Homeಮುಖಪುಟಭಾರತ: 2021 ರಲ್ಲಿ ಪ್ರತಿದಿನ ಸರಾಸರಿ 86 ‘ಅತ್ಯಾಚಾರ’ ಪ್ರಕರಣಗಳು ದಾಖಲು!

ಭಾರತ: 2021 ರಲ್ಲಿ ಪ್ರತಿದಿನ ಸರಾಸರಿ 86 ‘ಅತ್ಯಾಚಾರ’ ಪ್ರಕರಣಗಳು ದಾಖಲು!

ಕಳೆದ ವರ್ಷದ ದೇಶದ ಪ್ರತಿ ಲಕ್ಷ ಮಹಿಳೆಯರಲ್ಲಿ ಸರಾಸರಿ 5 ಮಹಿಳೆಯರು ಅತ್ಯಾಚಾರಕ್ಕೆ ಒಳಗಾಗಿದ್ದಾರೆ

- Advertisement -
- Advertisement -

2021 ರಲ್ಲಿ ಪ್ರತಿದಿನ ಸರಾಸರಿ 86 ಅತ್ಯಾಚಾರ ಪ್ರಕರಣಗಳು ಭಾರತದಲ್ಲಿ ದಾಖಲಾಗಿವೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ವರದಿ ಹೇಳಿದೆ. ಇಷ್ಟೆ ಅಲ್ಲದೆ, ಪ್ರತಿ ಗಂಟೆಗೆ ದೇಶದ 49 ಮಹಿಳೆಯರ ವಿರುದ್ಧ ಅಪರಾಧಗಳು ಕಳೆದ ವರ್ಷ ನಡೆದಿತ್ತು ಎಂದು ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಬಿಡುಗಡೆ ಮಾಡಿರುವ ಇತ್ತೀಚೆಗಿನ ಅಂಕಿಅಂಶಗಳ ವರದಿ ಹೇಳಿವೆ.

2021 ರಲ್ಲಿ 31,677 ಅತ್ಯಾಚಾರ ಪ್ರಕರಣಗಳು ಭಾರತದಲ್ಲಿ ದಾಖಲಾಗಿದೆ ಎಂದು ಎನ್‌ಸಿಆರ್‌ಬಿ ವರದಿ ಹೇಳಿದೆ. 2019 ರಲ್ಲಿ 32,033 ಅತ್ಯಾಚಾರ ಪ್ರಕರಣಗಳು ದೇಶದಲ್ಲಿ ದಾಖಲಾಗಿದ್ದು, 2020 ರಲ್ಲಿ 28,046 ಪ್ರಕರಣಗಳು ದಾಖಲಾಗಿದೆ ಎಂದು ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋದ ‘ಕ್ರೈಮ್ ಇನ್ ಇಂಡಿಯಾ 2021’ ವರದಿ ತೋರಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಹಿಳೆಯರ ವಿರುದ್ಧ ನಡೆಯುವ ಅಪರಾಧಗಳು 2020 ಕ್ಕಿಂತ 2021 ರಲ್ಲಿ 15% ದಷ್ಟು ಹೆಚ್ಚಾಗಿದೆ ಎಂದು ಎನ್‌ಸಿಆರ್‌ಬಿ ಅಂಕಿಅಂಶಗಳು ಹೇಳಿದೆ. ಈ ಬ್ಯೂರೋ ಗೃಹ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತದೆ.

ಅತ್ಯಾಚಾರ ಪ್ರಕರಣಗಳು ದಾಖಲಾಗಿರುವ ರಾಜ್ಯಗಳ ಪೈಕಿ ರಾಜಸ್ಥಾನ (6,337) ಅಗ್ರಸ್ಥಾನದಲ್ಲಿದ್ದರೆ, ಮಧ್ಯಪ್ರದೇಶ (2,947), ಮಹಾರಾಷ್ಟ್ರ (2,496) ಮತ್ತು ಉತ್ತರ ಪ್ರದೇಶ (2,845) ಮತ್ತು ದೆಹಲಿಯಲ್ಲಿ 1,250 ಅತ್ಯಾಚಾರ ಪ್ರಕರಣಗಳು 2021 ರಲ್ಲಿ ದಾಖಲಾಗಿವೆ ಎಂದು ಎನ್‌ಸಿಆರ್‌ಬಿ ತೋರಿಸಿದೆ.

