Homeಕರ್ನಾಟಕಮುರುಘಾ ಮಠದ ಬಾಲಕಿಯರ ಅತ್ಯಾಚಾರ ಪ್ರಕರಣ: 2ನೇ ಆರೋಪಿ ವಾರ್ಡನ್‌ ರಶ್ಮಿ ಬಂಧನ

ಮುರುಘಾ ಮಠದ ಬಾಲಕಿಯರ ಅತ್ಯಾಚಾರ ಪ್ರಕರಣ: 2ನೇ ಆರೋಪಿ ವಾರ್ಡನ್‌ ರಶ್ಮಿ ಬಂಧನ

- Advertisement -
- Advertisement -

ಮುರುಘಾ ಮಠದ ಬಾಲಕಿಯರ ಅತ್ಯಾಚಾರ ಪ್ರಕರಣದ ಎರಡನೇ ಆರೋಪಿ, ಹಾಸ್ಟೆಲ್‌ ವಾರ್ಡನ್‌‌ ರಶ್ಮಿ ಅವರನ್ನು ಚಿತ್ರದುರ್ಗದ ಪೊಲೀಸರು ಶುಕ್ರವರ ಬಂಧಿಸಿದ್ದಾರೆ. ಅವರನ್ನು ಪೊಲೀಸರು ಗುರುವಾರ ವಶಕ್ಕೆ ಪಡೆದು, ಮಹಿಳಾ ಸಾಂತ್ವನ ಕೇಂದ್ರದಲ್ಲಿ ಇಟ್ಟಿದ್ದರು. ಇದೀಗ ಅಲ್ಲಿಂದಲೇ ಅವರನ್ನು ಬಂಧಿಸಲಾಗಿದೆ ಎಂದು ಹೇಳಿದ್ದಾರೆ.

ಪ್ರಕರಣದ ಪ್ರಮುಖ ಆರೋಪಿ ಮಠದ ಮುಖ್ಯಸ್ಥ ಶಿವಮೂರ್ತಿ ಮುರುಘಾ ಅವರನ್ನು ಗುರುವಾರ ರಾತ್ರಿ ಬಂಧಿಸಲಾಗಿತ್ತು. ನಿನ್ನೆ ರಾತ್ರಿ 10 ಗಂಟೆ ಸುಮಾರಿಗೆ ಪೋಕ್ಸೊ ಪ್ರಕರಣದಡಿಯಲ್ಲಿ ಅವರನ್ನು ಬಂಧಿಸಲಾಗಿತ್ತು. ಎಲ್ಲಾ ವೈದ್ಯಕೀಯ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ನ್ಯಾಯಾಧೀಶರ ಎದುರು ಹಾಜರುಪಡಿಸಲಾಗಿತ್ತು. ನ್ಯಾಯಾಧೀಶರು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅದರಂತೆ ಬೆಳಗ್ಗಿನ ಜಾವ ಮುರುಘಾ ಶರಣರನ್ನು ಚಿತ್ರದುರ್ಗ ಜಿಲ್ಲಾ ಬಂಧೀಖಾನೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಅವರು ಪದೇ ಪದೇ ಎದೆ ನೋವು ಎಂದು ಹೇಳಿದ್ದರು. ಅವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ಶಿಫ್ಟ್ ಮಾಡಿಸಲಾಗಿತ್ತು. ಆನಂತರ ಇಸಿಜಿ ಮಾಡಿಸಲಾಗಿತ್ತು ಎಂದು ವರದಿಯಾಗಿದೆ.

ಇದನ್ನೂ ಓದಿ: ಅತ್ಯಾಚಾರ ಪ್ರಕರಣ: ಎದೆ ನೋವು ನೆಪದಲ್ಲಿ ಜೈಲಿನಿಂದ ಆಸ್ಪತ್ರೆಗೆ ಶಿಫ್ಟ್ ಆದ ಶಿವಮೂರ್ತಿ ಮುರುಘಾ 

ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಗಂಭೀರ ಆರೋಪದಡಿಯಲ್ಲಿ ಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠದ ಶಿವಮೂರ್ತಿ ಮುರುಘಾ ಅವರ ವಿರುದ್ಧ ಮೈಸೂರಿನಲ್ಲಿ ಪ್ರಕರಣ ದಾಖಲಾಗಿತ್ತು.

