ತ ಕಿಸಾನ್ ಮೋರ್ಚಾದ ಮುಖಂಡರಾಗಿರುವ ಯೋಗೇಂದ್ರ ಯಾದವ್‌ರವರು ಭಾರತ್ ಜೋಡೋ ಯಾತ್ರೆಗೆ ಬೆಂಬಲ ಸೂಚಿಸಿದ್ದು, ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದೇನೆ ಎಂದಿದ್ದಾರೆ.

ಅರುಣಾ ರಾಯ್

ರಾಮನ್ ಮ್ಯಾಗ್ಸೆಸ್ಸೆ ಪ್ರಶಸ್ತಿ ವಿಜೇತರಾದ ಅರುಣಾ ರಾಯ್‌ರವರು 1990ರ ದಶಕದಲ್ಲಿ ನಾಗರೀಕ ಸೇವೆ ತೊರೆದು ಮಜ್ದೂರ್ ಕಿಸಾನ್ ಶಕ್ತಿ ಸಂಘಟನ್ ಕಟ್ಟಿದ್ದರು. ನರೇಗಾ ಯೋಜನೆಗಾಗಿ ಸಾಕಷ್ಟು ದುಡಿದಿರುವ ಅವರು, ದಿನಗೂಲಿ ಕಾರ್ಮಿಕರ ಪರವಾಗಿ ದಿಟ್ಟ ಹೋರಾಟ ನಡೆಸಿದ್ದರು. ಆರ್‌ಟಿಐ ಕಾರ್ಯಕರ್ತರಾಗಿ ಅರವಿಂದ್ ಕೇಜ್ರಿವಾಲ್ ಜೊತೆಗೂಡಿ ಕೆಲಸ ಮಾಡಿದ್ದರು. ಲೋಕಪಾಲ್ ಮಸೂದೆ ಸಂಬಂಧ ಆಪ್ ತೊರೆದು ಹೊರಬಂದ ಅವರು ಸ್ವತಂತ್ರವಾಗಿ ಕೆಲಸ ಮಾಡುತ್ತಿದ್ದಾರೆ. ಅವರು ಯಾತ್ರೆಗೆ ಬೆಂಬಲ ಸೂಚಿಸಿದ್ದಾರೆ.

ದೇವನೂರ ಮಹದೇವ

ಕನ್ನಡದ ಮಹತ್ವದ ಲೇಖಕರು, ಚಿಂತಕರು ಮತ್ತು ಹೋರಾಟಗಾರರಾದ ದೇವನೂರ ಮಹದೇವರವರು ತಮ್ಮ ಕಥೆಗಳಿಗಾಗಿ ಪ್ರಸಿದ್ದರು. ಅವರ ಇತ್ತೀಚಿಗಿನ ಆರ್‌ಎಸ್‌ಎಸ್‌ ಆಳ ಮತ್ತು ಅಗಲ ಕೃತಿ ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಮಾರಾಟವಾಗಿ ಚರ್ಚೆಗೆ ಕಾರಣವಾಗಿತ್ತು. ಮೋದಿ ಸರ್ಕಾರದ ವಿರುದ್ಧ ಪ್ರತಿಭಟನೆಯಾಗಿ ಸಾಹಿತ್ಯ ಅಕಾಡೆಮಿ ಮತ್ತು ಪ್ರದ್ಮಶ್ರೀ ಪ್ರಶಸ್ತಿಗಳನ್ನು ವಾಪಸ್ ಮಾಡಿದ್ದ ಅವರು ಸ್ವರಾಜ್ ಇಂಡಿಯಾ ಮತ್ತು ಜನಾಂದೋಲನಗಳ ಮಹಾಮೈತ್ರಿ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದಾರೆ. ಅವರು ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ.

ಗಣೇಶ್ ದೇವಿ

ಭಾಷಾ ತಜ್ಞರು ಮತ್ತು ಸಾಂಸ್ಕೃತಿಕ ಚಿಂತಕರಾದ ಜಿ.ಎನ್ ದೇವಿಯವರು ಭಾರತ್ ಜೋಡೊ ಯಾತ್ರೆ ಜೊತೆ ಕೈಜೋಡಿಸಿದ್ದಾರೆ.

ಅಲ್ಲದೆ ಸಫಾಯಿ ಕರ್ಮಚಾರಿಗಳ ಪರ ಹೋರಾಟ ನಡೆಸಿದ ಬೆಜವಾಡ ವಿಲ್ಸನ್, ಗಾಂಧಿ ಶಾಂತಿ ಪ್ರತಿಷ್ಠಾನದ ಪಿ.ವಿ ರಾಜಗೋಪಾಲ್, ನಿವೃತ್ತ ಐಎಎಸ್ ಅಧಿಕಾರಿ ಶಾರದ್ ಬೆಹರ್, ಮಹಿಳಾವಾದಿ ಹೋರಾಟಗಾರ್ತಿ ಸೈದಾ ಹಮೀದ್, ಆರ್‌ಟಿಐ ಹೋರಾಟಗಾರ್ತಿ ಅಂಜಲಿ ಭಾರದ್ವಾಜ್ ಸೇರಿದಂತೆ ಹಲವರು ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ.

