Homeಚಳವಳಿ‘ಜಾಮೀನು ನಿರಾಕರಿಸಲು ಕಾರಣವೇ ಇಲ್ಲ’: ತೀಸ್ತಾ ಸೆಟಲ್ವಾಡ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್

‘ಜಾಮೀನು ನಿರಾಕರಿಸಲು ಕಾರಣವೇ ಇಲ್ಲ’: ತೀಸ್ತಾ ಸೆಟಲ್ವಾಡ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್

ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ಶುಕ್ರವಾರ (ಇಂದು) ಮಧ್ಯಾಹ್ನ 2 ಗಂಟೆಗೆ ಮತ್ತೆ ಕೈಗೆತ್ತಿಕೊಳ್ಳಲಿದೆ

- Advertisement -
- Advertisement -

ಖ್ಯಾತ ಪತ್ರಕರ್ತೆ, ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಅವರನ್ನು ಗುಜರಾತ್‌ನಲ್ಲಿ ಎರಡು ತಿಂಗಳಿಗೂ ಹೆಚ್ಚು ಕಾಲ ಬಂಧನದಲ್ಲಿ ಇರಿಸಿರುವ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಆರು ವಾರಗಳ ನಂತರ ಉತ್ತರ ನೀಡುವಂತೆ ಗುಜರಾತ್ ಹೈಕೋರ್ಟ್ ನೋಟಿಸ್ ನೀಡಿದ್ದು ಹೇಗೆ ಎಂದು ಪ್ರಶ್ನಿಸಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ನೇತೃತ್ವದ ಪೀಠವು,“ಈ ಪ್ರಕರಣದಲ್ಲಿ ಅದೂ ಕೂಡಾ ಒಬ್ಬ ಮಹಿಳೆಗೆ ಜಾಮೀನು ನೀಡಲಾಗದಂತಹ ಯಾವುದೇ ಅಪರಾಧವಿಲ್ಲ” ಎಂದು ಹೇಳಿದೆ. ತೀಸ್ತಾ ಅವರು ಎರಡು ತಿಂಗಳಿಗೂ ಹೆಚ್ಚು ಕಾಲ ಜೈಲಿನಲ್ಲಿದ್ದರೂ ಯಾವುದೇ ಆರೋಪಪಟ್ಟಿ ಸಲ್ಲಿಸಿಲ್ಲ ಎಂದು ನ್ಯಾಯಮೂರ್ತಿ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅರ್ಜಿದಾರರ ವಿರುದ್ಧ ಸಲ್ಲಿಸಲಾದ ಎಫ್‌ಐಆರ್‌ನಲ್ಲಿ ಸುಪ್ರೀಂ ಕೋರ್ಟ್‌ನ ಅವಲೋಕನಗಳ ಹೊರತಾಗಿ ಹೆಚ್ಚಿನದನ್ನು ಹೇಳಲಾಗಿಲ್ಲ ಎಂದು ಪೀಠ ಹೇಳಿದೆ. ಆಗಸ್ಟ್ 3 ರಂದು ತೀಸ್ತಾ ಅವರ ಜಾಮೀನು ಅರ್ಜಿಯ ಮೇಲೆ ನೋಟಿಸ್ ಜಾರಿ ಮಾಡುವಾಗ ಗುಜರಾತ್ ಹೈಕೋರ್ಟ್ ಪ್ರಕರಣವನ್ನು ದೀರ್ಘ ಮುಂದೂಡಿಕೆ ಮಾಡಿತ್ತು.

ಇದನ್ನೂ ಓದಿ: ತೀಸ್ತಾ, ಶ್ರೀಕುಮಾರ್ ಮತ್ತು ಜುಬೇರ್ ಬಂಧನ; ಭಾರತ ಇನ್ನೊಂದು ಸ್ವಾತಂತ್ರ್ಯ ಸಂಗ್ರಾಮದತ್ತ ಸಾಗುತ್ತಿದೆಯೇ?

ನ್ಯಾಯಮೂರ್ತಿ ಎಸ್.ರವೀಂದ್ರ ಭಟ್ ಮತ್ತು ನ್ಯಾಯಮೂರ್ತಿ ಸುಧಾಂಶು ಧುಲಿಯಾ ಅವರನ್ನೊಳಗೊಂಡ ಪೀಠವು ತೀಸ್ತಾ ಅವರ ಕಸ್ಟಡಿ ಬಂಧನಕ್ಕೆ ಸಂಬಂಧಿಸಿದ ಹಲವಾರು ಪ್ರಶ್ನೆಗಳನ್ನು ಎತ್ತಿದೆ.

“ಅವರು ಮಹಿಳೆಯಾಗಿದ್ದು, ಆರು ವಾರಗಳ ನಂತರ ಉತ್ತರಿಸುವಂತೆ ಹೈಕೋರ್ಟ್‌ ಹೇಗೆ ನೋಟಿಸ್ ನೀಡಿತು? ಗುಜರಾತ್ ಹೈಕೋರ್ಟ್‌ನಲ್ಲಿ ಅದು ಪ್ರಮಾಣಿತ ಅಭ್ಯಾಸವೇ? ಅಂತಹ ಪ್ರಕರಣದಲ್ಲಿ ಮಹಿಳೆಯೊಬ್ಬರು ಭಾಗಿಯಾಗಿದ್ದು, ಈ ಹಿಂದೆ ಹೈಕೋರ್ಟ್ ಈ ರೀತಿ ಮಾಡಿದ ಉದಾಹರಣೆಗಳು ಇದ್ದರೆ ನಮಗೆ ನೀಡಿ” ಎಂದು ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್‌ ಹೇಳಿದ್ದಾರೆ.

