Homeಮುಖಪುಟವಿಶ್ವದ ಮೂರನೇ ಶ್ರೀಮಂತ ವ್ಯಕ್ತಿಯಾಗಿ ಪ್ರಧಾನಿ ಮೋದಿ ಆಪ್ತ ಉದ್ಯಮಿ ಗೌತಮ್ ಅದಾನಿ!

ವಿಶ್ವದ ಮೂರನೇ ಶ್ರೀಮಂತ ವ್ಯಕ್ತಿಯಾಗಿ ಪ್ರಧಾನಿ ಮೋದಿ ಆಪ್ತ ಉದ್ಯಮಿ ಗೌತಮ್ ಅದಾನಿ!

- Advertisement -
- Advertisement -

ಪ್ರಧಾನಿ ಮೋದಿ ಅವರ ಆಪ್ತ ಉದ್ಯಮಿ, ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ಮತ್ತು LVMH ಸಹ-ಸಂಸ್ಥಾಪಕ ಬರ್ನಾರ್ಡ್ ಅರ್ನಾಲ್ಟ್ ಅವರನ್ನು ಹಿಂದಿಕ್ಕಿ ವಿಶ್ವದ ಮೂರನೇ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ್ದಾರೆ. ಅದಾನಿ ಅವರು 137.4 ಬಿಲಿಯನ್ ಡಾಲರ್‌ ಒಟ್ಟು ಸಂಪತ್ತನ್ನು ಹೊಂದಿದ್ದಾರೆ.

ಬ್ಲೂಮ್‌ಬರ್ಗ್ ಬಿಲಿಯನೇರ್ಸ್ ಇಂಡೆಕ್ಸ್ ಶ್ರೇಯಾಂಕದಲ್ಲಿ ಅದಾನಿ ಈಗ ಎಲೋನ್ ಮಸ್ಕ್ ಮತ್ತು ಜೆಫ್ ಬೆಜೋಸ್ ಅವರನ್ನು ಹಿಂದಿಕ್ಕಿದ್ದಾರೆ. ಫ್ರೆಂಚ್ ಉದ್ಯಮಿ, ಹೂಡಿಕೆದಾರ ಮತ್ತು ಕಲಾ ಸಂಗ್ರಾಹಕ ಬರ್ನಾರ್ಡ್ ಅರ್ನಾಲ್ಟ್ ಈಗ ವಿಶ್ವದ 4 ನೇ ಶ್ರೀಮಂತ ವ್ಯಕ್ತಿಯಾಗಿ ಸಂಪತ್ತಿನಲ್ಲಿ ಕುಸಿತ ಕಂಡಿದ್ದಾರೆ. ಅವರು LVMH ಮೊಯೆಟ್ ಹೆನ್ನೆಸ್ಸಿಯ ಸಹ-ಸಂಸ್ಥಾಪಕರಾಗಿದ್ದು, ವಿಶ್ವದ ಅತಿದೊಡ್ಡ ಐಷಾರಾಮಿ ಸರಕುಗಳ ಕಂಪನಿಯಾಗಿರುವ ಲೂಯಿ ವಿಟಾನ್ SE ಅಧ್ಯಕ್ಷರು ಮತ್ತು ಮುಖ್ಯ ಕಾರ್ಯನಿರ್ವಾಹಕರು ಆಗಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅದಾನಿಯ ಇತ್ತೀಚಿನ ಸಂಪತ್ತಿನ ಏರಿಕೆಯೊಂದಿಗೆ ಶ್ರೀಮಂತಿಕೆಯಲ್ಲಿ ವಿಶ್ವದ ಮೂರನೇ ಸ್ಥಾನಕ್ಕೆ ಏರಿ ಮೊದಲ ಭಾರತೀಯ ಮತ್ತು ಏಷ್ಯನ್ ಆಗಿದ್ದಾರೆ. ರಿಲಯನ್ಸ್ ಅಧ್ಯಕ್ಷ ಮುಖೇಶ್ ಅಂಬಾನಿ ಮತ್ತು ಚೀನಾದ ಜಾಕ್ ಮಾ ಕೂಡ ಇದನ್ನು ಸಾಧಿಸಲು ಸಾಧ್ಯವಾಗಿರಲಿಲ್ಲ.

ಇದನ್ನೂ ಓದಿ: ವಿಶ್ವದ ನಾಲ್ಕನೇ ಶ್ರೀಮಂತ ವ್ಯಕ್ತಿಯಾಗಿ ಹೊರ ಹೊಮ್ಮಿದ ಪ್ರಧಾನಿ ಮೋದಿ ಆಪ್ತ ಉದ್ಯಮಿ ಗೌತಮ್ ಅದಾನಿ

ಕಳೆದ ತಿಂಗಳು ಬಿಲ್ ಗೇಟ್ಸ್‌ ಅವರನ್ನು ಹಿಂದಿಕ್ಕಿ ವಿಶ್ವದ ನಾಲ್ಕನೇ ಶ್ರೀಮಂತ ವ್ಯಕ್ತಿಯಾಗಿ ಅದಾನಿ ಹೊರ ಹೊಮ್ಮಿದ್ದರು ಎಂದು ಬ್ಲೂಮ್‌ಬರ್ಗ್ ಬಿಲಿಯನೇರ್ಸ್ ಇಂಡೆಕ್ಸ್‌ ಹೇಳಿದೆ.

