Homeಮುಖಪುಟಪ್ರಯಾಣಕ್ಕೂ ಮುನ್ನ ಯೋಚಿಸಿ: ಬುಕ್‌ ಮಾಡಿದ ಟ್ರೈನ್‌ ಟಿಕೆಟ್‌ ರದ್ದುಗೊಳಿಸಿದರೆ ಜಿಎಸ್‌ಟಿ ಭಾರ!

ಪ್ರಯಾಣಕ್ಕೂ ಮುನ್ನ ಯೋಚಿಸಿ: ಬುಕ್‌ ಮಾಡಿದ ಟ್ರೈನ್‌ ಟಿಕೆಟ್‌ ರದ್ದುಗೊಳಿಸಿದರೆ ಜಿಎಸ್‌ಟಿ ಭಾರ!

- Advertisement -
- Advertisement -

ಬುಕ್ಕಿಂಗ್‌ ಮಾಡಲಾದ ಟ್ರೈನ್‌ ಟಿಕೆಟ್ ರದ್ದು ಮಾಡಿದರೆ ಗ್ರಾಹಕರು ನಿರ್ದಿಷ್ಟ ಪ್ರಮಾಣದ ಜಿಎಸ್‌ಟಿ ಭಾರವನ್ನು ಹೊರಬೇಕಾಗಿದೆ. ಆಗಸ್ಟ್ 3 ರಂದು ಹಣಕಾಸು ಸಚಿವಾಲಯ ಹೊರಡಿಸಿದ ಸುತ್ತೋಲೆ ಈ ಕುರಿತು ತಿಳಿಸಿದೆ.

ಹಣಕಾಸು ಸಚಿವಾಲಯದ ತೆರಿಗೆ ಸಂಶೋಧನಾ ಘಟಕವು ಹೊರಡಿಸಿದ ಸುತ್ತೋಲೆಯ ಪ್ರಕಾರ, ಬುಕಿಂಗ್ ಟಿಕೆಟ್‌ಗಳು ‘ಒಪ್ಪಂದ’ ಆಧಾರದಲ್ಲಿ ಆಗಿರುತ್ತವೆ. ಅದರ ಅಡಿಯಲ್ಲಿ ಐಆರ್‌ಸಿಟಿಸಿ/ಭಾರತೀಯ ರೈಲ್ವೆ ಗ್ರಾಹಕರಿಗೆ ಸೇವೆಗಳನ್ನು ಒದಗಿಸುವುದಾಗಿ ಭರವಸೆ ನೀಡಿರುತ್ತದೆ ಎಂದು ಪ್ರಸ್ತಾಪಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಧಿಸೂಚನೆಯ ಪ್ರಕಾರ ಫಸ್ಟ್ ಕ್ಲಾಸ್ ಅಥವಾ ಎಸಿ ಕೋಚ್ ಟಿಕೆಟ್‌ ರದ್ದು ಮಾಡಿದರೆ ಶೇಕಡಾ 5 ಜಿಎಸ್‌ಟಿಯನ್ನು ವಿಧಿಸಲಾಗುತ್ತದೆ. ಇದೇ ನಿಯಮ ವಿಮಾನ ಪ್ರಯಾಣ ಅಥವಾ ಹೋಟೆಲ್ ವಾಸ್ತವ್ಯದ ಬುಕ್ಕಿಂಗ್‌ ರದ್ದತಿಗೂ ಅನ್ವಯವಾಗುತ್ತದೆ.

ರದ್ದತಿ ಶುಲ್ಕವು ಒಪ್ಪಂದದ ಉಲ್ಲಂಘನೆಯ ಬದಲಿಗೆ ನೀಡುವ ಪಾವತಿಯಾಗಿರುತ್ತದೆ. ಆದ್ದರಿಂದ ಜಿಎಸ್ಟಿ ಪಾವತಿಸಬೇಕಾಗುತ್ತದೆ. ಟಿಕೆಟ್ ರದ್ದುಗೊಳಿಸಿದರೆ ರದ್ದತಿ ಶುಲ್ಕದ ಮೇಲೆ ಶೇಕಡಾ 5 ರಷ್ಟು ಜಿಎಸ್‌ಪಿ ಪಾವತಿಸಬೇಕಾಗುತ್ತದೆ.

