Homeಮುಖಪುಟಪ್ರಯಾಣಕ್ಕೂ ಮುನ್ನ ಯೋಚಿಸಿ: ಬುಕ್‌ ಮಾಡಿದ ಟ್ರೈನ್‌ ಟಿಕೆಟ್‌ ರದ್ದುಗೊಳಿಸಿದರೆ ಜಿಎಸ್‌ಟಿ ಭಾರ!

ಪ್ರಯಾಣಕ್ಕೂ ಮುನ್ನ ಯೋಚಿಸಿ: ಬುಕ್‌ ಮಾಡಿದ ಟ್ರೈನ್‌ ಟಿಕೆಟ್‌ ರದ್ದುಗೊಳಿಸಿದರೆ ಜಿಎಸ್‌ಟಿ ಭಾರ!

- Advertisement -
- Advertisement -

ಬುಕ್ಕಿಂಗ್‌ ಮಾಡಲಾದ ಟ್ರೈನ್‌ ಟಿಕೆಟ್ ರದ್ದು ಮಾಡಿದರೆ ಗ್ರಾಹಕರು ನಿರ್ದಿಷ್ಟ ಪ್ರಮಾಣದ ಜಿಎಸ್‌ಟಿ ಭಾರವನ್ನು ಹೊರಬೇಕಾಗಿದೆ. ಆಗಸ್ಟ್ 3 ರಂದು ಹಣಕಾಸು ಸಚಿವಾಲಯ ಹೊರಡಿಸಿದ ಸುತ್ತೋಲೆ ಈ ಕುರಿತು ತಿಳಿಸಿದೆ.

ಹಣಕಾಸು ಸಚಿವಾಲಯದ ತೆರಿಗೆ ಸಂಶೋಧನಾ ಘಟಕವು ಹೊರಡಿಸಿದ ಸುತ್ತೋಲೆಯ ಪ್ರಕಾರ, ಬುಕಿಂಗ್ ಟಿಕೆಟ್‌ಗಳು ‘ಒಪ್ಪಂದ’ ಆಧಾರದಲ್ಲಿ ಆಗಿರುತ್ತವೆ. ಅದರ ಅಡಿಯಲ್ಲಿ ಐಆರ್‌ಸಿಟಿಸಿ/ಭಾರತೀಯ ರೈಲ್ವೆ ಗ್ರಾಹಕರಿಗೆ ಸೇವೆಗಳನ್ನು ಒದಗಿಸುವುದಾಗಿ ಭರವಸೆ ನೀಡಿರುತ್ತದೆ ಎಂದು ಪ್ರಸ್ತಾಪಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಧಿಸೂಚನೆಯ ಪ್ರಕಾರ ಫಸ್ಟ್ ಕ್ಲಾಸ್ ಅಥವಾ ಎಸಿ ಕೋಚ್ ಟಿಕೆಟ್‌ ರದ್ದು ಮಾಡಿದರೆ ಶೇಕಡಾ 5 ಜಿಎಸ್‌ಟಿಯನ್ನು ವಿಧಿಸಲಾಗುತ್ತದೆ. ಇದೇ ನಿಯಮ ವಿಮಾನ ಪ್ರಯಾಣ ಅಥವಾ ಹೋಟೆಲ್ ವಾಸ್ತವ್ಯದ ಬುಕ್ಕಿಂಗ್‌ ರದ್ದತಿಗೂ ಅನ್ವಯವಾಗುತ್ತದೆ.

ರದ್ದತಿ ಶುಲ್ಕವು ಒಪ್ಪಂದದ ಉಲ್ಲಂಘನೆಯ ಬದಲಿಗೆ ನೀಡುವ ಪಾವತಿಯಾಗಿರುತ್ತದೆ. ಆದ್ದರಿಂದ ಜಿಎಸ್ಟಿ ಪಾವತಿಸಬೇಕಾಗುತ್ತದೆ. ಟಿಕೆಟ್ ರದ್ದುಗೊಳಿಸಿದರೆ ರದ್ದತಿ ಶುಲ್ಕದ ಮೇಲೆ ಶೇಕಡಾ 5 ರಷ್ಟು ಜಿಎಸ್‌ಪಿ ಪಾವತಿಸಬೇಕಾಗುತ್ತದೆ.

