Homeಕರ್ನಾಟಕಪ್ರಕರಣ ದಾಖಲಾದ ತಕ್ಷಣ ಬಂಧಿಸಬೇಕೆಂಬ ಯಾವುದೇ ಕಾನೂನಿಲ್ಲ: ಚಿತ್ರದುರ್ಗ ಎಸ್‌ಪಿ

ಪ್ರಕರಣ ದಾಖಲಾದ ತಕ್ಷಣ ಬಂಧಿಸಬೇಕೆಂಬ ಯಾವುದೇ ಕಾನೂನಿಲ್ಲ: ಚಿತ್ರದುರ್ಗ ಎಸ್‌ಪಿ

- Advertisement -
- Advertisement -

“ಪ್ರಕರಣ ದಾಖಲಾದ ತಕ್ಷಣ ಬಂಧಿಸಬೇಕೆಂದು ಯಾವುದೇ ಕಾಯ್ದೆಯಲ್ಲೂ ಇಲ್ಲ. ತನಿಖೆ ಮಾಡಿ, ಸಾಕ್ಷ್ಯಾಧಾರಗಳ ಆಧಾರದಲ್ಲಿ ಮುರುಘಾ ಶರಣರನ್ನು ಬಂಧಿಸುತ್ತೇವೆ” ಎಂದು ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ ತಿಳಿಸಿದ್ದಾರೆ.

ಮಠದ ವಿದ್ಯಾರ್ಥಿನಿಯರು ನೀಡಿದ ದೂರಿನ ಆಧಾರದಲ್ಲಿ ‘ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ’ (ಪೋಕ್ಸೋ) ಅಡಿಯಲ್ಲಿ ಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠದ ಡಾ. ಶಿವರಾತ್ರಿ ಮುರುಘಾ ಶರಣರ ವಿರುದ್ಧ ಪ್ರಕರಣ ದಾಖಲಾಗಿದೆ. ಆದರೆ ಇನ್ನೂ ಮುರುಘಾ ಶರಣರ ಬಂಧನವಾಗಿಲ್ಲ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮೈಸೂರಿನಲ್ಲಿ ದಾಖಲಾಗಿದ್ದ ಪ್ರಕರಣವನ್ನು ಚಿತ್ರದುರ್ಗದ ಕೋಟೆ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಪ್ರಕರಣ ದಾಖಲಾಗಿ ಮೂರು ದಿನ ಕಳೆದರೂ ಆರೋಪಿಗಳನ್ನು ಬಂಧಿಸಿಲ್ಲ.

“ಇಲ್ಲಿ ಸಾಮಾನ್ಯರಿಗೊಂದು ನ್ಯಾಯ, ಸ್ವಾಮೀಜಿಗೊಂದು ನ್ಯಾಯವಿದೆಯೇ?” ಎಂಬ ಪ್ರಶ್ನೆ ಮುನ್ನೆಲೆಗೆ ಬಂದಿದೆ. ಈವರೆಗೆ ಎರಡು ಭಾರಿ ‘ನಾನುಗೌರಿ.ಕಾಂ’ ಚಿತ್ರದುರ್ಗದ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಸಂಪರ್ಕಿಸಿದ್ದು ಎರಡು ಭಾರಿಯೂ “ತನಿಖೆ ನಡೆಯುತ್ತಿದೆ. ಸಾಕ್ಷ್ಯಗಳು ಸಿಕ್ಕಾಗ ಬಂಧಿಸುತ್ತೇವೆ” ಎಂದು ತಿಳಿಸಿದ್ದಾರೆ.

“ಸಾಕ್ಷಿಗಳ ನಾಶಪಡಿಸಲು ಪೊಲೀಸರು ಅವಕಾಶ ನೀಡುತ್ತಿದ್ದಾರೆ ಎಂಬ ಆರೋಪಗಳು ಬಂದಿವೆ” ಎಂದು ಕೇಳಿದಾಗ, “ಹಾಗೇನಿಲ್ಲ. ಸಾಕ್ಷ್ಯಗಳನ್ನು ಕಲೆಹಾಕುತ್ತಿದ್ದೇವೆ” ಎಂದಿದ್ದಾರೆ ಎಸ್‌ಪಿ.

