Homeಕರ್ನಾಟಕಪ್ರಕರಣ ದಾಖಲಾದ ತಕ್ಷಣ ಬಂಧಿಸಬೇಕೆಂಬ ಯಾವುದೇ ಕಾನೂನಿಲ್ಲ: ಚಿತ್ರದುರ್ಗ ಎಸ್‌ಪಿ

ಪ್ರಕರಣ ದಾಖಲಾದ ತಕ್ಷಣ ಬಂಧಿಸಬೇಕೆಂಬ ಯಾವುದೇ ಕಾನೂನಿಲ್ಲ: ಚಿತ್ರದುರ್ಗ ಎಸ್‌ಪಿ

- Advertisement -
- Advertisement -

“ಪ್ರಕರಣ ದಾಖಲಾದ ತಕ್ಷಣ ಬಂಧಿಸಬೇಕೆಂದು ಯಾವುದೇ ಕಾಯ್ದೆಯಲ್ಲೂ ಇಲ್ಲ. ತನಿಖೆ ಮಾಡಿ, ಸಾಕ್ಷ್ಯಾಧಾರಗಳ ಆಧಾರದಲ್ಲಿ ಮುರುಘಾ ಶರಣರನ್ನು ಬಂಧಿಸುತ್ತೇವೆ” ಎಂದು ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ ತಿಳಿಸಿದ್ದಾರೆ.

ಮಠದ ವಿದ್ಯಾರ್ಥಿನಿಯರು ನೀಡಿದ ದೂರಿನ ಆಧಾರದಲ್ಲಿ ‘ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ’ (ಪೋಕ್ಸೋ) ಅಡಿಯಲ್ಲಿ ಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠದ ಡಾ. ಶಿವರಾತ್ರಿ ಮುರುಘಾ ಶರಣರ ವಿರುದ್ಧ ಪ್ರಕರಣ ದಾಖಲಾಗಿದೆ. ಆದರೆ ಇನ್ನೂ ಮುರುಘಾ ಶರಣರ ಬಂಧನವಾಗಿಲ್ಲ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮೈಸೂರಿನಲ್ಲಿ ದಾಖಲಾಗಿದ್ದ ಪ್ರಕರಣವನ್ನು ಚಿತ್ರದುರ್ಗದ ಕೋಟೆ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಪ್ರಕರಣ ದಾಖಲಾಗಿ ಮೂರು ದಿನ ಕಳೆದರೂ ಆರೋಪಿಗಳನ್ನು ಬಂಧಿಸಿಲ್ಲ.

“ಇಲ್ಲಿ ಸಾಮಾನ್ಯರಿಗೊಂದು ನ್ಯಾಯ, ಸ್ವಾಮೀಜಿಗೊಂದು ನ್ಯಾಯವಿದೆಯೇ?” ಎಂಬ ಪ್ರಶ್ನೆ ಮುನ್ನೆಲೆಗೆ ಬಂದಿದೆ. ಈವರೆಗೆ ಎರಡು ಭಾರಿ ‘ನಾನುಗೌರಿ.ಕಾಂ’ ಚಿತ್ರದುರ್ಗದ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಸಂಪರ್ಕಿಸಿದ್ದು ಎರಡು ಭಾರಿಯೂ “ತನಿಖೆ ನಡೆಯುತ್ತಿದೆ. ಸಾಕ್ಷ್ಯಗಳು ಸಿಕ್ಕಾಗ ಬಂಧಿಸುತ್ತೇವೆ” ಎಂದು ತಿಳಿಸಿದ್ದಾರೆ.

“ಸಾಕ್ಷಿಗಳ ನಾಶಪಡಿಸಲು ಪೊಲೀಸರು ಅವಕಾಶ ನೀಡುತ್ತಿದ್ದಾರೆ ಎಂಬ ಆರೋಪಗಳು ಬಂದಿವೆ” ಎಂದು ಕೇಳಿದಾಗ, “ಹಾಗೇನಿಲ್ಲ. ಸಾಕ್ಷ್ಯಗಳನ್ನು ಕಲೆಹಾಕುತ್ತಿದ್ದೇವೆ” ಎಂದಿದ್ದಾರೆ ಎಸ್‌ಪಿ.

