Homeಕರ್ನಾಟಕಹುಬ್ಬಳ್ಳಿ ಈದ್ಗಾ ಮೈದಾನದ ಗಣೇಶ ಉತ್ಸವಕ್ಕೆ ತಡೆ ಇಲ್ಲ: ತಡರಾತ್ರಿ ವಿಚಾರಣೆಯಲ್ಲಿ ಹೈಕೋರ್ಟ್ ಹೇಳಿದ್ದೇನು?

ಹುಬ್ಬಳ್ಳಿ ಈದ್ಗಾ ಮೈದಾನದ ಗಣೇಶ ಉತ್ಸವಕ್ಕೆ ತಡೆ ಇಲ್ಲ: ತಡರಾತ್ರಿ ವಿಚಾರಣೆಯಲ್ಲಿ ಹೈಕೋರ್ಟ್ ಹೇಳಿದ್ದೇನು?

- Advertisement -
- Advertisement -

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ್ ಉತ್ಸವ ಆಚರಿಸುವ ಸಂಬಂಧ ಕರ್ನಾಟಕ ಹೈಕೋರ್ಟ್ ಇಂದು ರಾತ್ರಿ ಹತ್ತು ಗಂಟೆಯಲ್ಲಿ ವಿಚಾರಣೆ ನಡೆಸಿತು. ಹುಬ್ಬಳ್ಳಿ ಪಾಲಿಕೆ ಅಧಿಕಾರಿಗಳ ನಿಲುವಿನಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ತಿಳಿಸಿತು.

ವಕ್ಫ್ ಆಸ್ತಿಯಲ್ಲಿ ಗಣೇಶ ಚತುರ್ಥಿ ಆಚರಣೆಗಳನ್ನು ನಿಲ್ಲಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಹೈಕೋರ್ಟ್ ಮಂಗಳವಾರ ರಾತ್ರಿ 10 ಗಂಟೆಗೆ ವಿಚಾರಣೆ ಆರಂಭಿಸಿತು.

ಚಾಮರಾಜಪೇಟೆಯಲ್ಲಿರುವ ಈದ್ಗಾ ಮೈದಾನದಲ್ಲಿ ಗಣಪತಿ ಉತ್ಸವ ಆಚರಿಸದಂತೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು, ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿರುವ ಗಣೇಶ್ ಉತ್ಸವದ ತಡೆ ಅರ್ಜಿ ಸಲ್ಲಿಕೆಯಾಗಿತ್ತು. ಈ ವಿಚಾರವಾಗಿ ತುರ್ತು ವಿಚಾರಣೆ ನಡೆಸಿ, ಅರ್ಜಿದಾರರು ಹಾಗೂ ಪ್ರತಿವಾದಿಯ ವಾದಗಳನ್ನು ಆಲಿಸಿತು.

ಈ ಆಸ್ತಿಯು ಸರ್ಕಾರಕ್ಕೆ ಸೇರಿದ್ದು, ಪಾಲಿಕೆ ನಿರ್ಧಾರದಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಅಶೋಕ್ ಎಸ್ ಕಿಣಗಿ ಅವರು ವಿಚಾರಣೆ ನಡೆಸಿದರು.

ವಿಚಾರಣೆ ಹೀಗಿತ್ತು:

ರಾತ್ರಿ 10: 06

ಅರ್ಜಿದಾರರು: (ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲೇಖಿಸಿ) ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶದ ದೃಷ್ಟಿಯಿಂದ, ಈ ಅರ್ಜಿಯಲ್ಲೂ ಅದೇ ಆದೇಶವನ್ನು ನೀಡಬಹುದು.

ರಾತ್ರಿ 10: 08

ಪ್ರತಿವಾದಿಗಳು: ಸರ್ವೋಚ್ಚ ನ್ಯಾಯಾಲಯದ ಮುಂದಿರುವ ಪ್ರಶ್ನೆಗಳು ಆಸ್ತಿಯ ಒಡೆತನಕ್ಕೆ ಸಂಬಂಧಿಸಿದೆ. ಇದು ಸರ್ಕಾರಿ ಭೂಮಿಯಾಗಿದೆ. ಅಲ್ಲಿನ ಪ್ರಶ್ನೆ ಇಲ್ಲಿ ಬರುವುದಿಲ್ಲ.