“ಪೋಕ್ಸೋ ಪ್ರಕರಣ ದಾಖಲಾದಾಗ ತಕ್ಷಣವೇ ಆರೋಪಿಗಳನ್ನು ಬಂಧಿಸಬೇಕಾಗುತ್ತದೆ” ಎಂದು ಕಾನೂನು ತಜ್ಞರು ತಾಳುತ್ತಿರುವ ಅಭಿಪ್ರಾಯಗಳನ್ನು ಅವರ ಗಮನಕ್ಕೆ ತಂದಾಗ, “ಪ್ರಕರಣ ದಾಖಲಾದ ತಕ್ಷಣ ಆರೋಪಿಗಳನ್ನು ಬಂಧಿಸಬೇಕೆಂದು ಯಾವುದೇ ಕಾಯ್ದೆ ಇಲ್ಲ. ತನಿಖೆ ನಡೆಸಲಾಗುತ್ತಿದೆ” ಎಂದು ಪುನರಾವರ್ತಿಸಿದರು.

ಕಾನೂನು ತಜ್ಞರು ಏನಂತಾರೆ? ಒಡನಾಡಿ ಸಂಸ್ಥೆ ಹೇಳಿದ್ದೇನು?

“ಲೈಂಗಿಕ ದೌರ್ಜನ್ಯಕ್ಕೆ ಒಳಗಾಗುವ ಮಕ್ಕಳು ಯಾರ ಬಳಿ ಈ ಬಗ್ಗೆ ಹೇಳುತ್ತಾರೋ, ಅವರೇ ಪೊಲೀಸರಿಗೆ ಮಾಹಿತಿ ನೀಡಬೇಕು. ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಆಗಿರುವುದು ತಿಳಿದಿದ್ದೂ ಸುಮ್ಮನಿದ್ದರೆ, ನಂತರದ ದಿನಗಳಲ್ಲಿ ಆ ಕುರಿತು ಹೇಳಿದರೆ, ಆ ವ್ಯಕ್ತಿಯನ್ನು ಕೂಡ ಬಂಧಿಸಬಹುದು ಎಂದು ಈ ಕಾಯಿದೆ ಹೇಳುತ್ತದೆ. ಪೋಕ್ಸೊ ಕಾಯಿದೆ ಹೇಗಿದೆ ಅಂದರೆ, ಮೊದಲು ಯಾರ ವಿರುದ್ಧ ಆರೋಪ ಕೇಳಿ ಬಂದಿದೆಯೋ ಆ ವ್ಯಕ್ತಿಯ ಬಂಧನ, ನಂತರ ತನಿಖೆ” ಎನ್ನುತ್ತಾರೆ ಅಂಜಲಿ ರಾಮಣ್ಣ.

“ಪೋಕ್ಸೋ ಪ್ರಕಣದಲ್ಲಿ, ಇಬ್ಬರು ಬಾಲಕಿಯರು ನೇರವಾಗಿ ಬಂದು ದೂರು ನೀಡಿದಾಗ ಆರೋಪಿಯನ್ನು ಬಂಧಿಸಲೇಬೇಕು. ಆರೋಪಿ ಎಷ್ಟೇ ಪ್ರಬಾವಿ ಸ್ಥಾನದಲ್ಲಿದ್ದರೂ ಅವರನ್ನು ಬಂಧಿಸಬೇಕು. ಇಂಥ ಪ್ರಕಣಗಳಲ್ಲಿ ಸಾಮಾನ್ಯ ಜನರನ್ನು ಬಂಧಿಸಿದಂತೆ ಪ್ರಭಾವಿ ವ್ಯಕ್ತಿಗಳನ್ನು ಬಂಧಿಸುವ ಪದ್ಧತಿ ನಮ್ಮಲ್ಲಿ ಇಲ್ಲ. ಬದಲಿಗೆ ಆರೋಪ ಮಾಡಿದವರ ಮೇಲೆಯೇ ಅನುಮಾನ ವ್ಯಕ್ತಪಡಿಸುವ ಪ್ರವೃತ್ತಿ ನಡೆದುಕೊಂಡು ಬಂದಿದೆ” ಎಂದು ವಕೀಲರಾದ ರಾಜಲಕ್ಷ್ಮಿ ಅಂಕಲಗಿ ವಿಷಾದಿಸಿದ್ದಾರೆ.

