Homeಕರ್ನಾಟಕಎಸ್‌ಪಿ ಕಚೇರಿ ಎದುರೇ ಆತ್ಮಹತ್ಯೆಗೆ ಯತ್ನಿಸಿದ ಸಂತ್ರಸ್ತ ಕುಟುಂಬ; ಸಚಿವ ಆನಂದ್‌ ಸಿಂಗ್ ವಿರುದ್ಧ ಅಟ್ರಾಸಿಟಿ...

ಎಸ್‌ಪಿ ಕಚೇರಿ ಎದುರೇ ಆತ್ಮಹತ್ಯೆಗೆ ಯತ್ನಿಸಿದ ಸಂತ್ರಸ್ತ ಕುಟುಂಬ; ಸಚಿವ ಆನಂದ್‌ ಸಿಂಗ್ ವಿರುದ್ಧ ಅಟ್ರಾಸಿಟಿ ಕೇಸ್‌ ದಾಖಲು

ಸಚಿವ ಆನಂದ್‌ ಸಿಂಗ್‌ ಹಾಗೂ ಇತರರು ಜೀವ ಬೆದರಿಕೆ ಹಾಕಿದ್ದಾರೆಂದು ಆರೋಪಿಸಿ ಕುಟುಂಬವೊಂದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

- Advertisement -
- Advertisement -

ಪ್ರವಾಸೋದ್ಯಮ ಸಚಿವ ಆನಂದ್‌ ಸಿಂಗ್‌ ಹಾಗೂ ಇತರರು ಜೀವ ಬೆದರಿಕೆ ಹಾಕಿದ್ದಾರೆಂದು ಆರೋಪಿಸಿ ಕುಟುಂಬವೊಂದು ಆತ್ಮಹತ್ಯೆಗೆ ಯತ್ನಿಸಿದ್ದು, ಆನಂದ್ ಸಿಂಗ್ ಹಾಗೂ ಇತರ ಮೂವರ ಮೇಲೆ ಎಸ್‌ಸಿ, ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಜೀವ ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಆನಂದ್‌ ಸಿಂಗ್‌ ಸೇರಿ 4 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.

ಪ್ರವಾಸೋದ್ಯಮ ಸಚಿವ ಆನಂದ್‌ ಸಿಂಗ್‌ ಹಾಗೂ ಇತರೆ ಮೂವರ ವಿರುದ್ಧ ವಿಜಯನಗರ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಮಂಗಳವಾರ ರಾತ್ರಿ ಪ್ರಕರಣ ದಾಖಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಸಾಮಾಜಿಕ ಕಾರ್ಯಕರ್ತ ಡಿ. ಪೋಲಪ್ಪ ಎಂಬವರು ಕೊಟ್ಟ ದೂರಿನ ಮೇರೆಗೆ ಐ.ಪಿ.ಸಿ. ಸೆಕ್ಷೆನ್‌ 504, 506ರ ಅಡಿ ಎಸ್ಸಿ/ಎಸ್ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಅನ್ವಯ ಆನಂದ್‌ ಸಿಂಗ್‌, ಮರಿಯಪ್ಪ, ಹನುಮಂತಪ್ಪ ಹಾಗೂ ಹುಲುಗಪ್ಪ ವಿರುದ್ಧ ಪ್ರಕರಣ ದಾಖಲಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಅರುಣ್‌ ಕೆ ತಿಳಿಸಿದ್ದಾರೆ.

