Homeಅಂತರಾಷ್ಟ್ರೀಯಪಾಕಿಸ್ತಾನ - ಭಾರಿ ಪ್ರವಾಹದಿಂದ 33 ಲಕ್ಷ ಮಕ್ಕಳು ಅಪಾಯದಲ್ಲಿ: ಯುನಿಸೆಫ್‌‌

ಪಾಕಿಸ್ತಾನ – ಭಾರಿ ಪ್ರವಾಹದಿಂದ 33 ಲಕ್ಷ ಮಕ್ಕಳು ಅಪಾಯದಲ್ಲಿ: ಯುನಿಸೆಫ್‌‌

- Advertisement -
- Advertisement -

ಪಾಕಿಸ್ತಾನದಲ್ಲಿ ಭಾರಿ ಪ್ರವಾಹ ಉಂಟಾಗಿದ್ದು, ಇದರ ಪರಿಣಾಮವಾಗಿ 30 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪಾಯದಲ್ಲಿದ್ದಾರೆ ಎಂದು ವಿಶ್ವಸಂಸ್ಥೆಯ ಮಕ್ಕಳ ನಿಧಿ (ಯುನಿಸೆಫ್) ಬುಧವಾರ ಹೇಳಿಕೆಯಲ್ಲಿ ತಿಳಿಸಿದೆ. “ಪಾಕಿಸ್ತಾನದ ಇತಿಹಾಸದಲ್ಲೆ ಅತ್ಯಂತ ತೀವ್ರವಾದ ಪ್ರವಾಹ ಉಂಟಾಗಿರುವುದರಿಂದ ಜಲಮೂಲ ರೋಗಗಳು ಮತ್ತು ಅಪೌಷ್ಟಿಕತೆಯ ಅಪಾಯ ಹೆಚ್ಚಾಗಿದೆ. ಮೂವತ್ತು ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ಮಾನವೀಯ ನೆರವಿನ ಅವಶ್ಯಕತೆಯಿದೆ” ಎಂದು ಯುನಿವೆಫ್‌ ಪ್ರಕಟಣೆ ತಿಳಿಸಿದೆ.

ಜುಲೈ ತಿಂಗಳ ಮಧ್ಯದಲ್ಲಿ ಪ್ರಾರಂಭವಾದ ಭಾರೀ ಮಳೆಯ ಪರಿಣಾಮ ದೇಶದಲ್ಲಿ ನೆರೆ ಉಂಟಾಗಿದೆ. ಇದರಿಂದಾಗಿ ದೇಶದಾದ್ಯಂತ 116 ಜಿಲ್ಲೆಗಳಲ್ಲಿ 3.3 ಕೋಟಿ ಜನರ ಮೇಲೆ ಪರಿಣಾಮ ಬೀರಿದೆ. ದೇಶದ 66 ಜಿಲ್ಲೆಗಳಲ್ಲಿ ಹೆಚ್ಚಿನ ಹಾನಿಗೊಳಗಾಗಿವೆ. “ನೆರೆ ಪೀಡಿತ ಪ್ರದೇಶಗಳಲ್ಲಿನ ಮಕ್ಕಳು ಮತ್ತು ಕುಟುಂಬಗಳ ತುರ್ತು ಅಗತ್ಯಗಳಿಗೆ ಸ್ಪಂದಿಸಲು ಸರ್ಕಾರ ಮತ್ತು ಸರ್ಕಾರೇತರ ಸಂಘಟನೆಗಳೊಂದಿಗೆ ಯುನಿಸೆಫ್‌‌‌ ಕೆಲಸ ಮಾಡುತ್ತಿದೆ” ಎಂದು ಹೇಳಿಕೆ ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಭಾರಿ ನೆರೆಯ ಹಿನ್ನೆಲೆಯಲ್ಲಿ ಪಾಕಿಸ್ತಾನವು ಕಳೆದ ವಾರ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದು, ನೆರವು ನೀಡಲು ಇತರ ದೇಶಗಳು ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳಿಗೆ ಕರೆ ನೀಡಿದೆ.

ಇದನ್ನೂ ಓದಿ: 1,200 ವರ್ಷಗಳಷ್ಟು ಹಳೆಯ ಹಿಂದೂ ದೇವಾಲಯ ಜೀರ್ಣೋದ್ಧಾರ ಮಾಡಲಿರುವ ಪಾಕಿಸ್ತಾನ!