ಸೂಚ್ಯಂಕದಲ್ಲಿ ಅದಾನಿ ಅವರು ಮೂರನೇ ಸ್ಥಾನಕ್ಕೆ ಏರಲು ಈ ವರ್ಷ ಇದುವರೆಗೆ ಆಗಿರುವ ಅವರ ಸಂಪತ್ತಿನ ಭಾರೀ ಏರಿಕೆಯ ಪರಿಣಾಮವಾಗಿದೆ. ಟಾಪ್ 10 ರಲ್ಲಿರುವ ಎಲ್ಲಾ ಇತರ ಬಿಲಿಯನೇರ್‌ಗಳು ಈ ವರ್ಷದಲ್ಲಿ ಸಂಪತ್ತಿನಲ್ಲಿ ಕುಸಿತವನ್ನು ಕಂಡಿದ್ದರೆ, ಅದಾನಿ ಅವರ ಸಂಪತ್ತು 60.9 ಶತಕೋಟಿ ಡಾಲರ್‌ಗಳಷ್ಟು ಹೆಚ್ಚಾಗಿದೆ. ಈ ಮೊತ್ತವೂ ಇತರ ಎಲ್ಲಾ ಬಿಲೇನಿಯರ್‌ಗಿಂತ ಐದು ಪಟ್ಟು ಹೆಚ್ಚಾಗಿದೆ.

ಈ ಮಧ್ಯೆ ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ 91.9 ಬಿಲಿಯನ್ ಡಾಲರ್ ಸಂಪತ್ತಿನೊಂದಿಗೆ 11 ನೇ ಸ್ಥಾನದಲ್ಲಿದ್ದಾರೆ.

ಇದನ್ನೂ ಓದಿ: ಇಸ್ರೇಲ್‌ನ ಅತೀ ದೊಡ್ಡ ಬಂದರು ‘ಅದಾನಿ ಗ್ರೂಪ್’ ವಶಕ್ಕೆ

ಇತ್ತೀಚಿನ ದಿನಗಳಲ್ಲಿ ಅದಾನಿ ಗ್ರೂಪ್‌ನ ಷೇರುಗಳು ಏರಿಕೆಯಾಗಿದ್ದು ಅದಾನಿ ಮೂರನೇ ಸ್ಥಾನಕ್ಕೆ ಏರಲು ಒಂದು ಕಾರಣ ಎಂದು ಫೈನಾನ್ಸಿಯಲ್ ಎಕ್ಸ್‌ಪ್ರೆಸ್‌ ಹೇಳಿದೆ. ಕೆಲವು ನೀತಿತಜ್ಞರು, ಮಾರುಕಟ್ಟೆ ವಿಷ್ಲೇಷಕರು ಅಪಾರದರ್ಶಕ ಷೇರುದಾರರ ರಚನೆ ಮತ್ತು ಅದಾನಿ ಗ್ರೂಪ್ ಕಂಪನಿಗಳಲ್ಲಿ ವಿಶ್ಲೇಷಕರ ವ್ಯಾಪ್ತಿಯ ಕೊರತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದರೂ ಷೇರುಗಳು ಗಗನಕ್ಕೇರಿವೆ.

ಕೆಲವು ಅದಾನಿ ಗ್ರೂಪ್ ಕಂಪನಿಯ ಷೇರುಗಳು 2020 ರಿಂದ 1,000% ಕ್ಕಿಂತ ಹೆಚ್ಚಾಗಿದೆ. ಇದರ ಮೌಲ್ಯಮಾಪನಗಳು 750 ಪಟ್ಟು ಗಳಿಕೆಯನ್ನು ಮುಟ್ಟಿವೆ.

“ವಿಶ್ವದ ಶ್ರಿಮಂತ ವ್ಯಕ್ತಿಗಳಾದ ಅಮೆರಿಕಾದ ಕೆಲವು ಬಿಲಿಯೇರ್‌ಗಳು ತಮ್ಮ ಶ್ರಿಮಂತಿಕೆಯ ಪಟ್ಟಿಯಲ್ಲಿ ಇಳಿಕೆ ಕಂಡಿದ್ದು ಅವರು ಮಾಡುತ್ತಿರುವ ಲೋಕೊಪಯೋಗಿ ಯೋಜನೆಗಳು ಕೂಡಾ ಕಾರಣ” ಎಂದು ಬ್ಲೂಮ್‌ಬರ್ಗ್ ವರದಿ ಹೇಳಿದೆ. ಹೀಗಾಗಿ ಅದಾನಿ ಶ್ರಿಮಂತಿಕೆಯ ಪಟ್ಟಿಯಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ ಎಂದು ಅದು ಉಲ್ಲೇಖಿಸಿದೆ.

ಇದನ್ನೂ ಓದಿ: ಅದಾನಿಗೆ ಗುತ್ತಿಗೆ ನೀಡಲು ಶ್ರೀಲಂಕಾ ಅಧ್ಯಕ್ಷರ ಮೇಲೆ ಮೋದಿ ಒತ್ತಡ; ಆರೋಪ ಮಾಡಿದ್ದ ಅಧಿಕಾರಿ ರಾಜೀನಾಮೆ

ಜುಲೈನಲ್ಲಿ ಬಿಲ್ ಗೇಟ್ಸ್ ಅವರು ಬಿಲ್ & ಮೆಲಿಂಡಾ ಗೇಟ್ಸ್ ಫೌಂಡೇಶನ್‌ಗೆ 20 ಶತಕೋಟಿ ಡಾಲರ್‌‌ ಅನ್ನು ವರ್ಗಾಯಿಸುತ್ತಿರುವುದಾಗಿ ಹೇಳಿದ್ದಾರೆ. ವಾರೆನ್ ಬಫೆಟ್ ಕೂಡಾ ಈಗಾಗಲೇ 35 ಶತಕೋಟಿ ಡಾಲರ್‌‌ಗಿಂತ ಹೆಚ್ಚಿನ ಹಣವನ್ನು ಚಾರಿಟಿಗೆ ದೇಣಿಗೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...