Homeಮುಖಪುಟಬಿಜೆಪಿ ಗೆಲುವಿಗೆ ಆರೆಸ್ಸೆಸ್‌‌ ಭಾರತದಾದ್ಯಂತ ಬಾಂಬ್ ಸ್ಫೋಟ ನಡೆಸಿದೆ: ಕಾರ್ಯಕರ್ತನ ಸ್ಪೋಟಕ ಹೇಳಿಕೆ

ಬಿಜೆಪಿ ಗೆಲುವಿಗೆ ಆರೆಸ್ಸೆಸ್‌‌ ಭಾರತದಾದ್ಯಂತ ಬಾಂಬ್ ಸ್ಫೋಟ ನಡೆಸಿದೆ: ಕಾರ್ಯಕರ್ತನ ಸ್ಪೋಟಕ ಹೇಳಿಕೆ

- Advertisement -
- Advertisement -

ಬಿಜೆಪಿ ಚುನಾವಣೆಯಲ್ಲಿ ಗೆಲ್ಲಲು ಸಹಾಯ ಮಾಡುವ ಉದ್ದೇಶದಿಂದ ಆರೆಸ್ಸೆಸ್‌ ದೇಶಾದ್ಯಂತ ಸರಣಿ ಬಾಂಬ್ ಸ್ಪೋಟ ನಡೆಸಿದೆ ಎಂದು ಆರ್‌ಎಸ್‌ಎಸ್ ಪದಾಧಿಕಾರಿಯೊಬ್ಬರು ನಾಂದೇಡ್ ನ್ಯಾಯಾಲಯಕ್ಕೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಬಹಿರಂಗಪಡಿಸಿದ್ದಾರೆ. ತಾನು RSS ಕಾರ್ಯಕರ್ತ ಎಂದು ಹೇಳಿಕೊಂಡಿರುವ ಯಶವಂತ್‌ ಶಿಂಧೆ, “ಆರ್‌ಎಸ್‌ಎಸ್‌ ಮತ್ತು ಅದಕ್ಕೆ ಸಂಬಂಧಿಸಿದ ಸಂಘಟನೆಗಳೇ ದೇಶಾದ್ಯಂತ ಸರಣಿ ಬಾಂಬ್‌ ಸ್ಫೋಟ ನಡೆಸಿದ್ದು, ಬಾಂಬ್‌ ಸ್ಫೋಟಕ್ಕೆ ತರಬೇತಿ ನೀಡುತ್ತಿರುವ ಶಿಬಿರಗಳಲ್ಲಿ ತಾನೂ ಹಾಜರಿದ್ದೆ” ಎಂದು ಅಫಿಡವಿಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಕೋರ್ಟ್‌ಗೆ ಸಲ್ಲಿಸಿರುವ ಅಫಿಡವಿಟ್‌ನಲ್ಲಿ, ಶಿಂಧೆ ಹಲವಾರು ಆರ್‌ಎಸ್‌ಎಸ್ ಮತ್ತು ವಿಎಚ್‌ಪಿ ಪದಾಧಿಕಾರಿಗಳನ್ನು ಹೆಸರಿಸಿದ್ದಾರೆ. ಸಂಘಟನೆಯಿಂದ ಹೋರಾಟಗಾರರನ್ನು ಆಯ್ಕೆ ಮಾಡುವವರೆಗೆ ಹಾಗೂ ಯೋಜನೆಯನ್ನು ಕಾರ್ಯಗತಗೊಳಿಸುವವರೆ ಈ ಪದಾಧಿಕಾರಿಗಳು ಬಾಂಬ್ ಸ್ಫೋಟ ಯೋಜನೆಯ ಹಲವು ಹಂತಗಳಲ್ಲಿ ಭಾಗವಹಿಸಿದ್ದಾರೆ ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತಾನು ಹಿಂದುತ್ವದಲ್ಲಿ ಕಟ್ಟಾ ನಂಬಿಕೆಯುಳ್ಳವನೆಂದು ಹೇಳಿಕೊಳ್ಳುವ ಮತ್ತು ಭಯೋತ್ಪಾದಕ ಪ್ರವೃತ್ತಿಯಿಲ್ಲದ ಹಿಂದೂ ಧರ್ಮವನ್ನು ಶ್ರೇಷ್ಠವೆಂದು ಪರಿಗಣಿಸುವ ಶಿಂಧೆ, ಆರ್‌ಎಸ್‌ಎಸ್ ಮತ್ತು ವಿಎಚ್‌ಪಿ ನಡೆಸಿರುವ ಸ್ಫೋಟಗಳ ಮಾಸ್ಟರ್ ಮೈಂಡ್ ಆಗಿರುವ ಮೂವರನ್ನು ಹೆಸರಿಸಿದ್ದಾರೆ.

