Homeಕರ್ನಾಟಕಹುಬ್ಬಳ್ಳಿ ಈದ್ಗಾ ಮೈದಾನದ ಗಣೇಶ ಉತ್ಸವಕ್ಕೆ ತಡೆ ಇಲ್ಲ: ತಡರಾತ್ರಿ ವಿಚಾರಣೆಯಲ್ಲಿ ಹೈಕೋರ್ಟ್ ಹೇಳಿದ್ದೇನು?

ಹುಬ್ಬಳ್ಳಿ ಈದ್ಗಾ ಮೈದಾನದ ಗಣೇಶ ಉತ್ಸವಕ್ಕೆ ತಡೆ ಇಲ್ಲ: ತಡರಾತ್ರಿ ವಿಚಾರಣೆಯಲ್ಲಿ ಹೈಕೋರ್ಟ್ ಹೇಳಿದ್ದೇನು?

- Advertisement -
- Advertisement -

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ್ ಉತ್ಸವ ಆಚರಿಸುವ ಸಂಬಂಧ ಕರ್ನಾಟಕ ಹೈಕೋರ್ಟ್ ಇಂದು ರಾತ್ರಿ ಹತ್ತು ಗಂಟೆಯಲ್ಲಿ ವಿಚಾರಣೆ ನಡೆಸಿತು. ಹುಬ್ಬಳ್ಳಿ ಪಾಲಿಕೆ ಅಧಿಕಾರಿಗಳ ನಿಲುವಿನಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ತಿಳಿಸಿತು.

ವಕ್ಫ್ ಆಸ್ತಿಯಲ್ಲಿ ಗಣೇಶ ಚತುರ್ಥಿ ಆಚರಣೆಗಳನ್ನು ನಿಲ್ಲಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಹೈಕೋರ್ಟ್ ಮಂಗಳವಾರ ರಾತ್ರಿ 10 ಗಂಟೆಗೆ ವಿಚಾರಣೆ ಆರಂಭಿಸಿತು.

ಚಾಮರಾಜಪೇಟೆಯಲ್ಲಿರುವ ಈದ್ಗಾ ಮೈದಾನದಲ್ಲಿ ಗಣಪತಿ ಉತ್ಸವ ಆಚರಿಸದಂತೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು, ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿರುವ ಗಣೇಶ್ ಉತ್ಸವದ ತಡೆ ಅರ್ಜಿ ಸಲ್ಲಿಕೆಯಾಗಿತ್ತು. ಈ ವಿಚಾರವಾಗಿ ತುರ್ತು ವಿಚಾರಣೆ ನಡೆಸಿ, ಅರ್ಜಿದಾರರು ಹಾಗೂ ಪ್ರತಿವಾದಿಯ ವಾದಗಳನ್ನು ಆಲಿಸಿತು.

ಈ ಆಸ್ತಿಯು ಸರ್ಕಾರಕ್ಕೆ ಸೇರಿದ್ದು, ಪಾಲಿಕೆ ನಿರ್ಧಾರದಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಅಶೋಕ್ ಎಸ್ ಕಿಣಗಿ ಅವರು ವಿಚಾರಣೆ ನಡೆಸಿದರು.

ವಿಚಾರಣೆ ಹೀಗಿತ್ತು:

ರಾತ್ರಿ 10: 06

ಅರ್ಜಿದಾರರು: (ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲೇಖಿಸಿ) ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶದ ದೃಷ್ಟಿಯಿಂದ, ಈ ಅರ್ಜಿಯಲ್ಲೂ ಅದೇ ಆದೇಶವನ್ನು ನೀಡಬಹುದು.

ರಾತ್ರಿ 10: 08

ಪ್ರತಿವಾದಿಗಳು: ಸರ್ವೋಚ್ಚ ನ್ಯಾಯಾಲಯದ ಮುಂದಿರುವ ಪ್ರಶ್ನೆಗಳು ಆಸ್ತಿಯ ಒಡೆತನಕ್ಕೆ ಸಂಬಂಧಿಸಿದೆ. ಇದು ಸರ್ಕಾರಿ ಭೂಮಿಯಾಗಿದೆ. ಅಲ್ಲಿನ ಪ್ರಶ್ನೆ ಇಲ್ಲಿ ಬರುವುದಿಲ್ಲ.