ರಾಹುಲ್ ಜೊತೆ 100 ಪಾದಯಾತ್ರಿಗಳು ಆರಂಭದಿಂದ ಅಂತ್ಯದವರೆಗೂ ಹೆಜ್ಜೆ ಹಾಕಲಿದ್ದಾರೆ. ಅವರನ್ನು ಭಾರತ್ ಯಾತ್ರಿಗಳು ಎಂದು ಕರೆಯಲಾಗುತ್ತದೆ. ಅಲ್ಲದೆ ಈ ಯಾತ್ರೆ ಯಾವ ರಾಜ್ಯಗಳನ್ನು ತಲುಪುದಿಲ್ಲವೋ ಅಂತಹ ರಾಜ್ಯಗಳಿಂದ ತಲಾ 100 ಜನ ಅತಿಥಿ ಪಾದಯಾತ್ರಿಗಳು ಸಹ ಸೇರಿಕೊಳ್ಳಲಿದ್ದಾರೆ. ಅಲ್ಲದೆ ಪ್ರತಿ ರಾಜ್ಯದ 100 ಪಾದಯಾತ್ರಿಗಳು ಆಯಾ ರಾಜ್ಯದಲ್ಲಿ ಯಾತ್ರೆ ನಡೆಯುವ ಸಂದರ್ಭದಲ್ಲಿ ಜೊತೆಗಿರುತ್ತಾರೆ. ಒಟ್ಟಾರೆಯಾಗಿ ಸ್ಥಳೀಯ ಜನರು, ಹೋರಾಟಗಾರರ ಜೊತೆಗೆ 300 ಜನ ಪಾದಯಾತ್ರಿಗಳು ಪ್ರತಿ ದಿನ ನಡೆಯಲಿದ್ದಾರೆ ಎಂದು ಕಾಂಗ್ರೆಸ್ ತಿಳಿಸಿದೆ.

ದೇಶದಲ್ಲಿ ದ್ವೇಷ ಹರಡಲಾಗುತ್ತಿದೆ. ಕೇಂದ್ರೀಯ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಸಂವಿಧಾನವನ್ನ ಅಪಮಾನಿಸಲಾಗುತ್ತಿದೆ. ಇದನ್ನು ವಿರೋಧಿಸುತ್ತಾ ಆರ್ಥಿಕ ಅಸಮಾನತೆ ನಿವಾರಣೆಗಾಗಿ, ಸಾಮಾಜಿಕ ದ್ರುವೀಕರಣ ತಪ್ಪಿಸಲು ಭಾರತವನ್ನು ಐಕ್ಯ ದೇಶವನ್ನಾಗಿ ಕಟ್ಟಲು ಭಾರತ್ ಜೋಡೋ ಯಾತ್ರೆ ನಡೆಸಲಾಗುತ್ತಿದೆ ಎಂದು ಸಂಸದರಾದ ಜೈರಾಂ ರಮೇಶ್ ತಿಳಿಸಿದ್ದಾರೆ. ಇದು ಕೇವಲ ಕಾಂಗ್ರೆಸ್ ಪಕ್ಷದ ಅಥವಾ ರಾಹುಲ್ ಗಾಂಧಿಯವರ ಪಾದಯಾತ್ರೆಯಲ್ಲ ಬದಲಿಗೆ ದೇಶದ ಒಳಿತಿಗಾಗಿ ನಡೆಯುತ್ತಿರುವ ಸರ್ವರ ಯಾತ್ರೆ ಎಂದು ಅವರು ಹೇಳಿದ್ದಾರೆ.

150 ಸಂಘಟನೆಗಳು ಬೆಂಬಲ

ಭಾರತ್ ಜೋಡೋ ಯಾತ್ರೆಗೆ ವಿವಿಧ ಪಕ್ಷಗಳು ಸೇರಿದಂತೆ 150 ಸಂಘಟನೆಗಳು, ವ್ಯಕ್ತಿಗಳು ಬೆಂಬಲ ನೀಡಿದ್ದಾರೆ ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ. ಸಮಾಜದ ವಿವಿಧ ವರ್ಗದ ಜನ ದೇಶದ ಉಳಿವಿಗಾಗಿ ಜೊತೆಗೂಡಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ; ‘ಕರ್ನಾಟಕ ಬಿಲ್ಕಿಸ್ ಜೊತೆಗಿದೆ’: ಬಿಜೆಪಿ ಸರ್ಕಾರದ ನಡೆ ವಿರೋಧಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...