Homeಮುಖಪುಟಬುಡಕಟ್ಟು ಯುವತಿಗೆ ಚಿತ್ರಹಿಂಸೆ: ಆರೋಪಿ ಸೀಮಾ ಪಾತ್ರಾ ಬಿಜೆಪಿಯಿಂದ ಅಮಾನತು

ಬುಡಕಟ್ಟು ಯುವತಿಗೆ ಚಿತ್ರಹಿಂಸೆ: ಆರೋಪಿ ಸೀಮಾ ಪಾತ್ರಾ ಬಿಜೆಪಿಯಿಂದ ಅಮಾನತು

ಆರೋಪಿ ತನ್ನ ಫೇ‌ಸ್‌ಬುಕ್ ಖಾತೆಯಲ್ಲಿ, ‘ಬೇಟಿ ಬಚಾವೋ - ಬೇಟಿ ಪಢಾವೋ ರಾಜ್ಯ ಸಂಚಾಲಕಿ’ ಎಂದು ಬರೆದುಕೊಂಡಿದ್ದಾರೆ

- Advertisement -
- Advertisement -

ಜಾರ್ಖಂಡ್‌ನ ಬಿಜೆಪಿ ನಾಯಕಿ ಸೀಮಾ ಪಾತ್ರಾ ತಮ್ಮ ಮನೆಯ ಮನೆಕೆಲಸ ಮಾಡಿಕೊಂಡಿದ್ದ ಬುಡಕಟ್ಟು ಸಮುದಾಯದ ಯುವತಿಯನ್ನು ಕ್ರೂರವಾಗಿ ಚಿತ್ರಹಿಂಸೆ ನೀಡಿದ್ದಾರೆ ಎಂಬ ಆರೋಪದ ನಡುವೆ ಪಕ್ಷವೂ ಮಂಗಳವಾರ ಅವರನ್ನು ಅಮಾನತುಗೊಳಿಸಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಸೀಮಾ ಪಾತ್ರಾ ಅವರು ಬಿಜೆಪಿಯ ಮಹಿಳಾ ವಿಭಾಗದ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಸದಸ್ಯರಾಗಿದ್ದಾರೆ. ಅವರ ಪತಿ ಮಹೇಶ್ವರ್ ಪಾತ್ರಾ ನಿವೃತ್ತ ಐಎಎಸ್ ಅಧಿಕಾರಿ ಆಗಿದ್ದಾರೆ. ಸೀಮಾ ಅವರು ತನ್ನ ಫೇ‌ಸ್‌ಬುಕ್ ಖಾತೆಯಲ್ಲಿ,“ಬೇಟಿ ಬಚಾವೋ – ಬೇಟಿ ಪಢಾವೋ ರಾಜ್ಯ ಸಂಚಾಲಕಿ ಮತ್ತು ಜಾರ್ಖಂಡ್ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯೆ” ಎಂದು ಬರೆದುಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಂತ್ರಸ್ತೆ ಬುಡಕಟ್ಟು ಸಮುದಾಯದ ಯುವತಿಯು ಬಿಜೆಪಿ ನಾಯಕಿ ತನಗೆ ಚಿತ್ರಹಿಂಸೆ ನೀಡಿದ್ದಾರೆ ಎಂದು ಹೇಳಿರುವ ವಿಡಿಯೊ ವೈರಲ್ ಆದ ನಂತರ ಜಾರ್ಖಂಡ್ ಬಿಜೆಪಿ ಮುಖ್ಯಸ್ಥ ದೀಪಕ್ ಪ್ರಕಾಶ್ ಅವರು ಸೀಮಾ ವಿರುದ್ಧ ಕ್ರಮಕ್ಕೆ ಆದೇಶಿಸಿದ್ದಾರೆ.

