Homeಕರ್ನಾಟಕಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶ ಉತ್ಸವ ನಡೆಸುವಂತಿಲ್ಲ: ಸುಪ್ರೀಂ ಆದೇಶ

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶ ಉತ್ಸವ ನಡೆಸುವಂತಿಲ್ಲ: ಸುಪ್ರೀಂ ಆದೇಶ

ಈದ್ಗಾ ಮೈದಾನದಲ್ಲಿ ಗಣೇಶ ಉತ್ಸವ ಆಚರಿಸಲು ಹೈಕೋರ್ಟ್ ನೀಡಿದ್ದ ಅನುಮತಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ

- Advertisement -
- Advertisement -

ಕರ್ನಾಟಕ ವಕ್ಫ್ ಮಂಡಳಿಯ ಅರ್ಜಿಯ ಮೇರೆಗೆ ಸುಪ್ರೀಂ ಕೋರ್ಟ್ ಆದೇಶ ನೀಡಿದ್ದು ‘ಬೆಂಗಳೂರಿನ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಯಥಾಸ್ಥಿತಿ’ ಕಾಪಾಡಬೇಕು ಎಂದು ಸೂಚಿಸಿದೆ. ಇಲ್ಲಿ ಗಣೇಶ ಚತುರ್ಥಿ ನಡೆಸಬಾರದೆಂದು ಸರ್ವೋಚ್ಚ ನ್ಯಾಯಾಲಯ ಆದೇಶಿಸಿದೆ.

ಗಣೇಶ ಹಬ್ಬವನ್ನು ಇಲ್ಲಿ ಆಚರಿಸಲು ಸರ್ಕಾರ ಅನುಮತಿ ನೀಡಬಹುದು ಎಂದು ಹೈಕೋರ್ಟ್ ಇತ್ತೀಚೆಗೆ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ವಕ್ಫ್‌ ಬೋರ್ಡ್ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು.

“200 ವರ್ಷಗಳಿಂದ ಈ ಸ್ಥಳದಲ್ಲಿ ಇಂತಹ ಧಾರ್ಮಿಕ ಉತ್ಸವಗಳನ್ನು ನಡೆಸಿಲ್ಲ” ಎಂದು ವಕ್ಫ್‌ ಮಂಡಳಿ ವಾದಿಸಿತು. ನ್ಯಾಯಾಲಯದ ತ್ರಿಸದಸ್ಯ ಪೀಠವು ‘ಯಥಾಸ್ಥಿತಿ ಕಾಪಾಡಿಕೊಳ್ಳಬೇಕು. ಗಣೇಶ ಉತ್ಸವವನ್ನು ಆಚರಿಸಬಾರದು’ ಎಂದು ತೀರ್ಪು ನೀಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಮೈದಾನ ರಾಜ್ಯ ಸರ್ಕಾರಕ್ಕೆ ಸೇರಿದ್ದೋ ಅಥವಾ ವಕ್ಫ್ ಮಂಡಳಿಗೆ ಸೇರಿದ್ದೋ ಎಂಬ ವಿವಾದ ಹೈಕೋರ್ಟ್‌ನಲ್ಲಿದೆ.

ಇಂದು ಸುಪ್ರೀಂ ಕೋರ್ಟ್‌ನಲ್ಲಿ ಮಂಡಳಿಯ ವಕೀಲ ದುಶ್ಯಂತ್ ದವೆ, “ಧಾರ್ಮಿಕ ಅಲ್ಪಸಂಖ್ಯಾತ  ಹಕ್ಕುಗಳನ್ನು ಈ ರೀತಿ ತುಳಿಯಬಹುದು ಎಂಬ ಭಾವನೆಯನ್ನು ನೀಡಬೇಡಿ” ಎಂದು ಕೋರಿದರು.

“ಈ ಮೈದಾನದಲ್ಲಿ ಬೇರೆ ಯಾವುದೇ ಸಮುದಾಯದ ಯಾವುದೇ ಧಾರ್ಮಿಕ ಕಾರ್ಯಕ್ರಮಗಳು ನಡೆದಿಲ್ಲ. ಇದನ್ನು ಕಾನೂನಿನ ಪ್ರಕಾರ ವಕ್ಫ್ ಆಸ್ತಿ ಎಂದು ಘೋಷಿಸಲಾಗಿದೆ. ಇದ್ದಕ್ಕಿದ್ದಂತೆ ಇದು ವಿವಾದಿತ ಭೂಮಿ ಎಂದು ಪ್ರತಿಪಾದಿಸಲಾಗುತ್ತಿದೆ. ಗಣೇಶ ಚತುರ್ಥಿ ನಡೆಸಲು ಚಿಂತಿಸಲಾಗಿದೆ” ಎಂದು ವಕ್ಫ್‌ ತಿಳಿಸಿತು.