ಪ್ರತಿವಾದಿಗಳು: ಈ ಪ್ರಕರಣದಲ್ಲಿ ಖಾಸಗಿ ಕಕ್ಷಿದಾರರು ಮೊಕದ್ದಮೆ ಹೂಡಿದರು, ಅದು ಅಂತಿಮವಾಗಿ ಮೇಲ್ಮನವಿಯಲ್ಲಿ ದೃಢೀಕರಿಸಲ್ಪಟ್ಟಿದೆ.

ಪ್ರತಿವಾದಿಗಳು: ವಿಚಾರಣಾ ನ್ಯಾಯಾಲಯ ತೀರ್ಪು ನೀಡಿದೆ. 1991ರ ವಹಿವಾಟು ಪರವಾನಗಿಯಾಗಿದೆ, ಗುತ್ತಿಗೆ ಅಲ್ಲ ಎಂದು ಹೇಳಿದೆ. ಇಲ್ಲಿನ ಭೂಮಿಯನ್ನು ಬಳಸುವ ಹಕ್ಕು ಸಾರ್ವಜನಿಕರಿಗೆ ಇದೆ ಎಂದು ಘೋಷಿಸಲಾಗಿದೆ.

ರಾತ್ರಿ 10: 12

ಪ್ರತಿವಾದಿಗಳು: ಈ ಜಾಗವನ್ನು ಸಾರ್ವಜನಿಕರ ಬಳಕೆಗೆ ಮುಕ್ತವಾಗಿ ಇಡಬೇಕಿತ್ತು. ವಕ್ಫ್ ಮಂಡಳಿ ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಇದನ್ನು ವಿಶ್ಲೇಷಿಸಬೇಕಾಗುತ್ತದೆ.

ಕೋರ್ಟ್: ಯಾವುದೇ ವಿವಾದವಿಲ್ಲವೇ? ಆದರೆ ಸತ್ಯಗಳು ವಿಭಿನ್ನವಾಗಿವೆ.

ಪ್ರತಿವಾದಿ: ಯಾವುದೇ ವಿವಾದವಿಲ್ಲ. ಇದು ಕಾರ್ಪೋರೇಷನ್‌ ಆಸ್ತಿಯಾಗಿದೆ. ಆಸ್ತಿಯನ್ನು ತನಗೆ ಬೇಕಾದಂತೆ ಬಳಸುವ ಸಂಪೂರ್ಣ ಹಕ್ಕು ಪಾಲಿಕೆಗೆ ಇದೆ. ಮಧ್ಯಂತರ ಆದೇಶದ ಬಳಿಕ ಆಯುಕ್ತರು ಈ ಆದೇಶ ಹೊರಡಿಸಿರುವುದು ಕುತೂಹಲ ಮೂಡಿಸಿದೆ.

ಪ್ರತಿವಾದಿ: ಇದು ಕೇವಲ ಮೂರು ದಿನಗಳ ಆಚರಣೆ. ಸೂಚಿಸಿದಂತೆ ನಿರ್ಬಂಧಗಳನ್ನು ಹೇರಲಾಗಿದೆ. ಕೇವಲ 30×30 ಪ್ಯಾಂಡಲ್ ಹಾಕಲಾಗಿದೆ. ನಾವು ಅದನ್ನು ನ್ಯಾಯಯುತ ಮತ್ತು ಸರಿಯಾದ ಉದ್ದೇಶಕ್ಕಾಗಿ ಬಳಸುತ್ತೇವೆ.

ರಾತ್ರಿ 10: 23

ಪ್ರತಿವಾದಿ: ಅರ್ಜಿಯಲ್ಲಿ ಪರಿಗಣಿಸಲು ನಿಜವಾಗಿಯೂ ಏನೂ ಉಳಿದಿಲ್ಲ.