‘ಪೆಟ್ರೋಲ್‌ ಹಾಕಿ ಸುಟ್ಟು ಹಾಕುತ್ತೇನೆ’ ಎಂದು ಸಚಿವ ಆನಂದ್‌ ಸಿಂಗ್‌ ಅವರು ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಪೋಲಪ್ಪ ಅವರು, ಅವರ ಕುಟುಂಬದ ಒಂಬತ್ತು ಜನ ಸದಸ್ಯರೊಂದಿಗೆ ಮಂಗಳವಾರ ಸಂಜೆ ನಗರದ ಎಸ್ಪಿ ಕಚೇರಿ ಎದುರು ಮೈಮೇಲೆ ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಬಳಿಕ ಪೊಲೀಸರು ಮಧ್ಯ ಪ್ರವೇಶಿಸಿ ಅವರನ್ನು ತಡೆದು, ಆಸ್ಪತ್ರೆಗೆ ಕಳುಹಿಸಿದ್ದಾರೆ.

ಹೊಸಪೇಟೆ ನಗರದ ಹಂಪಿ ರಸ್ತೆಯಲ್ಲಿರುವ 6ನೇ ವಾರ್ಡಿನಲ್ಲಿರುವ ಸುಣ್ಣದ ಬಟ್ಟೆ ಪ್ರದೇಶದಲ್ಲಿ ಪೊಲಯ್ಯ ಅವರ ಕುಟುಂಬ ಹಲವು ವರ್ಷಗಳಿಂದ ವಾಸವಿದೆ. ಆದರೆ ಇತ್ತೀಚೆಗೆ ಅಲ್ಲಿಗೆ ಭೇಟಿ ನೀಡಿದ ಸಚಿವರು, ನೀವು ಕಟ್ಟಿರುವ ಮನೆ ಅಕ್ರಮವಾಗಿದೆ. ಇದು ಸರ್ಕಾರಿ ಜಾಗ. ಈ ಜಾಗವನ್ನು ನಗರಸಭೆ ವಶಕ್ಕೆ ಪಡೆಯುತ್ತಿದ್ದು, ಈ ಕೂಡಲೇ ಮನೆ ಖಾಲಿ ಮಾಡುವಂತೆ ಬೆದರಿಕೆ ಹಾಕಿದ್ದರು ಎನ್ನಲಾಗಿದೆ.

ಈ ಕುರಿತು ಸ್ಪಷ್ಟನೆ ನೀಡಿರುವ ಸಾಮಾಜಿಕ ಕಾರ್ಯಕರ್ತ ಪೋಲಯ್ಯ, “ಈ ಜಾಗ ಸರ್ಕಾರದ್ದಲ್ಲ. ವಿರಕ್ತ ಮಠದ ಮಲ್ಲಿಕಾರ್ಜುನ ಸ್ವಾಮೀಜಿಯವರದ್ದು. ಸುಮಾರು ಎಂಬತ್ತು ವರ್ಷಗಳ ಕೆಳಗೆ ವಿಲ್ ಮೂಲಕ ನನ್ನ ಹೆಂಡತಿಯ ತಾತನಾದ ಗುರುನಾಥಪ್ಪ ಅವರಿಗೆ ಬರೆದುಕೊಟ್ಟಿದ್ದಾರೆ. ನಾಲ್ಕು ತಲೆಮಾರಿನಿಂದ ಈ ಆಸ್ತಿಯನ್ನು ನಿರ್ವವಣೆ ಮಾಡಲಾಗುತ್ತಿದೆ. ನೋಂದಣಿಯಾದ ವಿಲ್‌ ಪ್ರಕಾರ ನಮ್ಮ ಒಡೆತನದಲ್ಲಿ ಜಾಗವಿದೆ. ಸರ್ಕಾರಕ್ಕಾಗಲೀ, ಆನಂದ್‌ಸಿಂಗ್‌ಗಾಗಲೀ ಯಾವುದೇ ರೀತಿಯ ಸಂಬಂಧವಿಲ್ಲ” ಎಂದಿದ್ದಾರೆ.