ಆದರೆ ಸರ್ಕಾರ ವಕೀಲರು ಎರಡು ದಿನ ಅವಕಾಶ ಕೋರಿದರು. ಈ ವೇಳೆ, ಮಂಡಳಿಯ ವಕೀಲರು, “ಬಾಬರಿ ಮಸೀದಿ ಪ್ರಕರಣದಲ್ಲಿ ಅಂದಿನ ಯುಪಿ ಸಿಎಂ ಕೂಡ ಭರವಸೆ ನೀಡಿದ್ದರು. ಅಲ್ಲಿ ಏನಾಯಿತು ಎಂದು ನಿಮಗೆ ತಿಳಿದಿದೆ” ಎಂದು 1992ರ ಮಸೀದಿ ಧ್ವಂಸವನ್ನು ಉಲ್ಲೇಖಿಸಿದರು.

ಇದಕ್ಕೂ ಮುನ್ನ ಮೈದಾನದಲ್ಲಿ ಇಂತಹ ಘಟನೆಗಳು ನಡೆದಿವೆಯೇ ಎಂದು ನ್ಯಾಯಾಲಯ ಪ್ರಶ್ನಿಸಿದಾಗ, ಸರಕಾರಿ ವಕೀಲ ಮುಕುಲ್ ರೋಹಟಗಿ, ‘‘ಈಗ ಒಂದು ಕಾರ್ಯಕ್ರಮವನ್ನು ವಿರೋಧಿಸಲು ಅದು ಆಧಾರವಾಗುವುದಿಲ್ಲ. ಕಳೆದ 200 ವರ್ಷಗಳಿಂದ ಆಟದ ಮೈದಾನವಾಗಿ ಬಳಸಲಾಗುತ್ತಿತ್ತು. ಈ ಮೈದಾನ ಸರ್ಕಾರಕ್ಕೆ ಸೇರಿದೆ” ಎಂದರು.

“ದೆಹಲಿಯಲ್ಲಿ ದಸರಾ ವೇಳೆ ಪ್ರತಿಕೃತಿಗಳನ್ನು ಎಲ್ಲೆಂದರಲ್ಲಿ ದಹಿಸುತ್ತಾರೆ. ‘ಈ ಹಿಂದೂ ಹಬ್ಬವನ್ನು ಮಾಡಬೇಡಿ’ ಎಂದು ಜನರು ಹೇಳುತ್ತಾರೆಯೇ? ನಾವು ಸ್ವಲ್ಪ ವಿಶಾಲ ಮನೋಭಾವದಿಂದ ನೋಡಬೇಕು. ಗಣೇಶ ಚತುರ್ಥಿ ವೇಳೆ ಏನಾಗಲಿದೆ?” ಎಂದು ಪ್ರಶ್ನಿಸಿದರು.

ಆದರೆ ಮಂಡಳಿಯ ವಕೀಲ ದೇವ್, “ಈ ದೇಶದಲ್ಲಿ ಯಾವುದೇ ದೇವಾಲಯದಲ್ಲಿ ಅಲ್ಪಸಂಖ್ಯಾತ ಸಮುದಾಯ ಪ್ರಾರ್ಥನೆ ಸಲ್ಲಿಸಲು ಅವಕಾಶವಿದೆಯೇ ಎಂದು ನಾನು ಆಶ್ಚರ್ಯ ಪಡುತ್ತೇನೆ” ಎಂದರು.

“ವಕ್ಫ್ ಕಾಯಿದೆ 1995 ಪ್ರಕಾರ ಸರ್ಕಾರಿ ಸಂಸ್ಥೆಗಳು ವಶಪಡಿಸಿಕೊಂಡಿರುವ ಯಾವುದೇ ವಕ್ಫ್ ಆಸ್ತಿಯನ್ನು ವಕ್ಫ್ ಮಂಡಳಿಗೆ ಹಸ್ತಾಂತರಿಸಬೇಕಾಗುತ್ತದೆ. ಈ ಆಸ್ತಿಯು ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

ಮುಸ್ಲಿಂ ಸಮುದಾಯಕ್ಕೆ ಸೇರಿದ ಸಂಸ್ಥೆಯ ಒಡೆತನದ ಜಾಗದಲ್ಲಿ ಹಿಂದೂ ಹಬ್ಬವನ್ನು ಆಚರಿಸಲು ಯೋಚಿಸುತ್ತಿರುವುದು ರಾಜಕೀಯ ಪ್ರೇರಿತವಾಗಿದೆ. “ಮುಂದಿನ ವರ್ಷ ಚುನಾವಣೆ ಇರುವುದರಿಂದ ಇದನ್ನು ಮಾಡಲಾಗುತ್ತಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಥವಾ ಬಿಬಿಎಂಪಿ ಚುನಾವಣೆ 2023ಕ್ಕೆ ನಡೆಯಲಿದೆ” ಎಂದು ಬೋರ್ಡ್ ಗಮನ ಸೆಳೆಯಿತು.