ರಾತ್ರಿ 10: 25

ಅರ್ಜಿದಾರರು: ಆಕ್ಷೇಪಣೆಗಳನ್ನು ಪರಿಗಣಿಸದೆ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಅದು ಅವರ ಆಸ್ತಿ, ಅವರು ಏನು ಬೇಕಾದರೂ ಮಾಡಬಹುದು. ಆದರೆ ಈ ಸಮಯದಲ್ಲಿ ಅಲ್ಲ. ಅವರು ವಾಸ್ತವಿಕ ಸಂಗತಿಗಳು ಮತ್ತು ಸಂದರ್ಭಗಳನ್ನು ಪರಿಗಣಿಸಬೇಕು. ಇದೇ ಮೊದಲ ಬಾರಿಗೆ ಪಾಲಿಕೆ ಇಂಥ ನಿರ್ಧಾರ ಕೈಗೊಂಡಿದೆ. ಇದು ಪಾಲಿಕೆ ಆಸ್ತಿಯಾಗಿದ್ದರೂ ಇಂದಿನ ವಾಸ್ತವ ಮತ್ತು ಪರಿಸ್ಥಿತಿಯನ್ನು ಪರಿಗಣಿಸಿ ನ್ಯಾಯಾಲಯ ನಿರ್ಧರಿಸಬೇಕು.

ಕೋರ್ಟ್: ರಾತ್ರಿ 10:45ಕ್ಕೆ ಆದೇಶ ನೀಡಲಾಗುವುದು.

ರಾತ್ರಿ 11: 18

ಆದೇಶ ಮಾಡಲು ಮುಂದಾದ ಪೀಠ

ರಾತ್ರಿ 11: 23

ನ್ಯಾಯಾಲಯ: ಆಸ್ತಿಯು ಪ್ರತಿವಾದಿಯವರಿಗೆ ಸೇರಿದೆ ಎಂಬುದರಲ್ಲಿ ವಿವಾದವಿಲ್ಲ. ತೀರ್ಪಿನ ಪರಿಶೀಲನೆಯಿಂದ ಪ್ರತಿವಾದಿಯು ಆಸ್ತಿಯ ಮಾಲೀಕರೆಂದು ಸ್ಪಷ್ಟವಾಗುತ್ತದೆ. ಅರ್ಜಿದಾರರು ಎರಡು ಸಂದರ್ಭಗಳಲ್ಲಿ ಮಾತ್ರ ಜಾಗವನ್ನು ಬಳಸಲು ಅನುಮತಿ ಪಡೆದಿದ್ದಾರೆ.

ರಾತ್ರಿ 11:30

ನ್ಯಾಯಾಲಯ: ಸದರಿ ಆಸ್ತಿಯು ಪ್ರತಿವಾದಿಯದ್ದಾಗಿದೆ. ನಿಯಮಿತ ಚಟುವಟಿಕೆಗಳನ್ನು ಕೈಗೊಳ್ಳಲು ಈ ಆಸ್ತಿಯನ್ನು ಬಳಸಲಾಗುತ್ತಿದೆ. ಇದನ್ನು ಪೂಜಾಸ್ಥಳ ಎಂದು ಘೋಷಿಸಿಲ್ಲ. ಪ್ರತಿವಾದಿಯು 1991ರ ಕಾಯಿದೆಯ ನಿಬಂಧನೆಗಳನ್ನು ಉಲ್ಲಂಘಿಸಿದ್ದರೆ, ಅರ್ಜಿದಾರರಿಗೆ ಪರಿಹಾರವಿರುತ್ತದೆ.

ಕೋರ್ಟ್ ನಿಲುವು

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿ ಆಚರಣೆಗೆ ಅನುಮತಿ ನೀಡುವ ಅಧಿಕಾರಿಗಳ ನಿರ್ಧಾರ‌ಕ್ಕೆ ಮಧ್ಯಪ್ರವೇಶಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. (ಇಲ್ಲಿ ಗಣೇಶ್ ಚತುರ್ಥಿ ಆಚರಿಸಲು ತಡೆಯುವುದಕ್ಕೆ ಸಾಧ್ಯವಿಲ್ಲವೆಂದು ಕೋರ್ಟ್ ತಿಳಿಸಿದೆ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ಸ್ವರ್ಣಲತಾ ನಿಧನ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಟ ಪ್ರಕಾಶ್‌ ರಾಜ್‌ ಅವರು ತಮ್ಮ ತಾಯಿಯೊಂದಿಗೆ ಇದ್ದ...

