Homeಕರ್ನಾಟಕಖ್ಯಾತ ಇತಿಹಾಸ ತಜ್ಞ, ಮಂಗಳೂರು & ಗೋವಾ ವಿ.ವಿ ಉಪ ಕುಲಪತಿ ಪ್ರೊ.ಬಿ.ಷೇಕ್ ಅಲಿ (98)...

ಖ್ಯಾತ ಇತಿಹಾಸ ತಜ್ಞ, ಮಂಗಳೂರು & ಗೋವಾ ವಿ.ವಿ ಉಪ ಕುಲಪತಿ ಪ್ರೊ.ಬಿ.ಷೇಕ್ ಅಲಿ (98) ನಿಧನ

- Advertisement -
- Advertisement -

ದೇಶದ ಪ್ರಮುಖ ಇತಿಹಾಸ ತಜ್ಞ, ಗೋವಾ ಮತ್ತು ಮಂಗಳೂರು ವಿಶ್ವವಿದ್ಯಾನಿಲಯಗಳ ಮಾಜಿ ಉಪಕುಲಪತಿ ಪ್ರೊ.ಬಿ.ಷೇಕ್ ಅಲಿ (98 ವರ್ಷ) ಅವರು ಮೈಸೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ನಿಧನರಾಗಿದ್ದಾರೆ. ಅವರು ಪುತ್ರ, ಪುತ್ರಿ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ದೇಶದ ಪ್ರಖ್ಯಾತ ಇತಿಹಾಸಕಾರರಾಗಿರುವ ಷೇಕ್ ಅಲಿ ಅವರು, ಇತಿಹಾಸದ ಸಿದ್ಧಾಂತ ಮತ್ತು ಕರ್ನಾಟಕದ ನೆಲ ಮೂಲದ ಇತಿಹಾಸಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಯಾಗಿದ್ದ ಅವರು ಅಲ್ಲೆ ಇತಿಹಾಸ ಪ್ರಾಧ್ಯಾಪಕರಾಗಿ ನಿವೃತ್ತರಾಗಿದ್ದರು. ಶಿಕ್ಷಣ ತಜ್ಞರೂ ಆಗಿರುವ ಷೇಕ್ ಅಲಿ ಅವರು ಹಾಸನ ಜಿಲ್ಲೆಯ ಬೆಳಗೋಡು ಗ್ರಾಮದವರಾಗಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮೈಸೂರು ವಿಶ್ವವಿದ್ಯಾಲಯದಿಂದ ಆನರ್ಸ್‌ ಪದವಿ ಹಾಗೂ ಆಲಿಘರ್‌ ಮುಸ್ಲಿಂ ವಿಶ್ವವಿದ್ಯಾಲಯ ಮತ್ತು ಲಂಡನ್‌ ವಿಶ್ವವಿದ್ಯಾಲಯದಿಂದ ಪಿಎಚ್‌ಡಿ ಪಡೆದಿದ್ದಾರೆ. ಉರ್ದು, ಇಂಗ್ಲಿಷ್, ಫ್ರೆಂಚ್ ಭಾಷೆ ಬಲ್ಲವರಾಗಿರುವ ಷೇಕ್ ಅಲಿ ಅವರು ಸಾಲಾರ್ ಉರ್ದು ದಿನಪತ್ರಿಕೆ ಹಾಗೂ ವಾರಪತ್ರಿಕೆಯ ಪ್ರಧಾನ ಸಂಪಾದಕರಾಗಿ, ನೂರ್-ಎ-ಬಸೀರತ್ ಉರ್ದು ಮಾಸಿಕದ ಸಂಪಾದಕರಾಗಿಯು ಸೇವೆ ಸಲ್ಲಿದ್ದಾರೆ. ಕನ್ನಡ ವಿಶ್ವವಿದ್ಯಾಲಯ ಪ್ರಕಟಿಸಿರುವ ‘ಕರ್ನಾಟಕ ಇತಿಹಾಸದ ಏಳು ಸಂಪುಟಗಳು’ ಇದರ ಪ್ರಧಾನ ಸಂಪಾದಕರಾಗಿದ್ದಾರೆ.

ಇದನ್ನೂ ಓದಿ: ಶಿಕ್ಷಣ, ಇತಿಹಾಸ ಮತ್ತು ಮತೀಯವಾದ

ಪ್ರಾಚೀನ ಕರ್ನಾಟಕದ ಐತಿಹಾಸಿಕ ಅಧ್ಯಯನಗಳಿಗೆ ಅವರು ಕೊಡುಗೆಗಳನ್ನು ನೀಡಿದ್ದಾರೆ. ಗಂಗರ ಇತಿಹಾಸದ ಬಗ್ಗೆ ಅಧ್ಯಯನ ನಡೆಸಿರುವ ಅವರು, ಗಂಗರು ದಕ್ಷಿಣ ಕರ್ನಾಟಕದ ಮೂಲದವರು ಮತ್ತು ಅವರ ಪೂರ್ವಜರು ಕರ್ನಾಟಕದ ದಕ್ಷಿಣ ಜಿಲ್ಲೆಗಳ ಕಡೆಯವರು ಎಂಬ ವಾದವನ್ನು ಷೇಕ್ ಅಲಿ ಅವರು ಬೆಂಬಲಿಸಿದ್ದಾರೆ. ಆರಂಭದಲ್ಲಿ ಗಂಗರು ಜೈನರಾಗಿದ್ದರು ಎಂಬ ಅಂಶವನ್ನು ಅವರು ಅನುಮೋದಿಸುವುದಿಲ್ಲ. ಪ್ರಮುಖವಾಗಿ ತಮ್ಮ ಹೆಚ್ಚಿನ ಕೃತಿಗಳಲ್ಲಿ ಹೈದರ್ ಅಲಿ ಮತ್ತು ಟಿಪ್ಪು ಸುಲ್ತಾನರ ಇತಿಹಾಸವನ್ನು ದಾಖಲಿಸಿದ್ದಾರೆ.

