Homeಮುಖಪುಟಬುಡಕಟ್ಟು ಯುವತಿಗೆ ಚಿತ್ರಹಿಂಸೆ: ಆರೋಪಿ ಸೀಮಾ ಪಾತ್ರಾ ಬಿಜೆಪಿಯಿಂದ ಅಮಾನತು

ಬುಡಕಟ್ಟು ಯುವತಿಗೆ ಚಿತ್ರಹಿಂಸೆ: ಆರೋಪಿ ಸೀಮಾ ಪಾತ್ರಾ ಬಿಜೆಪಿಯಿಂದ ಅಮಾನತು

ಆರೋಪಿ ತನ್ನ ಫೇ‌ಸ್‌ಬುಕ್ ಖಾತೆಯಲ್ಲಿ, ‘ಬೇಟಿ ಬಚಾವೋ - ಬೇಟಿ ಪಢಾವೋ ರಾಜ್ಯ ಸಂಚಾಲಕಿ’ ಎಂದು ಬರೆದುಕೊಂಡಿದ್ದಾರೆ

- Advertisement -
- Advertisement -

ಜಾರ್ಖಂಡ್‌ನ ಬಿಜೆಪಿ ನಾಯಕಿ ಸೀಮಾ ಪಾತ್ರಾ ತಮ್ಮ ಮನೆಯ ಮನೆಕೆಲಸ ಮಾಡಿಕೊಂಡಿದ್ದ ಬುಡಕಟ್ಟು ಸಮುದಾಯದ ಯುವತಿಯನ್ನು ಕ್ರೂರವಾಗಿ ಚಿತ್ರಹಿಂಸೆ ನೀಡಿದ್ದಾರೆ ಎಂಬ ಆರೋಪದ ನಡುವೆ ಪಕ್ಷವೂ ಮಂಗಳವಾರ ಅವರನ್ನು ಅಮಾನತುಗೊಳಿಸಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಸೀಮಾ ಪಾತ್ರಾ ಅವರು ಬಿಜೆಪಿಯ ಮಹಿಳಾ ವಿಭಾಗದ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಸದಸ್ಯರಾಗಿದ್ದಾರೆ. ಅವರ ಪತಿ ಮಹೇಶ್ವರ್ ಪಾತ್ರಾ ನಿವೃತ್ತ ಐಎಎಸ್ ಅಧಿಕಾರಿ ಆಗಿದ್ದಾರೆ. ಸೀಮಾ ಅವರು ತನ್ನ ಫೇ‌ಸ್‌ಬುಕ್ ಖಾತೆಯಲ್ಲಿ,“ಬೇಟಿ ಬಚಾವೋ – ಬೇಟಿ ಪಢಾವೋ ರಾಜ್ಯ ಸಂಚಾಲಕಿ ಮತ್ತು ಜಾರ್ಖಂಡ್ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯೆ” ಎಂದು ಬರೆದುಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಂತ್ರಸ್ತೆ ಬುಡಕಟ್ಟು ಸಮುದಾಯದ ಯುವತಿಯು ಬಿಜೆಪಿ ನಾಯಕಿ ತನಗೆ ಚಿತ್ರಹಿಂಸೆ ನೀಡಿದ್ದಾರೆ ಎಂದು ಹೇಳಿರುವ ವಿಡಿಯೊ ವೈರಲ್ ಆದ ನಂತರ ಜಾರ್ಖಂಡ್ ಬಿಜೆಪಿ ಮುಖ್ಯಸ್ಥ ದೀಪಕ್ ಪ್ರಕಾಶ್ ಅವರು ಸೀಮಾ ವಿರುದ್ಧ ಕ್ರಮಕ್ಕೆ ಆದೇಶಿಸಿದ್ದಾರೆ.