“ಪ್ರಯಾಣಿಕರಿಂದ ಒಪ್ಪಂದದ ಉಲ್ಲಂಘನೆಯಾದಾಗ ಸೇವಾ ಪೂರೈಕೆದಾರರಿಗೆ ಸಣ್ಣ ಮೊತ್ತದಲ್ಲಿ ಪರಿಹಾರವನ್ನು ನೀಡಲಾಗುತ್ತದೆ. ರದ್ದತಿ ಶುಲ್ಕವಾಗಿ ಅದನ್ನು ಸಂಗ್ರಹಿಸಲಾಗುತ್ತದೆ. ರದ್ದತಿ ಶುಲ್ಕವು ಪಾವತಿಯಾಗುವುದರಿಂದ ಒಪ್ಪಂದದ ಉಲ್ಲಂಘನೆಯಾಗುವುದಿಲ್ಲ” ಎಂದು ಅಧಿಸೂಚನೆಯನ್ನು ತಿಳಿಸಲಾಗಿದೆ.

ಇದನ್ನೂ ಓದಿರಿ: ಅತ್ಯಾಚಾರಕ್ಕೆ ಒಳಗಾಗಿರುವ ಬಾಲಕಿಯರಿಗೆ ‘ನ್ಯಾಯ’ ದೊರಕಬೇಕು: ರಾಜ್ಯದಿಂದ ಆಯ್ಕೆಯಾಗಿರುವ ಬಿಜೆಪಿ ಸಂಸದ ಲೆಹರ್‌ ಸಿಂಗ್‌

ರೈಲಿನ ಹೊರಡುವ 48 ಗಂಟೆಗಳು ಅಥವಾ ಅದಕ್ಕಿಂತ ಹೆಚ್ಚು ಗಂಟೆಗಳ ಮೊದಲು ಟಿಕೆಟ್ ಅನ್ನು ರದ್ದುಗೊಳಿಸಿದಾಗ ಭಾರತೀಯ ರೈಲ್ವೆಯು ರದ್ದತಿಗೆ 240 ರೂಪಾಯಿಗಳನ್ನು ವಿಧಿಸುತ್ತದೆ. ರೈಲು ಹೊರಡುವ 48 ಗಂಟೆಗಳಿಂದ 12 ಗಂಟೆಗಳ ಒಳಗೆ ಟಿಕೆಟ್‌ ರದ್ದುಗೊಳಿಸಿದರೆ, ಟಿಕೆಟ್ ಮೊತ್ತದ ಶೇಕಡಾ 25ರಷ್ಟನ್ನು ರದ್ದತಿ ಶುಲ್ಕವಾಗಿ ವಿಧಿಸಲಾಗುತ್ತದೆ.

ಪ್ರಥಮ ದರ್ಜೆ ಅಥವಾ ಹವಾನಿಯಂತ್ರಿತ ಕೋಚ್ ಟಿಕೆಟ್‌ಗಳ ಮೇಲೆ 5 ಪ್ರತಿಶತ GST ವಿಧಿಸಲಾಗುತ್ತದೆ. ಆದ್ದರಿಂದ ಅದೇ ದರದಲ್ಲಿ ಜಿಎಸ್‌ಟಿಯನ್ನು ರದ್ದತಿ ಶುಲ್ಕವಾಗಿ ಅನ್ವಯಿಸುತ್ತದೆ. ಈ ಟಿಕೆಟ್‌ಗಳನ್ನು ಬುಕ್ ಮಾಡುವಾಗ ಪ್ರಯಾಣಿಕರು ಶೇ 5ರಷ್ಟು ಜಿಎಸ್‌ಟಿ ಪಾವತಿಸಿರುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...