ಇದನ್ನೂ ಓದಿ: ಗುಜರಾತ್‌: NEP ಮೂಲಕ 1ನೇ ತರಗತಿಯಿಂದಲೇ ಸಂಸ್ಕೃತ ಕಡ್ಡಾಯಕ್ಕೆ ಪ್ರಯತ್ನಿಸುತ್ತಿರುವ ಆರೆಸ್ಸೆಸ್‌‌

ಇಂದ್ರೇಶ್ ಕುಮಾರ್, ಹಿಮಾಂಶು ಪಾನ್ಸೆ, ಮಿಲಿಂದ್ ಪರಾಂಡೆ, ರಾಕೇಶ್ ಧಾವಡೆ ಮತ್ತು ರವಿ ದೇವ್ (ಮಿಥುನ್ ಚಕ್ರವರ್ತಿ) ಈ ಪ್ರಕರಣದ ಪ್ರಮುಖ ಸಂಚುಕೋರರು ಎಂದು ಅಫಿಡವಿಟ್‌ನಲ್ಲಿ ಹೆಸರಿಸಲಾಗಿದೆ. ಮಿಲಿಂದ್ ಪರಾಂಡೆ ಮತ್ತು ರಾಕೇಶ್ ಧಾವಡ್ ತರಬೇತಿ ಶಿಬಿರಗಳನ್ನು ಆಯೋಜಿಸಿದರೆ, ರವಿ ದೇವ್ ಬಾಂಬ್ ತಯಾರಿಕೆಯಲ್ಲಿ ತರಬೇತಿ ನೀಡಿದ್ದಾನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಆರೆಸ್ಸೆಸ್‌‌ನಂತೆ ಪಿಎಫ್‌‌ಐ ಕೂಡಾ ದೈಹಿಕ ಶಿಕ್ಷಣದ ನೆಪದಲ್ಲಿ ಯುವಕರ ಬ್ರೈನ್ ವಾಶ್‌ ಮಾಡುತ್ತಿದೆ: ಬಿಹಾರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ

ಶಿಂಧೆ ತಾನು ತಮ್ಮ ನಾಯಕರ ಪರವಾಗಿಲ್ಲ ಎಂದು ಹೇಳಿದ್ದು, ಅವರ ಮಾಡುವ ಘೋರ ಅಪರಾಧಗಳ ಭಾಗವಾಗಲು ಬಯಸುವುದಿಲ್ಲ ಎಂದು ಹೇಳಿದ್ದಾರೆ. ಸಂಘಟನೆಯಲ್ಲಿ ತನಗೆ ಉತ್ತಮ ಸಂಪರ್ಕ ಹೊಂದಿರುವವರನ್ನು ಬಾಂಬ್ ಸ್ಫೋಟಗಳನ್ನು ನಡೆಸದಂತೆ ಮನಪರಿವರ್ತನೆ ಮಾಡಿದ್ದೇನೆ, ಇದರಿಂದಾಗಿ ಅನೇಕ ಅಮಾಯಕ ಹಿಂದೂಗಳು, ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರ ಪ್ರಾಣ ಉಳಿಸಲಾಗಿದೆ ಎಂದು ಅವರು ಅಫಿಡವಿಟ್‌ನಲ್ಲಿ ಹೇಳಿದ್ದಾರೆ.

