Homeಮುಖಪುಟಏಷ್ಯಾ ಕಪ್ ಪಂದ್ಯದ ನಂತರ ಭಾರತದ ತ್ರಿವರ್ಣ ಧ್ವಜ ಹಿಡಿಯಲು ಜಯ್‌ ಶಾ ನಕಾರ: ವಿಪಕ್ಷಗಳ...

ಏಷ್ಯಾ ಕಪ್ ಪಂದ್ಯದ ನಂತರ ಭಾರತದ ತ್ರಿವರ್ಣ ಧ್ವಜ ಹಿಡಿಯಲು ಜಯ್‌ ಶಾ ನಕಾರ: ವಿಪಕ್ಷಗಳ ತರಾಟೆ

- Advertisement -
- Advertisement -

ಭಾನುವಾರ ಸಂಜೆ ನಡೆದ ಭಾರತ ಪಾಕಿಸ್ತಾನ ಎದುರಿನ ಏಷ್ಯಾಕಪ್ ಕ್ರಿಕೆಟ್ ಪಂದ್ಯದಲ್ಲಿ ಭಾರತ 5 ವಿಕೆಟ್‌ಗಳ ಜಯಗಳಿಸಿದ ನಂತರ ಭಾರತದ ತ್ರಿವರ್ಣ ಧ್ವಜ ಹಿಡಿಯಲು ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ನಿರಾಕರಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಜಯ್ ಶಾ ನಡೆದ ವಿರೋಧ ಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿವೆ.

ಪಂದ್ಯದಲ್ಲಿ ಭಾರತ ತಂಡ ಗೆಲ್ಲಲು ಮೂರು ಎಸೆತಗಳಲ್ಲಿ 6 ರನ್ ಬೇಕಿದ್ದಾಗ ಹಾರ್ದಿಕ್ ಪಾಂಡ್ಯ ಸಿಕ್ಸರ್ ಸಿಡಿಸಿ ಗೆಲುವು ತಂದುಕೊಟ್ಟರು. ಆ ಸಂದರ್ಭದಲ್ಲಿ ಬಿಸಿಸಿಐ ಕಾರ್ಯದರ್ಶಿ ಮತ್ತು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷರಾದ ಜಯ್ ಶಾ ಸಂಭ್ರಮಿಸುತ್ತಿದ್ದಾಗ ವ್ಯಕ್ತಿಯೊಬ್ಬರು ಭಾರತದ ಧ್ವಜವನ್ನು ನೀಡಲು ಮುಂದಾಗುತ್ತಾರೆ. ಅದನ್ನು ತೆಗೆದುಕೊಳ್ಳಲು ಜಯ್ ಶಾ ನಿರಾಕರಿಸುತ್ತಾರೆ. 5 ಸೆಕೆಂಡ್‌ಗಳ ಈ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗಿದೆ.

ಪಾಕಿಸ್ತಾನದ ವಿರುದ್ಧ ಭಾರತ ಜಯಗಳಿಸಿದ ನಂತರ ತ್ರಿವರ್ಣ ಧ್ವಜವನ್ನು ಹಿಡಿಯಲು ಜಯ್‌ ಶಾ ಏಕೆ ನಿರಾಕರಿಸಿದರು? ಅವರಿಗೆ ಭಗವಧ್ವಜ ಅಥವಾ ಬಿಜೆಪಿ ಧ್ವಜ ಬೇಕಿತ್ತಾ? ಎಂದು ಮಾಜಿ ಶಾಸಕ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.

ಹರ್ ಘರ್ ತಿರಂಗಕ್ಕಾಗಿ ಮೋದಿ ಸರ್ಕಾರ ಅಕ್ಷರಶಃ ಜನರ ಹಣವನ್ನು ಕಿತ್ತುಕೊಂಡಿತ್ತು. ಆದರೆ ಗೃಹ ಸಚಿವ ಅಮಿತ್‌ ಶಾ ರವರ ಮಗನಿಗೆ ರಾಷ್ಟ್ರಧ್ವಜ ಕೊಟ್ಟರೂ ಅದನ್ನು ಹಿಡಿಯಲು ನಿರಾಕರಿಸುತ್ತಾನೆ. ಹಾಗಾದರೆ “ದೇಶ ವಿರೋಧಿ” ಪ್ರಮಾಣಪತ್ರ ಎಲ್ಲಿದೆ ಎಂದು ಬಿಜೆಪಿ ಹೇಳುವುದೇ? ಅಥವಾ ಷಾ ರಾಜವಂಶಕ್ಕೆ ವಿನಾಯಿತಿ ಇದೆಯೇ? ಎಂದು ಟಿಎಂಸಿ ವಕ್ತಾರ ಸಾಕೇತ್ ಗೋಖಲೆ ಪ್ರಶ್ನಿಸಿದ್ದಾರೆ.