ಮಠದ ವಿದ್ಯಾರ್ಥಿನಿಯರು ನೀಡಿದ ದೂರಿನ ಆಧಾರದಲ್ಲಿ ‘ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ’ (ಪೋಕ್ಸೋ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಮಠದ ವಿದ್ಯಾರ್ಥಿನಿಲಯದ ಹಲವು ವಿದ್ಯಾರ್ಥಿನಿಯರಿಗೆ ಮಠಾಧೀಶರು ಹಲವು ದಿನಗಳಿಂದಲೂ ಲೈಂಗಿಕವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದರು. ಅಲ್ಲಿ ನ್ಯಾಯ ದೊರಕುವುದಿಲ್ಲ ಎಂಬ ಆತಂಕದಲ್ಲಿ ತೊಂದರೆಗೊಳಗಾದ ವಿದ್ಯಾರ್ಥಿನಿಯರು ಮೈಸೂರಿನಲ್ಲಿರುವ ಒಡನಾಡಿ ಸಂಸ್ಥೆಯನ್ನು ಸಂಪರ್ಕಿಸಿ ಪ್ರಕರಣವನ್ನು ಬೆಳಕಿಗೆ ತಂದಿದ್ದರು.

ಇದನ್ನೂ ಓದಿ: Breaking News: ಪೋಕ್ಸೋ ಪ್ರಕರಣದ ಆರೋಪಿ ಶಿವಮೂರ್ತಿ ಮುರುಘಾ ಬಂಧನ

ದೌರ್ಜನ್ಯಕ್ಕೊಳಗಾದ ಹೆಣ್ಣುಮಕ್ಕಳ ಪೋಷಣೆಯಲ್ಲಿ ಪ್ರಮುಖಪಾತ್ರ ವಹಿಸುತ್ತಿರುವ ಒಡನಾಡಿ ಸಂಸ್ಥೆಯು ನೀಡಿದ ದೂರು ಆಧರಿಸಿ ಮೈಸೂರು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಶುಕ್ರವಾರ ವಿಚಾರಣೆ ನಡೆಸಿತ್ತು. ತೊಂದರೆಗೊಳಗಾದ ವಿದ್ಯಾರ್ಥಿನಿಯರ ಹೇಳಿಕೆಯಲ್ಲಿ ಸತ್ಯಾಂಶವಿದೆ ಎಂಬುದನ್ನು ಖಚಿತಪಡಿಸಿಕೊಂಡ ನಂತರ ಮುರುಘಾ ಪೀಠಾಧೀಶನ ವಿರುದ್ಧ ಪೋಕ್ಸೋ ಕಾಯಿದೆ ಅಡಿ ಮೊಕದ್ದಮೆ ದಾಖಲಿಸಬೇಕು ಎಂದು ಸಮಿತಿಯು ಆದೇಶ ಹೊರಡಿಸಿತ್ತು.