“ದೇಶದಾದ್ಯಂತ ಸ್ಫೋಟಗಳನ್ನು ಮಾಡುವ ಆರ್‌ಎಸ್‌ಎಸ್ ಮತ್ತು ವಿಎಚ್‌ಪಿಯ ಯೋಜನೆ ನಿರೀಕ್ಷಿತ ಮಟ್ಟದಲ್ಲಿ ಯಶಸ್ವಿಯಾಗದ ಕಾರಣ ಬಿಜೆಪಿಗೆ ರಾಜಕೀಯವಾಗಿ ಲಾಭವಾಗಲಿಲ್ಲ. ಪರಿಣಾಮವಾಗಿ, 2004 ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ಸಿಕ್ಕಿತು” ಎಂದು ಅವರು ಹೇಳಿದ್ದಾರೆ.

“ಇದರ ನಂತರ ಮಿಲಿಂದ್ ಪರಾಂಡೆ ಅವರಂತಹ ಪ್ರಮುಖ ಸಂಚುಕೋರರು, ಭಯಭೀತರಾಗಿ ಭೂಗತರಾದರು. ಆದರೆ ಅವರು ರಹಸ್ಯವಾಗಿ ಷಡ್ಯಂತ್ರಗಳನ್ನು ಹೆಣೆಯುವುದನ್ನು ಮುಂದುವರೆಸಿದರು. ಅವರು ಭೂಗತರಾಗಿ ದೇಶಾದ್ಯಂತ ಅನೇಕ ಬಾಂಬ್ ಸ್ಫೋಟಗಳನ್ನು ನಡೆಸಿದರು. ಪಕ್ಷಪಾತಿ ಪೋಲಿಸರು ಮತ್ತು ಏಕಪಕ್ಷೀಯ ಮಾಧ್ಯಮಗಳ ಸಹಾಯದಿಂದ ಇವುಗಳನ್ನು ಮುಸ್ಲಿಮರ ಮೇಲೆ ಆರೋಪಿಸಲಾಯಿತು. ಅದು ಅವರಿಗೆ 2014 ರ ಲೋಕಸಭೆ ಚುನಾವಣೆಯಲ್ಲಿ ಸಹಾಯ ಮಾಡಿತು” ಎಂದು ಅಫಿಡವಿಟ್‌ ಹೇಳಿದೆ.

ಇದನ್ನೂ ಓದಿ: ಮಾತು ಮರೆತ ಭಾರತ; ಊನಾ ಫೈಲ್: ಆರೆಸ್ಸೆಸ್-ಬಿಜೆಪಿಯ ದನದ ರಾಜಕಾರಣ ಮತ್ತು ದಲಿತರು

“2014 ರಲ್ಲಿ ಬಿಜೆಪಿ ಕೇಂದ್ರದಲ್ಲಿ ಅಧಿಕಾರವನ್ನು ವಶಪಡಿಸಿಕೊಂಡು ನರೇಂದ್ರ ಮೋದಿ ಪ್ರಧಾನಿಯಾದರು. ಇದು ವಿಶ್ವ ಹಿಂದೂ ಪರಿಷತ್ ಮತ್ತು ಆರ್‌ಎಸ್‌ಎಸ್‌ಗೆ ಸೇರಿದ ಎಲ್ಲಾ ಭೂಗತ ವಿಧ್ವಂಸಕ ಶಕ್ತಿಗಳ ಹಠಾತ್ ಸಕ್ರಿಯಗೊಳಿಸುವಿಕೆಗೆ ಕಾರಣವಾಯಿತು. 2006ರ ನಾಂದೇಡ್ ಸ್ಫೋಟ ಪ್ರಕರಣದಲ್ಲಿ ಉಲ್ಲೇಖಿಸಿರುವ ಮೂವರು ಪ್ರಮುಖ ಸಂಚುಕೋರರನ್ನು ಕಾನೂನಿನ ಮುಂದೆ ತರಬೇಕು” ಎಂದು ಅವರು ಮನವಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...