ಇದನ್ನೂ ಓದಿ: ‘ನಾಲಗೆಯಲ್ಲಿ ನೆಲ ಸ್ವಚ್ಛ ಮಾಡಿಸುತ್ತಿದ್ದರು’: ಬುಡಕಟ್ಟು ಯುವತಿಯನ್ನು 8 ವರ್ಷ ಬಂಧಿಸಿಟ್ಟು ಚಿತ್ರಹಿಂಸೆ ನೀಡುತ್ತಿದ್ದ BJP ನಾಯಕಿ

ವೈರಲ್ ಆಗಿರುವ ವಿಡಿಯೊದಲ್ಲಿ, ಸಂತ್ರಸ್ತೆ ಸುನೀತಾ ಅವರ ಸ್ಥಿತಿಯು ಭಯಾನಕವಾಗಿರುವುದು ಕಂಡು ಬಂದಿದೆ. ಯುವತಿಯು ಆಸ್ಪತ್ರೆಯ ಹಾಸಿಗೆಯಲ್ಲಿದ್ದು, ಅವರ ಹಲವಾರು ಹಲ್ಲುಗಳು ಕಾಣೆಯಾಗಿವೆ. ಅಲ್ಲದೆ ಅವರು ಕುಳಿತುಕೊಳ್ಳಲು ಕೂಡಾ ಅಸಮರ್ಥ ಸ್ಥಿತಿಯಲ್ಲಿದ್ದಾರೆ. ಜೊತೆಗೆ ಅವರ ದೇಹದ ಮೇಲಿನ ಗಾಯದ ಗುರುತುಗಳು ಅವರ ಮೇಲೆ ನಿರಂತರ ದಾಳಿ ನಡೆದಿರುವುದು ಸೂಚಿಸುತ್ತವೆ ಎಂದು ಸ್ಥಳೀಯ ಮಾಧ್ಯಮ ವರದಿಗಳು ತಿಳಿಸಿವೆ.

ಸಾಮಾಜಿಕ ಮಾಧ್ಯಮಗಳಲ್ಲಿ ಸುನಿತಾ ಅವರ ಪರಿಸ್ಥಿತಿಯ ವಿಡಿಯೊ ವೈರಲ್ ಆಗುತ್ತಿದ್ದಂತೆ, ಸೀಮಾ ಪಾತ್ರ ಅವರನ್ನು ತಕ್ಷಣವೇ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.

29 ವರ್ಷದ ಸುನೀತಾ ಅವರು ಜಾರ್ಖಂಡ್‌ನ ಗುಮ್ಲಾ ಮೂಲದವರಾಗಿದ್ದು, ಸುಮಾರು 10 ವರ್ಷಗಳ ಹಿಂದೆ ಸೀಮಾ ಪಾತ್ರಾ ಅವರ ಮನೆಯಲ್ಲಿ ಕೆಲಸಕ್ಕೆ ಸೇರಿದ್ದರು. ಅವರ ಮಗಳು ವತ್ಸಲಾ ಕೆಲಸದ ನಿಮಿತ್ತ ದೆಹಲಿಗೆ ತೆರಳುತ್ತಿದ್ದಾಗ ಕೂಡಾ ಸುನೀತಾ ಅವರ ಸಹಾಯಕ್ಕೆ ತೆರಳಿದ್ದರು. ಸುಮಾರು ನಾಲ್ಕು ವರ್ಷಗಳ ಹಿಂದೆ ವತ್ಸಲಾ ಮತ್ತು ಸುನೀತಾ ರಾಂಚಿಗೆ ಮರಳಿದ್ದರು.

ಇದನ್ನೂ ಓದಿ: ವಿಶ್ವದ ಮೂರನೇ ಶ್ರೀಮಂತ ವ್ಯಕ್ತಿಯಾಗಿ ಪ್ರಧಾನಿ ಮೋದಿ ಆಪ್ತ ಉದ್ಯಮಿ ಗೌತಮ್ ಅದಾನಿ!

