Homeಕರ್ನಾಟಕಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶ ಉತ್ಸವ ನಡೆಸುವಂತಿಲ್ಲ: ಸುಪ್ರೀಂ ಆದೇಶ

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶ ಉತ್ಸವ ನಡೆಸುವಂತಿಲ್ಲ: ಸುಪ್ರೀಂ ಆದೇಶ

ಈದ್ಗಾ ಮೈದಾನದಲ್ಲಿ ಗಣೇಶ ಉತ್ಸವ ಆಚರಿಸಲು ಹೈಕೋರ್ಟ್ ನೀಡಿದ್ದ ಅನುಮತಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ

- Advertisement -
- Advertisement -

ಕರ್ನಾಟಕ ವಕ್ಫ್ ಮಂಡಳಿಯ ಅರ್ಜಿಯ ಮೇರೆಗೆ ಸುಪ್ರೀಂ ಕೋರ್ಟ್ ಆದೇಶ ನೀಡಿದ್ದು ‘ಬೆಂಗಳೂರಿನ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಯಥಾಸ್ಥಿತಿ’ ಕಾಪಾಡಬೇಕು ಎಂದು ಸೂಚಿಸಿದೆ. ಇಲ್ಲಿ ಗಣೇಶ ಚತುರ್ಥಿ ನಡೆಸಬಾರದೆಂದು ಸರ್ವೋಚ್ಚ ನ್ಯಾಯಾಲಯ ಆದೇಶಿಸಿದೆ.

ಗಣೇಶ ಹಬ್ಬವನ್ನು ಇಲ್ಲಿ ಆಚರಿಸಲು ಸರ್ಕಾರ ಅನುಮತಿ ನೀಡಬಹುದು ಎಂದು ಹೈಕೋರ್ಟ್ ಇತ್ತೀಚೆಗೆ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ವಕ್ಫ್‌ ಬೋರ್ಡ್ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು.

“200 ವರ್ಷಗಳಿಂದ ಈ ಸ್ಥಳದಲ್ಲಿ ಇಂತಹ ಧಾರ್ಮಿಕ ಉತ್ಸವಗಳನ್ನು ನಡೆಸಿಲ್ಲ” ಎಂದು ವಕ್ಫ್‌ ಮಂಡಳಿ ವಾದಿಸಿತು. ನ್ಯಾಯಾಲಯದ ತ್ರಿಸದಸ್ಯ ಪೀಠವು ‘ಯಥಾಸ್ಥಿತಿ ಕಾಪಾಡಿಕೊಳ್ಳಬೇಕು. ಗಣೇಶ ಉತ್ಸವವನ್ನು ಆಚರಿಸಬಾರದು’ ಎಂದು ತೀರ್ಪು ನೀಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಮೈದಾನ ರಾಜ್ಯ ಸರ್ಕಾರಕ್ಕೆ ಸೇರಿದ್ದೋ ಅಥವಾ ವಕ್ಫ್ ಮಂಡಳಿಗೆ ಸೇರಿದ್ದೋ ಎಂಬ ವಿವಾದ ಹೈಕೋರ್ಟ್‌ನಲ್ಲಿದೆ.

ಇಂದು ಸುಪ್ರೀಂ ಕೋರ್ಟ್‌ನಲ್ಲಿ ಮಂಡಳಿಯ ವಕೀಲ ದುಶ್ಯಂತ್ ದವೆ, “ಧಾರ್ಮಿಕ ಅಲ್ಪಸಂಖ್ಯಾತ  ಹಕ್ಕುಗಳನ್ನು ಈ ರೀತಿ ತುಳಿಯಬಹುದು ಎಂಬ ಭಾವನೆಯನ್ನು ನೀಡಬೇಡಿ” ಎಂದು ಕೋರಿದರು.

“ಈ ಮೈದಾನದಲ್ಲಿ ಬೇರೆ ಯಾವುದೇ ಸಮುದಾಯದ ಯಾವುದೇ ಧಾರ್ಮಿಕ ಕಾರ್ಯಕ್ರಮಗಳು ನಡೆದಿಲ್ಲ. ಇದನ್ನು ಕಾನೂನಿನ ಪ್ರಕಾರ ವಕ್ಫ್ ಆಸ್ತಿ ಎಂದು ಘೋಷಿಸಲಾಗಿದೆ. ಇದ್ದಕ್ಕಿದ್ದಂತೆ ಇದು ವಿವಾದಿತ ಭೂಮಿ ಎಂದು ಪ್ರತಿಪಾದಿಸಲಾಗುತ್ತಿದೆ. ಗಣೇಶ ಚತುರ್ಥಿ ನಡೆಸಲು ಚಿಂತಿಸಲಾಗಿದೆ” ಎಂದು ವಕ್ಫ್‌ ತಿಳಿಸಿತು.