ಯುನಿಸೆಫ್‌ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ, “ಸರಿಸುಮಾರು 1.6 ಕೋಟಿ ಮಕ್ಕಳು ಸೇರಿದಂತೆ  3.3 ಕೋಟಿ ಜನರು ಪಾಕಿಸ್ತಾನದಲ್ಲಿ ಈ ವರ್ಷದ ಭಾರೀ ಮಾನ್ಸೂನ್ ಮಳೆಯಿಂದ ಪ್ರಭಾವಿತರಾಗಿದ್ದಾರೆ. ಮಳೆಯು ವಿನಾಶಕಾರಿಯಾಗಿದ್ದು, ಇದರಿಂದಾಗಿ ಪ್ರವಾಹ ಮತ್ತು ಭೂಕುಸಿತಗಳು ಉಂಟಾಗಿದೆ” ಎಂದು ತಿಳಿಸಿದೆ.

“ನೆರೆಯಿಂದಾಗಿ 350 ಕ್ಕೂ ಹೆಚ್ಚು ಮಕ್ಕಳು ಸೇರಿದಂತೆ 1,100 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದು, 1,600 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. 2.87 ಲಕ್ಷಕ್ಕೂ ಹೆಚ್ಚು ಮನೆಗಳು ಸಂಪೂರ್ಣವಾಗಿ ಮತ್ತು 6.62 ಮನೆಗಳು ಭಾಗಶಃ ನಾಶವಾಗಿವೆ” ಎಂದು ಯುನಿಸೆಫ್‌ ಹೇಳಿದೆ.

“ಕೆಲವು ಪ್ರಮುಖ ನದಿಗಳು ತಮ್ಮ ದಡಗಳನ್ನು ಮೀರಿ ಹರಿಯುತ್ತಿದ್ದು, ಅಣೆಕಟ್ಟುಗಳು ಉಕ್ಕಿ ಹರಿದಿವೆ. ಮನೆಗಳು, ತೋಟಗಳು, ರಸ್ತೆಗಳು, ಸೇತುವೆಗಳು, ಶಾಲೆಗಳು, ಆಸ್ಪತ್ರೆಗಳು ಮತ್ತು ಸಾರ್ವಜನಿಕ ಆರೋಗ್ಯ ಸೌಲಭ್ಯಗಳು ಸೇರಿದಂತೆ ನಿರ್ಣಾಯಕ ಮೂಲಸೌಕರ್ಯಗಳು ನಾಶವಾಗಿದೆ” ಎಂದು ಯುನಿಸೆಫ್‌ ಹೇಳಿಕೆ ತಿಳಿಸಿದೆ.

ಇದನ್ನೂ ಓದಿ: ವಿಡಿಯೊ ನೋಡಿ: ಭಾರತದ ರಾಷ್ಟ್ರಗೀತೆ ನುಡಿಸಿ ಶುಭಕೋರಿದ ಪಾಕಿಸ್ತಾನಿ ಸಂಗೀತಗಾರ

ಪ್ರವಾಹದ ಪ್ರಭಾವಕ್ಕೆ ಒಳಪಟ್ಟ ಪ್ರದೇಶಗಳಲ್ಲಿ 30% ದಷ್ಟು ನೀರಿನ ವ್ಯವಸ್ಥೆಗಳು ಹಾನಿಗೊಳಗಾಗಿವೆ ಎಂದು ಅಂದಾಜಿಸಲಾಗಿದೆ. ಅತಿಸಾರ ಮತ್ತು ನೀರಿನಿಂದ ಹರಡುವ ರೋಗಗಳು, ಉಸಿರಾಟದ ಸೋಂಕು ಮತ್ತು ಚರ್ಮ ರೋಗಗಳ ಪ್ರಕರಣಗಳು ಈಗಾಗಲೇ ವರದಿಯಾಗಿವೆ ಎಂದು ಯುನಿಸೆಫ್ ಹೇಳಿದೆ.

ಈಗಾಗಲೇ ನೆರೆ ಉಂಟಾಗಿರುವ ಪ್ರದೇಶಗಳಲ್ಲಿ ಭಾರೀ ಮಳೆಯು ಮುಂದುವರಿದಿರುವುದರಿಂದ ಅಪಾಯಕಾರಿ ಮಾನವೀಯ ಪರಿಸ್ಥಿತಿಯು ಮುಂದಿನ ದಿನಗಳು ಮತ್ತು ವಾರಗಳಲ್ಲಿ ಇನ್ನಷ್ಟು ಹದಗೆಡುತ್ತದೆ ಎಂದು ನಿರೀಕ್ಷಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...