Homeಕರ್ನಾಟಕಮುರುಘಾ ಶರಣರ ತನಿಖೆಗೆ ಎಸ್‌ಐಟಿ ರಚಿಸಿ: ದಲಿತ ಸಂಘರ್ಷ ಸಮಿತಿ ಆಗ್ರಹ

ಮುರುಘಾ ಶರಣರ ತನಿಖೆಗೆ ಎಸ್‌ಐಟಿ ರಚಿಸಿ: ದಲಿತ ಸಂಘರ್ಷ ಸಮಿತಿ ಆಗ್ರಹ

ದಲಿತ ನಾಯಕರಾದ ಗುರುಪ್ರಸಾದ್ ಕೆರೆಗೋಡು, ಮಾವಳ್ಳಿ ಶಂಕರ್‌, ಬೆಟ್ಟಯ್ಯ ಕೋಟೆ, ಶಂಭುಲಿಂಗ ಸ್ವಾಮಿ ಮೊದಲಾದವರು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ್ದಾರೆ.

- Advertisement -
- Advertisement -

ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ರಾಜೇಂದ್ರ ಸ್ವಾಮೀಜಿಯ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣದ ತನಿಖೆಗಾಗಿ ನಿವೃತ್ತ ನ್ಯಾಯಮೂರ್ತಿಗಳು, ಪ್ರಾಮಾಣಿಕ ತನಿಖಾಧಿಕಾರಿಗಳು, ಸಾಮಾಜಿಕ-ಸಂಸ್ಥೆಗಳನ್ನೊಳಗೊಂಡ ‘ಎಸ್‌ಐಟಿ’ ಕೂಡಲೇ ರಚಿಸಬೇಕು ಎಂದು ದಲಿತ ಸಂಘರ್ಷ ಸಮಿತಿ ಒಕ್ಕೂಟ ಆಗ್ರಹಿಸಿದೆ.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಒಕ್ಕೂಟದ ಸಂಚಾಲಕ ಗುರುಪ್ರಸಾದ್ ಕೆರಗೋಡು ಮಾತನಾಡಿ, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿ ಈಗಾಗಲೇ ಆರೋಪಿ ಸ್ವಾಮೀಜಿಯ ವಿರುದ್ಧ ಎಫ್‌ಐಆರ್ ದಾಖಲಾಗಿ ನಾಲ್ಕು ದಿನ ಕಳೆದಿವೆ. ಆದರೆ, ಚಿತ್ರದುರ್ಗದಲ್ಲಿಯೇ ಇರುವ ಆರೋಪಿ ಸ್ವಾಮೀಜಿಯನ್ನು ಬಂಧಿಸಲು ವಿಳಂಬ ಮಾಡುತ್ತಾ ಸಾಕ್ಷ್ಯಧಾರಗಳ ನಾಶಕ್ಕೆ ಅವಕಾಶ ಮಾಡಿಕೊಡುತ್ತಿವೆ. ಮೊದಲು ಆರೋಪಿ ಮುರುಘ ಶರಣ ಶಿವಮೂರ್ತಿ ಸ್ವಾಮೀಜಿಯನ್ನು ಬಂಧಿಸಿ ಎಂದು ಒತ್ತಾಯಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಾಗಿ ನಾಲ್ಕು ದಿನ ಕಳೆದರೂ, ಆರೋಪಿಯನ್ನು ಬಂಧಿಸಿಲ್ಲ. ಗೃಹ ಸಚಿವರು ಮಾತನಾಡುತ್ತಾ, ಸ್ವಾಮೀಜಿ ಸತ್‌ಚಾರಿತ್ರ್ಯ ಹೊಂದಿದ್ದಾರೆ ಅನ್ನುವ ಮೂಲಕ ಪ್ರಕರಣ ದಿಕ್ಕು ತಪ್ಪಿಸಲು ಹೊರಟಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೂಡ ಈಗಾಗಲೇ ಆರೋಪಿ ಸ್ವಾಮೀಜಿಗೆ ಕ್ಲಿನ್ ಚೀಟ್ ಕೊಟ್ಟಿದ್ದಾರೆ. ಕಾನೂನಿನ ಮುಂದೆ ಎಲ್ಲ ಸಮಾನರು. ಮುಖ್ಯಮಂತ್ರಿಯಾದಿಯಾಗಿ ಅನೇಕರು ಆರೋಪಿಯ ರಕ್ಷಣೆಗೆ ನಿಂತಿರುವುದರಿಂದ ಆತಂಕ ಎದುರಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಪ್ರಕರಣ ದಾಖಲಾಗುತ್ತಿದ್ದಂತೆ ಮುರುಘಾ ಸ್ವಾಮೀಜಿ ಸಂಧಾನಕ್ಕೂ ಸಿದ್ಧ ಸಮರಕ್ಕೂ ಎಂದಿದ್ದಾರೆ. ದೂರು ನೀಡಿರುವ ಅಪ್ರಾಪ್ತರು ದಲಿತ ಹಾಗೂ ಹಿಂದುಳಿದ ವರ್ಗಕ್ಕೆ ಸೇರಿದ ಬಾಲಕಿಯರಾಗಿದ್ದು, ಇವರು ಯಾರ ಬಳಿ ಸಂಧಾನ ಮಾಡುತ್ತಾರೆ. ಯಾರ ವಿರುದ್ಧ ಯುದ್ಧ ಮಾಡ್ತಾರೆ ಎಂದು ಪ್ರಶ್ನಿಸಿದರು.