ಪ್ರಕರಣ ದಾಖಲಾಗಲು ಸಹಾಯಹಸ್ತ ಚಾಚಿದ ಮೈಸೂರಿನ ಒಡನಾಡಿ ಸಂಂಸ್ಥೆಯ ಪರಶು ಅವರು ವಿಳಂಬ ನೀತಿಯನ್ನು ಖಂಡಿಸಿದ್ದಾರೆ. “ಮುರುಘಾ ಶ್ರೀ ಪ್ರಕರಣದಲ್ಲಿ ಐಪಿಸಿ ಸೆಕ್ಷನ್ 164ರ ಅಡಿ ಹೇಳಿಕೆ ದಾಖಲಿಸಬೇಕಿತ್ತು. ಆದರೆ, ಪೊಲೀಸರು ಆ ಪ್ರಕ್ರಿಯೆಯನ್ನು ವಿಳಂಬ ಮಾಡುತ್ತಿದ್ದಾರೆ. ಪೊಲೀಸರ ವಿಳಂಬ ಧೋರಣೆಯನ್ನು ನಾವು ಗಮನಿಸುತ್ತಿದ್ದೇವೆ. ಈ ಹಿನ್ನೆಲೆಯಲ್ಲಿ ಈ ವಿಳಂಬ ಪ್ರಶ್ನಿಸಿ ನ್ಯಾಯಾಲಯಕ್ಕೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಸಲ್ಲಿಸುತ್ತೇವೆ” ಎಂದಿದ್ದಾರೆ.

ಇದನ್ನೂ ಓದಿರಿ: ಸಂತ್ರಸ್ತ ಮಕ್ಕಳನ್ನು ಹೆದರಿಸುವ ಪ್ರಯತ್ನ ನಡೆಯುತ್ತಿವೆ: ದಲಿತ ಹೋರಾಟಗಾರ ಪ್ರೊ.ಸಿ.ಕೆ.ಮಹೇಶ್ ಆತಂಕ

“ಎಫ್‌ಐಆರ್‌ ದಾಖಲಾಗಿ, ಸಂತ್ರಸ್ತ ಬಾಲಕಿಯರ ಹೇಳಿಕೆ ಪಡೆದು ದಿನ ಉರುಳಿದರೂ ಪೊಲೀಸರು ಕ್ರಮ ಜರುಗಿಸದೇ ಇರುವ ಕುರಿತು ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಅವರು ಎಚ್ಚರಿಕೆ ನೀಡಿದ್ದಾರೆ. ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾಗಿ ಕೆಲಸ ಮಾಡಿದ ಅನುಭವವೂ ಪರಶು ಅವರಿಗಿದೆ.

“ಈಗ ನಮ್ಮ ಮುಂದೆ ಎರಡು ಆಯ್ಕೆಗಳಿವೆ. ಆರೋಪಿ ವಿರುದ್ಧ ಕ್ರಮ ಕೈಗೊಳ್ಳುವುದಕ್ಕೆ ಪೊಲೀಸರು ತಡ ಮಾಡಿದ್ದಕ್ಕೆ ಸಂಬಂಧಿಸಿದಂತೆಯೇ ನಾವು ಮತ್ತೊಂದು ಪ್ರಕರಣ ದಾಖಲಿಸಬಹುದು. ಇದೇ ಆಧಾರದ ಮೇಲೆ ನಾವು ಸಿಬಿಐ ತನಿಖೆಗೂ ಒತ್ತಾಯಿಸಬಹುದು. ಇವೆರಡೂ ಆಯ್ಕೆಗಳೂ ನಮ್ಮ ಮುಂದಿವೆ” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಸಂಬಂಧಪಟ್ಟ ಕಾಯ್ದೆ ಅಡಿ ದೂರು ದಾಖಲಾಗಿದ್ದರು ವ್ಯಕ್ತಿಯ ಬಂಧನವಾಗದಿದ್ದರೆ ಪೊಲೀಸರ ಮೇಲೆ ಖಾಸಗಿ ದೂರು ಸಲ್ಲಿಸಬಹುದಲ್ಲವೇ ….ಎಸ್ ಪಿ ಮೇಲೆ ಯಾಕೆ ದೂರು ಸಲ್ಲಿಸಬಾರದು….?

  2. ಚಿತ್ರದುರ್ಗದ ಎಸ್‌. ಪಿ., ಆರೋಪಿ ಮುರುಗಾ ಶರಣರ ಪ್ರಭಾವಕ್ಕೆ ಬಲಿಯಾಗಿರುವುದು, ಸ್ಪಷ್ಟವಾಗಿ ಕಾಣುತ್ತಿರುವುದರಿಂದ, ಈಗ ಈ ಎಸ್‌ ಪಿ.ಯನ್ನೂ ಆರೋಪಿಯನ್ನಾಗಿಸಿ, ನ್ಯಾಯಾಲಯಕ್ಕೆ ದೂರು ಸಲ್ಲಿಸಬೇಕು.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...