“ಪೋಕ್ಸೋ ಪ್ರಕರಣ ದಾಖಲಾದಾಗ ತಕ್ಷಣವೇ ಆರೋಪಿಗಳನ್ನು ಬಂಧಿಸಬೇಕಾಗುತ್ತದೆ” ಎಂದು ಕಾನೂನು ತಜ್ಞರು ತಾಳುತ್ತಿರುವ ಅಭಿಪ್ರಾಯಗಳನ್ನು ಅವರ ಗಮನಕ್ಕೆ ತಂದಾಗ, “ಪ್ರಕರಣ ದಾಖಲಾದ ತಕ್ಷಣ ಆರೋಪಿಗಳನ್ನು ಬಂಧಿಸಬೇಕೆಂದು ಯಾವುದೇ ಕಾಯ್ದೆ ಇಲ್ಲ. ತನಿಖೆ ನಡೆಸಲಾಗುತ್ತಿದೆ” ಎಂದು ಪುನರಾವರ್ತಿಸಿದರು.

ಕಾನೂನು ತಜ್ಞರು ಏನಂತಾರೆ? ಒಡನಾಡಿ ಸಂಸ್ಥೆ ಹೇಳಿದ್ದೇನು?

“ಲೈಂಗಿಕ ದೌರ್ಜನ್ಯಕ್ಕೆ ಒಳಗಾಗುವ ಮಕ್ಕಳು ಯಾರ ಬಳಿ ಈ ಬಗ್ಗೆ ಹೇಳುತ್ತಾರೋ, ಅವರೇ ಪೊಲೀಸರಿಗೆ ಮಾಹಿತಿ ನೀಡಬೇಕು. ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಆಗಿರುವುದು ತಿಳಿದಿದ್ದೂ ಸುಮ್ಮನಿದ್ದರೆ, ನಂತರದ ದಿನಗಳಲ್ಲಿ ಆ ಕುರಿತು ಹೇಳಿದರೆ, ಆ ವ್ಯಕ್ತಿಯನ್ನು ಕೂಡ ಬಂಧಿಸಬಹುದು ಎಂದು ಈ ಕಾಯಿದೆ ಹೇಳುತ್ತದೆ. ಪೋಕ್ಸೊ ಕಾಯಿದೆ ಹೇಗಿದೆ ಅಂದರೆ, ಮೊದಲು ಯಾರ ವಿರುದ್ಧ ಆರೋಪ ಕೇಳಿ ಬಂದಿದೆಯೋ ಆ ವ್ಯಕ್ತಿಯ ಬಂಧನ, ನಂತರ ತನಿಖೆ” ಎನ್ನುತ್ತಾರೆ ಅಂಜಲಿ ರಾಮಣ್ಣ.

“ಪೋಕ್ಸೋ ಪ್ರಕಣದಲ್ಲಿ, ಇಬ್ಬರು ಬಾಲಕಿಯರು ನೇರವಾಗಿ ಬಂದು ದೂರು ನೀಡಿದಾಗ ಆರೋಪಿಯನ್ನು ಬಂಧಿಸಲೇಬೇಕು. ಆರೋಪಿ ಎಷ್ಟೇ ಪ್ರಬಾವಿ ಸ್ಥಾನದಲ್ಲಿದ್ದರೂ ಅವರನ್ನು ಬಂಧಿಸಬೇಕು. ಇಂಥ ಪ್ರಕಣಗಳಲ್ಲಿ ಸಾಮಾನ್ಯ ಜನರನ್ನು ಬಂಧಿಸಿದಂತೆ ಪ್ರಭಾವಿ ವ್ಯಕ್ತಿಗಳನ್ನು ಬಂಧಿಸುವ ಪದ್ಧತಿ ನಮ್ಮಲ್ಲಿ ಇಲ್ಲ. ಬದಲಿಗೆ ಆರೋಪ ಮಾಡಿದವರ ಮೇಲೆಯೇ ಅನುಮಾನ ವ್ಯಕ್ತಪಡಿಸುವ ಪ್ರವೃತ್ತಿ ನಡೆದುಕೊಂಡು ಬಂದಿದೆ” ಎಂದು ವಕೀಲರಾದ ರಾಜಲಕ್ಷ್ಮಿ ಅಂಕಲಗಿ ವಿಷಾದಿಸಿದ್ದಾರೆ.