ಅಪ್ರಾಪ್ತರಿಂದ ತನಿಖೆ ನಡೆಸುವಾಗ ಅನುಸರಿಬೇಕಾದ ವಿಧಿ ವಿಧಾನಗಳನ್ನು ಚಿತ್ರದುರ್ಗದ ಪೊಲೀಸರು ಅನುಸರಿಸುತ್ತಿಲ್ಲ. ಸ್ಥಳ ಮಹಜರು ಮಾಡಲು ಬಾಲಕಿಯರನ್ನು ಮಠದ ಆಡಳಿತ ಮಂಡಳಿಯ ಎದುರಿನಲ್ಲಿ ಮಠಕ್ಕೆ ಕರೆದುಕೊಂಡು ಹೋಗಿದ್ದಾರೆ. ಇಂಥ ಸಂದರ್ಭದಲ್ಲಿ ಬಾಲಕಿಯರು ಭಯ-ಭೀತಿಗೊಂಡಿದ್ದಾರೆ. ಬಾಲಕಿಯರಿಗೆ ಭಯ ಮುಕ್ತವಾಗಿ ತನಿಖೆ ನಡೆಸಿಕೊಂಡಿಲ್ಲ. ಹೀಗಾಗಿ ಪೊಲೀಸರು ನಡೆದುಕೊಂಡ ರೀತಿಯಲ್ಲಿ ಅನುಮಾನವಿದೆ ಎಂದರು.

ಪೋಕ್ಸೋ ಕಾಯ್ದೆ ಪ್ರಬಲವಾಗಿದೆ. ಆದರೆ, ಸ್ವಾಮೀಜಿ ಪ್ರಕರಣದಲ್ಲಿ ಕಾಯ್ದೆಯನ್ನು ಸರಿಯಾಗಿ ಅನುಸರಿಸುತ್ತಿಲ್ಲ. ಹೀಗಾಗಿ ನ್ಯಾಯ ದೊರೆಯುವ ವಿಶ್ವಾಸವೇ ಕಳೆದು ಹೋಗಿದೆ. ಚಿತ್ರದುರ್ಗ ಜಿಲ್ಲಾಡಳಿತ ಮತ್ತು ತನಿಖಾಧಿಕಾರಿಗಳು ಅನುಸರಿಸುತ್ತಿರುವ ಧೋರಣೆ ಪ್ರಕರಣದಲ್ಲಿ ಎದ್ದು ಕಾಣುತ್ತಿದ್ದು, ಅಲ್ಲಿನ ಜಿಲ್ಲಾಡಳಿತ ಬಗ್ಗೆ ನ್ಯಾಯ ಸಿಗುವ ವಿಶ್ವಾಸ ಕಾಣುತ್ತಿಲ್ಲ. ಈಗಲಾದರೂ ಸರ್ಕಾರ ಕೂಡಲೇ ಆರೋಪಿಯನ್ನು ಬಂಧಿಸಿ ಎಸ್ ಐಟಿ ತನಿಖಾ ತಂಡ ರಚನೆ ಮಾಡಬೇಕು ಎಂದು ಅಭಿಪ್ರಾಯಪಟ್ಟರು.

‘ಒಡನಾಡಿಗೆ ಮಕ್ಕಳನ್ನು ಕರೆತನ್ನಿ’

ಚಿತ್ರದುರ್ಗಾದಲ್ಲಿರುವ ಮಕ್ಕಳನ್ನು ಸುರಕ್ಷಿತ ದೃಷ್ಟಿಯಿಂದ ಬೇರೆ ಜಿಲ್ಲೆಗೆ ಸ್ಥಳಾಂತರಿಸಬೇಕು. ಹೀಗಾಗಿ ಮೈಸೂರಿಗೆ ಕರೆ ತಂದು ಒಡನಾಡಿ ಸಂಸ್ಥೆಯಲ್ಲಿ ಮಕ್ಕಳನ್ನು ಇರಿಸಬೇಕು. ಮಕ್ಕಳಿಗೆ ದಲಿತ ಸಂಘರ್ಷ ಸಮಿತಿ ಕೂಡ ಬೆಂಬಲವಾಗಿ ನಿಲ್ಲುವುದು. ಈ ಪ್ರಕರಣದ ಸಂಬಂಧ ಎಲ್ಲ ಪಕ್ಷಗಳು ಜನಪ್ರತಿನಿಧಿಗಳು ಓಟು ರಾಜಕಾರಣ ಬಿಟ್ಟು ಮಾತನಾಡಬೇಕು. ಆ ಮೂಲಕ ನ್ಯಾಯದ ಪರವಾಗಿ ನಿಂತು ತಮ್ಮ ಬದ್ಧತೆ ಮೆರೆಯಬೇಕು ಎಂದು ಗುರುಪ್ರಸಾದ್ ಕೆರೆಗೋಡು ತಿಳಿಸಿದರು.

ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದದ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ಮಾತನಾಡಿ, ಸರ್ಕಾರ ಸ್ವಾಮೀಜಿಯ ರಕ್ಷಣೆಗೆ ನಿಂತಿರುವ ಅನುಮಾನ ಕಾಡುತ್ತಿದೆ. ಗೃಹ ಸಚಿವ ಅರಗಜ್ಞಾನೇಂದ್ರ ರಾಜೀನಾಮೆ ಕೊಡಬೇಕು. ಅವರು ಇಂತಹ ಮೂರ್ನಾಲ್ಕು ಪ್ರಕರಣಗಳಲ್ಲಿ ತಮ್ಮ ಹೇಳಿಕೆಗಳ ಮೂಲಕ ತನಿಖೆ ದಿಕ್ಕು ತಪ್ಪಿಸಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.

ಈ ಪ್ರಕರಣದಲ್ಲಿ ಷಡ್ಯಂತ್ರ ನಡೆಯುತ್ತಿದೆ ಎಂದು ಹೇಳುತ್ತಿದ್ದಾರೆ. ಈ ಇಬ್ಬರು ಅಪ್ರಾಪ್ತ ಬಾಲಕಿಯರು ಷಡ್ಯಂತ್ರ ರೂಪಿಸಲು ಸಾಧ್ಯವೇ? ಮಕ್ಕಳಿಗೆ ವೈದ್ಯಕೀಯ ಪರೀಕ್ಷೆಗಳನ್ನು ಮಾಡಿದ್ದಾರೆ. ಆದರೆ, ಸ್ವಾಮೀಜಿಗೆ ವೈದ್ಯಕೀಯ ಪರೀಕ್ಷೆ ನಡೆಯದೆ ಇರುವುದು ಪ್ರಕರಣವನ್ನು ದಿಕ್ಕು ತಪ್ಪಿಸುವ ಸೂಚನೆಯಾಗಿದೆ. ಈ ಪ್ರಕರಣವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದರೆ ತೀವ್ರ ಚಳವಳಿ ಎದುರಿಬೇಕಾಗುತ್ತದೆ ಎಂದು ಎಚ್ಚರಿಸಿದರು.

ಇದನ್ನೂ ಓದಿರಿ: ಎಸ್‌ಸಿ, ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಮುರುಘಾ ಶರಣರ ವಿರುದ್ಧ ಪ್ರಕರಣ ದಾಖಲು

ಅಪ್ರಾಪ್ತ ಬಾಲಕಿಯರಿಗೆ ನ್ಯಾಯ ದೊರೆಕಿಸುವ ನಿಟ್ಟಿನಲ್ಲಿ ಪ್ರಗತಿಪರ, ರೈತ ಹಾಗೂ ದಲಿತ ಮತ್ತು ವಿವಿಧ ಸಮುದಾಯಗಳ ಸಂಘಟನೆಗಳು ಹೋರಾಟ ರೂಪಿಸುವ ನಿಟ್ಟಿನಲ್ಲಿ ಆ.31ರಂದು ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಸಭೆ ಹಮ್ಮಿಕೊಳ್ಳಲಾಗಿದೆ. ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ದಸಂದ ಮೈಸೂರು ಜಿಲ್ಲಾ ಸಂಚಾಲಕ ಬೆಟ್ಟಯ್ಯ ಕೋಟೆ ಮಾತನಾಡಿ, “ಚಿತ್ರದುರ್ಗದ ಮುರುಘಾ ಮಠದ ಮೇಲೆ ನಮಗಿದ್ದ ಆಶಾ ಭಾವನೆಗೆ ಅಘಾತ ತಂದಿದೆ. ಕೂಡಲೇ ಆರೋಪಿಯಾಗಿರುವ ಶಿವಮೂರ್ತಿ ಮುರುಘಾ ರಾಜೇಂದ್ರ ಸ್ವಾಮೀಜಿಯನ್ನು ಮೊದಲು ಜೈಲಿಗೆ ಕಳುಹಿಸಬೇಕು. ಇಲ್ಲವಾದರೆ ಗ್ರಾಮೀಣ ಪ್ರದೇಶಗಳಿಂದಲೇ ಹೋರಾಟ ನಡೆಸಲಾಗುವುದು. ಸರ್ಕಾರಕ್ಕೆ ಮಾನ-ಮರ್ಯಾದೆ ಇದ್ದರೆ ಮೊದಲು ಆರೋಪಿ ಸ್ವಾಮೀಜಿಯನ್ನು ಬಂಧಿಸಬೇಕು” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಎಸ್‌. ಐ.ಟಿ. ರಚನೆಗಾಗಿ ಸರ್ಕಾರವನ್ನು ನಂಬಿ ಕೂರಬಾರದು. ನ್ಯಾಯಾಂಗದ ಮೊರೆ ಹೋಗಬೇಕು.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...