ಆರಂಭದಲ್ಲಿ ಪ್ರಕರಣ ದಾಖಲಿಸಲು ನಜರಾಬಾದ್ ಠಾಣೆ ಪೊಲೀಸರು ಹಿಂದೇಟು ಹಾಕಿದ್ದರು ಎನ್ನಲಾಗಿದೆ. ಆನಂತರ ಜಿಲ್ಲಾಧಿಕಾರಿಯವರ ಗಮನಕ್ಕೆ ತಂದ ಬಳಿಕ ಪ್ರಕರಣ ದಾಖಲಿಸಲಾಗಿದೆ. ಸಮಿತಿ ಆದೇಶದ ಅನ್ವಯ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅರುಂಧತಿ ಅವರು ನೀಡಿದ ದೂರು ಆಧರಿಸಿ ನಜರ್‌ಬಾದ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಘಟನೆ ಚಿತ್ರದುರ್ಗದಲ್ಲಿ ನಡೆದಿರುವುದರಿಂದ ಪೊಲೀಸರು ಇಡೀ ಪ್ರಕರಣವನ್ನು ಚಿತ್ರದುರ್ಗಕ್ಕೆ ವರ್ಗಾವಣೆ ಮಾಡಿದ್ದಾರೆ. ಎಫ್‌ಆರ್‌ಐಆರ್‌ನಲ್ಲಿ ಮೊದಲ ಆರೋಪಿಯಾಗಿ ಮುರುಘಾ ಪೀಠಾಧೀಶರು, ಎರಡನೇ ಆರೋಪಿಯಾಗಿ ವಾರ್ಡನ್‌ ರಶ್ಮೀ, ಮೂರನೇ ಆರೋಪಿಯಾಗಿ ಮರುಘಾ ಮಠದ ಮರಿಸ್ವಾಮಿ ಬಸವಾದಿತ್ಯ, ನಾಲ್ಕನೇ ಆರೋಪಿಯಾಗಿ ಮೈಸೂರಿನ ಪರಮಶಿವಯ್ಯ ಅವರನ್ನು ಗುರುತಿಸಲಾಗಿದೆ.

ಇದನ್ನೂ ಓದಿ: ಬಾಲಕಿಯರ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಶಿವಮೂರ್ತಿ ಮುರುಘಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಮತ್ತು ಬರಿಸಿ ಲೈಂಗಿಕ ದೌರ್ಜನ್ಯ; ಮಕ್ಕಳ ಆರೋಪ

“ಚಿತ್ರದುರ್ಗದ ಮುರುಘಾಮಠದ ವಿದ್ಯಾರ್ಥಿನಿಲಯದಲ್ಲಿರುವ ನಮ್ಮನ್ನು ಸ್ವಾಮೀಜಿ ಲೈಂಗಿಕವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಸ್ವಾಮೀಜಿ ಅವರಿಗೆ ಹಣ್ಣು ತೆಗೆದುಕೊಂಡು ಹೋಗಿ ಎಂದು ಮಹಿಳಾ ವಾರ್ಡನ್ ಅವರೇ ನಮ್ಮನ್ನು ಕಳುಹಿಸುತ್ತಿದ್ದರು. ಸ್ವಾಮೀಜಿ ಇದ್ದ ಸ್ಥಳಕ್ಕೆ ತೆರಳಿದರೆ ಅಲ್ಲಿ ನಮಗೆ ಮತ್ತು ಬರುವಂತೆ ಮಾಡಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದರು” ಎಂದು ಎಸ್‌ಎಸ್‌ಎಲ್‌ಸಿ ಓದುತ್ತಿರುವ ವಿದ್ಯಾರ್ಥಿನಿಯರು ದೂರು ನೀಡಿದ್ದಾರೆ.

“ಇದೇ ರೀತಿಯ ಅನುಭವ ಹಲವು ವಿದ್ಯಾರ್ಥಿನಿಯರಿಗೆ ಆಗಿದ್ದರೂ ದೂರು ನೀಡಲು ಹೆದರುತ್ತಿದ್ದರು. ನಮಗೆ ಚಿತ್ರದುರ್ಗದಲ್ಲಿ ನ್ಯಾಯ ಸಿಗಲಿಲ್ಲ ಎನ್ನುವ ಕಾರಣಕ್ಕೆ ಮೈಸೂರಿನ ಒಡನಾಡಿ ಸಂಸ್ಥೆಯನ್ನು ಸಂಪರ್ಕಿಸಿದೆವು” ಎಂದು ವಿದ್ಯಾರ್ಥಿನಿಯರು ಹೇಳಿದ್ದಾರೆ.

ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಮಕ್ಕಳ ಹೇಳಿಕೆ ಆಧರಿಸಿ ಒಡನಾಡಿ ಸಂಸ್ಥೆಯವರು ದೂರು ನೀಡಿದ್ದರು. ವಿಚಾರಣೆ ನಡೆಸಿದಾಗ ಮಕ್ಕಳು ತಮಗಾದ ಅನುಭವವನ್ನು ಸಮಿತಿ ಮುಂದೆ ದಾಖಲಿಸಿದ್ದರು. ವಿಸ್ಕೃತ ವಿಚಾರಣೆ ನಂತರ ಸಮಿತಿಯು ಮೊಕದ್ದಮೆ ದಾಖಲಿಸಲು ಮಕ್ಕಳ ರಕ್ಷಣಾಧಿಕಾರಿಗೆ ಆದೇಶ ನೀಡಿತ್ತು. ಸಮಿತಿ ಅಧ್ಯಕ್ಷರಾದ ಕಮಲ ಅವರು ರಜೆ ಇದ್ದ ಕಾರಣ ಹಿರಿಯ ಸದಸ್ಯ ಧನಂಜಯ ಎಲಿಯೂರು, ಸದಸ್ಯರಾದ ಅಶೋಕ್ ಹಾಗೂ ಸವಿತಾಕುಮಾರಿ ವಿಚಾರಣೆ ನಡೆಸಿದ್ದಾರೆ.

ಇದನ್ನೂ ಓದಿ: ಮುರುಘಾ ಶರಣರ ಪರ ಮಾತನಾಡುವ ಮಾದಾರ ಚೆನ್ನಯ್ಯ ಸ್ವಾಮೀಜಿಗೆ ಬಹಿರಂಗ ಪತ್ರ

ಈ ಹಿಂದೆ ತಡೆಯಾಜ್ಞೆ ಕೋರಿದ್ದ ಮುರುಘಾ ಪೀಠಾಧೀಶ

“ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಪ್ರಜಾಪ್ರಭುತ್ವದ ಪೋಷಕರು ಎಂದು ಹೇಳಿಕೊಳ್ಳುತ್ತಲೇ ತಮ್ಮ ಕುರಿತಾದ ಅಪ್ರಿಯವಾದ ಸಂಗತಿಗಳ ಕುರಿತು ಯಾರೂ ಪ್ರಕಟಿಸಬಾರದು ಮತ್ತು ಚರ್ಚಿಸಬಾರದು” ಎಂದು ಶಿವಮೂರ್ತಿ ಮುರುಘಾ ಶರಣರು ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ಅಸಲು ದಾವೆ ಸಲ್ಲಿಸಿದ್ದರು. ಆದರೆ ನಿರ್ದಿಷ್ಟ ಪ್ರಕರಣ, ನಿರ್ದಿಷ್ಟ ವಸ್ತು ಸಂಗತಿಯನ್ನು ಉಲ್ಲೇಖಿಸದೇ ತಡೆಯಾಜ್ಞೆ ಕೋರಿದ್ದರು ಎಂದು ‘ದಿ ಫೈಲ್‌’ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ರಾಜಕಾರನಿಯಾಗಲಿ, ಧಾರ್ಮಿಕ ವ್ಯಕ್ತಿಯಾಗಲಿ, ಸಾಮಾನ್ಯ ವ್ಯಕ್ತಿಯಾಗಲಿ ಯಾರೂ ಕಾನೂನಾತೀತರಲ್ಲ, ಕಾನೂನಿಗೆ ಎಲ್ಲರೂ ತಲೆ ಬಾಗಲೇಬೇಕು, ಸಂತ್ರಸ್ತರಿಗೆ ನ್ಯಾಯ ಸಿಗಬೇಕು, ಜಾತಿ, ಪಂಥ ಮೀರಿ ಸಮಾಜವು ಸಂತ್ರಸ್ತರ ಪರವಾಗಿ ನಿಲ್ಲಬೇಕು, ಅದೂ ಸಮಾಜದ ಆದ್ಯ ಕರ್ತವ್ಯ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...