ಮಂಡಳಿಯ ವಕೀಲರಾದ ಕಪಿಲ್ ಸಿಬಲ್, ಆಗಸ್ಟ್ 9 ರಂದು ದಾಖಲಾಗಿರುವ ಎಫ್‌ಐಆರ್‌ ಉಲ್ಲೇಖಿಸಿದರು. “ಮುಸ್ಲಿಂ ಮತ್ತು ಹಿಂದೂ ಸಮುದಾಯದ ನಡುವೆ ವಿವಾದವಿದೆ (ಮತ್ತು) ಈ ಜಮೀನು ಕಂದಾಯ ಇಲಾಖೆಗೆ ಸೇರಿದೆ ಎಂದು ದೂರು ದಾಖಲಾಗಿದೆ. ದೂರಿನಲ್ಲಿ ಬಾಬರಿ ಮಸೀದಿಯ ಬಗ್ಗೆ ಕೆಲವು ಉಲ್ಲೇಖಗಳನ್ನು ಮಾಡಿರುವುದು ತುಂಬಾ ಗೊಂದಲದ ಸಂಗತಿ” ಎಂದು ಅವರು ತಿಳಿಸಿದರು.

ಅಲ್ಲಿ ಉತ್ಸವ ಮಾಡಲು ಸರ್ಕಾರ ಅನುಮತಿ ನೀಡುವುದನ್ನು ಕೋರ್ಟ್ ಒಪ್ಪಲಿಲ್ಲ. ಕರ್ನಾಟಕವು ಇತ್ತೀಚಿನ ತಿಂಗಳುಗಳಲ್ಲಿ ಕೆಲವು ಕೋಮುಗಲಭೆಗಳನ್ನು ಕಂಡಿದೆ. ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಯಾದ ಒಂದಲ್ಲ ಒಂದು ಕೋಮುದ್ವೇಷ ಪ್ರಕರಣಗಳಿಗೆ ರಾಜ್ಯ ಸಾಕ್ಷಿಯಾಗುತ್ತಿದೆ.

ಇದನ್ನೂ ಓದಿರಿ: ವಿಶ್ವದ ಮೂರನೇ ಶ್ರೀಮಂತ ವ್ಯಕ್ತಿಯಾಗಿ ಪ್ರಧಾನಿ ಮೋದಿ ಆಪ್ತ ಉದ್ಯಮಿ ಗೌತಮ್ ಅದಾನಿ!

ರಾಜ್ಯ ಸರ್ಕಾರದ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದರು. “ಇದು ಯಾವುದೇ ಗಡಿರೇಖೆಗಳಿಲ್ಲದ ಬಯಲು ಭೂಮಿ. ನಾಳೆ ಮತ್ತು ಮರುದಿನ ಭೂಮಿಯನ್ನು ಬಳಸಲು ಸರ್ಕಾರಕ್ಕೆ ದಯವಿಟ್ಟು ಅನುಮತಿ ನೀಡಿ. ಯಾವುದೇ ತೊಂದರೆಯಾಗದಂತೆ ಸರ್ಕಾರ ನೋಡಿಕೊಳ್ಳುತ್ತದೆ” ಎಂದು ವಾದಿಸಿದರು.

ವಕ್ಫ್ ಮಂಡಳಿಯು ಈ ವಿಷಯವನ್ನು ತುರ್ತಾಗಿ ನಿರ್ಧರಿಸಬೇಕು ಎಂದು ಕೋರಿತು. ದ್ವಿಸದಸ್ಯ ಪೀಠದಲ್ಲಿದ್ದ ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರು ಅಭಿಪ್ರಾಯ ಭಿನ್ನಾಭಿಪ್ರಾಯವನ್ನು ಉಲ್ಲೇಖಿಸಿ ಸಮಸ್ಯೆಯನ್ನು ಮುಖ್ಯ ನ್ಯಾಯಮೂರ್ತಿಯವರಿಗೆ ಕಳುಹಿಸಿದರು. ಸಿಜೆಐ ಯುಯು ಲಲಿತ್ ಅವರು ತ್ರಿಸದಸ್ಯ ಪೀಠದ ಮುಂದೆ ಪಟ್ಟಿ ಮಾಡಿದರು. ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ, ಎಎಸ್ ಓಕಾ ಮತ್ತು ಎಂಎಂ ಸುಂದ್ರೇಶ್ ಸಮಸ್ಯೆಯನ್ನು ಗಮನಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...