ಭಾರತದ ಧ್ವಜವನ್ನು ಹಿಡಿಯಲು ಬಿಜೆಪಿಯೇತರ ನಾಯಕರು ಯಾರಾದರೂ ನಿರಾಕರಿಸಿದರೆ ಇಷ್ಟೊತ್ತಿಗೆ ಅವರನ್ನು ದೇಶದ್ರೋಹಿಗಳೆಂದು ಇಡೀ ಬಿಜೆಪಿ ಐಟಿ ಸೆಲ್ ಕರೆಯುತ್ತಿತ್ತು. ಗೋಧಿ ಮೀಡಿಯಾ ದಿನವಿಡಿ ಅದರ ಕುರಿತು ಚರ್ಚಿಸುತ್ತಿತ್ತು. ಅದೃಷ್ಟವಶಾತ್ ಆ ಕೆಲಸ ಮಾಡಿರುವುದು ಶಾಹೆನ್‌ಶಾ ಅವರ ಮಗ ಜಯ್ ಶಾ ಎಂದು ಟಿಆರ್‌ಎಸ್‌ ಪಕ್ಷದ ಮುಖ್ಯಸ್ಥ ಕೃಷ್ಣನ್ ಟ್ವೀಟ್ ಮಾಡಿದ್ದಾರೆ.

ಭಾರತದ ಗೃಹ ಸಚಿವರ ಪುತ್ರ ರಾಷ್ಟ್ರಧ್ವಜವನ್ನು ಏಕೆ ಸ್ವೀಕರಿಸುತ್ತಿಲ್ಲ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಕೂಡ ಟೀಕಿಸಿದೆ. ಇಷ್ಟು ಮಾತ್ರವಲ್ಲದೆ ಜಯ್ ಶಾ ಏಕೆ ಭಾರತದ ಧ್ವಜವನ್ನು ಆ ಸಂದರ್ಭದಲ್ಲಿ ಸ್ವೀಕರಿಸಲಿಲ್ಲ ಎಂದು ಕೆಲವರು ವಿವರಣೆ ನೀಡಿದ್ದಾರೆ.

ಜಯ್ ಶಾ ಕೈಗೆ ಭಾರತದ ಬಾವುಟ ಕೊಡಲು ಹೋದಾಗ, ಆತ ನಿರಾಕರಿಸುವುದನ್ನು ಟ್ರಾಲ್ ಮಾಡಲಾಗುತ್ತಿದೆ. ಜಯ್ ಶಾ ಈಗ ಕೇವಲ ಬಿಸಿಸಿಐ ಕಾರ್ಯದರ್ಶಿ ಮಾತ್ರವಲ್ಲ, ಏಷಿಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷ.ಆತನ ಜತೆ ಏಷಿಯಾದ ಇತರ ದೇಶಗಳ ಬೋರ್ಡ್ ಪದಾಧಿಕಾರಿಗಳೂ ಇದ್ದರು. ಹೀಗಾಗಿ ಆತ ಮಾಡಿದ್ದು ಸರಿಯಾಗೇ ಇದೆ ಎಂಬುದು ನನ್ನ ಅನಿಸಿಕೆ. ನಿಮಗೇನನ್ನಿಸುತ್ತದೆ? ಎಂದು ಪತ್ರಕರ್ತ ದಿನೇಶ್ ಕುಮಾರ್ ದಿನೂ ಬರೆದಿದ್ದಾರೆ. ನಿಮಗೆ ಈ ಕುರಿತು ಏನು ಅನ್ನಿಸುತ್ತದೆ ಎಂಬುದನ್ನು ಕಮೆಂಟ್ ಮಾಡಿ.

ಇದನ್ನೂ ಓದಿ: ಏಷ್ಯಾ ಕಪ್‌ನಲ್ಲಿ ಮತ್ತೆ ಎರಡು ಭಾರಿ ಭಾರತ – ಪಾಕ್ ಮುಖಾಮುಖಿಯಾಗಬಹುದು!: ಇಲ್ಲಿದೆ ವಿವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...