“ಪ್ರಯಾಣಿಕರಿಂದ ಒಪ್ಪಂದದ ಉಲ್ಲಂಘನೆಯಾದಾಗ ಸೇವಾ ಪೂರೈಕೆದಾರರಿಗೆ ಸಣ್ಣ ಮೊತ್ತದಲ್ಲಿ ಪರಿಹಾರವನ್ನು ನೀಡಲಾಗುತ್ತದೆ. ರದ್ದತಿ ಶುಲ್ಕವಾಗಿ ಅದನ್ನು ಸಂಗ್ರಹಿಸಲಾಗುತ್ತದೆ. ರದ್ದತಿ ಶುಲ್ಕವು ಪಾವತಿಯಾಗುವುದರಿಂದ ಒಪ್ಪಂದದ ಉಲ್ಲಂಘನೆಯಾಗುವುದಿಲ್ಲ” ಎಂದು ಅಧಿಸೂಚನೆಯನ್ನು ತಿಳಿಸಲಾಗಿದೆ.

ಇದನ್ನೂ ಓದಿರಿ: ಅತ್ಯಾಚಾರಕ್ಕೆ ಒಳಗಾಗಿರುವ ಬಾಲಕಿಯರಿಗೆ ‘ನ್ಯಾಯ’ ದೊರಕಬೇಕು: ರಾಜ್ಯದಿಂದ ಆಯ್ಕೆಯಾಗಿರುವ ಬಿಜೆಪಿ ಸಂಸದ ಲೆಹರ್‌ ಸಿಂಗ್‌

ರೈಲಿನ ಹೊರಡುವ 48 ಗಂಟೆಗಳು ಅಥವಾ ಅದಕ್ಕಿಂತ ಹೆಚ್ಚು ಗಂಟೆಗಳ ಮೊದಲು ಟಿಕೆಟ್ ಅನ್ನು ರದ್ದುಗೊಳಿಸಿದಾಗ ಭಾರತೀಯ ರೈಲ್ವೆಯು ರದ್ದತಿಗೆ 240 ರೂಪಾಯಿಗಳನ್ನು ವಿಧಿಸುತ್ತದೆ. ರೈಲು ಹೊರಡುವ 48 ಗಂಟೆಗಳಿಂದ 12 ಗಂಟೆಗಳ ಒಳಗೆ ಟಿಕೆಟ್‌ ರದ್ದುಗೊಳಿಸಿದರೆ, ಟಿಕೆಟ್ ಮೊತ್ತದ ಶೇಕಡಾ 25ರಷ್ಟನ್ನು ರದ್ದತಿ ಶುಲ್ಕವಾಗಿ ವಿಧಿಸಲಾಗುತ್ತದೆ.

ಪ್ರಥಮ ದರ್ಜೆ ಅಥವಾ ಹವಾನಿಯಂತ್ರಿತ ಕೋಚ್ ಟಿಕೆಟ್‌ಗಳ ಮೇಲೆ 5 ಪ್ರತಿಶತ GST ವಿಧಿಸಲಾಗುತ್ತದೆ. ಆದ್ದರಿಂದ ಅದೇ ದರದಲ್ಲಿ ಜಿಎಸ್‌ಟಿಯನ್ನು ರದ್ದತಿ ಶುಲ್ಕವಾಗಿ ಅನ್ವಯಿಸುತ್ತದೆ. ಈ ಟಿಕೆಟ್‌ಗಳನ್ನು ಬುಕ್ ಮಾಡುವಾಗ ಪ್ರಯಾಣಿಕರು ಶೇ 5ರಷ್ಟು ಜಿಎಸ್‌ಟಿ ಪಾವತಿಸಿರುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...