ಸುಮಾರು ಆರು ವರ್ಷಗಳಿಂದ ಸೀಮಾ ಪಾತ್ರಾ ಕ್ರೂರ ಚಿತ್ರಹಿಂಸೆ ನೀಡುತ್ತಿದ್ದಾರೆ ಎಂದು ಸಂತ್ರಸ್ತೆ ಯುವತಿ ಹೇಳಿದ್ದಾರೆ. ಅಪಾರ ನೋವಿನಿಂದ ಮಾತನಾಡಿದ ಅವರು, ತನಗೆ ಬಿಸಿ ತವಾ ಮತ್ತು ರಾಡ್‌ಗಳಿಂದ ಥಳಿಸಿ ಹಲ್ಲುಗಳನ್ನು ಒಡೆದುಹಾಕಲಾಯಿತು ಎಂದು ವೀಡಿಯೊಗಳಲ್ಲಿ ಹೇಳಿಕೊಂಡಿದ್ದಾರೆ. ಆಕೆಗೆ ನೆಲದ ಮೇಲಿನ ಮೂತ್ರವನ್ನು ನೆಕ್ಕುವಂತೆ ಮಾಡಲಾಯಿತು ಎಂದು ಅವರು ತಿಳಿಸಿದ್ದಾರೆ.

ಈ ಚಿತ್ರಹಿಂಸೆಯನ್ನು ತನಗೆ ಶಿಕ್ಷೆಯಾಗಿ ನೀಡಲಾಗಿದ್ದು, ಆದರೆ ತಾನು ಮಾಡಿರುವ ತಪ್ಪುಗಳೇನು ಎಂದು ತನಗೆ ತಿಳಿದಿರಲಿಲ್ಲ ಎಂದು ಸುನೀತಾ ಹೇಳಿದ್ದಾರೆ.

ಸೀಮಾ ಪಾತ್ರಾ ಅವರ ಮಗ ಆಯುಷ್ಮಾನ್ ತನಗೆ ಸಹಾಯ ಮಾಡಿದ್ದಾನೆ ಎಂದು ಯುವತಿ ಹೇಳಿದ್ದು,“ನಾನು ಬದುಕಿರುವುದು ಅವನಿಂದ ಮಾತ್ರ” ಎಂದು ಅವರು ಹೇಳಿದ್ದಾರೆ. ತನ್ನ ಸಹೋದರಿ ಮತ್ತು ಸೋದರ ಮಾವನಿಗೆ ಈ ಕಷ್ಟಗಳನ್ನು ಹೇಳಿದ್ದರೂ ಅವರು ಇದರ ಬಗ್ಗೆ ಚಿಂತಿತರಾಗಿರಲಿಲ್ಲ ಎಂದು ಅವರು ಹೇಳಿದ್ದಾರೆ. ವೀಡಿಯೊದಲ್ಲಿ ಸುನಿತಾ ಅವರು ತಾನು ಚೇತರಿಸಿಕೊಂಡರೆ ಅಧ್ಯಯನ ಮಾಡುವುದಾಗಿ ಹೇಳಿರುವುದು ದಾಖಲಾಗಿದೆ.

ಇದನ್ನೂ ಓದಿ: ಮಾತು ಮರೆತ ಭಾರತ; ಊನಾ ಫೈಲ್: ಆರೆಸ್ಸೆಸ್-ಬಿಜೆಪಿಯ ದನದ ರಾಜಕಾರಣ ಮತ್ತು ದಲಿತರು

ಸೀಮಾ ಅವರು ಮಗ ಆಯುಷ್ಮಾನ್ ಅವರು ಸುನೀತಾ ಅವರ ಪರಿಸ್ಥಿತಿಯನ್ನು ಸ್ನೇಹಿತರಿಗೆ ವಿವರಿಸಿ ಸಹಾಯ ಕೇಳಿದ್ದರು. ನಂತರ ಆತನ ಸ್ನೇಹಿತ ಪೊಲೀಸ್ ದೂರು ದಾಖಲಿಸಿದ್ದು, ಸುನೀತಾರನ್ನು ರಕ್ಷಿಸಲಾಗಿದೆ. ಪಸ್ತುತ ಅವರು ರಾಂಚಿಯ ರಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...