ಪ್ರತಿವಾದಿಗಳು: ಈ ಪ್ರಕರಣದಲ್ಲಿ ಖಾಸಗಿ ಕಕ್ಷಿದಾರರು ಮೊಕದ್ದಮೆ ಹೂಡಿದರು, ಅದು ಅಂತಿಮವಾಗಿ ಮೇಲ್ಮನವಿಯಲ್ಲಿ ದೃಢೀಕರಿಸಲ್ಪಟ್ಟಿದೆ.

ಪ್ರತಿವಾದಿಗಳು: ವಿಚಾರಣಾ ನ್ಯಾಯಾಲಯ ತೀರ್ಪು ನೀಡಿದೆ. 1991ರ ವಹಿವಾಟು ಪರವಾನಗಿಯಾಗಿದೆ, ಗುತ್ತಿಗೆ ಅಲ್ಲ ಎಂದು ಹೇಳಿದೆ. ಇಲ್ಲಿನ ಭೂಮಿಯನ್ನು ಬಳಸುವ ಹಕ್ಕು ಸಾರ್ವಜನಿಕರಿಗೆ ಇದೆ ಎಂದು ಘೋಷಿಸಲಾಗಿದೆ.

ರಾತ್ರಿ 10: 12

ಪ್ರತಿವಾದಿಗಳು: ಈ ಜಾಗವನ್ನು ಸಾರ್ವಜನಿಕರ ಬಳಕೆಗೆ ಮುಕ್ತವಾಗಿ ಇಡಬೇಕಿತ್ತು. ವಕ್ಫ್ ಮಂಡಳಿ ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಇದನ್ನು ವಿಶ್ಲೇಷಿಸಬೇಕಾಗುತ್ತದೆ.

ಕೋರ್ಟ್: ಯಾವುದೇ ವಿವಾದವಿಲ್ಲವೇ? ಆದರೆ ಸತ್ಯಗಳು ವಿಭಿನ್ನವಾಗಿವೆ.

ಪ್ರತಿವಾದಿ: ಯಾವುದೇ ವಿವಾದವಿಲ್ಲ. ಇದು ಕಾರ್ಪೋರೇಷನ್‌ ಆಸ್ತಿಯಾಗಿದೆ. ಆಸ್ತಿಯನ್ನು ತನಗೆ ಬೇಕಾದಂತೆ ಬಳಸುವ ಸಂಪೂರ್ಣ ಹಕ್ಕು ಪಾಲಿಕೆಗೆ ಇದೆ. ಮಧ್ಯಂತರ ಆದೇಶದ ಬಳಿಕ ಆಯುಕ್ತರು ಈ ಆದೇಶ ಹೊರಡಿಸಿರುವುದು ಕುತೂಹಲ ಮೂಡಿಸಿದೆ.

ಪ್ರತಿವಾದಿ: ಇದು ಕೇವಲ ಮೂರು ದಿನಗಳ ಆಚರಣೆ. ಸೂಚಿಸಿದಂತೆ ನಿರ್ಬಂಧಗಳನ್ನು ಹೇರಲಾಗಿದೆ. ಕೇವಲ 30×30 ಪ್ಯಾಂಡಲ್ ಹಾಕಲಾಗಿದೆ. ನಾವು ಅದನ್ನು ನ್ಯಾಯಯುತ ಮತ್ತು ಸರಿಯಾದ ಉದ್ದೇಶಕ್ಕಾಗಿ ಬಳಸುತ್ತೇವೆ.

ರಾತ್ರಿ 10: 23

ಪ್ರತಿವಾದಿ: ಅರ್ಜಿಯಲ್ಲಿ ಪರಿಗಣಿಸಲು ನಿಜವಾಗಿಯೂ ಏನೂ ಉಳಿದಿಲ್ಲ.