ಇದನ್ನೂ ಓದಿ: ‘ನಾಲಗೆಯಲ್ಲಿ ನೆಲ ಸ್ವಚ್ಛ ಮಾಡಿಸುತ್ತಿದ್ದರು’: ಬುಡಕಟ್ಟು ಯುವತಿಯನ್ನು 8 ವರ್ಷ ಬಂಧಿಸಿಟ್ಟು ಚಿತ್ರಹಿಂಸೆ ನೀಡುತ್ತಿದ್ದ BJP ನಾಯಕಿ

ವೈರಲ್ ಆಗಿರುವ ವಿಡಿಯೊದಲ್ಲಿ, ಸಂತ್ರಸ್ತೆ ಸುನೀತಾ ಅವರ ಸ್ಥಿತಿಯು ಭಯಾನಕವಾಗಿರುವುದು ಕಂಡು ಬಂದಿದೆ. ಯುವತಿಯು ಆಸ್ಪತ್ರೆಯ ಹಾಸಿಗೆಯಲ್ಲಿದ್ದು, ಅವರ ಹಲವಾರು ಹಲ್ಲುಗಳು ಕಾಣೆಯಾಗಿವೆ. ಅಲ್ಲದೆ ಅವರು ಕುಳಿತುಕೊಳ್ಳಲು ಕೂಡಾ ಅಸಮರ್ಥ ಸ್ಥಿತಿಯಲ್ಲಿದ್ದಾರೆ. ಜೊತೆಗೆ ಅವರ ದೇಹದ ಮೇಲಿನ ಗಾಯದ ಗುರುತುಗಳು ಅವರ ಮೇಲೆ ನಿರಂತರ ದಾಳಿ ನಡೆದಿರುವುದು ಸೂಚಿಸುತ್ತವೆ ಎಂದು ಸ್ಥಳೀಯ ಮಾಧ್ಯಮ ವರದಿಗಳು ತಿಳಿಸಿವೆ.

ಸಾಮಾಜಿಕ ಮಾಧ್ಯಮಗಳಲ್ಲಿ ಸುನಿತಾ ಅವರ ಪರಿಸ್ಥಿತಿಯ ವಿಡಿಯೊ ವೈರಲ್ ಆಗುತ್ತಿದ್ದಂತೆ, ಸೀಮಾ ಪಾತ್ರ ಅವರನ್ನು ತಕ್ಷಣವೇ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.

29 ವರ್ಷದ ಸುನೀತಾ ಅವರು ಜಾರ್ಖಂಡ್‌ನ ಗುಮ್ಲಾ ಮೂಲದವರಾಗಿದ್ದು, ಸುಮಾರು 10 ವರ್ಷಗಳ ಹಿಂದೆ ಸೀಮಾ ಪಾತ್ರಾ ಅವರ ಮನೆಯಲ್ಲಿ ಕೆಲಸಕ್ಕೆ ಸೇರಿದ್ದರು. ಅವರ ಮಗಳು ವತ್ಸಲಾ ಕೆಲಸದ ನಿಮಿತ್ತ ದೆಹಲಿಗೆ ತೆರಳುತ್ತಿದ್ದಾಗ ಕೂಡಾ ಸುನೀತಾ ಅವರ ಸಹಾಯಕ್ಕೆ ತೆರಳಿದ್ದರು. ಸುಮಾರು ನಾಲ್ಕು ವರ್ಷಗಳ ಹಿಂದೆ ವತ್ಸಲಾ ಮತ್ತು ಸುನೀತಾ ರಾಂಚಿಗೆ ಮರಳಿದ್ದರು.

ಇದನ್ನೂ ಓದಿ: ವಿಶ್ವದ ಮೂರನೇ ಶ್ರೀಮಂತ ವ್ಯಕ್ತಿಯಾಗಿ ಪ್ರಧಾನಿ ಮೋದಿ ಆಪ್ತ ಉದ್ಯಮಿ ಗೌತಮ್ ಅದಾನಿ!