ಪ್ರಕರಣ ದಾಖಲಾಗಲು ಸಹಾಯಹಸ್ತ ಚಾಚಿದ ಮೈಸೂರಿನ ಒಡನಾಡಿ ಸಂಂಸ್ಥೆಯ ಪರಶು ಅವರು ವಿಳಂಬ ನೀತಿಯನ್ನು ಖಂಡಿಸಿದ್ದಾರೆ. “ಮುರುಘಾ ಶ್ರೀ ಪ್ರಕರಣದಲ್ಲಿ ಐಪಿಸಿ ಸೆಕ್ಷನ್ 164ರ ಅಡಿ ಹೇಳಿಕೆ ದಾಖಲಿಸಬೇಕಿತ್ತು. ಆದರೆ, ಪೊಲೀಸರು ಆ ಪ್ರಕ್ರಿಯೆಯನ್ನು ವಿಳಂಬ ಮಾಡುತ್ತಿದ್ದಾರೆ. ಪೊಲೀಸರ ವಿಳಂಬ ಧೋರಣೆಯನ್ನು ನಾವು ಗಮನಿಸುತ್ತಿದ್ದೇವೆ. ಈ ಹಿನ್ನೆಲೆಯಲ್ಲಿ ಈ ವಿಳಂಬ ಪ್ರಶ್ನಿಸಿ ನ್ಯಾಯಾಲಯಕ್ಕೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಸಲ್ಲಿಸುತ್ತೇವೆ” ಎಂದಿದ್ದಾರೆ.

ಇದನ್ನೂ ಓದಿರಿ: ಸಂತ್ರಸ್ತ ಮಕ್ಕಳನ್ನು ಹೆದರಿಸುವ ಪ್ರಯತ್ನ ನಡೆಯುತ್ತಿವೆ: ದಲಿತ ಹೋರಾಟಗಾರ ಪ್ರೊ.ಸಿ.ಕೆ.ಮಹೇಶ್ ಆತಂಕ

“ಎಫ್‌ಐಆರ್‌ ದಾಖಲಾಗಿ, ಸಂತ್ರಸ್ತ ಬಾಲಕಿಯರ ಹೇಳಿಕೆ ಪಡೆದು ದಿನ ಉರುಳಿದರೂ ಪೊಲೀಸರು ಕ್ರಮ ಜರುಗಿಸದೇ ಇರುವ ಕುರಿತು ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಅವರು ಎಚ್ಚರಿಕೆ ನೀಡಿದ್ದಾರೆ. ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾಗಿ ಕೆಲಸ ಮಾಡಿದ ಅನುಭವವೂ ಪರಶು ಅವರಿಗಿದೆ.

“ಈಗ ನಮ್ಮ ಮುಂದೆ ಎರಡು ಆಯ್ಕೆಗಳಿವೆ. ಆರೋಪಿ ವಿರುದ್ಧ ಕ್ರಮ ಕೈಗೊಳ್ಳುವುದಕ್ಕೆ ಪೊಲೀಸರು ತಡ ಮಾಡಿದ್ದಕ್ಕೆ ಸಂಬಂಧಿಸಿದಂತೆಯೇ ನಾವು ಮತ್ತೊಂದು ಪ್ರಕರಣ ದಾಖಲಿಸಬಹುದು. ಇದೇ ಆಧಾರದ ಮೇಲೆ ನಾವು ಸಿಬಿಐ ತನಿಖೆಗೂ ಒತ್ತಾಯಿಸಬಹುದು. ಇವೆರಡೂ ಆಯ್ಕೆಗಳೂ ನಮ್ಮ ಮುಂದಿವೆ” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಸಂಬಂಧಪಟ್ಟ ಕಾಯ್ದೆ ಅಡಿ ದೂರು ದಾಖಲಾಗಿದ್ದರು ವ್ಯಕ್ತಿಯ ಬಂಧನವಾಗದಿದ್ದರೆ ಪೊಲೀಸರ ಮೇಲೆ ಖಾಸಗಿ ದೂರು ಸಲ್ಲಿಸಬಹುದಲ್ಲವೇ ….ಎಸ್ ಪಿ ಮೇಲೆ ಯಾಕೆ ದೂರು ಸಲ್ಲಿಸಬಾರದು….?

  2. ಚಿತ್ರದುರ್ಗದ ಎಸ್‌. ಪಿ., ಆರೋಪಿ ಮುರುಗಾ ಶರಣರ ಪ್ರಭಾವಕ್ಕೆ ಬಲಿಯಾಗಿರುವುದು, ಸ್ಪಷ್ಟವಾಗಿ ಕಾಣುತ್ತಿರುವುದರಿಂದ, ಈಗ ಈ ಎಸ್‌ ಪಿ.ಯನ್ನೂ ಆರೋಪಿಯನ್ನಾಗಿಸಿ, ನ್ಯಾಯಾಲಯಕ್ಕೆ ದೂರು ಸಲ್ಲಿಸಬೇಕು.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...