ಆದರೆ ಸರ್ಕಾರ ವಕೀಲರು ಎರಡು ದಿನ ಅವಕಾಶ ಕೋರಿದರು. ಈ ವೇಳೆ, ಮಂಡಳಿಯ ವಕೀಲರು, “ಬಾಬರಿ ಮಸೀದಿ ಪ್ರಕರಣದಲ್ಲಿ ಅಂದಿನ ಯುಪಿ ಸಿಎಂ ಕೂಡ ಭರವಸೆ ನೀಡಿದ್ದರು. ಅಲ್ಲಿ ಏನಾಯಿತು ಎಂದು ನಿಮಗೆ ತಿಳಿದಿದೆ” ಎಂದು 1992ರ ಮಸೀದಿ ಧ್ವಂಸವನ್ನು ಉಲ್ಲೇಖಿಸಿದರು.

ಇದಕ್ಕೂ ಮುನ್ನ ಮೈದಾನದಲ್ಲಿ ಇಂತಹ ಘಟನೆಗಳು ನಡೆದಿವೆಯೇ ಎಂದು ನ್ಯಾಯಾಲಯ ಪ್ರಶ್ನಿಸಿದಾಗ, ಸರಕಾರಿ ವಕೀಲ ಮುಕುಲ್ ರೋಹಟಗಿ, ‘‘ಈಗ ಒಂದು ಕಾರ್ಯಕ್ರಮವನ್ನು ವಿರೋಧಿಸಲು ಅದು ಆಧಾರವಾಗುವುದಿಲ್ಲ. ಕಳೆದ 200 ವರ್ಷಗಳಿಂದ ಆಟದ ಮೈದಾನವಾಗಿ ಬಳಸಲಾಗುತ್ತಿತ್ತು. ಈ ಮೈದಾನ ಸರ್ಕಾರಕ್ಕೆ ಸೇರಿದೆ” ಎಂದರು.

“ದೆಹಲಿಯಲ್ಲಿ ದಸರಾ ವೇಳೆ ಪ್ರತಿಕೃತಿಗಳನ್ನು ಎಲ್ಲೆಂದರಲ್ಲಿ ದಹಿಸುತ್ತಾರೆ. ‘ಈ ಹಿಂದೂ ಹಬ್ಬವನ್ನು ಮಾಡಬೇಡಿ’ ಎಂದು ಜನರು ಹೇಳುತ್ತಾರೆಯೇ? ನಾವು ಸ್ವಲ್ಪ ವಿಶಾಲ ಮನೋಭಾವದಿಂದ ನೋಡಬೇಕು. ಗಣೇಶ ಚತುರ್ಥಿ ವೇಳೆ ಏನಾಗಲಿದೆ?” ಎಂದು ಪ್ರಶ್ನಿಸಿದರು.

ಆದರೆ ಮಂಡಳಿಯ ವಕೀಲ ದೇವ್, “ಈ ದೇಶದಲ್ಲಿ ಯಾವುದೇ ದೇವಾಲಯದಲ್ಲಿ ಅಲ್ಪಸಂಖ್ಯಾತ ಸಮುದಾಯ ಪ್ರಾರ್ಥನೆ ಸಲ್ಲಿಸಲು ಅವಕಾಶವಿದೆಯೇ ಎಂದು ನಾನು ಆಶ್ಚರ್ಯ ಪಡುತ್ತೇನೆ” ಎಂದರು.

“ವಕ್ಫ್ ಕಾಯಿದೆ 1995 ಪ್ರಕಾರ ಸರ್ಕಾರಿ ಸಂಸ್ಥೆಗಳು ವಶಪಡಿಸಿಕೊಂಡಿರುವ ಯಾವುದೇ ವಕ್ಫ್ ಆಸ್ತಿಯನ್ನು ವಕ್ಫ್ ಮಂಡಳಿಗೆ ಹಸ್ತಾಂತರಿಸಬೇಕಾಗುತ್ತದೆ. ಈ ಆಸ್ತಿಯು ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

ಮುಸ್ಲಿಂ ಸಮುದಾಯಕ್ಕೆ ಸೇರಿದ ಸಂಸ್ಥೆಯ ಒಡೆತನದ ಜಾಗದಲ್ಲಿ ಹಿಂದೂ ಹಬ್ಬವನ್ನು ಆಚರಿಸಲು ಯೋಚಿಸುತ್ತಿರುವುದು ರಾಜಕೀಯ ಪ್ರೇರಿತವಾಗಿದೆ. “ಮುಂದಿನ ವರ್ಷ ಚುನಾವಣೆ ಇರುವುದರಿಂದ ಇದನ್ನು ಮಾಡಲಾಗುತ್ತಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಥವಾ ಬಿಬಿಎಂಪಿ ಚುನಾವಣೆ 2023ಕ್ಕೆ ನಡೆಯಲಿದೆ” ಎಂದು ಬೋರ್ಡ್ ಗಮನ ಸೆಳೆಯಿತು.