ಆನಂದ್‌ ಸಿಂಗ್‌ ಅವರ ವೈಷಮ್ಯಕ್ಕೆ ಕಾರಣವನ್ನು ತಿಳಿಸಿದ ಅವರು, “ಆನಂದ್ ಸಿಂಗ್ ಅವರ ಮನೆ ಸರ್ಕಾರಿ ಜಾಗದಲ್ಲಿದೆ ಎಂದು ಆರು ತಿಂಗಳ ಹಿಂದೆ ನಾವು ಆರೋಪ ಮಾಡಿದ್ದೆವು. ಅದಕ್ಕೆ ಸಂಬಂಧಪಟ್ಟ ದಾಖಲಾತಿಗಳನ್ನು, ದೂರುಗಳನ್ನು ಬಿಡುಗಡೆ ಮಾಡಿದ್ದೆವು. ದೂರು ನೀಡಿದ ಬಳಿಕ ನನ್ನ ಮೇಲೆ ದ್ವೇಷ ಸಾಧಿಸುತ್ತಿರುವ ಆನಂದ್‌ ಸಿಂಗ್ ನಿರಂತರ ಕಿರುಕುಳ ನೀಡುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

“ದೂರು ನೀಡಿದ ಎರಡು ದಿನಗಳ ಬಳಿಕ ಆನಂದ್ ಸಿಂಗ್ ಹಾಗೂ ಹನುಮಂತಪ್ಪ ಅನ್ನುವವರು ನಮ್ಮ ಮನೆಗೆ ಬಂದಿದ್ದರು. ನನ್ನ ವಿರುದ್ಧವೇ ದೂರು ನೀಡುವಷ್ಟು ದೊಡ್ಡವನಿದ್ದೀಯಾ? ವಾಪಸ್ ತೆಗೆದುಕೋ, ಇಲ್ಲವಾದರೆ ಪರಿಣಾಮ ಗಂಭೀರವಾಗಿರುತ್ತದೆ ಎಂದು ಆನಂದ್ ಸಿಂಗ್‌ ಬೆದರಿಕೆ ಹಾಕಿದರು” ಎಂದು ತಿಳಿಸಿದ್ದಾರೆ.

“ಇದರಲ್ಲಿ ಸ್ವಾರ್ಥವೇನೂ ಇಲ್ಲ. ಸರ್ಕಾರಿ ಆಸ್ತಿ ಕಬಳಿಸಿದ್ದೀರಿ. ಅದನ್ನು ಸರ್ಕಾರಕ್ಕೆ ಮರಳಿಸಿದರೆ ನಮ್ಮದೇನೂ ತಕರಾರು ಇರುವುದಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದೆ. ಇಷ್ಟೆಲ್ಲ ಮಾತನಾಡುವಷ್ಟು ದೊಡ್ಡವನಾಗಿದ್ದೀಯ. ನಿನಗೆ ಮಾಡಬೇಕಾದದ್ದು ಬೇರೆಯೇ ಇದೆ ಎಂದರು. ಸಾಮಾಜಿಕ ಹೋರಾಟಗಾರರಿಗೆ ಇದೆಲ್ಲ ಸಾಮಾನ್ಯ ಎಂದು ಸುಮ್ಮನೇ ಇದ್ದೆ” ಎಂದು ಅವರು ವಿವರಿಸಿದ್ದಾರೆ.