ಅತ್ಯಾಚಾರದ ಅಪರಾಧದ ಪ್ರಮಾಣ (ಪ್ರತಿ ಲಕ್ಷ ಜನಸಂಖ್ಯೆಗೆ) ರಾಜಸ್ಥಾನ (16.4) ನಂತರ ಚಂಡೀಗಢ (13.3), ದೆಹಲಿ (12.9), ಹರಿಯಾಣ (12.3) ಮತ್ತು ಅರುಣಾಚಲ ಪ್ರದೇಶ (11.1) ದಲ್ಲಿ ದಾಖಲಾಗಿದೆ. ಎನ್‌ಸಿಆರ್‌ಬಿ ಪ್ರಕಾರ ಅಖಿಲ ಭಾರತ ಸರಾಸರಿ ದರವು 4.8 ರಷ್ಟಿದೆ. ಅಂದರೆ ಕಳೆದ ವರ್ಷದ ದೇಶದ ಪ್ರತಿ ಲಕ್ಷ ಮಹಿಳೆಯರಲ್ಲಿ ಸರಾಸರಿ 5 ಮಹಿಳೆಯರು ಅತ್ಯಾಚಾರಕ್ಕೆ ಒಳಗಾಗಿದ್ದಾರೆ.

ಇದನ್ನೂ ಓದಿ: 3ನೇ ಸ್ಥಾನ: ಮಹಿಳೆಯರಿಗೆ ಅಸುರಕ್ಷಿತ ಮೆಟ್ರೋಪಾಲಿಟನ್ ನಗರವಾಗಿ ಬೆಂಗಳೂರು

2021 ರಲ್ಲಿ ದೇಶದಾದ್ಯಂತ ‘ಮಹಿಳೆಯರ ವಿರುದ್ಧದ ಅಪರಾಧಗಳ’ ಒಟ್ಟಾರೆ 4.28 ಲಕ್ಷ ಪ್ರಕರಣಗಳನ್ನು ದಾಖಲಿಸಲಾಗಿದೆ. 2019 ರಲ್ಲಿ 4.05 ಅಪರಾಧಗಳು ದಾಖಲಾಗಿದ್ದರೆ, 2020 ರಲ್ಲಿ 3.71 ಲಕ್ಷ ಅಪರಾಧಗಳು ಮಹಿಳೆಯರ ವಿರುದ್ಧ ನಡೆದಿತ್ತು.

2021 ರಲ್ಲಿ ಪ್ರತಿ ಒಂದು ಲಕ್ಷ ಮಹಿಳಾ ಜನಸಂಖ್ಯೆಯಲ್ಲಿ 64.5 ಮಹಿಳೆಯರ ಮೇಲೆ ಅಪರಾಧಗಳು ದಾಖಲಾಗಿವೆ. ಈ ರೀತಿ ದಾಖಲಾದ ಅಪರಾಧಗಳಲ್ಲಿ 77.1% ಅಪರಾಧಗಳ ಮೇಲೆ ಚಾರ್ಜ್ ಶೀಟ್‌ ದಾಖಲಾಗಿದೆ ಎಂದು ಅಧಿಕೃತ ಸರ್ಕಾರಿ ಅಂಕಿಅಂಶಗಳು ಹೇಳಿವೆ.

ಮಹಿಳೆಯರ ವಿರುದ್ಧದ ಅಪರಾಧಗಳಲ್ಲಿ ಅತ್ಯಾಚಾರ, ಕೊಲೆಯೊಂದಿಗೆ ಅತ್ಯಾಚಾರ, ವರದಕ್ಷಿಣೆ, ಆಸಿಡ್ ದಾಳಿಗಳು, ಆತ್ಮಹತ್ಯಾ ಪ್ರಚೋದನೆ, ಅಪಹರಣ, ಬಲವಂತದ ಮದುವೆ, ಮಾನವ ಕಳ್ಳಸಾಗಣೆ, ಆನ್‌ಲೈನ್ ಕಿರುಕುಳ ಮುಂತಾದ ಅಪರಾಧಗಳು ಸೇರಿವೆ.

ಇದನ್ನೂ ಓದಿ: 2021ಲ್ಲಿ ಬೆಂಗಳೂರಿನಲ್ಲಿ ಸರಾಸರಿ ಪ್ರತಿದಿನ ಒಂದು ಮಗುವಿನ ಮೇಲೆ ಲೈಂಗಿಕ ಕಿರುಕುಳ ನಡೆದಿದ್ದು, ಒಟ್ಟು 312 ಮಕ್ಕಳ ಮೇಲೆ ರೇಪ್ ನಡೆದಿದೆ

2021 ರಲ್ಲಿ, ಮಹಿಳೆಯರ ವಿರುದ್ಧದ ಅಪರಾಧಗಳ ಗರಿಷ್ಠ ಪ್ರಕರಣಗಳು ಉತ್ತರ ಪ್ರದೇಶದಲ್ಲಿ (56,083) ದಾಖಲಾಗಿವೆ, ನಂತರ ರಾಜಸ್ಥಾನ (40,738), ಮಹಾರಾಷ್ಟ್ರ (39,526), ​​ಪಶ್ಚಿಮ ಬಂಗಾಳ (35,884) ಮತ್ತು ಒಡಿಶಾ (31,352) ದಲ್ಲಿ ದಾಖಲಾಗಿವೆ ಎಂದು ಎನ್‌ಸಿಆರ್‌ಬಿ ವರದಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...