ಮಂಡಳಿಯ ವಕೀಲರಾದ ಕಪಿಲ್ ಸಿಬಲ್, ಆಗಸ್ಟ್ 9 ರಂದು ದಾಖಲಾಗಿರುವ ಎಫ್‌ಐಆರ್‌ ಉಲ್ಲೇಖಿಸಿದರು. “ಮುಸ್ಲಿಂ ಮತ್ತು ಹಿಂದೂ ಸಮುದಾಯದ ನಡುವೆ ವಿವಾದವಿದೆ (ಮತ್ತು) ಈ ಜಮೀನು ಕಂದಾಯ ಇಲಾಖೆಗೆ ಸೇರಿದೆ ಎಂದು ದೂರು ದಾಖಲಾಗಿದೆ. ದೂರಿನಲ್ಲಿ ಬಾಬರಿ ಮಸೀದಿಯ ಬಗ್ಗೆ ಕೆಲವು ಉಲ್ಲೇಖಗಳನ್ನು ಮಾಡಿರುವುದು ತುಂಬಾ ಗೊಂದಲದ ಸಂಗತಿ” ಎಂದು ಅವರು ತಿಳಿಸಿದರು.

ಅಲ್ಲಿ ಉತ್ಸವ ಮಾಡಲು ಸರ್ಕಾರ ಅನುಮತಿ ನೀಡುವುದನ್ನು ಕೋರ್ಟ್ ಒಪ್ಪಲಿಲ್ಲ. ಕರ್ನಾಟಕವು ಇತ್ತೀಚಿನ ತಿಂಗಳುಗಳಲ್ಲಿ ಕೆಲವು ಕೋಮುಗಲಭೆಗಳನ್ನು ಕಂಡಿದೆ. ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಯಾದ ಒಂದಲ್ಲ ಒಂದು ಕೋಮುದ್ವೇಷ ಪ್ರಕರಣಗಳಿಗೆ ರಾಜ್ಯ ಸಾಕ್ಷಿಯಾಗುತ್ತಿದೆ.

ಇದನ್ನೂ ಓದಿರಿ: ವಿಶ್ವದ ಮೂರನೇ ಶ್ರೀಮಂತ ವ್ಯಕ್ತಿಯಾಗಿ ಪ್ರಧಾನಿ ಮೋದಿ ಆಪ್ತ ಉದ್ಯಮಿ ಗೌತಮ್ ಅದಾನಿ!

ರಾಜ್ಯ ಸರ್ಕಾರದ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದರು. “ಇದು ಯಾವುದೇ ಗಡಿರೇಖೆಗಳಿಲ್ಲದ ಬಯಲು ಭೂಮಿ. ನಾಳೆ ಮತ್ತು ಮರುದಿನ ಭೂಮಿಯನ್ನು ಬಳಸಲು ಸರ್ಕಾರಕ್ಕೆ ದಯವಿಟ್ಟು ಅನುಮತಿ ನೀಡಿ. ಯಾವುದೇ ತೊಂದರೆಯಾಗದಂತೆ ಸರ್ಕಾರ ನೋಡಿಕೊಳ್ಳುತ್ತದೆ” ಎಂದು ವಾದಿಸಿದರು.

ವಕ್ಫ್ ಮಂಡಳಿಯು ಈ ವಿಷಯವನ್ನು ತುರ್ತಾಗಿ ನಿರ್ಧರಿಸಬೇಕು ಎಂದು ಕೋರಿತು. ದ್ವಿಸದಸ್ಯ ಪೀಠದಲ್ಲಿದ್ದ ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರು ಅಭಿಪ್ರಾಯ ಭಿನ್ನಾಭಿಪ್ರಾಯವನ್ನು ಉಲ್ಲೇಖಿಸಿ ಸಮಸ್ಯೆಯನ್ನು ಮುಖ್ಯ ನ್ಯಾಯಮೂರ್ತಿಯವರಿಗೆ ಕಳುಹಿಸಿದರು. ಸಿಜೆಐ ಯುಯು ಲಲಿತ್ ಅವರು ತ್ರಿಸದಸ್ಯ ಪೀಠದ ಮುಂದೆ ಪಟ್ಟಿ ಮಾಡಿದರು. ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ, ಎಎಸ್ ಓಕಾ ಮತ್ತು ಎಂಎಂ ಸುಂದ್ರೇಶ್ ಸಮಸ್ಯೆಯನ್ನು ಗಮನಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...