ಇದನ್ನೂ ಓದಿರಿ: ಮುರುಘಾ ಶರಣರ ಪರ ಮಾತನಾಡುವ ಮಾದಾರ ಚೆನ್ನಯ್ಯ ಸ್ವಾಮೀಜಿಗೆ ಬಹಿರಂಗ ಪತ್ರ

“ಮತ್ತೆ ಮೂರು ತಿಂಗಳ ಬಳಿಕ ಸಚಿವರು ಹಾಗೂ ಹನುಮಂತಪ್ಪ ನಮ್ಮ ಮನೆಗೆ ಬಂದರು. ದೂರು ವಾಪಸ್ ಪಡೆದು, ನಾನು ಮಾಡಿದ ಆರೋಪ ಸುಳ್ಳು ಎಂದು ಪ್ರೆಸ್ ಮೀಟ್ ಮಾಡು ಎಂದು ಸೂಚಿಸಿದರು. ನಾನು ಪಟ್ಟು ಬದಲಿಸಲಿಲ್ಲ. ನೀವು ಹಗರಣ ಮಾಡಿರುವುದು ನಿಜವಿದೆ. ಈ ಆಸ್ತಿ ನಿಮ್ಮದೇ ಅನ್ನಲು ದಾಖಲಾತಿ ಇದ್ದರೆ ಸರ್ಕಾರಕ್ಕೆ ಕೊಡಿ. ಸಂಬಂಧಪಟ್ಟ ಇಲಾಖೆಗೆ ಸಲ್ಲಿಸಿ ಎಂದೆ. ನಿನಗೆ ಒಳ್ಳೆಯ ಮಾತಿನಲ್ಲಿ ಹೇಳಿದರೆ ಗೊತ್ತಾಗಲ್ಲ. ಮುಂದೆ ಐತೆ ಎಂದು ಬೆದರಿಕೆ ಹಾಕಿದರು” ಎಂದು ಪೋಲಯ್ಯ ಆರೋಪಿಸಿದ್ದಾರೆ.

“ನಿನ್ನೆ ಮಧ್ಯಾಹ್ನ ಸಚಿವ ಆನಂದ್ ಸಿಂಗ್ ಹಾಗೂ ಅವರ ಸಹಚರರು ಬಂದು ನಮ್ಮನ್ನು ಮನೆಯಿಂದ ಹೊರಗೆ ಕರೆದರು. ಅವ್ಯಾಚ್ಯ ಶಬ್ದಗಳಿಂದ ನಿಂದಿಸಿದರು” ಎಂದು ಪೋಲಯ್ಯ ದೂರಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಆನಂದ್ ಸಿಂಗ್‌, “ಜಾತಿ ನಿಂದನೆ ಮಾಡಿಲ್ಲ. ಜಾಗದ ವಿಚಾರದಲ್ಲಿ ಮಡಿವಾಳ ಸಮಾಜ ಹಾಗೂ ಪೋಲಪ್ಪ ಕುಟುಂಬದ ಮಧ್ಯೆ ಕಾನೂನು ಹೋರಾಟ ನಡೆಯುತ್ತಿದ್ದು, ಮಡಿವಾಳ ಸಮಾಜದ ಎಲ್ಲ ಹಿರಿಯರು ಬಂದು ನನ್ನನ್ನು ಭೇಟಿ ಆಗಿದ್ದರು. ಮಡಿವಾಳ ಸಮಾಜ ನಮ್ಮ ಜಾಗ ಅಂತಿದ್ದಾರೆ. ಪೋಲಪ್ಪ ಅವರು ನಮ್ಮದು ಅಂತಿದ್ದಾರೆ. ಈ ವಿಚಾರವಾಗಿ ನಾಲ್ಕು ತಿಂಗಳ ಹಿಂದೆ ಕರೆದು ಸಂಧಾನ ಮಾಡಿದ್ದೆ” ಎದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಜನಸಾಮಾನ್ಯರ ತೆರಿಗೆಯಿಂದ ಬದುಕುವ ಸಚಿವರುಗಳು ಪಾಪದ ಬಡಪಾಯಿಗಳ ಮೇಲೆ ಸವಾರಿ ಮಾಡುವುದು ಎಷ್ಟು ಸರಿ….? ಈ ಸರಕಾರದಲ್ಲಿ ದಲಿತರು ಹಿಂದುಳಿದ ವರ್ಗದವರಿಗೆ ರಕ್ಷಣೆಯೇ ಇಲ್ಲದಂತಾಗಿದೆಯಲ್ಲ…ಕೇಸು ದಾಖಲಾದರೂ ಈ ಕುಟುಂಬಗಳಿಗೆ ಭದ್ರತೆ ಇದೆನ್ನಲಾಗುವುದೇ….?

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...