2002ರ ಗುಜರಾತ್ ಗಲಭೆಗೆ ಸಂಬಂಧಿಸಿದ ಪ್ರಕರಣಗಳನ್ನು ದಾಖಲಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ ಮೇಲೆ ಜೂನ್ 25 ರಿಂದ ತೀಸ್ತಾ ಸೆಟಲ್ವಾಡ್ ಬಂಧನದಲ್ಲಿದ್ದಾರೆ.

ಇದನ್ನೂ ಓದಿ: ಅಧಿಕಾರಕ್ಕೆ ಸತ್ಯ ನುಡಿದ ತೀಸ್ತಾ ಬಂಧನ; ಸುಪ್ರೀಂ ಕೋರ್ಟ್ ತನ್ನ ಜವಾಬ್ದಾರಿಯನ್ನು ಮರೆಯಿತೇ?

“ಈ ಪ್ರಕರಣದಲ್ಲಿ ಕಾನೂನುಬಾಹಿರ ಚಟುವಟಿಕೆಗಳು (ತಡೆ) ಕಾಯಿದೆ ಮತ್ತು ಭಯೋತ್ಪಾದನೆ ತಡೆ ಕಾಯ್ದೆಯಂತಹ ಜಾಮೀನು ನೀಡಲಾಗದ ಯಾವುದೇ ಅಪರಾಧವಿಲ್ಲ. ಇವು ಸಾಮಾನ್ಯ ಅಪರಾಧಗಳಾಗಿದ್ದು, ಮಹಿಳೆಯು ಅನುಕೂಲಕರವಾದ ನಡೆಗೆ ಅರ್ಹಳು” ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದ್ದಾರೆ.

ಭಾರತದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ನಿನ್ನೆಯ ವಿಚಾರಣೆಯನ್ನು ಮುಂದೂಡುವಂತೆ ಕೋರಿದರು. “ಈ ಎಲ್ಲಾ ವಾದಗಳನ್ನು ಹೈಕೋರ್ಟ್‌ನಲ್ಲಿ ಮಾಡಬೇಕೇ ಹೊರತು ಸುಪ್ರೀಂ ಕೋರ್ಟ್‌ನಲ್ಲಿ ಅಲ್ಲ. ಅದು ನನ್ನ ಪ್ರಾಥಮಿಕ ಆಕ್ಷೇಪಣೆ” ಎಂದು ಅವರು ಹೇಳಿದ್ದಾರೆ.

ತೀಸ್ತಾ ಪರ ವಕೀಲರಾದ ಹಿರಿಯ ವಕೀಲ ಕಪಿಲ್ ಸಿಬಲ್, “ನಾನು ಎಫ್‌ಐಆರ್ ಅನ್ನೇ ಸವಾಲು ಮಾಡುತ್ತಿದ್ದೇನೆ. ಇಲ್ಲಿ ಎಫ್‌ಐಆರ್ ಇರುವಂತಿಲ್ಲ. ನಾನು ಯಾವ ನಕಲಿ ದಾಖಲೆ ಮಾಡಿದ್ದೇನೆ ಎಂಬುದನ್ನು ಎಫ್‌ಐಆರ್ ಬಹಿರಂಗಪಡಿಸುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ನರೇಂದ್ರ ಮೋದಿ ವಿರುದ್ಧ ದಿವಂಗತ ಅಹ್ಮದ್ ಪಟೇಲ್ ಸಂಚು – ತೀಸ್ತಾ ಅದರ ಭಾಗ: ಗುಜರಾತ್‌ ಪೊಲೀಸ್ ಆರೋಪ 

ಗುಜರಾತಿನ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ಗುಜರಾತ್ ಗಲಭೆಯ ಸಮಯದಲ್ಲಿ ದೊಡ್ಡ ಪಿತೂರಿಯಲ್ಲಿ ಯಾವುದೇ ತಪ್ಪು ಮಾಡಿಲ್ಲ ಎಂದು ವಿಶೇಷ ತನಿಖಾ ತಂಡವನ್ನು ಪ್ರಶ್ನಿಸಿ ತನ್ನ ಕಕ್ಷಿದಾರೆ ಝಕಿಯಾ ಜಾಫ್ರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ ಒಂದು ದಿನದ ನಂತರ, ಗುಜರಾತ್ ಪೋಲೀಸರ ಭಯೋತ್ಪಾದನಾ ನಿಗ್ರಹ ದಳವು ಮುಂಬೈನಲ್ಲಿ ತೀಸ್ತಾ ಅವರನ್ನು ಬಂಧಿಸಿತು.

ತೀಸ್ತಾ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ಶುಕ್ರವಾರ (ಇಂದು) ಮಧ್ಯಾಹ್ನ 2 ಗಂಟೆಗೆ ಮತ್ತೆ ಕೈಗೆತ್ತಿಕೊಳ್ಳಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...