‘ಹಿಸ್ಟರಿ: ಇಟ್ಸ್‌‌ ಥಿಯರಿ ಆಂಡ್‌ ಮೆಥಡ್‌’,  ‘ಹಿಸ್ಟರಿ ಆಫ್‌ ದಿ ವೆಸ್ಟರ್ನ್‌‌ ಗಂಗಾಸ್‌(ಕಾಂಪ್ರೆಹೆನ್ಸಿವ್‌ ಹಿಸ್ಟರಿ ಆಫ್‌ ಕರ್ನಾಟಕ- 1 ನೇ ಸಂಪುಟ’, ‘ಗೋವಾ ವಿನ್ಸ್ ಫ್ರೀಡಂ: ರಿಫ್ಲೆಕ್ಷನ್ಸ್ ಅಂಡ್ ರಿಮಿನಿಸೆನ್ಸ್’, ‘ಟೀಪು ಸುಲ್ತಾನ್; ಎ ಗ್ರೇಟ್‌ ಮಾರ್ಟರ್‌‌(ಸಂಪಾದನೆ), ‘ಟೀಪು ಸುಲ್ತಾನ್’, ‘ಬ್ರಿಟೀಷ್ ರಿಲೇಷನ್ಸ್‌ ವಿತ್‌ ಹೈದರ್‌ ಅಲಿ’, ‘ಎ ಗ್ರೇಟ್‌ ಟೀಚರ್‌‌’, ‘ಇಸ್ಲಾಂ, ಎ ಕಲ್ಚರ್‌ ಓರಿಯಂಟೇಷನ್’ ಷೇಕ್ ಅಲಿ ಅವರ ಪ್ರಮುಖ ಕೃತಿಗಳಾಗಿವೆ.

ಪ್ರೊ. ಷೇಕ್ ಅಲಿ ಅವರು ಕರ್ನಾಟಕ ಇತಿಹಾಸದ ಕುರಿತ 50ಕ್ಕೂ ಹೆಚ್ಚು ಕೃತಿಗಳನ್ನು ಪುಸ್ತಕಗಳನ್ನು ಬರೆದಿರುವ ಅವರು, ನೂರಾರು ಸಂಶೋಧನಾ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದ್ದಾರೆ. ಅವರಿಗೆ ಮೈಸೂರು ವಿಶ್ವವಿದ್ಯಾಲಯದ ಸುವರ್ಣ ಮಹೋತ್ಸವ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕನ್ನಡ ವಿಶ್ವವಿದ್ಯಾಲಯ ಹಂಪಿಯ ಗೌರವ ಡಿ.ಲಿಟ್. ದೊರೆತಿದ್ದಲ್ಲದೆ, ದೇಶ ವಿದೇಶಗಳಿಂದ ಹಲವಾರು ಪ್ರಶಸ್ತಿ ಮತ್ತು ಗೌರವಗಳು ಇವರನ್ನು ಅರಸಿಕೊಂಡು ಬಂದಿದೆ.

ಇದನ್ನೂ ಓದಿ: ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ವಿವಾದ; ಇತಿಹಾಸ ಏನು ಹೇಳುತ್ತದೆ?

ಮೃತರ ಪಾರ್ಥೀವ ಶರೀರವನ್ನು ಮೈಸೂರಿನ ಸರಸ್ವತಿಪುರಂನ ಮುಸ್ಲಿಂ ಹಾಸ್ಟೆಲ್‌ಗೆ ಅಂತಿಮ ದರ್ಶನಕ್ಕಾಗಿ ಕೊಂಡೊಯ್ಯಲಾಗುತ್ತದೆ. ಇದರ ನಂತರ ಟಿಪ್ಪು ಸರ್ಕಲ್‌ನಲ್ಲಿರುವ ಮೈಸೂರು ಜೈಲಿನ ಹಿಂಭಾಗದ ಮುಖ್ಯ ಖಬರಸ್ಥಾನದಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು.

ಪ್ರೊಫೆಸರ್‌ ಬಿ.ಷೇಕ್ ಅಲಿ ಅವರ ನಿಧನಕ್ಕೆ ರಾಜ್ಯದ ಹಲವಾರು ಪ್ರಾಧ್ಯಾಪಕರು, ರಾಜಕೀಯ ನಾಯಕರು, ಪತ್ರಕರ್ತರು ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: ’ನಾವೂ ಇತಿಹಾಸ ಕಟ್ಟಿದೆವು- ಅಂಬೇಡ್ಕರ್ ಚಳವಳಿಯಲ್ಲಿ ಮಹಿಳೆಯರು’ ಪುಸ್ತಕದಿಂದ ಆಯ್ದ ಭಾಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...