ಸುಮಾರು ಆರು ವರ್ಷಗಳಿಂದ ಸೀಮಾ ಪಾತ್ರಾ ಕ್ರೂರ ಚಿತ್ರಹಿಂಸೆ ನೀಡುತ್ತಿದ್ದಾರೆ ಎಂದು ಸಂತ್ರಸ್ತೆ ಯುವತಿ ಹೇಳಿದ್ದಾರೆ. ಅಪಾರ ನೋವಿನಿಂದ ಮಾತನಾಡಿದ ಅವರು, ತನಗೆ ಬಿಸಿ ತವಾ ಮತ್ತು ರಾಡ್‌ಗಳಿಂದ ಥಳಿಸಿ ಹಲ್ಲುಗಳನ್ನು ಒಡೆದುಹಾಕಲಾಯಿತು ಎಂದು ವೀಡಿಯೊಗಳಲ್ಲಿ ಹೇಳಿಕೊಂಡಿದ್ದಾರೆ. ಆಕೆಗೆ ನೆಲದ ಮೇಲಿನ ಮೂತ್ರವನ್ನು ನೆಕ್ಕುವಂತೆ ಮಾಡಲಾಯಿತು ಎಂದು ಅವರು ತಿಳಿಸಿದ್ದಾರೆ.

ಈ ಚಿತ್ರಹಿಂಸೆಯನ್ನು ತನಗೆ ಶಿಕ್ಷೆಯಾಗಿ ನೀಡಲಾಗಿದ್ದು, ಆದರೆ ತಾನು ಮಾಡಿರುವ ತಪ್ಪುಗಳೇನು ಎಂದು ತನಗೆ ತಿಳಿದಿರಲಿಲ್ಲ ಎಂದು ಸುನೀತಾ ಹೇಳಿದ್ದಾರೆ.

ಸೀಮಾ ಪಾತ್ರಾ ಅವರ ಮಗ ಆಯುಷ್ಮಾನ್ ತನಗೆ ಸಹಾಯ ಮಾಡಿದ್ದಾನೆ ಎಂದು ಯುವತಿ ಹೇಳಿದ್ದು,“ನಾನು ಬದುಕಿರುವುದು ಅವನಿಂದ ಮಾತ್ರ” ಎಂದು ಅವರು ಹೇಳಿದ್ದಾರೆ. ತನ್ನ ಸಹೋದರಿ ಮತ್ತು ಸೋದರ ಮಾವನಿಗೆ ಈ ಕಷ್ಟಗಳನ್ನು ಹೇಳಿದ್ದರೂ ಅವರು ಇದರ ಬಗ್ಗೆ ಚಿಂತಿತರಾಗಿರಲಿಲ್ಲ ಎಂದು ಅವರು ಹೇಳಿದ್ದಾರೆ. ವೀಡಿಯೊದಲ್ಲಿ ಸುನಿತಾ ಅವರು ತಾನು ಚೇತರಿಸಿಕೊಂಡರೆ ಅಧ್ಯಯನ ಮಾಡುವುದಾಗಿ ಹೇಳಿರುವುದು ದಾಖಲಾಗಿದೆ.

ಇದನ್ನೂ ಓದಿ: ಮಾತು ಮರೆತ ಭಾರತ; ಊನಾ ಫೈಲ್: ಆರೆಸ್ಸೆಸ್-ಬಿಜೆಪಿಯ ದನದ ರಾಜಕಾರಣ ಮತ್ತು ದಲಿತರು

ಸೀಮಾ ಅವರು ಮಗ ಆಯುಷ್ಮಾನ್ ಅವರು ಸುನೀತಾ ಅವರ ಪರಿಸ್ಥಿತಿಯನ್ನು ಸ್ನೇಹಿತರಿಗೆ ವಿವರಿಸಿ ಸಹಾಯ ಕೇಳಿದ್ದರು. ನಂತರ ಆತನ ಸ್ನೇಹಿತ ಪೊಲೀಸ್ ದೂರು ದಾಖಲಿಸಿದ್ದು, ಸುನೀತಾರನ್ನು ರಕ್ಷಿಸಲಾಗಿದೆ. ಪಸ್ತುತ ಅವರು ರಾಂಚಿಯ ರಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...