ರಾತ್ರಿ 10: 25

ಅರ್ಜಿದಾರರು: ಆಕ್ಷೇಪಣೆಗಳನ್ನು ಪರಿಗಣಿಸದೆ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಅದು ಅವರ ಆಸ್ತಿ, ಅವರು ಏನು ಬೇಕಾದರೂ ಮಾಡಬಹುದು. ಆದರೆ ಈ ಸಮಯದಲ್ಲಿ ಅಲ್ಲ. ಅವರು ವಾಸ್ತವಿಕ ಸಂಗತಿಗಳು ಮತ್ತು ಸಂದರ್ಭಗಳನ್ನು ಪರಿಗಣಿಸಬೇಕು. ಇದೇ ಮೊದಲ ಬಾರಿಗೆ ಪಾಲಿಕೆ ಇಂಥ ನಿರ್ಧಾರ ಕೈಗೊಂಡಿದೆ. ಇದು ಪಾಲಿಕೆ ಆಸ್ತಿಯಾಗಿದ್ದರೂ ಇಂದಿನ ವಾಸ್ತವ ಮತ್ತು ಪರಿಸ್ಥಿತಿಯನ್ನು ಪರಿಗಣಿಸಿ ನ್ಯಾಯಾಲಯ ನಿರ್ಧರಿಸಬೇಕು.

ಕೋರ್ಟ್: ರಾತ್ರಿ 10:45ಕ್ಕೆ ಆದೇಶ ನೀಡಲಾಗುವುದು.

ರಾತ್ರಿ 11: 18

ಆದೇಶ ಮಾಡಲು ಮುಂದಾದ ಪೀಠ

ರಾತ್ರಿ 11: 23

ನ್ಯಾಯಾಲಯ: ಆಸ್ತಿಯು ಪ್ರತಿವಾದಿಯವರಿಗೆ ಸೇರಿದೆ ಎಂಬುದರಲ್ಲಿ ವಿವಾದವಿಲ್ಲ. ತೀರ್ಪಿನ ಪರಿಶೀಲನೆಯಿಂದ ಪ್ರತಿವಾದಿಯು ಆಸ್ತಿಯ ಮಾಲೀಕರೆಂದು ಸ್ಪಷ್ಟವಾಗುತ್ತದೆ. ಅರ್ಜಿದಾರರು ಎರಡು ಸಂದರ್ಭಗಳಲ್ಲಿ ಮಾತ್ರ ಜಾಗವನ್ನು ಬಳಸಲು ಅನುಮತಿ ಪಡೆದಿದ್ದಾರೆ.

ರಾತ್ರಿ 11:30

ನ್ಯಾಯಾಲಯ: ಸದರಿ ಆಸ್ತಿಯು ಪ್ರತಿವಾದಿಯದ್ದಾಗಿದೆ. ನಿಯಮಿತ ಚಟುವಟಿಕೆಗಳನ್ನು ಕೈಗೊಳ್ಳಲು ಈ ಆಸ್ತಿಯನ್ನು ಬಳಸಲಾಗುತ್ತಿದೆ. ಇದನ್ನು ಪೂಜಾಸ್ಥಳ ಎಂದು ಘೋಷಿಸಿಲ್ಲ. ಪ್ರತಿವಾದಿಯು 1991ರ ಕಾಯಿದೆಯ ನಿಬಂಧನೆಗಳನ್ನು ಉಲ್ಲಂಘಿಸಿದ್ದರೆ, ಅರ್ಜಿದಾರರಿಗೆ ಪರಿಹಾರವಿರುತ್ತದೆ.

ಕೋರ್ಟ್ ನಿಲುವು

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿ ಆಚರಣೆಗೆ ಅನುಮತಿ ನೀಡುವ ಅಧಿಕಾರಿಗಳ ನಿರ್ಧಾರ‌ಕ್ಕೆ ಮಧ್ಯಪ್ರವೇಶಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. (ಇಲ್ಲಿ ಗಣೇಶ್ ಚತುರ್ಥಿ ಆಚರಿಸಲು ತಡೆಯುವುದಕ್ಕೆ ಸಾಧ್ಯವಿಲ್ಲವೆಂದು ಕೋರ್ಟ್ ತಿಳಿಸಿದೆ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...