ಮುಂಬೈ: ಸ್ವ-ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಆಕ್ರೋಶ: ದಾದರ್‌ನಲ್ಲಿ ಮೂಢನಂಬಿಕೆ ವಿರೋಧಿ ಅಭಿಯಾನ

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಚಟುವಟಿಕೆಗಳ ಸುತ್ತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ವಿವೇಕ್ ಜಾಗರ್ ಉಪಕ್ರಮದಡಿಯಲ್ಲಿ ಮಹಾರಾಷ್ಟ್ರ ಅಂಧಾಶ್ರದ್ಧ ನಿರ್ಮೂಲನ ಸಮಿತಿ (MANS) ಮಹಾರಾಷ್ಟ್ರ ಘಟಕವು ಭಾನುವಾರ...

ನೋಟಿಸ್ ನೀಡದೆ ಮಸೀದಿ ಬಂದ್; ಉತ್ತರ ಪ್ರದೇಶ ಸರ್ಕಾರವನ್ನು ಪ್ರಶ್ನಿಸಿದ ಅಲಹಾಬಾದ್ ಹೈಕೋರ್ಟ್

ಪೂರ್ವ ಸೂಚನೆ ನೀಡದೆ ಅಥವಾ ಮಾಲೀಕರಿಗೆ ವಿಚಾರಣೆಗೆ ಅವಕಾಶ ನೀಡದೆ ಪ್ರಾರ್ಥನಾ ಸ್ಥಳಕ್ಕೆ ಬೀಗ ಹಾಕಬಹುದೇ ಎಂಬ ಬಗ್ಗೆ ವಿವರಣೆ ನೀಡಬೇಕು ಎಂದು ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ಕೇಳಿದೆ. ಮುಜಫರ್‌ನಗರದಲ್ಲಿ ಮಸೀದಿಯನ್ನು...

ಬಿಜು ಪಟ್ನಾಯಕ್ ಕುರಿತು ಹೇಳಿಕೆ : ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ತೀವ್ರ ಆಕ್ರೋಶ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ಬಿಜೆಪಿ ಸಂಸದ ನಿಶಿಕಾಂತ್ ದುಬೆ ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದುಬೆ ನೇತೃತ್ವದ ಸಂವಹನ ಮತ್ತು ಐಟಿ ಕುರಿತ ಸಂಸದೀಯ ಸ್ಥಾಯಿ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ; ಆರ್‌ಎಸ್‌ಎಸ್ ನಾಯಕ ಸೇರಿದಂತೆ 30 ಜನರ ಬಂಧನ

ಮಾರ್ಚ್ 27 ರಂದು ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ನಡೆದ ರಾಮನವಮಿ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದ ನಂತರ ಸುಮಾರು 30 ಜನರು ಗಾಯಗೊಂಡರು. ಈ ಘಟನೆಯು ವ್ಯಾಪಕ ಉದ್ವಿಗ್ನತೆಗೆ ಕಾರಣವಾಗಿದ್ದು, ಅಂಗಡಿ...

ದೆಹಲಿ ಗಲಭೆ ಪ್ರಕರಣ: ಮಧ್ಯಂತರ ಜಾಮೀನು ಅವಧಿ ಅಂತ್ಯ; ಇಂದು ತಿಹಾರ್ ಜೈಲಿಗೆ ಮರಳಲಿರುವ ಶಾರ್ಜೀಲ್ ಇಮಾಮ್

2020 ರ ಈಶಾನ್ಯ ದೆಹಲಿ ಗಲಭೆಯ ಹಿಂದಿನ ದೊಡ್ಡ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ನೀಡಿದ್ದ 10 ದಿನಗಳ ಮಧ್ಯಂತರ ಜಾಮೀನು ಅವಧಿ ಮುಗಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್...